DAKSHINA KANNADA
ಸರಕಾರದ ಆದೇಶವನ್ನು ಸಂಸ್ಥೆ ಎಂದೂ ಉಲ್ಲಂಘಿಸಿಲ್ಲ – ಸಂಸ್ಥೆಯ ವಿರುದ್ಧ ಮಾಡಿರುವ ಆರೋಪ ನಿರಾಧಾರ: ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆ ಸ್ಪಷ್ಟನೆ
ಮಂಗಳೂರು :ರಾಜ್ಯ ಸರಕಾರ ಹೊರಡಿಸಿರುವ ಕರ್ಫ್ಯೂ ಆದೇಶ ಉಲ್ಲಂಘಿಸಿ ಎಪ್ರಿಲ್ 7 ರಿಂದ ಯಾವುದೇ ತರಗತಿಗಳನ್ನು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆ ನಡೆಸಿಲ್ಲ, ಸಂಸ್ಥೆಯ ಮೇಲೆ ಮಾಡಿರುವ ಆರೋಪಗಳು ನಿರಾಧಾರವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಎಪ್ರಿಲ್ 21 ರಂದು ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಯಥಾ ಪ್ರಕಾರ ಜಾರಿಗೆ ತರಲಾಗಿದೆ. ಲಾಕ್ಡೌನ್ ಗಿಂತ ಮೊದಲು ಬಂದ ಪೋಷಕರೊಂದಿಗೆ 500 ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಲಾಕ್ ಡೌನ್ ಜಾರಿಯಾದ ಬಳಿಕ ಪೋಷಕರು ಮಕ್ಕಳನ್ನು ಕರೆದುಕೊಂಡು ಹೋಗಲು ಬರಬೇಕಾದರೆ ಸರಕಾರದ ಕಠಿಣ ಆದೇಶವನ್ನು ಉಲ್ಲಂಘಿಸಬೇಕಾಗುತ್ತದೆ, ಕಾನೂನು ಕಣ್ಣು ತಪ್ಪಿಸಿ ಮಕ್ಕಳನ್ನು ಕರೆದುಕೊಂಡು ಹೋಗುವ ವೇಳೆ ತನಿಖಾಧಿಕಾರಿಗಳ ಕೈಗೆ ಸಿಕ್ಕಿ ಹಾಕಿಕೊಂಡರೆ ಕ್ರಿಮಿನಲ್ ಪ್ರಕರಣ ದಾಖಲಾಗುವ ಉಪಾಯ ಇದೆ ಎಂಬ ಕಾರಣದಿಂದಾಗಿ, ಕಠಿಣ ಕರ್ಫ್ಯೂ ಜಾರಿಯಾದ ಬಳಿಕ, ರಾಜ್ಯ ಸಕಾCದ ಆದೇಶವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕಳುಹಿಸಿ ಕೊಡಲಾಗುವುದಿಲ್ಲ. ಲಾಕ್ ಡೌನ್ ಜಾರಿಯಾದ ಬಳಿಕ ಹೆತ್ತವರು ಬರಬಾರದು ಈ ಬಗ್ಗೆ ಎಲ್ಲರಿಗೂ ಮುಂಗಡವಾಗಿ ತಿಳಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ನಡುವೆ, ಮುಂಬರುವ ಪರೀಕ್ಷೆಗಳ ದೃಷ್ಟಿಯಿಂದ, ವಸತಿ ಕಾಲೇಜುಗಳ ಮಾತ್ರ ನಿಲಯದಲ್ಲಿರುವ ವಿದ್ಯಾರ್ಥಿಗಳನ್ನು ಇಲ್ಲೆ ಉಳಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರು ಮಾರ್ಗಸೂಚಿಗಳನ್ನು ಹೊರಡಿಸಿದ್ದರು, ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾನದಂಡವನ್ನು ಸಂಸ್ಥೆ ಪಾಲನೆ ಮಾಡಿದೆ ಎಂದು ಹೇಳಿದೆ. .
ಆದರೆ ಸರಕಾರದ ಕಠಿಣ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಪೋಷಕರು ಸಂಸ್ಥೆಗೆ ಯಾವುದೇ ಮುನ್ಸೂಚನೆ ನೀಡಿದೆ ತಮ್ಮ ಮಕ್ಕಳನ್ನು ಕರೆದೊಯ್ಯಲು ಕ್ಯಾಂಪಸ್ಗೆ ಬಂದಿದ್ದರು, ಲಾಕ್ ಡೌನ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಮತ್ತು ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರಸ್ತುತ ದಿನದಲ್ಲಿ ಕ್ಯಾಂಪಸ್ ನೊಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು,ಸರ್ಕಾರದ ಆದೇಶವನ್ನು ಗಾಳಿಗೆ ಹಾರಿ ಕ್ಯಾಂಪಸ್ಗೆ ಬಂದ ಪೋಷಕರ 20-30 ಮಂದಿಯ ಗುಂಪು ಅಸಭ್ಯ ಭಾಷೆಯನ್ನು ಬಳಸಿದಾಗ ಸಂಸ್ಥೆಯು ನಾವು ಪೊಲೀಸರನ್ನು ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿತ್ತು. ದುರಾದೃಷ್ಟವಶಾತ್ ಸರ್ಕಾರದ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಯಾರು ಕೂಡ ಕ್ಯಾಂಪಸ್ಗೆ ಬರಬಾರದೆಂದು ಪದೇ ಪದೇ ಈ ಮೇಲ್ ಮೂಲಕ ಸಂದೇಶ ಕಳುಹಿಸಿದ್ದರೂ, ಇದನ್ನು ಉಲ್ಲಂಘಿಸಿ ಕ್ಯಾಂಪಸ್ಗೆ ಬಂದಿದರಲ್ಲದೆ ಸಂಸ್ಥೆಯ ತರಗತಿ ನಡೆಸುತ್ತಿದೆ ಎಂದು ಸುಳ್ಳು ಆರೋಪ ಮಾಡಿ ಸಂಸ್ಥೆಯ ವಿರುದ್ದ ಎಫ್ಐಆರ್ ದಾಖಲಿಸಲು ಕಾರಣರಾಗಿದ್ದಾರೆ.
ಇದೀಗ ಕೆಲ ಪೋಷಕರ ಒತ್ತಡ ಮತ್ತು ಜಿಲ್ಲಾಡಳಿತ ನಿರ್ದೇಶನದ ಆಧಾರದ ಮೇರೆಗೆ ತಮ್ಮ ಮಕ್ಕಳನ್ನು
ಮನೆಗೆ ಕರೆದೊಯ್ಯಲು ಎಪ್ರಿಲ್ 29ರಿಂದ ಅವಕಾಶ ನೀಡಲಾಗಿದೆ. ಯಾವುದೇ ವಿದ್ಯಾರ್ಥಿಯನ್ನು ಪೋಷಕರು
ಮನೆಗೆ ಕರೆದುಕೊಂಡು ಹೋಗಲು ಸಂಸ್ಥೆಯು ನಿರ್ಬಂಧಿಸಿಲ್ಲ, ಸರ್ಕಾರದ ಕಠಿಣ ಲಾಕ್ ಡೌನ್ ಅದೇಶದ ನಡುವೆಯೂ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಬಯಸಿದರೆ, ಈಗಲೂ ಬಂದು ಕರೆದುಕೊಂಡು ಹೋಗಬಹುದು ಎಂದು ಸಂಸ್ಥೆಯು ತಿಳಿಸಿದೆ. ಕ್ಯಾಂಪಸ್ ನಲ್ಲಿ ಯಾವುದೇ ಒಂದು ವಿದ್ಯಾರ್ಥಿಗೆ ಕೂಡ ಪಾಸಿಟಿವ್ ಬಂದಿರುವುದಿಲ್ಲ, ಆರ್ಟಿಪಿಸಿಆರ್ ಪರೀಕ್ಷೆಗಾಗಿ ಐವರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.. ಯಾವುದೇ ವಿದ್ಯಾರ್ಥಿಗೆ ಕೋವಿಡ್ ಪಾಸಿಟಿವ್ ಬಂದರೆ, ಅವರನ್ನು ಪ್ರತ್ಯೇಕಿಸಲು ಮತ್ತು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಎಲ್ಲಾ ರೀತಿಯ ಕ್ರಮ ಸಂಸ್ಥೆ ಕೈಗೊಂಡಿದೆ,
ಈ ನಡುವೆ ಬೋರ್ಡ್ ಪರೀಕ್ಷೆಗಳನ್ನು ಎದುರಿಸಲು ಕ್ಯಾಂಪಸ್, ಸುರಕ್ಷಿತ ಮತ್ತು ಪ್ರಶಾಂತ ವಾತಾವರಣವನ್ನು ಒದಗಿಸಿದೆಯೆಂಬ ಭಾವನೆಯಿಂದ ಹಲವು ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆಯಂತೆ ಹಾಸ್ಟೆಲ್ನಲ್ಲಿ ಸ್ವಯಂ ಅದ್ಯಯನದಲ್ಲಿ ತೊಡಗಿದ್ದಾರೆ ಎಂದು ಸಂಸ್ಥೆಯು ತಿಳಿಸಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS4 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA1 day ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ