Connect with us

    chikkamagaluru

    ಹೇಗಿರಲಿದೆ ಉಡುಪಿ – ಚಿಕ್ಕಮಗಳೂರು ಫೈಟ್…?

    Published

    on

    ಮಂಗಳೂರು : ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಕಣಕ್ಕಿಳಿಸಿದೆ. ಆದ್ರೆ ಈ ಬಾರಿ ಈ ಕ್ಷೇತ್ರದಲ್ಲಿ ಕೈ ಮತ್ತು ಬಿಜೆಪಿ ನಡುವೆ ಬಿಗ್ ಫೈಟ್ ನಡೆಯೋ ಎಲ್ಲಾ ಸಾದ್ಯತೆಗಳನ್ನು ಅಂದಾಜಿಸಲಾಗಿದೆ. ಸರಿ ಸುಮಾರು 14 ಲಕ್ಷ ಮತದಾರರಿರುವ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ 2019 ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಭಾರಿ ಅಂತರದಲ್ಲಿ ಪ್ರಮೋದ್ ಮದ್ವರಾಜ್ ಅವರನ್ನು ಸೋಲಿಸಿದ್ದರು.  ಸರಿ ಸುಮಾರು 3 ಲಕ್ಷದ 40 ಸಾವಿರ ಮತಗಳ ಅಂತರದಲ್ಲಿ ಶೋಭಾ ಜಯಗಳಿಸಿದ್ರು. ಈ ಗೆಲುವಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮತದಾರರ ದೊಡ್ಡ ಪಾಲಿತ್ತು ಅನ್ನೋದು ಇಲ್ಲಿ ಪ್ರಮುಖ ಅಂಶ.

    ಉಡುಪಿ - ಚಿಕ್ಕಮಗಳೂರು ಕ್ಷೇತ್ರ

    ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರ ಅಸಮಾದಾನ…!

    ಟಿಕೆಟ್ ಹಂಚಿಕೆ ಮೊದಲೇ ಸಾಕಷ್ಟು ಚರ್ಚಗೆ ಗ್ರಾಸವಾಗಿದ್ದ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಯ ಘೋಷಣೆ ಆಗಿದೆ. ಕಾರ್ಯಕರ್ತರು ನಡೆಸಿದ “ಗೋ ಬ್ಯಾಕ್‌” ಅಭಿಯಾನಕ್ಕೆ ತಲೆಬಾಗಿದ ಹೈಕಮಾಂಡ್ ಸಂಸದೆ ಶೋಭಾ ಅವರಿಗೆ ಬೆಂಗಳೂರು ಉತ್ತರದ ದಾರಿ ತೋರಿಸಿದ್ದಾರೆ. “ಗೋ ಬ್ಯಾಕ್ ಶೋಭಾ” ಅಭಿಯಾನದಿಂದ ಶೋಭಾ ಕರಂದ್ಲಾಜೆ ಅವರೇನೋ ಉಡುಪಿಯಿಂದ ಬೆಂಗಳೂರಿಗೆ ಹೋಗಿದ್ದಾರೆ. ಆದ್ರೆ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರ ಮತ್ತೊಂದು ಬೇಡಿಕೆಯಾಗಿದ್ದ ಚಿಕ್ಕಮಗಳೂರಿಗೆ ಟಿಕೇಟ್ ಕೊಡಿ ಅನ್ನೋ ಬೇಡಿಕೆ ಕಮರಿ ಹೋಗಿದೆ. ಸರಳ ಸಜ್ಜನ ರಾಜಕಾರಣಿ ಅಂತ ಕರೆಯಿಸಿಕೊಳ್ಳುತ್ತಿರುವ ಉಡುಪಿ ಜಿಲ್ಲೆಯವರೇ ಆಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ – ಚಿಕ್ಕಮಗಳೂರು ಟಿಕೇಟ್ ನೀಡಲಾಗಿದೆ. ಇದು ಚಿಕ್ಕಮಗಳೂರು ಬಿಜೆಪಿ ವಲಯದಲ್ಲಿ ಕೊಂಚ ಅಸಮಾದಾನ ಮೂಡಿಸಿರೋದು ಸುಳ್ಳಲ್ಲ.

    ನಾಲ್ಕೂ ವಿಧಾನಸಭಾ ಕ್ಷೇತ್ರ ಕಳೆದುಕೊಂಡಿರುವ ಬಿಜೆಪಿ..!

    ಚಿಕ್ಕಮಗಳೂರಿನ ಐದು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸೇರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಐದೂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿರೋದು ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಪಾಯಿಂಟ್. ಕಾಂಗ್ರೆಸ್ ನೀಡಿದ್ದ ಗ್ಯಾರೆಂಟಿಯನ್ನು ಉಡುಪಿಯ ಜನ ಒಪ್ಪಿಕೊಳ್ಳದೇ ಇದ್ರೂ ಚಿಕ್ಕಮಗಳೂರಿನ ಜನರು ಒಪ್ಪಿ ಕೈ ಗೆಲುವಿಗೆ ಕಾರಣವಾಗಿದ್ರು. ಇದೀಗ ಲೋಕಸಭಾ ಚುನಾವಣೆಯಲ್ಲೂ ಐದು ಗ್ಯಾರೆಂಟಿ ನೀಡಿರುವ ಕಾಂಗ್ರೆಸ್ ಮಹಿಳಾ ಮತದಾರರನ್ನು ಓಲೈಕೆ ಮಾಡಿದೆ. ಹೀಗಾಗಿ ಕೇಂದ್ರದ ಹೊಸ ಗ್ಯಾರೆಂಟಿ ಮುಂದೆ  ಚಿಕ್ಕಮಗಳೂರಿನ ಮತದಾರರು ಬಿಜೆಪಿ ಕೈ ಹಿಡಿತಾರೆ ಅನ್ನೋ ಗ್ಯಾರೆಂಟಿ ಇಲ್ಲ .

    ಉಡುಪಿಯಲ್ಲಿ ಬಿಜೆಪಿಗೆ ಮೀನುಗಾರರ ಸವಾಲು ಎದುರಾಗುವ ಸಾದ್ಯತೆ..!

    ಕಳೆದ ಬಾರಿ ಜೆಡಿಎಸ್‌ನಲಿದ್ದು, ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಒಲವು ತೋರಿದ್ದರೂ ಕಾನೂನು ರೀತಿಯಾಗಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ಮೀನುಗಾರ ಮುಖಂಡ ಪ್ರಮೋದ್ ಮದ್ವರಾಜ್‌, ಈ ಬಾರಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿ ಶೋಭಾ ಅವರಿಗೆ ಪ್ರಭಲ ಪೈಪೋಟಿ ನೀಡಿದ್ದರು. ಈ ಬಾರಿ ಮೀನುಗಾರ ಸಮೂದಾಯವನ್ನು ಗಮನಿಸಿ ನನಗೇ ಟಕೆಟ್ ಕೊಡಬೇಕು ಅಂತ ಪ್ರಮೋದ್ ಮದ್ವರಾಜ್ ಬಹಿರಂಗವಾಗಿಯೇ ಹೈಕಮಾಂಡ್‌ಗೆ ಒತ್ತಾಯಿಸಿದ್ದರು. ಇನ್ನು ಟಿಕೇಟ್ ಪಡೆಯಲು ಪ್ರಮೋದ್ ಅವರೇ “ಗೋ ಬ್ಯಾಕ್” ಅಭಿಯಾನ ಮಾಡಿಸಿದ್ರು ಅಂತ ಶೋಭಾ ಕರಂದ್ಲಾಜೆ ಕೂಡಾ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದರು. ಉಡುಪಿಗೆ ಸಂಸದೆ ಶೋಭಾ ಭೇಟಿಯ ವೇಳೆ ಮೀನುಗಾರ ಮುಖಂಡರನ್ನು ಅವರೇ ಛೂ ಬಿಟ್ಟಿದ್ದರು ಎಂದು ಸಣ್ಣದೊಂದು ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರಕ್ಕೆ ಶಿಫ್ಟ್ ಆಗಿದ್ರೂ ಮೀನುಗಾರ ಮುಖಂಡನಿಗೆ ಟಿಕೆಟ್ ಸಿಕ್ಕಿಲ್ಲ ಅನ್ನೋ ಅಸಮಾದಾನ ಮೀನುಗಾರರಲ್ಲೂ ಇದೆ. ಹೀಗಾಗಿ ಮೀನುಗಾರ ಸಮೂದಾಯ ಮತ್ತು ಪ್ರಮೋದ್ ಮದ್ವರಾಜ್ ಬೆಂಬಲಿಗರ ನಡೆಯೂ ಕೂಡಾ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾದ್ಯತೆ ಇದೆ.

    ಕಾಂಗ್ರೆಸ್‌ಗೂ ಕಬ್ಬಿಣದ ಕಡಲೆಯಾದ ಕ್ಷೇತ್ರ..!

    ಕಾಂಗ್ರೆಸ್‌ ಪಕ್ಷದಲ್ಲೂ ನಡೆದಿದ್ದ “ಗೋ ಬ್ಯಾಕ್‌ ಜೆ.ಪಿ.ಹೆಗ್ಡೆ” ಅಭಿಯಾನ ಸದ್ಯಕ್ಕೆ ಯಾವುದೇ ಫಲ ನೀಡಿಲ್ಲ ಅನ್ನೋದು ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರುಳ್ಳಿ ಅವರಿಗೆ ಟಿಕೇಟ್ ನೀಡಿ ಎಂಬ ಕೈ ಕಾರ್ಯಕರ್ತರ ಬೇಡಿಕೆಗೆ ಮನ್ನಣೆ ಸಿಕ್ಕಿಲ್ಲ. 2017 ಕ್ಕೆ ಬಿಜೆಪಿ ಸೇರಿ ಇದೀಗ ಮತ್ತೆ ‘ಕೈ’ ಹಿಡಿದಿರುವ ಕುಂದಾಪುರದ ಜಯಪ್ರಕಾಶ್ ಹೆಗ್ಡೆ ಅವರಿಗೆ ಕಾಂಗ್ರೆಸ್ ಮಣೆ ಹಾಕೋದು ಖಚಿತವಾಗಿದೆ. ಆದ್ರೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಪ್ರಾಭಲ್ಯ ಹಾಗೂ ಕೇಂದ್ರದ ಮೋದಿ ವರ್ಚಸ್ಸನ್ನು ಕುಗ್ಗಿಸಿ ಮುಂದೆ ಸಾಗೋದು ಅಷ್ಟು ಸುಲಭದ ಮಾತಲ್ಲ. ಚಿಕ್ಕಮಗಳೂರಿನ ಕೈ ಕಾರ್ಯಕರ್ತರ ಅಸಮಾದಾನ, ಹಾಗೂ ಉಡುಪಿ ಜಿಲ್ಲೆಯ ಮೋದಿ ಹವಾ ಎರಡನ್ನೂ ಎದುರಿಸಿ ಜಯಪ್ರಕಾಶ್ ಹೆಗ್ಡೆ ಪೈಪೋಟಿ ನೀಡಬೇಕಿದೆ.

    ಕಾಂಗ್ರೆಸ್ ಕೈ ಹಿಡಿಯಲಿದೆಯಾ ಪಂಚ ಗ್ಯಾರೆಂಟಿ..?

    ಹಾಗಂತ ಲೋಕಸಭೆಯಲ್ಲಿ ಬಿಜೆಪಿ ಗೆಲವಿನ ಅಂತರ ಎಷ್ಟೇ ಜಾಸ್ತಿಯಾಗಿದ್ದರೂ ಕಾಂಗ್ರೆಸ್ ಸಾಂಪ್ರದಾಯಿಕ ಮತಗಳು ಹಂಚಿ ಹೋಗಿಲ್ಲ. ಹೊಸ ಯುವ ಮತದಾರರು ಮೋದಿ ಅವರಿಗೆ ಮತ ಚಲಾಯಿಸಿದ್ದಾರೆಯೇ ಹೊರತು ಕ್ಷೇತ್ರದ ಅಭ್ಯರ್ಥಿಗೆ ಅಲ್ಲ ಅನ್ನೋದು ಸ್ಪಷ್ಟ. ಇನ್ನು ರಾಜ್ಯ ಸರ್ಕಾರದ ಗ್ಯಾರೆಂಟಿ ನಮಗೆ ಬೇಡ ಅಂದಿದ್ದ ಬಹುತೇಕ ಬಿಜೆಪಿ ಬೆಂಬಲಿಗರು ಗ್ಯಾರೆಂಟಿಯನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಉಡುಪಿಯಲ್ಲಿ ನಡೆದಿರುವ ಗ್ಯಾರೆಂಟಿ ಸಮಾವೇಶದಲ್ಲಿ ಬಿಜೆಪಿಗೆ ಮತ ಚಲಾಯಿಸಿದ ಮಹಿಳೆಯರೂ ಕೂಡಾ ಗ್ಯಾರೆಂಟಿ ಫಲಾನುಭವಿಗಳಾಗಿರೊದು ಬಹಿರಂಗವಾಗಿದೆ. ಇದೀಗ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರೆಂಟಿಗಳು ಮಹಿಳಾ ಮತದಾರರನ್ನೇ ಟಾರ್ಗೆಟ್ ಮಾಡಿದೆ. ನಾರಿ ನ್ಯಾಯ್‌ ಅನ್ನೋ ಹೆಸರಿನಲ್ಲಿ ಮಹಿಳೆಯರಿಗೆ ಕೊಡುಗೆಯ ಘೋಷಣೆ ಜೊತೆಗೆ ರೈತರ ಸಾಲ ಮನ್ನಾ ಮೊದಲಾದ ವಿಚಾರಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದೆ. ಇದೇ ಲೆಕ್ಕಾಚಾರದಲ್ಲಿರುವ ಕೈ ನಾಯಕರು ಉಡುಪಿ – ಚಿಕ್ಕಮಗಳೂರು ಕ್ಷೇತ್ರವನ್ನು ಗೆಲ್ಲುವ ನಿರೀಕ್ಷೆ ಇರಿಸಿಕೊಂಡಿರುವುದಂತು ಸುಳ್ಳಲ್ಲ. ಹೀಗಾಗಿ ಈ ಬಾರಿ ಮೋದಿ ಅಲೆಯ ನಡುವೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಗ್ ಫೈಟ್ ನಡೆಯೋ ಎಲ್ಲಾ ನಿರೀಕ್ಷೆ ಇದೆ.

     

    chikkamagaluru

    ಶೃಂಗೇರಿ ದೇವಸ್ಥಾನದಲ್ಲಿಯೂ ವಸ್ತ್ರ ಸಂಹಿತೆ ಜಾರಿ; ಈ ಉಡುಪು ಧರಿಸಿದವರಿಗೆ ಮಾತ್ರ ಪ್ರವೇಶ

    Published

    on

    ಚಿಕ್ಕಮಗಳೂರು: ದೇಶದ ಅನೇಕ ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದೇ ರೀತಿ ಇದೀಗ ಶೃಂಗೇರಿ ಶಾರದಾಂಬ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಪುರುಷ ಹಾಗೂ ಮಹಿಳೆಯರು ನಿರ್ದಿಷ್ಟ ಬಟ್ಟೆಗಳನ್ನು ಧರಿಸಿದರೆ ಮಾತ್ರ ಪ್ರವೇಶ ನೀಡಲಾಗುವುದು. ಆದರೆ ವಸ್ತ್ರ ಸಂಹಿತೆಯು ಒಳ ಪ್ರಕಾರಕ್ಕೆ ಮಾತ್ರ ಅನ್ವಯವಾಗಲಿದ್ದು ದೇವಸ್ಥಾನದ ಒಳ ಆವರಣಕ್ಕೆ ಯಾವುದೇ ನಿರ್ಬಂಧವಿಲ್ಲ.

    ಶ್ರೀ ಶಾರದಾ ಪೀಠದ ಒಳ ಪ್ರಾಕಾರಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಶ್ರೀಮಠ ರೂಪಿಸಿದ್ದು ಆಗಸ್ಟ್ 15ರಿಂದ ಜಾರಿಗೆ ಬರಲಿದೆ. ಪುರುಷರು ಧೋತಿ, ಶಲ್ಯ ಹಾಗೂ ಮಹಿಳೆಯರು ಸೀರೆ, ಸೆಲ್ವಾರ್‌ ಕಮೀಜ್‌, ದುಪ್ಪಟ್ಟ, ಲಂಗ ದಾವಣಿ, ಲೆಹಂಗ ಧರಿಸಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

    ಮೈಸೂರು ದಸರಾ 2024: ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯು ಹೆಗಲಿಗೆ

    “ಅಗಸ್ಟ್ 15, 2024ನೇ ಗುರುವಾರದಿಂದ ಶ್ರೀ ಶಾರದಾಮ್ಮನವರ ದರ್ಶನಕ್ಕಾಗಿ ಬರುವ ಭಕ್ತಾದಿಗಳು ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರಲು ವಿನಂತಿಸಲಾಗಿದೆ ಭಾರತೀಯ ಸಾಂಪ್ರದಾಯಿಕವಲ್ಲದ ಉಡುಗೆಯನ್ನು ತೊಟ್ಟುಬಂದವರಿಗೆ ಅರ್ಧಮಂಟಪದ ಒಳಗೆ ಪ್ರವೇಶವಿರುವುದಿಲ್ಲ, ಹೊರಗಿನ ಪ್ರಾಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ” ಎಂದು ಪ್ರಕಟಣೆ ಹೇಳಿದೆ. ಜಗದ್ಗುರುಗಳ ಚಾತುರ್ಮಾಸ ವ್ರತ ಚಾಲ್ತಿಯಲ್ಲಿ ಇರುವ ಮಧ್ಯೆಯೇ ಈ ವಸ್ತ್ರಸಂಹಿತೆ ನಿಯಮ ಜಾರಿಗೆ ಬರಲಿದೆ.

    Continue Reading

    chikkamagaluru

    ಚಿಕ್ಕಮಗಳೂರು: ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ..! ಜಿಲ್ಲಾಧಿಕಾರಿ ಆದೇಶ

    Published

    on

    ಚಿಕ್ಕಮಗಳೂರು: ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ, ಕೊಡಗು ಜಿಲ್ಲೆ ಸೇರಿದಂತೆ ಹಲವು ಕಡೆಯ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಸಮುದ್ರದ ತೀರದ ಜನರಿಗೆ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ಬೀಚ್‌ನತ್ತ ಬರುವ ಪ್ರವಾಸಿಗರಿಗೂ ನಿರ್ಬಂಧ ಹೇರಲಾಗಿದೆ.

    ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರಿಯುತ್ತಿದೆ. ಈ ಪ್ರದೇಶಗಳಲ್ಲಿ ಗುಡ್ಡ, ಬೆಟ್ಟಗಳು ಹೆಚ್ಚಿರುವುದರಿಂದ ಆತಂಕ ಹೆಚ್ಚಾಗಿದೆ. ಗಾಳಿ ಮಳೆಗೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಶೃಂಗೇರಿ, ಕಳಸ, ನರಸಿಂಹರಾಜಪುರ, ಮೂಡಿಗೆರೆ, ಕುದುರೆಮುಖ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದ್ದು ಗುಡ್ಡೆ, ಬೆಟ್ಟಗಳಲ್ಲಿ ನಿರ್ಮಾಣವಾಗಿರುವ ಸಣ್ಣ ಜಲಪಾತಗಳು ತುಂಬಿ ಹರಿಯುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಹಲವು ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದ್ದು, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಜು.22 ರವರೆಗೆ ಪ್ರವಾಸ ನಿರ್ಬಂಧವನ್ನು ಹೇರಿದೆ.

    ನೆರೆಯಿಂದ ಜಲಾವೃತಗೊಂಡ ಮನೆ..! ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಹೋಗಲಾಗದೆ ಪರದಾಟ..!

    ಮುಳ್ಳಯ್ಯನಗಿರಿ ಪ್ರದೇಶಕ್ಕೆ ಹೋಗುವ ದಾರಿ ಕಿರಿದಾಗಿದ್ದು ಬೆಟ್ಟ ಗುಡ್ಡಗಳ ನಡುವೆಯೇ ಹಾದು ಹೋಗಬೇಕಿದೆ. ಹಾಗಾಗಿ ಈ ಪ್ರದೇಶದಲ್ಲಿ ಅಪಾಯ ಸಂಭವಿಸುವ ಸಾದ್ಯತೆ ಹೆಚ್ಚಿದೆ. ಈ ಪ್ರದೇಶದಲ್ಲಿ ಈಗಾಗಲೇ ಸಣ್ಣ ಪ್ರಮಾಣದ ಗುಡ್ಡ ಕುಸಿತ ಗೊಂಡಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.  ಸ್ಥಳೀಯ ವಾಹನಗಳನ್ನು ಹೊರತುಪಡಿಸಿ ಹೊರಗಿನ ಯಾವುದೇ ವಾಹನಗಳಿಗೆ ಈ ಪ್ರದೇಶಗಳಲ್ಲಿ ಜು.22ವರೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

    Continue Reading

    chikkamagaluru

    ವೀಕೆಂಡ್ ಮಸ್ತಿಯಲ್ಲಿ ಯುವಕರು..! ದೇವರಮನೆಯಲ್ಲಿ ಯುವಕರ ಡ್ಯಾನ್ಸ್..!!

    Published

    on

    ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರವಾಸಿ ತಾಣಕ್ಕೆ ಹೆಸರುವಾಸಿ. ಇನ್ನು ಮಳೆಗಾಲದಲ್ಲಿ ಹೇಳಲೇಬೇಕಿಲ್ಲ. ಹಚ್ಚ ಹಸಿರ ವಾತಾವರಣ.. ಝಳಝಳಿಸುವ ಪುಟ್ಟ ಪುಟ್ಟ ಜಲಪಾತಗಳು ಕಣ್ಮನ ಸೆಳೆಯುತ್ತದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಹೊಯ್ಸಳರ ಕಾಲದ ಇತಿಹಾಸವನ್ನು ಹೊಂದಿರುವ ದೇವರಮನೆ ಕಾಲಭೈರವೇಶ್ವರನ ಕ್ಷೇತ್ರಕ್ಕೆ ಪ್ರವಾಸಿಗರು ಅಂತರ್‌ರಾಜ್ಯದಿಂದಲೂ ಬರುತ್ತಾರೆ.

    ಇದೀಗ ಶ್ರೀ ಕ್ಷೇತ್ರ ಕಾಲಭೈರವೇಶ್ವರನ ಕ್ಷೇತ್ರ ಮೋಜು ಮಸ್ತಿಯ ಅಡ್ಡವಾಗಿ ಕಂಡುಬರುತ್ತಿದೆ. ರಸ್ತೆಗೆ ಅಡ್ಡವಾಗಿ ವಾಹನಗಳನ್ನು ನಿಲ್ಲಿಸಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆವುಂಟು ಮಾಡಿದ್ದಾರೆ. ಮೋಜು, ಮಸ್ತಿ, ಡ್ಯಾನ್ಸ್‌ ಮಾಡಿ ವಾಹನಗಳನ್ನು ಬೇಕಾಬಿಟ್ಟಿ ಪಾರ್ಕ್‌ ಮಾಡಿದ್ದರು. ಕಾರನ್ನು ರಸ್ತೆಯಲ್ಲಿ ನಿಲ್ಲಿಸಿ ಕುಣಿದು ಕುಪ್ಪಳಿಸಿರವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಪೊಲೀಸರ ಭಯ ಹೇಗೂ ಇಲ್ಲ.. ಸ್ಥಳೀಯರ ಮಾತಿಗೆ ಕಿಮ್ಮತ್ತಿಲ್ಲ ಅನ್ನುವಂತಾಗಿದೆ.

    ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗೆ ವಿಶೇಷ ಗೌರವ..! ಪುಷ್ಪಾರ್ಚಣೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು..!

    ಚಾರ್ಮಾಡಿ ಘಾಟಿಯಲ್ಲೂ ಇದೇ ಪರಿಸ್ಥಿತಿ

    ಇನ್ನು ಚಾರ್ಮಾಡಿ ಘಾಟಿಯಲ್ಲೂ ಇಂಥದ್ದೇ ಪರಿಸ್ಥಿತಿ. ಪ್ರವಾಸಿಗರು ಅಲ್ಲಿನ ಬಂಡೆಕಲ್ಲಿನ ಮೇಲೆ ನಿಂತು ಸೆಲ್ಫಿಗೆ ಪೋಸ್ ಕೊಡುತ್ತಿದ್ದಾರೆ. ಜಲಪಾತಕ್ಕೆ ಇಳಿದು ಮೋಜು ಮಸ್ತಿ ಮಾಡುತ್ತಿದ್ದಾರೆ. ಇನ್ನು ಜಾರುವ ಬಂಡೆಗಳಲ್ಲಿ ನಿಂತು ಮೋಜು, ಮಸ್ತಿ ಮಾಡುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡುವಂತಿದೆ.

    Continue Reading

    LATEST NEWS

    Trending