LATEST NEWS
ಆಂಜನೇಯ ಹುಟ್ಟಿದ ಜಾಗಕ್ಕೆ ಸಿಕ್ಕಿತು ಪುರಾವೆ…! ಅಂಜನಾದ್ರಿಯಲ್ಲಿ ಸಿಕ್ಕಿತು ಪುರಾತನ ಶಾಸನ..!
ಕೊಪ್ಪಳ : ಆಂಜನೇಯನ ಜನ್ಮ ಸ್ಥಳದ ಬಗ್ಗೆ ಇದ್ದ ವಿವಾದಕ್ಕೆ ಅಂತ್ಯ ಹಾಡುವಂತಹ ಶಾಸನವೊಂದು ಕೊಪ್ಪಳ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಆನೆಗೊಂದಿಯ ಕಡೇಬಾಗಿಲು ಗ್ರಾಮದ ಬೆಟ್ಟದ ಮೇಲೆ ಈ ಶಾಸನ ಕಂಡು ಬಂದಿದೆ. ಬೆಟ್ಟದ ಮೇಲಿರೋ ಕೋಟೆಗೆ ಚಾರಣ ಹೋಗಿದ್ದ ಯುವಕರ ತಂಡಕ್ಕೆ ಈ ಶಾಸನ ಕಾಣಿಸಿಕೊಂಡಿದೆ. ಇದರಲ್ಲಿ ರಾಮಾಯಣದಲ್ಲಿ ಉಲ್ಲೇಖಿಸಿರುವ ಕಿಷ್ಕಿಂಧೆ ಪರ್ವತ ಇದೇ ಆನೆಗೊಂದಿಯ ಪರ್ವತ ಎಂದು ಸಾಬೀತು ಪಡಿಸಬಲ್ಲ ಶಾಸನ ಇದಾಗಿದೆ.
ವಿಶ್ವವಿಖ್ಯಾತವಾಗಿದ್ದ ವಿಜಯನಗರದ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗೊಂದಿ ಎಂಬುವುದು ಇತಿಹಾಸದಲ್ಲಿ ಪುಟದಲ್ಲಿ ಉಲ್ಲೇಖವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಆಗಾಗ ಆನೆಗೊಂದಿಯಲ್ಲಿ ವಿಜಯನಗರದ ಅರಸರ ಕಾಲಘಟ್ಟದಲ್ಲಿನ ಶಾಸನ, ಸ್ಮಾರಕದಂತ ಕುರುಹುಗಳು ಲಭಿಸುತ್ತಲೇ ಇರುತ್ತವೆ. ಇದೀಗ ವಿಜಯನಗರದ ಅರಸರ 1527ರ ಕಾಲಘಟ್ಟಕ್ಕೆ ಸಂಬಂಧಿಸಿದ್ದು ಎನ್ನಲಾದ ಶಿಲಾ ಶಾಸನವೊಂದು ಆನೆಗೊಂದಿ ಸಮೀಪದ ಕಡೇಬಾಗಿಲು ಎಂಬ ಗ್ರಾಮದಲ್ಲಿರುವ ಬೆಟ್ಟದ ಮೇಲಿನ ಕೋಟೆಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಸಮಾನ ಮನಸ್ಕ ಯುವಕರನ್ನೊಳಗೊಂಡ ಗಂಗಾವತಿಯ ಕಿಷ್ಕಿಂದ ಯುವ ಚಾರಣ ಬಳಗದ ಸದಸ್ಯರು ಚಾರಣಕ್ಕೆಂದು ಈ ಬೆಟ್ಟಕ್ಕೆ ಹೋದಾಗ ಈ ಶಿಲಾ ಶಾಸನ ಕಂಡು ಬಂದಿದೆ. ದೊಡ್ಡ ಬಂಡೆಯಾಕಾರದ ಶಿಲೆಯ ಮೇಲೆಯೇ ಈ ಶಾಸನ ಬರೆಯಲಾಗಿದ್ದು, ಬಹುತೇಕ ಭಾಗ ಮಣ್ಣಿನಲ್ಲಿ ಹೂತು ಹೋಗಿತ್ತು. ಶಾಸನದ ಮೇಲಿದ್ದ ಮಣ್ಣಿನ ಪದರಗಳನ್ನು ಸ್ವಚ್ಛಗೊಳಿಸಿದ ಯುವಕರು ಬಳಿಕ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೊಲ್ಕಾರ ಅವರಿಗೆ ಮಾಹಿತಿ ನೀಡಿದ್ದಾರೆ.
1449ನೇ ಶಕ ವರುಷದಲ್ಲಿ ಬರೆಯಲಾದ ಶಾಸನ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಶೋಧಕ ಶರಣಬಸಪ್ಪ ಕೊಲ್ಕಾರ, ಈ ಶಾಸನ ಪರಿಶೀಲಿಸಿದಾಗ 8 ಸಾಲುಗಳಲ್ಲಿದ್ದು, ಸ್ವಸ್ತಿ ಶ್ರೀ ಜಯದ್ ಉದಯ ಶಾಲಿವಾಹನ ಶಕ ವರುಷ 1449 ನೆಯ ಕಾಲವನ್ನು ಉಲ್ಲೇಖಿಸಲಾಗಿದೆ. ಅದು ಪ್ರಸಕ್ತ ಶಕ 1527 ಕ್ಕೆ ಸರಿಯಾಗುತ್ತದೆ ಎಂದಿದ್ದಾರೆ.
ಶಾಸನದಲ್ಲಿ ಆನೆಗೊಂದಿಯ ಮಹಾ ಪ್ರಧಾನರಾಗಿದ್ದ ಲಕ್ಕಿ ಶೆಟ್ಟಿಯ ಮಗನಾದ ವಿಜಯನಾಥನು ಬೆಟ್ಟದ ಮೇಲಿನ ವೀರಭದ್ರ ದೇವರನ್ನು ಆರಾಧಿಸುತ್ತಿದ್ದ ಸಂಗತಿ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆ. ಈ ಶಾಸನದಲ್ಲಿ ಪ್ರಾಸಂಗಿಕವಾಗಿ ಆನೆಗೊಂದಿಯನ್ನು ಹಸ್ತಿನಾವತಿ ಎಂದು ಅದು ಪಂಚಕೋಶ ಮಧ್ಯದಲ್ಲಿ ಇತ್ತು ಎಂದು ಹೇಳಲಾಗಿದೆ. ಅಲ್ಲದೇ ಆನೆಗೊಂದಿಗೆ ಕಿಷ್ಕಿಂಧ ಪರ್ವತ ಎಂದು ಕೂಡ ಹೆಸರಿತ್ತು ಎಂದು ಉಲ್ಲೇಖಿಸಲಾಗಿರುವುದು ಗಮನಾರ್ಹ ಸಂಗತಿ. ಇದು ಐತಿಹಾಸಿಕವಾಗಿ ಅತ್ಯಂತ ಮಹತ್ವದ ದಾಖಲೆಯಾಗಲಿದೆ ಎಂದು ಕೋಲ್ಕಾರ ತಿಳಿಸಿದ್ದಾರೆ.
ಕಿಷ್ಕಿಂಧೆ ಬಗ್ಗೆ ಶಾಸನಗಳು ಸಿಕ್ಕಿರಲಿಲ್ಲ
ಆನೆಗೊಂದಿಯೆ ರಾಮಾಯಣ ಕಾಲದ ಕಿಷ್ಕಿಂಧಾ ಎಂದು ಗುರುತಿಸಲು ನೇರವಾಗಿ ಇಲ್ಲಿವರೆಗೂ ಯಾವುದೇ ಐತಿಹಾಸಿಕ ದಾಖಲೆ ಅಥವಾ ಶಾಸನ ಬದ್ಧ ಐತಿಹ್ಯಗಳು ಆನೆಗೊಂದಿಯಲ್ಲಿ ಯಾವ ಶಾಸನಗಳು ಲಭಿಸಿರಲಿಲ್ಲ. ಹೀಗಾಗಿ ಇದೊಂದು ಅತ್ಯಂತ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಕೊಲ್ಕಾರ ತಿಳಿಸಿದ್ದಾರೆ.
ಆನೆಗೊಂದಿ ಯಿಂದ ದೂರದ ದೇವಘಾಟ್ ಮತ್ತು ಹುಲಿಗಿಗಳ ಶಾಸನಗಳಲ್ಲಿ ಮಾತ್ರ ಕಿಷ್ಕಿಂದೆಯ ಉಲ್ಲೇಖವಿತ್ತು. ಪ್ರಸ್ತುತ ಆನೆಗೊಂದಿಯ ಈ ಶಾಸನವೇ ಕಿಷ್ಕಿಂಧಾ ಪರ್ವತ ಎಂದು ಉಲ್ಲೇಖಿಸಿರುವುದು ಕಿಷ್ಕಿಂದ ಮತ್ತು ಆಂಜನೇಯನ ಜನ್ಮಸ್ಥಳಗಳ ಬಗೆಗಿನ ವಾದ ವಿವಾದಗಳ ಸಂದರ್ಭದಲ್ಲಿ ಈ ಉಲ್ಲೇಖ ತುಂಬಾ ಮಹತ್ವ ಪಡೆದುಕೊಂಡಿದೆ.
ಕರ್ನಾಟಕದ ಕೊಪ್ಪಳ ಜಿಲ್ಲೆಯ ಗಂಗಾವತಿಯೇ ಅಂಜನಾದ್ರಿ ಬೆಟ್ಟ ಎನ್ನಲು ಹಾಗೂ ಆಂಜನೇಯನ ಜನ್ಮಸ್ಥಳವೆಂದು ಗುರುತಿಸಲು ಈ ಶಾಸನ ಮತ್ತೊಂದು ಐತಿಹಾಸಿಕ ದಾಖಲೆಯಾಗಿದೆ ಎಂದು ಡಾ. ಕೋಲ್ಕಾರ್ ಅಭಿಪ್ರಾಯ ಪಟ್ಟಿದ್ದಾರೆ.
FILM
ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!
ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್ ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.
ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್ಗಳನ್ನು ಹಾಕಿದ್ದಾರೆ.
DAKSHINA KANNADA
ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು
ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.
ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.
ಪ್ರಯಾಣ ದರ ಎಷ್ಟು?
ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.
ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.
ಹೆಚ್ಚಿನ ಹಡಗಿಗೆ ಬೇಡಿಕೆ :
ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.
ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.
ಇದನ್ನೂ ಓದಿ : ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.
LATEST NEWS
ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!
ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ. ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- FILM6 days ago
ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್ಬೀರ್, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್
- DAKSHINA KANNADA6 days ago
ದೊಡ್ಡವರ ಜಗಳದಲ್ಲಿ ಇಹಲೋಕ ತ್ಯಜಿಸಿದ 3 ರ ಕಂದಮ್ಮ…