Connect with us

LATEST NEWS

ಆರ್ಯ ಮುತಾಲಿಕ್ ಸಂತತಿಯಿಂದ ಶರಣ್‌ನ್ನು ಬಳಸಿ ಮಳಲಿ ವಿವಾದ ಸೃಷ್ಟಿ-ಕೆ ಅಶ್ರಫ್

Published

on

ಮಂಗಳೂರು: ‘ಮಳಲಿಯ ಅತಿ ಪುರಾತನ ಮಸೀದಿಯ ವಿಸ್ತೃತ ಕಟ್ಟಡದ ನವೀಕರಣ ಕಾಮಗಾರಿ ಆರಂಭಿಸುವಾಗ,ಪುರಾತನ ರಚನೆಯ ವಾಸ್ತು ಶಿಲ್ಪವನ್ನು ವೀಕ್ಷಿಸಿ,ದೇವಸ್ಥಾನವೆಂದು ರದ್ದಾಂತವೆಬ್ಬಿಸಿದ, ಸಂಘೀ, ಕೃಪಾ, ನಿಖೇತನಿಗಳಿಗೆ, ತಮ್ಮ ಮುಸ್ಲಿಮರ ಮೇಲಿನ ವಿದ್ವೇಶವನ್ನು ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಹಬ್ಬಿಸಿ ಶತಾಯ ಗತಾಯ ಒಂದು ಬೃಹತ್ ಕೋಮು ಗಲಭೆಯನ್ನು ಸೃಷ್ಟಿಸಲು ಸಂಘ ಪರಿವಾರ ಪ್ರಯತ್ನ ನಡೆಸುತ್ತಿದೆ’ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಹೇಳಿದರು.

ಮಳಲಿ ದರ್ಗಾ ವಿವಾದ ಹಿನ್ನೆಲೆ ಮಾತನಾಡಿದ ಇವರು ‘ಆ ಮೂಲಕ ಇಲ್ಲಿನ ಹಿಂದುಳಿದ ವರ್ಗ,ದಲಿತರು,ಪರಿಶಿಷ್ಟರು,ಬುಡಕಟ್ಟು ಜನರು,ಮುಸ್ಲೀಮರ ಮದ್ಯೆ ಭಿನ್ನತೆ ಸೃಷ್ಟಿಸುವುದಾಗಿದೆ.

ಈಗಾಗಲೇ ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧ ಚಿತ್ರ, ಪಠ್ಯ ಇತ್ಯಾದಿ ವಿವಾದದಲ್ಲಿ ಸಿಲುಕಿ ಹಾಕಿಕೊಂಡು ದ.ಕ.ಜಿಲ್ಲೆಯ ಸುಮಾರು ನಾಲ್ಕು ಲಕ್ಷ ಬಿಲ್ಲವರ ದ್ವೇಷವನ್ನು ಕಟ್ಟಿಕೊಂಡ ಬೀಜೆಪಿ ಸಂಘಿಗಳಿಗೆ, ಸ್ವಘೋಷಿತ ಹಿಂದೂ ನಾಯಕ ಎಂದು ಕರೆಸಿ ಕೊಳ್ಳುತ್ತಿರುವ ಶರಣ್ ಪಂಪ್ ವೆಲ್ ನನ್ನು ಮಳಲಿ ಮಸೀದಿ ವಿವಾದದಲ್ಲಿ ಮುಂದೆ ಹಾಕಿ, ಪ್ರಚೋದಿತ ಹೇಳಿಕೆ ಕೊಡಿಸಿ ಗಲಭೆಗೆ ಪ್ರಯತ್ನಿಸಲಾಗುತ್ತಿದೆ.

ಈಗಾಗಲೇ ಹಿಂದುಳಿದ ವರ್ಗದ ಜನರಿಗೆ, ಈ ಸಂಘಿಗಳು ,ಅವರ ಆರಾಧನಾ ಹಕ್ಕುಗಳನ್ನು ಕಸಿದು,ಅವರನ್ನು ಗುಲಾಮ ಸ್ಥಿತಿಗೆ ತಂದು, ಕೈಯಲ್ಲಿ ತ್ರಿಶೂಲ, ಬಂದೂಕು ಕೊಟ್ಟು ಸಮಾಜ ಘಾತುಕ ಶಕ್ತಿಯಾಗಿ ಮಾರ್ಪಡಿಸಲು ಪ್ರಯತ್ನಿಸಿರುತ್ತಾರೆ.

ಆರ್ಯ ಸಂತತಿಯ ಮುತಾಲಿಕ ಈಗಾಗಲೇ ಉತ್ತರ ಕರ್ನಾಟಕದಲ್ಲಿ ಜನರ ಜೀವನಕ್ಕೆ ಕೊಳ್ಳಿ ಇಡಲು ಪ್ರಯತ್ನಿಸಿ ಗಲಭೆ ನಡೆಸಲು ವಿಫಲವಾಗಿ ದ.ಕ.ಜಿಲ್ಲೆಗೆ ವಕ್ಕರಿಸಿ ಈ ಹಿಂದುಳಿದ ವರ್ಗದ, ವಿಶ್ವ ಹಿಂದೂ ಪರಿಷತ್ ನಿಯಂತ್ರಿತ ಶರಣ್ ಪಂಪ್ ವೆಲ್ ನನ್ನು ಇಲ್ಲಿನ ಮುಸ್ಲಿಮರ ವಿರುದ್ದ ಇಳಿಸಿದ್ದಾನೆ.

ಹಿಂದುಳಿದ ವರ್ಗದ ಶರಣ್ ಏನಾದರೂ ಅಂದು ಮಳಲಿ ಮಸೀದಿಗೆ ಪರಿಶೀಲನೆಗೆ ಪ್ರವೇಶಿಸಿದಂತೆ ಯಾವುದಾದರೂ ಆರ್ಯರ ಧಾರ್ಮಿಕ ಕೇಂದ್ರ ಪ್ರವೇಶಿಸಿದ್ದರೆ ಅಂದೇ ಅಂತಹ ಧಾರ್ಮಿಕ ಕೇಂದ್ರದಿಂದ ಇದೇ ಶರಣನನ್ನು ಬಹಿಷ್ಕಾರ ಮಾಡುತ್ತಿದ್ದರು.

ಇದು ಸಂಘೀ ಮನಸ್ಥಿತಿ. ಬಹುಶ ಹಿಂದುಳಿದ ವರ್ಗದ ಶರಣ್ ತನ್ನ ಪರಿವಾರದಲ್ಲಿ ಆರಾಧನಾ ಹಕ್ಕಿನಿಂದ ವಂಚಿತನಾಗಿದ್ದಾನೆ. ಆದುದರಿಂದಲೇ ಇತರ ಧರ್ಮದ ಆರಾಧನಾ ಕೇಂದ್ರ ಗಳತ್ತ ಆಕರ್ಷಿತನಾಗಿ ಈ ರೀತಿಯ ವಿವಾದ ಸೃಷ್ಟಿಸುತ್ತಿದ್ದಾನೆ.

ಶರಣ್ ಸಂಘೀಗಳ ಆಳು ಆಗಿರಬಹುದು,ಆದರೆ ಇತರ ಧರ್ಮದ ಆರಾಧನಾಲಯದ ವಿಷಯದಲ್ಲಿ ಕಾನೂನು ಪ್ರಕ್ರಿಯೆಯಿಂದ ಹೆಚ್ಚಿನ ಕೃತ್ಯ ನಡೆಸಿದರೆ, ಶರಣ್ ಅಂತಹ ಪ್ರಯತ್ನಕ್ಕೆ ಹೆಚ್ಚಿನ ಬೆಲೆ ತೆರಬೇಕಾಗುತ್ತದೆ. ಮುಸ್ಲಿಮ್ ಧಾರ್ಮಿಕ ಸಂಕೇತಗಳನ್ನು,ಭೀಕರವಾಗಿ ಬಿಂಬಿಸಿ,ಇತರರಲ್ಲಿ ಭಯ ಹುಟ್ಟಿಸಿ,ಹಿಂದೂ ಧರ್ಮಕ್ಕೆ ಅಪಾಯವಿದೆ,ಇತ್ಯಾದಿಯಾಗಿ ಸರ್ವ ಪ್ರಯತ್ನದ ಮೂಲಕ ಕರಾವಳಿಯಲ್ಲಿ ಮುಸ್ಲಿಮ್ ವಿರೋಧಿ ಗಲಭೆ ನಡೆಸಲು ವಿಫಲವಾದಾಗ,ಇನ್ನೂ ಯಾವುದೇ ಮುಸ್ಲಿಮ್ ಧಾರ್ಮಿಕ ಸಂಕೇತಗಳು,

ಲಭ್ಯವಿಲ್ಲದ ಕಾರಣ ಮಳಲಿ ಮಸೀದಿಯ ವಾಸ್ತುಶಿಲ್ಪಕ್ಕೆ ಹಸ್ತ ಕ್ಷೇಪ ನಡೆಸಿ, ಅದು ಇತರ ಧರ್ಮದ ಧಾರ್ಮಿಕ ಕೇಂದ್ರ ಎಂಬಿತ್ಯಾದಿಯಾಗಿ ಇಲ್ಲದ ಸಮಸ್ಯೆಯನ್ನು ಹುಟ್ಟು ಹಾಕಿ, ಜಿಲ್ಲೆಯಲ್ಲಿ ತಾಂಬೂಲ ಪ್ರಶ್ನೆ ಎಂಬ ಅವೈಜಾನಿಕ ಪದ್ಧತಿಗಳು ಇತ್ಯಾದಿ ಮೂಲಕ,ಪ್ರದೇಶದ ಶಾಂತಿ ಸುವ್ಯವಸ್ಥೆಯನ್ನು ಹಾನಿ ಗೊಳಿಸಿ ,ಗಲಭೆ ನಡೆಸಿ ಸಾಮಾನ್ಯ ಜನರ ಜೀವ,ಆಸ್ತಿ ಗಳನ್ನು ನಷ್ಟ ಮಾಡಲು ಮುಂದಾದ ದುಷ್ಕರ್ಮಿ ಗಳಾದ ಪ್ರಮೋದ್ ಮುತಾಲಿಕ್ ಮತ್ತು ಶರಣ್ ಪಂಪ್ವೆಲ್ ನನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು.

ದ.ಕ.ಜಿಲ್ಲೆಯ ಜನರ ನೆಮ್ಮದಿಯ ಬಗ್ಗೆ ಮತ್ತು ಪೊಲೀಸ್ ಪರಿಕಲ್ಪನೆ ಜಿಲ್ಲೆಯಲ್ಲಿ ಜೀವಂತ ಇದೆ ಎಂದಿದ್ದರೆ ಪೊಲೀಸರು ಎಂದು ಹೇಳಿಸಿ ಕೊಳ್ಳುವವರು ತಕ್ಷಣ ಈ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಂಡು ಪೊಲೀಸು ಪರಿಕಲ್ಪನೆಯ ಶುದ್ಧತೆಯನ್ನು ಪಾಲಿಸಲಿ.

 

 

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಕೆಜಿಎಫ್ ಹೊಗಳಿದ್ದ ಯೂಟ್ಯೂಬರ್!

Published

on

ಮುಂಬೈ : ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಪ್ರಖ್ಯಾತರಾಗಿರುವ ಅಬ್ರದೀಪ್ ಸಹಾ ಇಹಲೋಕ ತ್ಯಜಿಸಿದ್ದಾರೆ. ಅಂಗ್ರಿ ರ್‍ಯಾಂಟ್‌‌ಮ್ಯಾನ್‌ ಎಂದೇ ಖ್ಯಾತರಾಗಿರುವ ಅಬ್ರದೀಪ್ ಸಹಾ ತಮ್ಮ 27 ನೇ ವಯಸ್ಸಿಗೆ ಅಸುನೀಗಿದ್ದಾರೆ. ಅವರು ಏಪ್ರಿಲ್ 16 ರಂದು ವಿ*ಧಿವಶರಾಗಿದ್ದಾರೆ. ಅವರ ನಿ*ಧನದ ಸುದ್ದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಅಂಗ್ರಿ ರಾಂಟ್ ಮ್ಯಾನ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಕಳೆದ ತಿಂಗಳು ಅಪರೇಷನ್ ಗೆ ಒಳಗಾಗಿದ್ದರು. ಅವರ ಸ್ಥಿತಿ ಗಂಭೀರವಾಗಿದೆ. ಐಸಿಯುವಿನಲ್ಲಿದ್ದಾರೆ ಎಂದು ಹೇಳಲಾಗಿತ್ತು. ಕಳೆದೊಂದು ತಿಂಗಳಿಂದ ಅಬ್ರದೀಪ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರಲಿಲ್ಲ. ಹಾಗಾಗಿ, ಈ ಸುದ್ದಿ ಖಚಿತ ಎಂದೇ ಹೇಳಲಾಗಿತ್ತು. 11 ದಿನಗಳ ಹಿಂದೆ ಅವರ ತಂದೆ ಅಭಿಮಾನಿಗಳಿಗೆ, ಐಸಿಯುನಲ್ಲಿ ರ್‍ಯಾಂಟ್‌‌ಮ್ಯಾನ್‌ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ : ಬೆಂಗಳೂರಿನ ಖ್ಯಾತ ಯೂಟ್ಯೂಬರ್ ಬಂಧನ; ಮುಳುವಾಯ್ತು ಆ ಒಂದು ವೀಡಿಯೋ!

ಖ್ಯಾತಿ ಕೊಟ್ಟ ಕೆಜಿಎಫ್ :

ಕೋಲ್ಕತ್ತಾದವರಾದ ಆ್ಯಂಗ್ರಿ ರ್‍ಯಾಂಟ್‌‌ಮ್ಯಾನ್‌ ಫೆಬ್ರವರಿ 19, 1996 ರಂದು ಜನಿಸಿದರು. ‘ಆಂಗ್ರಿ ರಾಂಟ್‌ಮ್ಯಾನ್’ ಎಂಬ ಅವರ ಯೂಟ್ಯೂಬ್ ಚಾನೆಲ್ 481k ಚಂದಾದಾರರನ್ನು ಮತ್ತು Instagram ನಲ್ಲಿ 119k ಫಾಲೋವರ್ಸ್​ ಹೊಂದಿದ್ದರು. 2018ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಕೆಜಿಎಫ್‌ ಸಿನಿಮಾ ವಿಮರ್ಶೆ ಮಾಡುವ ಮೂಲಕ ಅಬ್ರದೀಪ್ ಸಹಾ ಖ್ಯಾತಿ ಗಳಿಸಿದರು.
ಕೆಜಿಎಫ್ ಸಿನಿಮಾವನ್ನು ಹೊಗಳಿದ್ದ ಅವರು, ಬಾಲಿವುಡ್ ಸಿನಿಮಾರಂಗವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾ ಹೇಗೆ ಮಾಡಬೇಕು ಎಂದು ದಕ್ಷಿಣ ಭಾರತೀಯ ಚಿತ್ರರಂಗ ನೋಡಿ ಕಲಿಯಿರಿ ಎಂದು ಹೇಳಿದ್ದರು. ಈ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

Continue Reading

DAKSHINA KANNADA

ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ

Published

on

ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.

udaya poojary

ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್‌ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್‌ ಕುಂಪಲ ಎಲ್ಲಿದ್ದರು…?

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್‌ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್‌ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್‌ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.

ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!

ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ

ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್‌ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್‌ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.

ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ

ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್‌ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.

Continue Reading

LATEST NEWS

Trending