Connect with us

    DAKSHINA KANNADA

    ಫಾಸಿಲ್‌ಗೆ ಲವ್ವೇ ಇರಲಿಲ್ಲ-ಸುಳ್ಳು ಸುದ್ದಿ ಹಬ್ಬಿಸಿದ್ರು: ತಂದೆ ನೋವಿನ ನುಡಿ

    Published

    on

    ಮಂಗಳೂರು: ಹೆಲ್ಮೆಟ್ ಹಾಕಿಲ್ಲ ಅಂದ್ರೆ ನೋಟೀಸ್ ಮನೆಗೆ ಬರುತ್ತೆ. ಆಟೋ ಡ್ರೈವರ್ಸ್ ಖಾಕಿ ಬಟ್ಟೆ ಹಾಕಿಲ್ಲ ಅಂದ್ರೂ ಗುರುತಿಸಿ ಫೈನ್ ಕೇಳ್ತೀರಾ. ಅದೆಲ್ಲ ಕಾಣೋರಿಗೆ ಆರೋಪಿಗಳ ಮುಖ ಸಿಸಿಟಿವಿಯಲ್ಲಿ ಬಯಲಾಗಿದ್ರೂ ಯಾಕೆ ಹಂತಕರನ್ನು ಹಿಡಿಯೋಕ್ಕಾಗಿಲ್ಲ. ಅದಕ್ಕೆ ಧಮ್ ಇಲ್ಲ ಅಲ್ವಾ? ಎಂದು ಹತ್ಯೆಯಾದ ಫೈಸಲ್ ತಂದೆ ನೋವಿನಿಂದ ಕಿಡಿಕಾರಿದರು.


    ನಿಜವಾಗಿಯೂ ಫಾಸಿಲ್ ಹುಟ್ಟುಹಬ್ಬ ಇರೋದು ನವೆಂಬರ್ 3ಕ್ಕೆ. ಇವರೆಲ್ಲ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಚುನಾವಣೆ ಬಂದಾಗ ಬಡವರ ಕೊಲೆಯಾಗ್ತಿದೆ. ಅವನಿಗೆ ಲವ್ವೇ ಇರಲಿಲ್ಲ ಅದರ ಬಗ್ಗೆ ಕೂಡಾ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ.

    ಮತ್ತೆ ಎಂತ ಜಾತಿಭೇದ ಅಂತ ಮಾತಾಡ್ತಾರೆ ಅಲ್ವಾ? ನಮಗೆ ಗಂಡು ಮತ್ತು ಹೆಣ್ಣು ಜಾತಿ ಬಿಟ್ಟು ಬೇರೆ ಜಾತಿ ಗೊತ್ತಿಲ್ಲ. ಎಲ್ಲಿಯ ಎಮ್‌ಎಲ್‌ಎ ಇದ್ದಾರೆ ಬಿಡಿ ಅವರು ಲೆಕ್ಕಕ್ಕೇ ಇಲ್ಲ. ಜಿಲ್ಲಾಧಿಕಾರಿ ಅವನೂ ಬಂದಿಲ್ಲ. ಮತ್ತೆ ರಾಜ್ಯದಲ್ಲಿ ಸಿಎಂ ಇದ್ದಾರೆ ಅವರು ಬರೀ ಹಿಂದೂಗಳಿಗೆ ಮಾತ್ರ ಎನ್ನುವಂತಾಗಿದೆ. ನಮ್ಮಲ್ಲಿ ನೋವು ಕೇಳಿಲ್ಲ, ಇಲ್ಲಿಗೆ ಯಾರೂ ಬಂದಿಲ್ಲ. ಅದು ಬೇಡ, ಪರಿಹಾರವೂ ಬೇಡ ಬಿಡಿ, ನಮಗೆ ನ್ಯಾಯ ಬೇಕು.

    ಇಲಾಖೆಗೆ ನೈಜ ಆರೋಪಿಗಳನ್ನು ಪತ್ತೆಹಚ್ಚುವ ಆಸಕ್ತಿ ಇಲ್ಲ. ಇವರ ರಾಜಕೀಯ ಸ್ವಾರ್ಥಕ್ಕೆ, ಓಟ್‌ಬ್ಯಾಂಕಿಗಾಗಿ ಪಾಪದವರನ್ನು ಕೊಲೆ ಮಾಡ್ತಾರೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲ. ಸುಮ್ನೆ ತನಿಖೆ ಅಂತೆ, 12 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರಂತೆ, ಇದೆಲ್ಲ ಕೇವಲ 3 ದಿನ ಮಾತ್ರ.

    ಎಮ್‌ಎಲ್ಎ, ಎಂಪಿ ಗಳು ಯಾರೂ ಬರಲಿಲ್ಲ, ಫೋನ್‌ ಕಾಲ್ ಕೂಡಾ ಇಲ್ಲ. ಅದೇ ಬೇರೆಯವರ ಮನೆಗೆ ಆದ್ರೆ ಓಡ್ತಾರೆ. ಗೃಹಮಂತ್ರಿ ಅಂತೆ, ಸೂಜಿ ಮಂತ್ರಿ ಅಂತೆ. ಪೊಲೀಸ್ ಕಮಿಷನರ್ ಎಲ್ಲ ತನಿಖೆ ಮಾಡ್ತಿದ್ದೇವೆ ಅಂತ ಹೇಳಿದ್ದಾರೆ. ಅದಕ್ಕೆ ಇಲ್ಲಿ ಮನೆ ಜಗುಲಿಯಲ್ಲಿ ಚಾತಕ ಪಕ್ಷಿ ಥರ ಕಾಯ್ತಿದ್ದೇವೆ.

    ಸಿಟಿಯಲ್ಲಿ ಐಫೋರ್ ಝೂಮಿಂಗ್ ಕ್ಯಾಮೆರಾ ಇರುತ್ತೆ. ಅದ್ರಲ್ಲಿ ನೋಡಿ ವೆಹಿಕಲ್ ನಂಬರ್ ಇಲ್ಲಂದ್ರೆ, ಹೆಲ್ಮೆಟ್ ಹಾಕಿಲ್ಲ ಅಂದ್ರೆ ಫೈನ್ ಕೇಳ್ತಾರೆ.

    ಅದೇ ಒಂದು ಅಂಗಡಿ ಬದಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲೇ ಕಂಡುಬಂದಿದೆ ಅಂದ್ರೆ ಇನ್ನು ಆರೋಪಿಗಳನ್ನು ಪತ್ತೆ ಹಚ್ಚೋಕೆ ಆಗಲ್ವಾ? ಅದಲ್ಲದೆ ಈಗ ಸೈಬರ್ ಸೆಕ್ಯುರಿಟಿ ಇಷ್ಟು ಸ್ಟ್ರಾಂಗ್ ಆಗಿದೆ. ದಯವಿಟ್ಟು ನ್ಯಾಯ ಕೊಡಿಸಿ’ ಎಂದು ತಮ್ಮ ಅಳಲನ್ನು ವ್ಯಕ್ತಪಡಿಸಿದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending