International news
ಅತಿಯಾದ ಕೆಲಸದ ಒತ್ತಡ..! ರೋಬೋಟ್ ಸೂಸೈ*ಡ್..?
ಮಂಗಳೂರು/ ದಕ್ಷಿಣ ಕೊರಿಯಾ : ಮಾನಸಿಕ ಒತ್ತಡಕ್ಕೆ ಸಿಲುಕಿದ ಮನುಷ್ಯರು ಜೀವಾಂ*ತ್ಯಗೊಳಿಸುವುದು ಸರ್ವೇ ಸಾಮಾನ್ಯ. ಆದ್ರೆ, ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಒಂದು ಕೆಲಸದ ವಿಚಾರದಲ್ಲಿ ಹತಾಶೆಯಿಂದ ಸೂ*ಸೈಡ್ ಮಾಡಿಕೊಂಡಿದೆ ಎನ್ನಲಾಗಿದೆ. ದಕ್ಷಿಣ ಮದ್ಯ ಕೊರಿಯಾದ ಪುರಸಭೆಯೊಂದು ಈ ವಿಚಾರ ಬಹಿರಂಗ ಪಡಿಸಿದ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಮುನ್ಸಿಪಲ್ ಕಾರ್ಪೋರೇಷನ್ನಲ್ಲಿ ಆಡಳಿತಾತ್ಮಕ ಕೆಲಸದಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರೋಬೋಟ್ ಮೆಟ್ಟಿಲಿನಿಂದ ಹಾರಿ ಆತ್ಮಹ*ತ್ಯೆ ಮಾಡಿಕೊಂಡಿದೆ ಎಂದು ಕಾರ್ಪೋರೇಷನ್ ಅಧಿಕಾರಿಗಳು ಹೇಳಿದ್ದಾರೆ. ಕಳೆದ ಒಂದು ವರ್ಷದಿಂದ ಈ ರೋಬೋಟ್ ಇಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿತ್ತು.
ಕ್ಯಾಲಿಫೋರ್ನಿಯಾದ ಬೇರ್ ರೋಬೋಟಿಕ್ಸ್ ಅಭಿವೃದ್ಧಿಪಡಿಸಿದ ಈ ರೋಬೋಟ್ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಕೆಲಸ ಮಾಡುತ್ತಿತ್ತು. ತನ್ನದೇ ಆದ ಸಾರ್ವಜನಿಕ ಸೇವಾ ಕಾರ್ಡ್ ಅನ್ನು ಸಹ ಹೊಂದಿದ್ದ ಇದು ಕೇವಲ ಒಂದು ಮಹಡಿಗೆ ಸೀವಿತವಾಗಿರಲಿಲ್ಲ.
ಒಂದು ಮಹಡಿಗೆ ಸೀಮಿತವಾದ ಇತರ ರೋಬೋಟ್ಗಳಿಗಿಂತ ಭಿನ್ನವಾಗಿ, ಇದು ಬೇರೆ ಬೇರೆ ಮಹಡಿಗಳಿಗೆ ತೆರಳಿ ಕೆಲಸ ಮಾಡುತ್ತಿತ್ತು. ಆದರೆ, ಕಳೆದ ವಾರ ನಿಧಾನವಾಗಿ ಚಲಿಸಲು ಆರಂಭಿಸಿದ್ದ ರೋಬೋಟ್ ಬಳಿಕ ಮಹಡಿಯ ಮೆಟ್ಟಿಲ ಕೆಳಗೆ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ರೋಬೋಟ್ ಆತ್ಮಹ*ತ್ಯೆ ಮಾಡಿಕೊಂಡಿದೆ ಎಂದು ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ.
ಇದನ್ನೂ ಓದಿ : WATCH : ಕೂದಲು ಕತ್ತರಿಸಿಕೊಂಡ ಹೀನಾ ಖಾನ್; ಗೆಲ್ಲಬೇಕು ಅಂದ್ರೆ ಕಠಿಣ ನಿರ್ಧಾರ ತೆಗೆದುಕೊಳ್ಳಲೇ ಬೇಕು ಎಂದ ನಟಿ
ರೋಬೋಟ್ನ ಅವಶೇಷಗಳನ್ನು ಸಂಗ್ರಹಿಸಿರುವ ಅದರ ವಿನ್ಯಾಸಕಾರ ಕಂಪೆನಿ ಈ ಘಟನೆಯ ನಿಖರ ಕಾರಣ ಹುಡುಕುವ ಪ್ರಯತ್ನ ನಡೆಸಿದೆ.
International news
WATCH : ನೋಡು ನೋಡುತ್ತಿದ್ದಂತೆ ಕೆಂಪಾದ ಸಮುದ್ರ…ವೀಡಿಯೋ ವೈರಲ್
ಮಂಗಳೂರು/ಟೆಕ್ಸಾಸ್ : ಆ ಸಮುದ್ರ ನೋಡು ನೋಡುತ್ತಿದ್ದಂತೆ ಕೆಂಪಾಗಿದೆ. ಆಶ್ಚರ್ಯ ಆದ್ರೂ ಇದು ಸತ್ಯ! ಆದ್ರೆ, ಇದಕ್ಕೆ ಕಾರಣ ಶಾರ್ಕ್. ಈ ಘಟನೆ ನಡೆದಿರೋದು ಟೆಕ್ಸಾಸ್ನ ಸೌತ್ ಪಾಡ್ರೆ ದ್ವೀಪದಲ್ಲಿ.
ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದ ಮಹಿಳೆಯ ಕಾಲಿಗೆ ಬಾಯಿ ಹಾಕಿರುವ ಶಾರ್ಕ್ ಆಕೆಯ ಕಾಲಿನ ಪೀಸ್ ತಿಂದು ಹಾಕಿದೆ. ಇದರಿಂದ ಸಮುದ್ರದ ನೀರು ಕೆಂಬಣ್ಣಕ್ಕೆ ತಿರುಗಿದೆ. ಈ ಭಯಾನಕ ವಿಡಿಯೋ ವೈರಲ್ ಆಗಿದೆ.
ಆ ಶಾರ್ಕ್ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ಮಹಿಳೆಯ ಕಾಲು ಕಟ್ ಆಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸಮುದ್ರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ : ಏನಾಶ್ಚರ್ಯ!! ನಾಗರ ಹಾವು ಕಡಿದು ಮಹಿಳೆ ಸಾ*ವು; ಅಂತ್ಯಸಂಸ್ಕಾರದ ವಿಧಿಗೆ ಬಂದು ನೀರು ಕುಡಿದು ಹೋದ ನಾಗರಹಾವು
ಸುಮಾರು 6 ಅಡಿ (ಸುಮಾರು 1.8 ಮೀಟರ್) ಉದ್ದದ ಒಂದೇ ಶಾರ್ಕ್ ಈ ಘಟನೆಗೆ ಕಾರಣ. ಈ ದಾಳಿಯ ನಂತರ ಸುರಕ್ಷತಾ ದೃಷ್ಟಿಯಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಕಡಲ ತೀರದಲ್ಲಿ ಗಸ್ತು ತಿರುಗುತ್ತಿದ್ದಾರೆ ಮತ್ತು ಡ್ರೋನ್ಗಳನ್ನು ಹಾರಿಸುತ್ತಿದ್ದು ಕಟ್ಟುನಿಟ್ಟಿನ ಎಚ್ಚರ ವಹಿಸಿದ್ದಾರೆ.
International news
ಕುವೈತ್ ಅ*ಗ್ನಿ ದುರಂ*ತ: 40 ಭಾರತೀಯರ ಸಾ*ವು; ಪ್ರಧಾನಿ ಮೋದಿ ಸಂತಾಪ
ಮಂಗಳೂರು/ಕುವೈತ್ : ಕುವೈತ್ನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಭಾರೀ ಅ*ಗ್ನಿ ಅವಘ*ಡದಲ್ಲಿ 43ಕ್ಕೂ ಅಧಿಕ ಮಂದಿ ಸಾ*ವನ್ನಪ್ಪಿದ್ದಾರೆ. ಇವರಲ್ಲಿ 40 ಜನ ಭಾರತೀಯರು ಕೂಡ ಸೇರಿದ್ದಾರೆ. ಮಲಯಾಳಿ ಉದ್ಯಮಿಯೊಬ್ಬರಿಗೆ ಸೇರಿದ ಕುವೈತ್ನ ದಕ್ಷಿಣ ಅಹ್ಮದಿ ಗವರ್ನರೇಟ್ನಲ್ಲಿರುವ ಮಂಗಾಫ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ 160ಕ್ಕೂ ಹೆಚ್ಚು ಕಾರ್ಮಿಕರು ನೆಲೆಸಿದ್ದರು. ಬುಧವಾರ 6 ಅಂತಸ್ತಿನ ಕಟ್ಟಡದ ಅಡುಗೆ ಕೋಣೆಯಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ.
ಕುವೈತ್ ಉಪಪ್ರಧಾನ ಮಂತ್ರಿ ಶೇಖ್ ಫಹಾದ್ ಯೂಸುಫ್ ಸೌದ್ ಅಲ್-ಸಬಾಹ್ ಈ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ 43 ಕಾರ್ಮಿಕರು ಸಾ*ವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ :
ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕುವೈತ್ ನಗರದಲ್ಲಿ ಸಂಭವಿಸಿದ ಅ*ಗ್ನಿ ದುರಂ*ತವು ದುಃಖಕರವಾಗಿದೆ. ನನ್ನ ಆಲೋಚನೆಗಳು ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ನಾವಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ನಮ್ಮ ದೇಶದವರು ಅಲ್ಲಿದ್ದಾರೆ ಎಂದು ಎಕ್ಸ್ನಲ್ಲಿ ಬರೆದಿದ್ದಾರೆ.
ಇದನ್ನೂ ಓದಿ : ಪುರಿ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳು ಭಕ್ತರ ಪ್ರವೇಶಕ್ಕೆ ಮುಕ್ತ
ಭಾರತೀಯ ರಾಯಭಾರಿ ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಕುವೈತ್ ನಗರದಲ್ಲಿ ನಡೆದ ಅ*ಗ್ನಿ ದುರಂ*ತದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾ*ವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಘಟನಾ ಸ್ಥಳಕ್ಕೆ ಹೋಗಿದ್ದು ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ, ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಸೌದಿ ಅರೇಬಿಯಾದ ದಮಾಮ್ನಲ್ಲಿ ಅ*ಗ್ನಿ ದುರಂತ; ಮೂಡುಬಿದಿರೆಯ ಮಗು ಸಾ*ವು
ಮೂಡುಬಿದಿರೆ : ಸೌದಿ ಅರೇಬಿಯಾದ ದಮಾಮ್ನಲ್ಲಿ ಶನಿವಾರ(ಮೇ 25) ನಡೆದ ಅ*ಗ್ನಿ ಅವಘಡದಲ್ಲಿ ಕರಾವಳಿ ಮೂಲದ ಮಗುವೊಂದು ಇಹಲೋಕ ತ್ಯಜಿಸಿದೆ. ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಮೂರು ವರ್ಷದ ಮಗುವೊಂದರ ಜೀವಾಂತ್ಯವಾಗಿದ್ದರೆ, ಮೂವರು ತೀವ್ರ ಅಸ್ವಸ್ಥರಾಗಿದ್ದಾರೆ.
ದಮಾಮ್ನ ಅದಮಾ ಎಂಬಲ್ಲಿಯ ಲುಲು ಮಾಲ್ ಹಿಂಭಾಗದಲ್ಲಿರುವ ಅಲ್ ಹುಸೇನಿ ಕಂಪೌಂಡ್ನಲ್ಲಿ ಮೂಡುಬಿದಿರೆಯ ಕೋಟೆಬಾಗಿಲು ಖೀಲಾ ಸುನ್ನಿ ಜಾಮಿಯಾ ಮಸೀದಿ ಎದುರಿನ ಮನೆಯ ಶೇಖ್ ಫಹಾದ್ ಮತ್ತು ಅವರ ಕುಟುಂಬ ವಾಸವಾಗಿದೆ. ಇವರು ರಾತ್ರಿ ಮಲಗಿದ್ದ ವೇಳೆ ಅ*ಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಫಹದ್ ಅವರ ಮಗು ಸಾಯಿಕ್ ಶೇಖ್ (2) ಉಸಿರುಗಟ್ಟಿ ಮೃ*ತಪಟ್ಟಿದೆ.
ಇದನ್ನೂ ಓದಿ : WATCH : ಚಲಿಸುತ್ತಿದ್ದ ಟ್ರಕ್ ನಲ್ಲಿ ಕಳ್ಳರ ಕರಾಮತ್ತು; ಸಿನಿಮೀಯ ರೀತಿಯಲ್ಲಿ ಸರಕು ಕದ್ದ ಖದೀಮರು! ನಿಬ್ಬೆರಗಾದ ನೆಟ್ಟಿಗರು!
ಫಹದ್, ಅವರ ಪತ್ನಿ ಸಲ್ಮಾ ಕಾಝಿ ಮತ್ತು ಪುತ್ರ ಶಾಹಿದ್ ಶೇಖ್(6) ಹೊಗೆಯಿಂದ ಉಸಿರುಗಟ್ಟಿ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಸಮೀಪದ ನಿವಾಸಿಗಳು ಆಸ್ಪತ್ರೆಗೆ ದಾಖಲಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆಯೊಳಗಿದ್ದ ರೆಫ್ರಿಜರೇಟರ್ನಿಂದ ಶನಿವಾರ ರಾತ್ರಿ ಅನಿಲ ಸೋರಿಕೆ ಉಂಟಾಗಿ ಈ ದುರಂ*ತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಫಹಾದ್ ಕುಟುಂಬವು ಕಳೆದ ಆರು ತಿಂಗಳಿನಿಂದ ಈ ಕಟ್ಟಡದಲ್ಲಿ ವಾಸವಾಗಿದೆ.
- FILM4 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA5 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- DAKSHINA KANNADA6 days ago
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
- LATEST NEWS6 days ago
WATCH VIDEO : ಕಣ್ಣಿಗೆ ಬಿತ್ತು ಹಲಸಿನ ಮರ…ಗಜರಾಜ ಹಲಸಿನ ಹಣ್ಣನ್ನು ಹೇಗೆ ಕೊಯ್ದ ಗೊತ್ತಾ!?
Pingback: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ - NAMMAKUDLA NEWS - ನಮ್ಮಕುಡ್
Pingback: ಇನ್ಮುಂದೆ ಕೆಸ್ಆರ್ಟಿಸಿ ಬಸ್ಗಳಲ್ಲಿಯೂ ಕ್ಯಾಶ್ಲೆಸ್..! ಫೋನ್ ಪೇ, ಗೂಗಲ್ ಪೇಗೆ ಅವಕಾಶ..! - NAMMAKUDLA NEWS - ನಮ್ಮಕುಡ