LATEST NEWS
ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸದ ಆಮಿಷ ನೀಡಿ ಹಣ ಸುಲಿಗೆ : ಕುಖ್ಯಾತ ಆಂಧ್ರ ಗ್ಯಾಂಗ್ ಸೆರೆ..!
ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೊರರಾಜ್ಯದವರನ್ನು ನಗರಕ್ಕೆ ಕರೆಸಿಕೊಂಡು ಹೆದರಿಸಿ ಹಣ ಪಡೆದು ವಂಚಿಸುತ್ತಿದ್ದ ಆಂಧ್ರದ ಗ್ಯಾಂಗ್ನ್ನು ಬೆಂಗಳೂರು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೊರರಾಜ್ಯದವರನ್ನು ನಗರಕ್ಕೆ ಕರೆಸಿಕೊಂಡು ಹೆದರಿಸಿ ಹಣ ಪಡೆದು ವಂಚಿಸುತ್ತಿದ್ದ ಆಂಧ್ರದ ಗ್ಯಾಂಗ್ನ್ನು ಬೆಂಗಳೂರು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಗ್ಯಾಂಗ್ ನಲ್ಲಿದ್ದ ಆಂದ್ರಪ್ರದೇಶದ ವಿಜಯವಾಡ ಕೃಷ್ಣಜಿಲ್ಲೆಯ ಮಲ್ಲು ಶಿವಶಂಕರ್ ರೆಡ್ಡಿ ಅಲಿಯಾಸ್ ಗೋಪಿಚಂದ್ (26) ಗುಂಜ ಮಂಗರಾವ್(35) ಇಬ್ರಾಹಿಂ ಪಟ್ಟಣಂನ ಶೇಖ್ ಶಹಬಾಷಿ(30) ಎನ್ ಟಿ ಆರ್ ಜಿಲ್ಲೆಯ ಮಹೇಶ್( 21) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ಹಣ ವರ್ಗಾವಣೆ ಮಾಡಿಕೊಳ್ಳಲು ಬಳಸಿಕೊಂಡಿದ್ದ ಹಲವು ಬ್ಯಾಂಕ್ ಖಾತೆಗಳಲ್ಲಿನ 5,95,585 ರೂ ಹಣವನ್ನು ಫ್ರೀಜ್ ಮಾಡಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತರ ಗ್ಯಾಂಗ್ ಸಾಮಾಜಿಕ ಜಾಲತಾಣದ ಮೂಲಕ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡುತ್ತಿತ್ತು ಇದನ್ನು ನಂಬಿದ್ದ ಆಂಧ್ರಪ್ರದೇಶದ ಪ್ರದೀಪ್ ಅಸಾಮ್ವರ್ಗೆ ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ ಫೇಸ್ ಬುಕ್ ಮುಖಾಂತರ ಪರಿಚಯವಾಗಿದ್ದನು. ನಂತರ ಖಾಸಗಿ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ, ಆಂದ್ರದಿಂದ ಬೆಂಗಳೂರಿಗೆ ಬರುವಂತೆ ಹೇಳಿದ್ದನು.
ಅದರಂತೆ ಪ್ರದೀಪ್ ಅಸಾಮ್ವರ್ ಕಳೆದ ಜ. 11 ರಂದು ಬೆಳಗ್ಗೆ 05.30 ಕ್ಕೆ ಹೆಬ್ಬಾಳ ಬಳಿ ಬಂದು ಇಳಿದಿದ್ದನು.
ಅಲ್ಲಿಂದ ಪ್ರದೀಪ್ ಅಸಾಮ್ವರ್ ನನ್ನು ಸ್ವಿಫ್ಟ್ ಕಾರಿನಲ್ಲಿ ಬಂದು ನಾಲ್ವರು ಕರೆದುಕೊಂಡು ಹೊರಟಿದ್ದು, ಈ ವೇಳೆ ಪ್ರದೀಪ್ ಅಸಾಮ್ವರ್ ಕಾರಿನ ಫೋಟೊ ತೆಗೆದುಕೊಂಡಿದ್ದನು. ಪ್ರದೀಪ್ನನ್ನು ಕಾರಿನಲ್ಲಿ ಕೂರಿಸಿಕೊಂಡಿದ್ದ ಗ್ಯಾಂಗ್ ಮ್ಯಾನೇಜರ್ ಭೇಟಿ ಮಾಡಿಸುತ್ತೇವೆ ಎಂದಿದ್ದರು.
ಕಾರಿನಲ್ಲಿ ಹೋಗುವಾಗ ಪ್ರದೀಪ್, ಶಿವಶಂಕರ್ ರೆಡ್ಡಿ ಜೊತೆಗೆ ಬಂದಿದ್ದವರ ಹೆಸರು ಕೇಳಿದ್ದಾನೆ. ಆಗ ಆರೋಪಿ ಶಿವಶಂಕರ್ ರೆಡ್ಡಿ ಹೆಸರು ಹೇಳದಿದ್ದಾಗ ಆತನಿಗೆ ಅನುಮಾನ ಬಂದಿದೆ.
ಬಳಿಕ ಗ್ಯಾಂಗ್ ಡಾಕ್ಯುಮೆಂಟ್ ಚಾರ್ಜ್ ಎಂದು 30 ಸಾವಿರ ಹಣ ಹಾಕಲು ಪ್ರದೀಪ್ಗೆ ಹೇಳಿದೆ. ಗೂಗಲ್ ಪೇ ವರ್ಕ್ ಆಗದಿದ್ದಾಗ ಮೊಬೈಲ್ ಕಸಿದು ಪರಿಶೀಲನೆ ಮಾಡಿದ್ದಾರೆ. ಆಗ ಕಾರಿನ ಫೋಟೊ ಲೈವ್ ಲೊಕೇಶನ್ ನೋಡಿ ಪ್ರದೀಪ್ಗೆ ಥಳಿಸಿದ್ದಾರೆ.
ನಂತರ ನಿನಗೆ ಕೆಲಸ ಸಿಕ್ಕಿದೆ ಎಂದು ಸ್ನೇಹಿತರ ಬಳಿ ಹಣ ಹಾಕಿಸಿಕೋ ಎಂದು ಪ್ರದೀಪ್ಗೆ ಬೆದರಿಸಿದ್ದಾರೆ. ಹೀಗೆ ಆರೋಪಿಗಳು ಒಟ್ಟು 6 ಲಕ್ಷ ಹಣ ಅಕೌಂಟ್ ಮೂಲಕ ಪಾವತಿ ಮಾಡಿಸಿಕೊಂಡಿದ್ದಾರೆ.
ಅಲ್ಲದೆ ಕ್ರಿಕೆಟ್ ಬೆಟ್ಟಿಂಗ್ ಆಪ್ನಲ್ಲೂ ಹಣ ಹಾಕಿಸಿಕೊಂಡಿದ್ದಾರೆ. ನಂತರ ಯಲಹಂಕ ಸಮೀದ ಡೆಕಾತ್ ಲ್ಯಾನ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ.
ಬಳಿಕ ಪ್ರದೀಪ್ ಘಟನೆ ಸಂಬಂಧ ಕೊಡಿಗೆಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಡಿಗೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಭಯಾನಕ ವಿಚಾರ ಹೊರಬಂದಿದ್ದು ಆರೋಪಿ ಮಲ್ಲು ಅಲಿಯಾಸ್ ಗೋಪಿಚಂದ್ ಕೂಡ ಟೆಕ್ಕಿಯಾಗಿದ್ದಾನೆ.
ಮಾನ್ಯತಾ ಟೆಕ್ ಪಾರ್ಕ್ನಲ್ಲಿ ನಕಲಿ ದಾಖಲಾತಿ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದನು. ವಿಷಯ ಗೊತ್ತಾದ ಬಳಿಕ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.
LATEST NEWS
ಇದು ಭಾರತದಲ್ಲಿರುವ ದೇವಸ್ಥಾನ… ಆದ್ರೆ ಭಾರತ ಸರ್ಕಾರಕ್ಕಿಲ್ಲ ಇದರ ಮೇಲೆ ಹಕ್ಕು…!
ಕಾಶಿ ವಿಶ್ವನಾಥನ ಸನ್ನಿಧಿಗೆ ಹೋಗುವ ಭಕ್ತರು ಅಲ್ಲೇ ಪಕ್ಕದಲ್ಲಿ ಗಂಗಾ ನದಿಯ ದಡದಲ್ಲಿರುವ ಪಶುಪತಿನಾಥ ದೇವಸ್ಥಾನಕ್ಕೂ ಭೇಟಿ ನೀಡ್ತಾರೆ. ಲಲಿತ್ ಘಾಟ್ನಲ್ಲಿರುವ ಈ ದೇವಸ್ಥಾನ ಭಾರತದಲ್ಲೇ ಇದ್ರೂ ಇದರ ಮೇಲೆ ದೇಶದ ಯಾವ ಕಾನೂನು ಅನ್ವಯ ಆಗೋದಿಲ್ಲ. ಈ ದೇವಸ್ಥಾನದ ವಿಚಾರದಲ್ಲಿ ಭಾರತ ದೇಶದ ಯಾವುದೇ ಪ್ರಾಧಿಕಾರವಾಗಲಿ ಅಧಿಕಾರ ಚಲಾಯಿಸುವಂತೆಯೂ ಇಲ್ಲ. ಈ ದೇವಸ್ಥಾನ ಕಾಶಿಯಿಂದ ಸುಮಾರು 400 ಕಿಲೋ ಮೀಟರ್ ದೂರದ ನೇಪಾಳ ಸರ್ಕಾರದ ಹಿಡಿತದಲ್ಲಿದೆ. ಹೀಗಾಗಿ ಭಾರತ ದೇಶದಲ್ಲೇ ಈ ದೇವಸ್ಥಾನ ಇದ್ರೂ ದೇವಸ್ಥಾನದ ಒಂದು ಹುಲ್ಲು ಕಡ್ಡಿ ಅಲುಗಾಡಿಸಬೇಕಾದ್ರೂ ನೇಪಾಳದ ಒಪ್ಪಿಗೆ ಪಡೆಯಬೇಕು.
ದೇವಸ್ಥಾನದ ಸಂಪೂರ್ಣ ಅಧಿಕಾರ ನೇಪಾಳದ್ದು
ದೇವಸ್ಥಾನದ ನಿರ್ವಹಣೆಯಿಂದ ಹಿಡಿದು, ಪೂಜೆ ಪುನಸ್ಕಾರ, ಅರ್ಚಕರಿಗೆ ನೀಡುವ ಸೌಲಭ್ಯ ಎಲ್ಲವೂ ನೇಪಾಳ ಸರ್ಕಾರವೇ ಭರಿಸುತ್ತದೆ. ಈ ದೇವಸ್ಥಾನವನ್ನು ನೇಪಾಳದ ರಾಜ ರಾಣಾ ಬಹದ್ದೂರ್ ನಿರ್ಮಿಸಿರೋದೇ ಇದಕ್ಕೆ ಕಾರಣ. 1800 -1804 ರ ನಡುವೆ ಕಾಶಿಯಲ್ಲಿ ತಂಗಿದ್ದ ರಾಣಾ ಬಹದ್ದೂರು ಈ ದೇವಾಲಯವನ್ನು ನಿರ್ಮಾಣ ಮಾಡಿದ ಅನ್ನೋ ಐತಿಹಾಸಿಕ ದಾಖಲೆಗಳು ಇದೆ.
1843 ರಲ್ಲಿ ಪೂರ್ಣಗೊಂಡ ನಿರ್ಮಾಣ ಕಾರ್ಯ
ರಾಣಾ ಬಹದ್ದೂರ್ ಸಹಾ ನಾಲ್ಕು ವರ್ಷ ಕಾಶಿಯಲ್ಲಿ ಇದ್ದಾಗ ದೇವಸ್ಥಾನ ನಿರ್ಮಾಣ ಆರಂಭಿಸಿದ್ದರೂ, 1843 ರಲ್ಲಿ ಈ ದೇವಸ್ಥಾನ ಪೂರ್ಣಗೊಂಡಿತ್ತು. ರಾಣಾ ಬಹದ್ದೂರು ಸಹಾ ಅವರ ಮಗ ರಾಜ ರಾಜೇಂದ್ರ ವೀರ್ ಈ ದೇವಾಲಯದ ಕಾರ್ಯವನ್ನು ಪೂರ್ಣಗೊಳಿಸಿದ್ದರು. ಕಠ್ಮಂಡುವಿನ ಪಶುಪತಿನಾತ ದೇವಾಲಯದಂತೆಯೇ ಈ ದೇವಸ್ಥಾನವನ್ನು ನಿರ್ಮಾಣಮಾಡಲಾಗಿದೆ. ಈ ದೇವಸ್ಥಾನದ ಸಂಪೂರ್ಣ ನಿರ್ಮಾಣ ಕಾರ್ಯವನ್ನೂ ನೇಪಾಳಿ ಕುಶಲಕರ್ಮಿಗಳೇ ಮಾಡಿದ್ದಾರೆ.
ಇದನ್ನೂ ಓದಿ…ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?
ಮರದಿಂದ ಮಾಡಿದ ವಿಶೇಷ ದೇವಾಲಯ
ಈ ದೇವಾಲಯದ ವಿಶೇಷವೆಂದರೆ ಈ ದೇವಾಲಯವು ಕಲ್ಲಿನಿಂದ ಮಾಡಲಾಗಿಲ್ಲ, ಆದರೆ ಮರದಿಂದ ಮಾಡಲ್ಪಟ್ಟಿದೆ ಮತ್ತು ಸುಂದರವಾದ ಕೆತ್ತನೆಗಳನ್ನು ಸಹ ಕೆತ್ತಲಾಗಿದೆ. ಜನರು ಈ ದೇವಾಲಯವನ್ನು ಮಿನಿ ಖಜುರಾಹೋ ಎಂದೂ ಕರೆಯುತ್ತಾರೆ. ಕಾಶಿಯಲ್ಲಿ ನಿರ್ಮಿಸಲಾದ ಈ ದೇವಾಲಯವು ಭಾರತ ಮತ್ತು ನೇಪಾಳ ನಡುವಿನ ಸ್ನೇಹಕ್ಕೆ ಒಂದು ವಿಶಿಷ್ಟ ಉದಾಹರಣೆಯಾಗಿದೆ. ಈ ದೇವಾಲಯದಲ್ಲಿ, ಪೂಜೆ ಸೇರಿದಂತೆ ಎಲ್ಲಾ ಆಚರಣೆಗಳನ್ನು ನೇಪಾಳದ ಜನರು ಮಾತ್ರ ಮಾಡುತ್ತಾರೆ.
FILM
ಕಿರುತೆರೆಯಿಂದ ಹಿರಿತೆರೆಗೆ ಲಗ್ಗೆ ಇಟ್ಟ ‘ಪಾರು’ ಧಾರಾವಾಹಿ ನಟ ‘ಆದಿ’!
ಕನ್ನಡ ಕಿರುತೆರೆಯಲ್ಲಿ ಸದ್ದು ಮಾಡಿದ್ದ ಧಾರಾವಾಹಿಗಳಲ್ಲಿ ‘ಪಾರು’ ಕೂಡಾ ಒಂದು. ಆದಿ – ಪಾರು ಪ್ರೇಮಕಥೆ, ಅಖಿಲಾಂಡೇಶ್ವರಿ ಎಂಬ ಹಿರಿಮೆ ಎಲ್ಲವೂ ಧಾರಾವಾಹಿಯ ಜೀವಾಳವಾಗಿತ್ತು. ಈ ಧಾರಾವಾಹಿಗೆ ಸಿಕ್ಕಾಪಟ್ಟೆ ಅಭಿಮಾನಿಗಳು ಇದ್ದಾರೆ.
ಕಿರುತೆರೆಯಲ್ಲಿ ಸುಮಾರು ಆರು ವರ್ಷಗಳ ಈ ಧಾರಾವಾಹಿ ಪ್ರಸಾರವಾಗಿದೆ. ಈ ಧಾರಾವಾಹಿಯಲ್ಲಿ ಪಾರು ಪಾತ್ರದಿಂದ ಮೋಕ್ಷಿತಾ ಪೈ ತಮ್ಮ ಸಹಜ ಅಭಿನಯದಿಂದ ಗಮನ ಸೆಳೆದಿದ್ದರು. ಹಾಗೆಯೇ ಆದಿ ಪಾತ್ರದಿಂದ ನಟ ಶರತ್ ಪದ್ಮನಾಭ್ ಕೂಡ ಅಭಿಮಾನಿಗಳನ್ನು ಗಳಿಸಿದ್ದಾರೆ.
ಜೀ ಕನ್ನಡದಲ್ಲಿ ಬರುತ್ತಿದ್ದ ಪಾರು ಸೀರಿಯಲ್ ಈಗ ಅಂತ್ಯ ಕಂಡಿದೆ. ಈ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಅಂದರೆ ಶರತ್ ಪದ್ಮನಾಭ್ ಹಿರಿತೆರೆ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಬೆಳ್ಳಿಪರದೆ ಮೇಲೆ ‘ಆದಿ’
ಹೌದು, ನಟ ಶರತ್ ಪದ್ಮನಾಭ್ ನಾಯಕನಾಗಿ ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಹೆಸರು ‘ಅನಿಮಾ’. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ನಿರ್ದೇಶಕ ವರ್ಧನ್ ಎಂ ಎಚ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ‘ಅನಿಮಾ’ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.
ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗುತ್ತಿದ್ದು, ಅನಿಮಾ ಸಿನಿಮಾದ ಚಿತ್ರೀಕರಣ ಕೊನೆ ಹಂತದಲ್ಲಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಎನ್ನಲಾಗಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗಲೇ ಶೂಟಿಂಗ್ ನಡೆಸಲಾಗುತ್ತಿದೆ.
ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ. ಸಿನಿಮಾ ಪೋಸ್ಟರ್ ಅನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟ ಶರತ್ ಪದ್ಮನಾಭ್ ಹಂಚಿಕೊಂಡಿದ್ದಾರೆ.
” ಅನಿಮಾ, ನಮ್ಮ ಸಿನಿಮಾ, ನಿಮ್ಮ ಸಿನಿಮಾ ಆಗುವ ಮೊದಲ ಹೆಜ್ಜೆ!! Presenting you the title poster of our movie !! ಒಂದು ರೋಚಕವಾದ ಕಥೆಯನ್ನು ಹೇಳಲು ಆದಷ್ಟು ಬೇಗ ಬರ್ತಾ ಇದೀವಿ !! ನಮ್ಮ ತಂಡಕ್ಕೆ ನಿಮ್ಮ ಬೆಂಬಲವಿರಲಿ” ಎಂದು ಮನವಿ ಮಾಡಿಕೊಂಡಿದ್ದಾರೆ.
ಅನುಷಾ ಕೃಷ್ಣ ನಾಯಕಿ
ಅನಿಮಾ ಚಿತ್ರದಲ್ಲಿ ಶರತ್ ಪದ್ಮನಾಭ್ ಗೆ ನಾಯಕಿಯಾಗಿ ಅನುಷಾ ಕೃಷ್ಣ ಜೊತೆಯಾಗಿದ್ದಾರೆ. ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಸಂಗೀತ ಚಿತ್ರಕ್ಕಿದೆ.
LATEST NEWS
ಆಭರಣ ಪ್ರಿಯರಿಗೆ ನಿರಾಸೆ….ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ…!
ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29) ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ.
ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.
ಎಷ್ಟಿದೆ ಬೆಲೆ ?
ಸದ್ಯ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 61,700 ರೂಪಾಯಿ ಇದ್ದು, 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 67,310 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 7,750 ರೂಪಾಯಿ ಇದೆ.
ಒಂದು ಗ್ರಾಂ ಚಿನ್ನದ ದರ
22 ಕ್ಯಾರೆಟ್ ಚಿನ್ನದ ದರ – 6,170 ರೂಪಾಯಿ
24 ಕ್ಯಾರೆಟ್ ಚಿನ್ನದ ದರ – 6,731 ರೂಪಾಯಿ
10 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 61,700 ರೂಪಾಯಿ
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 67,310 ರೂಪಾಯಿ
8 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 49,360 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
ಬೆಂಗಳೂರು- 61,700 ರೂಪಾಯಿ
ಚೆನ್ನೈ – 62,500 ರೂಪಾಯಿ
ಮುಂಬೈ – 61,700 ರೂಪಾಯಿ
ಕೇರಳ -61,700 ರೂಪಾಯಿ
ಕೋಲ್ಕತ್ತಾ – 61,700 ರೂಪಾಯಿ
ಜೈಪುರ್ -61,850 ರೂಪಾಯಿ
ಭುವನೇಶ್ವರ್- 61,700 ರೂಪಾಯಿ
ಅಹ್ಮದಾಬಾದ್- 61,750 ರೂಪಾಯಿ
ಲಕ್ನೋ – 61,850 ರೂಪಾಯಿ
ನವದೆಹಲಿ – 61,850 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ಬೆಂಗಳೂರು-7,750 ರೂಪಾಯಿ
ಚೆನ್ನೈ- 8,050 ರೂಪಾಯಿ
ಮುಂಬೈ-7,750 ರೂಪಾಯಿ
ಕೋಲ್ಕತ್ತಾ-7,750 ರೂಪಾಯಿ
ನವದೆಹಲಿ-7,750 ರೂಪಾಯಿ
- FILM4 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಫೋಟೋ!
- DAKSHINA KANNADA3 days ago
ಖತರ್ನಾಕ್ ಲ್ಯಾಪ್ಟಾಪ್ ಕಳ್ಳಿ…! ಈಕೆ ಬ್ಯಾಂಕ್ ಉದ್ಯೋಗಿ… !
- DAKSHINA KANNADA4 days ago
ಪಾರ್ಟ್ ಟೈಮ್ ಜಾಬ್ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿ ರಾಜಸ್ಥಾನದ ಸದ್ದಾಂ ಗೌರಿ ಬಂಧನ
- DAKSHINA KANNADA6 days ago
ಮೂಡಾ ಕಮಿಷನರ್ ಬಂಧನ… 25 ಲಕ್ಷ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ತಿಮಿಂಗಿಲ..!