DAKSHINA KANNADA
‘ದಿ ಕೇರಳ ಸ್ಟೋರಿ’ ಚಿತ್ರವನ್ನು ಪ್ರತಿಯೊಬ್ಬ ಹೆಣ್ಣು ಮಗು ಕುಟುಂಬದೊಂದಿಗೆ ವೀಕ್ಷಿಸಬೇಕು : ಡಾ. ಪ್ರಭಾಕರ್ ಭಟ್..!
‘ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ನಗರದಲ್ಲಿ ಶನಿವಾರ ರಾತ್ರಿ ಧರ್ಮಪತ್ನಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ದಿ ಕೇರಳ ಸ್ಟೋರಿ ಚಿತ್ರ ವೀಕ್ಷಿಸಿದ ಸುದ್ದಿಗಾರರೊಂದಿಗೆ ಮಾತನಾಡಿರು.
ಚಿತ್ರ ನೈಜವಾಗಿ ಮೂಡಿ ಬಂದಿದೆ. ಈ ಹಿಂದೆ ಕಾಶ್ಮೀರಿ ಫೈಲ್ಸ್ ಚಿತ್ರ ಕೂಡ ಅತ್ಯುತ್ತಮವಾಗಿ ಮೂಡಿ ಬಂದಿತ್ತು.
ಈ ಚಿತ್ರವನ್ನು ಪ್ರತಿಯೊಬ್ಬ ಹಿಂದೂ ಹೆಣ್ಣು ಮಗಳು ಕುಟುಂಬದ ಜೊತೆಗೆ ನೋಡಬೇಕು. ಅವರ ಅತೀ ಮತೀಯವಾದ ಮತ್ತು ನಮ್ಮ ಮಕ್ಕಳಿಗೆ ಧರ್ಮದ ತಿಳುವಳಿಕೆ ಇಲ್ಲದಿರೋದನ್ನು ಚಿತ್ರದಲ್ಲಿ ತೋರಿಸಲಾಗಿದೆ.
ಈ ರೀತಿಯ ಅನ್ಯಾಯವನ್ನು ಜಗತ್ತೇ ಒಪ್ಪಬಾರದು ಮತ್ತು ಹೆಣ್ಣು ಮಗಳಮೇಲೆ ಅನ್ಯಾಯ ಆದಾಗ ಸಮಾಜ ಸುಮ್ಮನೆ ಕೂರಬಾರದು ಎಂದರು.
ಕೇರಳದಲ್ಲಿ ಮೂವತ್ತು ಸಾವಿರಕ್ಕೂ ಅಧಿಕ ಹೆಣ್ಣುಮಕ್ಕಳ ಮತಾಂತರ ಆಗಿದೆ. ಮತಾಂತರ ಆದ ಬಳಿಕ ಕ್ರೂರ ರೀತಿ ಯಲ್ಲಿ ಅತ್ಯಾಚಾರ ಮಾಡಲಾಗಿದೆ.
ಕಾಂಗ್ರೆಸ್ ಕಮ್ಯುನಿಸ್ಟ್ ಜನತಾದಳ ಈ ಅನ್ಯಾಯಕ್ಕೆ ಪ್ರೇರಣೆ ನೀಡುತ್ತಾರೆ ಎಂದು ಆರೋಪಿಸಿದ ಭಟ್ ಈ ಚಿತ್ರ ನೋಡಿ ಹೆಣ್ಣು ಮಕ್ಕಳು ಯೋಚನೆ ಮಾಡಬೇಕು ಜೊತೆಗೆ ತಂದೆ-ತಾಯಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಬೇಕು.
ಹೆಚ್ಚು ಕಲಿಯೋಕೆ ಬೇರೆ ಊರಿಗೆ ಕಳುಹಿಸೋವಾಗ ಅತೀ ಎಚ್ಚರಿಕೆಯಿಂದ ಇರಬೇಕು ಎಂದು ಅಭಿಪ್ರಾಯಪಟ್ಟರು.
ಮತಾಂತರ ನಿಷೇಧ ಕಾಯಿದೆಯನ್ನು ಬಿಜೆಪಿ ತಂದಿದೆ ಆದ್ರೆ ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಯಿದೆ ವಾಪಸ್ ತೆಗೆದುಕೊಳ್ಳೊದಾಗಿ ಹೇಳಿದೆ.
ಕಾಂಗ್ರೆಸ್ ಅಧಿಕಾರ ಬಂದಾಗ ಹೆಣ್ಣು ಮಕ್ಕಳು ನೋವು ಅನುಭವಿಸುತ್ತಾರೆ ಅನ್ನೋದು ಅವರ ಮಾತಿನಲ್ಲಿ ಸಾಬೀತಾಗಿದೆ.
ರಾಜೀವ್ ಗಾಂಧಿ ಸರ್ಕಾರ ಅತ್ಯಾಚಾರ ಮಾಡುವ ಗಂಡುಮಕ್ಕಳಿಗೆ ಪ್ರೇರಣೆ ನೀಡಿದೆ. ಚುನಾವಣಾ ಸಂಧರ್ಭದಲ್ಲಿ ಜನ ಎಚ್ಚೆತ್ತು ಕಾಂಗ್ರೆಸ್ ನ್ನು ದೂರ ಇಡಬೇಕು.
ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷ ಮತಕ್ಕೋಸ್ಕರ ಏನು ಮಾಡೋಕೂ ತಯಾರಿದೆ.ದೇಶ,ಸಂಸ್ಕೃತಿ,ಧರ್ಮ ಉಳಿಯೋಕೆ ಕಾಂಗ್ರೆಸ್ ನ್ನು ದೂರ ಇಡಬೇಕಿದೆ.
ಅವರ ಸಂಖ್ಯೆ ಹೆಚ್ಚಾಗಿ ಮತ್ತೊಂದು ಪಾಕಿಸ್ಥಾನ ಮಾಡಲು ಮುಂದಾಗಿದೆ.ಕೇರಳದಲ್ಲಿ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ.ಪಿಣರಾಯಿ ಮಕ್ಕಳ ಕಥೆಯೇನು ಎಂಬುದನ್ನು ಯೋಚನೆ ಮಾಡಬೇಕಿದೆ.
ತನ್ನ ಹೆಂಡತಿ ಮಕ್ಕಳು ಹಿಂದೂಗಳಾಗಿ ಉಳಿಯಲಿ ಎಂದು ಯೋಜನೆ ಮಾಡಲಿ.
ಲವ್ ಜಿಹಾದ್ ನಲ್ಲಿ ಏನಾಗುತ್ತದೆ ಎಂಬುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ,ಹೆಣ್ಣು ಮಕ್ಕಳು ನಮಗೆ ದೇವಿ ತಾಯಿಯ ರೀತಿಯಾಗಿದ್ದು, ಸರ್ಕಾರ ಎಚ್ಚರಿಕೆಯಿಂದ ಕೆಲಸ ಮಾಡಬೇಕೆಂದು ಎಂದು ಹೇಳಿದರು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.