DAKSHINA KANNADA
ಶಾಸಕರ ಸಹಿತ ಕಾನೂನಿನ ಮುಂದೆ ಎಲ್ಲರೂ ಒಂದೇ : ಎಸ್ ಪಿ ರಿಷ್ಯಂತ್
ಧರ್ಮಸ್ಥಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬಂಧನ ಹೈಡ್ರಾಮಾದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ.
ಪೂಂಜಾ ಅವರ ಮನೆಗೆ ಆರಂಭದಲ್ಲಿ ನೋಟೀಸ್ ನೀಡುವ ಸಲುವಾಗಿ ಮೂವರು ತೆರಳಿದ್ದರು. ಆದರೆ ಅಲ್ಲಿ ಅವರು ಠಾಣೆಗೆ ಬಾರದೆ, ಜನ ಸೇರಿದ್ದರಿಂದ ಭದ್ರತೆಗಾಗಿ ಹೆಚ್ಚುವರಿ ತಂಡ ಕಳುಹಿಸಬೇಕಾಯಿತು. ಬಳಿಕ ಅಲ್ಲಿನ ರಸ್ತೆ ಕಿರಿದಾಗಿದ್ದರಿಂದ ನೀವು ತೆರಳಿದರೆ ಅಲ್ಲಿ ಜನ ಕ್ಲಿಯರ್ ಆಗುತ್ತದೆ ಮುಂದೆ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿದ್ದರಿಂದ ನಾವು ಬಂದಿದ್ದೇವೆ. ಬೇರೇನೂ ಇಲ್ಲ. ಕಾನೂನು ಎಲ್ಲರಿಗೂ ಒಂದೇ ಅಲ್ಲಿ 500 ಮಂದಿ ಸೇರಿಸಿದರೂ ಅಥವಾ 1 ಲಕ್ಷ ಮಂದಿ ಸೇರಿದರೂ ಒಂದೇ ಎಂದರು. ಶಾಸಕರು ಕಾನೂನಿಗೆ ತಲೆಬಾಗಲೇ ಬೇಕು. ನೋಟೀಸ್ನೀಡಿದ್ದೇವೆ, ಸಮಯ ಕೇಳಿದ್ದಾರೆ, ಉಳಿದಂತೆ ಅವರಿಗೆ ಬಿಟ್ಟ ವಿಚಾರ ಎಂದರು.
ಇದನ್ನೂ ಓದಿ : ಪೆನ್ ಡ್ರೈವ್ ಕೇಸ್: ಕೊನೆಗೂ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ! ಪ್ರಕರಣದ ಬಗ್ಗೆ ಹೇಳಿದ್ದೇನು?
ತಲೆಮರೆಸಿಕೊಂಡವರ ಬಂಧಿಸುತ್ತೇವೆ :
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಮಾಯಕರು ಎನ್ನುವುದು ತಪ್ಪು, ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಹಾಗಾಗುವುದಿಲ್ಲ, ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ, ಅದಕ್ಕೆ ಬೇಕಾದ ಸಾಕ್ಷಿ ನೀಡುತ್ತೇವೆ. ಅಲ್ಲಿ ಒಂದು ಖಾಸಗಿ ಸ್ಥಳವಿದ್ದು, ಮತ್ತೊಂದು ವರ್ಗ ಸ್ಥಳ, ತಹಶೀಲ್ದಾರ್ ಪರಿಶೀಲಿಸಿ ವರದಿ ನೀಡಿದ್ದಾರೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
DAKSHINA KANNADA
ಜಿಲ್ಲೆಯಲ್ಲಿ ರೆಡ್ ಅಲರ್ಟ್..! ಜೂನ್ 27 ಶಾಲೆಗೆ ರಜೆ ಘೋಷಣೆ..!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 27 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೀವೃ ಮಳೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಆದೇಶದಲ್ಲಿ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶಗಳಿಗೆ ಜನರು ತೆರಳದೇ ಇರುವುದು, ಹಾಗೂ ಮಳೆ ನೀರಿನಿಂದ ನೆರೆಯ ಆತಂಕ ಇರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.
ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜಿಲ್ಲಾಡಳಿತದ 1077 ಅಥವಾ 0824-2442590 ನಂಬರ್ ಕರೆ ಮಾಡುವಂತೆ ಸೂಚಿನೆ ನೀಡಲಾಗಿದೆ.
DAKSHINA KANNADA
ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ
ಮಂಗಳೂರು ಹೊರವಲಯದ ಜಪ್ಪಿನಮೊಗೆರು ಪ್ರದೇಶದಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ. ಇಲ್ಲಿನ ದೊಂಪದಬಲಿ ಎಂಬಲ್ಲಿನ ರಾಜಾಕಾಲುವೆ ಬ್ಲಾಕ್ ಆಗಿ ನೀರು ನದಿ ಸೇರದೆ ಈ ಕೃತಕ ನೆರೆ ಉಂಟಾಗಿದೆ.
ಹಲವಾರು ವರ್ಷಗಳಿಂದ ಇಲ್ಲಿ ರಸ್ತೆ ಸಮಸ್ಯೆ ಇದ್ದು, ಇತ್ತೀಚೆಗೆ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದ್ರೆ ಕಾಂಕ್ರೀಟ್ ರಸ್ತೆಯ ಇಕ್ಕೆಲೆಗಳಲ್ಲಿ ನಿರ್ಮಿಸಬೇಕಾದ ಚರಂಡಿಯನ್ನು ನಿರ್ಮಾಣ ಮಾಡದೆ ಇರುವುದು ಇದಕ್ಕೆ ಕಾರಣ ಎಂದು ಸ್ಥಳಿಯರು ದೂರಿದ್ದಾರೆ. ಮೊದಲೇ ತಗ್ಗು ಪ್ರದೇಶದಲ್ಲಿ ಇರುವ ದೊಂಪದ ಬಲಿ ಪ್ರದೇಶ ರಸ್ತೆಗಿಂತ ಕೆಳಗೆ ಇರುವ ಕಾರಣ ರಸ್ತೆಯಲ್ಲಿ ಹರಿಯುವ ನೀರು ನೇರ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಚರಂಡಿ ನಿರ್ಮಾಣ ಮಾಡಿದ್ದೇ ಆಗಿದ್ದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಕಾರ್ಪೋರೇಟರ್ ವೀಣಾಮಂಗಳ ಸ್ಥಳೀಯ ನಿವಾಸಿಗಳು ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದೇ ಇರುವುದು ಈ ಸಮಸ್ಯೆಗೆ ಮೂಲಕ ಕಾರಣ ಎಂದು ಹೇಳಿದ್ದಾರೆ. ಎಲ್ಲಾ ತ್ಯಾಜ್ಯಗಳನ್ನು ಇಲ್ಲಿನ ಚರಂಡಿಗೆ ಎಸೆಯುವ ಕಾರಣ ರಾಜಾಕಾಲುವೆಯಲ್ಲಿ ಶೇಖರಣೆಯಾಗಿ ಈ ರೀತಿ ಅವಾಂತರ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೆ ನೀರು ಸರಾಗವಾಗಿ ಹರಿದು ರಾಜಕಾಲುವ ಸೇರಲು ಚರಂಡಿ ನಿರ್ಮಾಣದ ವೇಳೆ ಕೆಲವರು ಅನಗತ್ಯವಾಗಿ ಸ್ಟೇ ತಂದು ಕಾಮಾಗಾರಿ ತಡೆ ಹಿಡಿದಿದ್ದಾರೆ ಎಂದು ಸ್ಥಳಿಯರ ಅಸಹಕಾರದಿಂದ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.
DAKSHINA KANNADA
ಅತ್ತಾವರ: ಮಳೆಗೆ ಧರೆಗುರುಳಿದ ಬೃಹತ್ ಮರ
ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ.
ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ ನಿಲ್ಲಿಸಲಾಗಿದ್ದ ಕಾರಣ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
- LATEST NEWS4 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS5 days ago
ನಟ ದರ್ಶನ್ ಅಭಿಮಾನಿಯ ವಿರುದ್ಧ ಬಿತ್ತು ಕೇಸ್
- DAKSHINA KANNADA2 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- LATEST NEWS5 days ago
ನಟ ದರ್ಶನ್ ಪರ ವಾದ ಮಂಡಿಸಲಿರುವ ಹಿರಿಯ ವಕೀಲ ಸಿವಿ ನಾಗೇಶ್; ಯಾರಿವರು ಗೊತ್ತಾ!?