Connect with us

DAKSHINA KANNADA

ಖಾಕಿಯೊಳಗೂ ಹೈಟೆಕ್ ಮಾಹಿತಿ ಹೊಂದಿರುವ ವ್ಯಕ್ತಿ ಇದ್ದಾನೆ -ಸಚಿವ ಪರಮೇಶ್ವರ್

Published

on

ಮಂಗಳೂರು: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರ ಕಚೇರಿಯನ್ನು ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರು ಅ.29ರಂದು ಉದ್ಘಾಟನೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್ ಅವರು ಸುಮಾರು ಒಂಭತ್ತುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಕಟ್ಟಡಗಳನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಶನ್‌ನಿಂದ ನಿರ್ಮಾಣ ಮಾಡಲಾಗಿದೆ. ಸರಕಾರದ ಪ್ರಮುಖ ಉದ್ದೇಶ ಪೊಲೀಸ್ ಇಲಾಖೆ, ಪೊಲೀಸ್ ಸಿಬ್ಬಂದಿ ಆಧುನೀಕರಣ ಮಾಡುವುದು, ಅತ್ಯಾಧುನಿಕ ತರಬೇತಿಯನ್ನು ಅವರಿಗೆ ನಾವು ನೀಡುವುದು.

ಈ ಉದ್ದೇಶಗಳನ್ನು ಇಟ್ಟುಕೊಂಡು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಅವರ ವಿಶೇಷ ತರಬೇತಿಗಾಗಿ ಕಂಪ್ಯೂಟರ್ ಶಿಕ್ಷಣ, ಸೈಬರ್‌ ಮಾಹಿತಿ, ಶಸ್ತ್ರಾಸ್ತ್ರಗಳ ಬಳಕೆ ಹೀಗೆ ಎಲ್ಲವನ್ನೂ ವಿವರಿಸುತ್ತಿದ್ದೇವೆ. ಪ್ರಸ್ತುತ ಪೊಲೀಸ್ ಇಲಾಖೆಗೆ ನಡೆಸಲಾಗುತ್ತಿರುವ ಆಯ್ಕೆ ಪ್ರಕ್ರಿಯೆಗೆ ಡಬ್ಬಲ್‌ ಗ್ರಾಜುವೆಟ್ಸ್ ಬರುತ್ತಿದ್ದಾರೆ. ರಾಜ್ಯ ಸರಕಾರ 100 ಪೊಲೀಸ್ ಠಾಣೆ ಎಂದು ಯೋಜನೆ ಮಾಡಿ ಮೇಲ್ದರ್ಜೆಗೇರಿಸುತ್ತಿದೆ ಎಂದರು. ಖಾಕಿಯೊಳಗೆ ಕೂಡಾ ಒಬ್ಬ ಅತ್ಯಾಧುನಿಕ ಮಾದರಿಯ ಸಂಪೂರ್ಣ ಮಾಹಿತಿಯನ್ನು ಹೊಂದಿರುವ ವ್ಯಕ್ತಿ ಇದ್ದಾನೆ ಎನ್ನುವುದನ್ನು ಜನ ತಿಳಿದುಕೊಳ್ಳಬೇಕಾಗಿದೆ ಅದಕ್ಕೆ ಸರಕಾರ ಬದ್ಧವಾಗಿದೆ ಎಂದರು.

ನಮ್ಮಲ್ಲಿ ಶೇಕಡಾ 40 ಸಿಬ್ಬಂದಿಗಳಿಗೆ ಹೊಸದಾಗಿ ಮನೆಗಳನ್ನು ಕಟ್ಟಿಕೊಡಲು ಮುಂದಾಗಿದ್ದೇವೆ. ಅಪಾರ್ಟ್‌ ಮೆಂಟ್ ಮಾದರಿ ಮನೆ ನೀಡುತ್ತಿದ್ದೇವೆ. ಶೇಕಡಾ 70ರಷ್ಟಾದರೂ ಮನೆ ನೀಡಲು ಯೋಜನೆ ರೂಪಿಸಿದ್ದೇವೆ. ಪೊಲೀಸರು ಸಂಯಮದಿಂದ ವರ್ತಿಸಬೇಕು, ಜನಸ್ನೇಹಿ ಆಗಿರಬೇಕು ಎಂದು ಅವರಿಗೆ ಕಾಲಕಾಲಕ್ಕೆ ಸೂಚನೆ ನೀಡಲಾಗಿದೆ. ಪ್ರತಿ ಪೊಲೀಸ್‌ ಠಾಣೆಗಳ ಚಟುವಟಿಕೆಗಳನ್ನು ನಿರ್ವಹಣೆ ಮಾಡಲು ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಮಾಡ್ತಾ ಇದ್ದೇವೆ. ಇದು ದೇಶದಲ್ಲೇ ಪ್ರಥಮವಾಗಿದೆ. ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಹೈ ರೆಶಲ್ಯೂಶನ್‌ ಕ್ಯಾಮೆರಾ ಅಳವಡಿಸಲಿದ್ದೇವೆ. ಕೆಲವೇ ಕ್ಷಣಗಳಲ್ಲಿ ಈ ಮಾಹಿತಿ ಲಭ್ಯ ಆಗುವಂತೆ ನಾವು ಯೋಜನೆ ರೂಪಿಸುತ್ತಿದ್ದೇವೆ. ಯಾವುದೇ ಠಾಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದರೆ ನಮಗೆ ಕಂಟ್ರೋಲ್‌ ರೂಂಗೆ ಗೊತ್ತಾಗುತ್ತದೆ ಎಂದರು. ಎಲ್ಲಾ ಜಿಲ್ಲೆಗಳಲ್ಲೂ ಸೈಬರ್‌ ಕ್ರೈಂ ನೋಡಲು ಸೆಲ್‌ ರೂಪಿಸುತ್ತಿದ್ದೇವೆ. ಪೊಲೀಸ್ ಕಾನ್‌ಸ್ಟೇಬಲ್ 18,000 ಹುದ್ದೆಗಳು ಖಾಲಿ ಇವೆ. ಅದನ್ನು ತುಂಬಲು ಹಂತಹಂತವಾಗಿ ಆಯ್ಕೆ ಪ್ರಕ್ರಿಯೆ ಆರಂಭಿಸಿದ್ದೆವೆ. 1000 ಮಂದಿ ಸಬ್‌ ಇನ್‌ಸ್ಪೆಕ್ಟ್ರರ್ ಹುದ್ದೆಗಳು ಕೂಡಾ ಖಾಲಿ ಇವೆ. ಅವುಗಳನ್ನು ನಾವು ಭರ್ತಿ ಮಾಡುವವರಿದ್ದೇವೆ ಎಂಧರು. ಕಾನೂನುಬಾಹಿರವಾದ ಕೃತ್ಯಗಳನ್ನು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗರ್ವಾಲ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಎಂಎಲ್‌ಸಿ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್‌ ಮೊದಲಾದವರು ಉಪಸ್ಥಿತರಿದ್ದರು.

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending