hasana
ಇಟಿಎಫ್ ಸಿಬ್ಬಂದಿಯನ್ನು ಅಟ್ಟಾಡಿಸಿದ ಒಂಟಿ ಸಲಗ..!
ಹಾಸನ: ಕಾಡಾನೆ ಟ್ರಾಕ್ ಮಾಡುತ್ತಿದ್ದ ಇಟಿಎಫ್ ಸಿಬ್ಬಂದಿ ಮೇಲೆ ಒಂಟಿ ಸಲಗ ದಾಳಿ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ.
ಒಂಟಿ ಸಲಗವೊಂದು ಕಾಫಿ ತೋಟದಲ್ಲಿ ಪುಂಡಾಟ ನಡೆಸುತ್ತಿದ್ದು ಅದನ್ನ ಟ್ರಾಕ್ ಮಾಡಲು ಇಟಿಎಫ್ ಸಿಬ್ಬಂದಿಗಳು ಅಲ್ಲಲ್ಲಿ ಕಾಯುತ್ತಿದ್ದ ವೇಳೆ ಸ್ಕೂಟಿಯಲ್ಲಿ ಬಂದ ಸಿಬ್ಬಂದಿಯ ಮೇಲೆ ದಾಳಿಗೆ ಯತ್ನಿಸಿದೆ. ಮರದ ಮೇಲೆ ಕುಳಿತು ಓರ್ವ ಸಿಬ್ಬಂದಿ ಆನೆಯ ಚಲನವಲನ ಚಿತ್ರೀಕರಸುತ್ತಿರುವ ವೇಳೆ ಘಟನೆ ನಡೆದಿದ್ದು, ಘಟನೆಯ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಏಕಾಏಕಿ ಒಂಟಿ ಸಲಗ ದಾಳಿಗೆ ಮುಂದಾದಾಗ ಸಿಬ್ಬಂದಿ ಸ್ಕೂಟಿಯನ್ನು ಬಿಟ್ಟು ಓಡಿ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಹಾಸನ ಭಾಗದಲ್ಲಿ ಕಾಫಿ ತೋಟಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ಇಂದು ಆನೆಗಳ ಹಿಂಡೊಂದು ತೋಟಕ್ಕೆ ನುಗ್ಗಿದ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಆನೆಗಳ ಉಪಟಳದಿಂದ ಸ್ಥಳಿಯ ರೈತರು ಹೈರಾಣಾಗಿದ್ದು ಆನೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಈಗಾಗಲೆ ಒಂಟಿ ಸಲಗವೊಂದರ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಆ ಆನೆಯನ್ನು ಹಿಡಿಯುವ ಮೊದಲೇ ಮತ್ತೊಂದು ಒಂಟಿ ಸಲಗ ಕಾಫಿ ತೋಟಕ್ಕೆ ನುಗ್ಗಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
bengaluru
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್ಐಟಿ ರಚನೆ!!
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.
47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ತಂದೆ ಎಚ್ಡಿ ರೇವಣ್ಣ ಅವರನ್ನು ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ದೂರಿನಲ್ಲಿ ಏನಿದೆ ಅಂದರೆ… ನಮ್ಮ ಪತಿಗೆ ಎಚ್ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ. ಸದ್ಯ ಪೆನ್ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿ ಸೇರಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ.
ಮುಂದೆ ಓದಿ..; ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!
ಎಸ್ಐಟಿಗೆ ನೀಡುವುದಾಗಿ ಗೃಹಸಚಿವರಿಂದ ಸೂಚನೆ:
ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವಿಡಿಯೊ ದೃಶ್ಯಾವಳಿಗಳ ತುಣುಕುಗಳ ಪೆನ್ಡ್ರೈವ್ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
hasana
ಆರ್ಎಸ್ಎಸ್ ಬಗ್ಗೆ ತಪ್ಪಾಗಿ ಮಾತಾಡಿದ್ರೆ ಕ್ಷಮಿಸಿ ಎಂದ ಪ್ರಜ್ವಲ್ ರೇವಣ್ಣ
ಹಾಸನ: ನನ್ನ ಗಮನಕ್ಕೆ ಬಾರದೆ ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದೆ. ನಾನೊಬ್ಬ ಯುವಕನಾಗಿ ಹೋರಾಟದ ದೃಷ್ಠಿಯಿಂದ ಮಾತನಾಡಿದ್ದೆ . ಆದರೆ ಈಗ ನಾನು ಆರ್ಎಸ್ಎಸ್ ನ ಬಗ್ಗೆ ಅರಿವಿಲ್ಲದೆ ಮಾತನಾಡಿರುವುದು ತಪ್ಪು. ನನಗೆ ಅರಿವಾಗಿದೆ. ಸಭೆಯಲ್ಲಿ ಆರ್ಎಸ್ ಕಾರ್ಯಕರ್ತರು, ಮುಖಂಡರು ಇದ್ದಲ್ಲಿ ನನ್ನನ್ನು ಕ್ಷಮಿಸಿ ಬಿಡಿ ಎಂದು ಸಭೆಯೊಂದರಲ್ಲಿ ಕೇಳಿಕೊಂಡಿದ್ದಾರೆ.
ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೋಡಿ ಎತ್ತುಗಳ ಹಾಗೆ ಲೋಕಸಭಾ ಚುನಾವಣಾ ಆಖಾಡದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಈ ಹಿನ್ನೆಲೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಜ್ವಲ್ ರೇವಣ್ಣರವರು ಮಾತನಾಡಿದ್ದಾರೆ.
ಇದನ್ನೂ ಓದಿ : ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ನಾನು ಸಂಸದನಾಗಿ ಆಯ್ಕೆಯಾಗಿ 5 ವರ್ಷಗಳಾಗಿದೆ. ಐದು ವರ್ಷದಲ್ಲಿ ಬಹಳಷ್ಟು ಯೋಜನೆಗಳನ್ನು ಕ್ಷೇತ್ರಕ್ಕೆ ತಂದುಕೊಟ್ಟಿದ್ದೇನೆ. ಜನ ನನ್ನ ಅಭಿವೃದ್ಧಿಯ ಬಗ್ಗೆ ಯಾರೂ ಪ್ರಶ್ನೆ ಮಾಡುತ್ತಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಇದು ಕೇವಲ ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು ಅರುವತ್ತು ವರ್ಷಗಳ ಕಾಲ ನಾವು ಜಂಟಿಯಾಗಿ ಕೆಲಸ ಮಾಡುತ್ತೇವೆ ಎಂದು ರಾಧಾ ಮೋಹನ್ ದಾಸ್ ಕೂಡಾ ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಕಾರ್ಯಕರ್ತರನ್ನು ಗೌರವಿಸುತ್ತೇನೆ. ನಾನೊಬ್ಬ ಯುವಕ. ಹಾಗಾಗಿ ಗೊತ್ತಿಲ್ಲದೆ ಕೆಲವೊಂದು ತಪ್ಪುಗಳು ಸಂಭವಿಸಬಹುದು. ಆದರೆ ನನ್ನ ತಪ್ಪುಗಳನ್ನು ಅರಿತು ಅದನ್ನು ಸರಿಮಾಡಿಕೊಂಡು ಮುಂದೆ ಹೋಗುತ್ತೇನೆ. ಹಿರಿಯರು ಹೇಳಿದ ಮಾತನ್ನು ಚಾಚುತಪ್ಪದೆ ಪಾಲಿಸುತ್ತೇನೆ. ನನಗೊಂದು ಈ ಬಾರಿ ಅವಕಾಶ ಮಾಡಿಕೊಡಿ ಎಂದು ವಿನಂತಿಸಿಕೊಂಡರು. ಈ ಬಾರಿ 400 ಸೀಟ್ ಗೆಲ್ಲಿಸುವ ಮೂಲಕ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಇದರಲ್ಲಿ ನನಗೂ ಒಂದು ಅವಕಾಶ ಮಾಡಿಕೊಡಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದರು.
hasana
450 ರೂಪಾಯಿಗೆ ನಡೆಯಿತು ಮಾ*ರಣಾಂತಿಕ ಹ*ಲ್ಲೆ..!! ಸಿಕ್ಕ ಸಿಕ್ಕಲ್ಲಿ ತಿವಿದು ಎಸ್ಕೇಪ್ ಆದ ಕಿರಾತಕರು
ಹಾಸನ: 450 ರೂಪಾಯಿಗಳಿಗಾಗಿ ವ್ಯಕ್ತಿಯೊಬ್ಬನ ಮೇಲೆ ಮಾ*ರಣಾಂತಿಕ ಹ*ಲ್ಲೆ ನಡೆಸಿದ ಮೂವರು, ಹಣ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿಯಾದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ಪಟ್ಟಣದಲ್ಲಿ ನಡೆದಿದೆ. ಹ*ಲ್ಲೆಗೊಳಗಾದ ವ್ಯಕ್ತಿ ಗಿರೀಶ್ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ.. ನಿನ್ನೆ ಮಗುವಿನ ಹುಟ್ಟುಹಬ್ಬ… ಇಂದು ತಾಯಿ ಮಗು ಜೀವಾಂತ್ಯ..!
ಏನಿದು ಘಟನೆ?
ಕೆ.ಆರ್. ನಗರದ ನಿವಾಸಿಯಾಗಿದ್ದ ಗಿರೀಶ್ ಎಂಬಾತ ಡ್ರೈವರ್ ಕೆಲಸ ಮಾಡುತ್ತಿದ್ದು, ಬೆಂಗಳೂರಿಗೆ ತೆರಳಲು ಪಟ್ಟಣಕ್ಕೆ ಬಂದಿದ್ದಾರೆ. ಅವರ ಸ್ನೇಹಿತನೂ ಬರುವುದಾಗಿ ಹೇಳಿದ ಕಾರಣ ಬಸ್ ನಿಲ್ದಾಣದ ಪಕ್ಕದಲ್ಲೇ ಇದ್ದ ಪುರಸಭೆ ಕಟ್ಟಡದ ಟಾರೆಸಿ ಮೇಲೆ ಮಲಗಿದ್ದಾರೆ.
ರಾತ್ರಿ ಸರಿ ಸುಮಾರು 11.30 ಕ್ಕೆ ಟಾರೆಸ್ ಮೇಲೆ ಬಂದ ಮೂವರು ಗಿರೀಶ್ನನ್ನು ಎಬ್ಬಿಸಿ ಕಿಸೆಯಲ್ಲಿದ್ದ 450 ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಬಳಿಕ ಗಿರೀಶ್ ಹೊಂದಿದ್ದ ಮೊಬೈಲ್ ಕೂಡಾ ಕಿತ್ತುಕೊಂಡಿದ್ದಾರೆ.
ಈ ವೇಳೆ ಮೊಬೈಲ್ ಕೊಡಿ ಎಂದು ಪ್ರತಿರೋಧ ತೋರಿದಾಗ ಮನ ಬಂದಂತೆ ಚೂರಿಯಿಂದ ಇ*ರಿದು ಪರಾರಿಯಾಗಿದ್ದಾರೆ. ಗಿರೀಶ್ ಬ್ಯಾಗ್ ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಓಡಿ ಹೋಗುವಾಗ ಚಿರು ಹಾಗು ಕಾಂತ ಎಂದು ಹೆಸರು ಕೂಗಿದ್ದಾಗಿ ಗಿರೀಶ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಚೂರಿ ಇರಿ*ತಕ್ಕೆ ಒಳಗಾದ ಗಿರೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಣ್ಣಿನ ಕೆಳಭಾಗ, ಕತ್ತು, ಹಾಗೂ ಎದೆ ಭಾಗದಲ್ಲಿ ಚೂ*ರಿ ಇರಿತದ ಗಾಯಗಳಾಗಿದೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ