DAKSHINA KANNADA
ಪೊಲೀಸ್ ಆಯುಕ್ತರ ಹೆಸರಲ್ಲೇ ನಕಲಿ ಫೇಸ್ಬುಕ್ ಖಾತೆ; ಹಣ ಕೇಳಿದ್ರೆ ಜಾಗರೂಕರಾಗಿರಲು ಜನತೆಗೆ ಎಚ್ಚರ..!
ಮಂಗಳೂರು:ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕ ಸಾಕಷ್ಟು ಹೆಸರು ಮಾಡಿರುವ ಶಶಿಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದೆ.
ಶಶಿಕುಮಾರ್ ಅವರದೇ ಪೊಲೀಸ್ ಫೋಟೊ ಬಳಸಿ ನಕಲಿ ಖಾತೆ ತೆರೆದಿದ್ದು ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಕಮಿಷನರ್ ಸ್ವತಃ ತನ್ನ ಹೆಸರಲ್ಲಿ ನಕಲಿ ಖಾತೆ ಆರಂಭಿಸಿರುವುದನ್ನೇ ಫೇಸ್ಬುಕ್ ನಲ್ಲೇ ಬರೆದುಕೊಂಡಿದ್ದಾರೆ.
ಎಲ್ಲರೂ ಜಾಗರೂಕರಾಗಿರಿ. ನನ್ನ ಹೆಸರಲ್ಲಿ ನಕಲಿ ಖಾತೆ ತೆರೆಯಲಾಗಿದೆ, ಯಾರಾದ್ರೂ ಹಣ ಕೇಳಿ ಮೆಸೇಜ್ ಮಾಡಬಹುದು. ಜಾಗೃತೆಯಲ್ಲಿರಿ ಎಂದು ಕಮಿಷನರ್ ಶಶಿಕುಮಾರ್ ಮನವಿ ಮಾಡಿದ್ದಾರೆ.
DAKSHINA KANNADA
ಮೇ 9 ರಂದು SSLC ಫಲಿತಾಂಶ ಪ್ರಕಟ…!
ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ
2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.
ಫಲಿತಾಂಶವನ್ನು ನೋಡಲು ಈ ವೆಬ್ಸೈಟ್ ಬಳಸಿ..!
ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್ಸೈಟ್ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಕಲಾವೈವಿಧ್ಯತೆಗೆ ಮಾರುಹೋದ ವಿದೇಶಿಗರು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ವೈವಿಧ್ಯಮಯ ಕ್ಷೇತ್ರವನ್ನು ಒಳಗೊಂಡಿರುವ ಕರಾವಳಿ ನಗರಿ. ಇಲ್ಲಿಗೆ ಬಂದ ವಿದೇಶಿ ಪ್ರಜೆಗಳು ಇಲ್ಲಿನ ವಿಶೇಷತೆಗಳನ್ನು ನೋಡಿ ಮನಸೋಲುತ್ತಾರೆ. ನವಮಂಗಳೂರು ಬಂದರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಹಲವು ವಿದೇಶಿ ಪ್ರವಾಸಿ ಹಡಗುಗಳು ಬಂದಿದ್ದು, ಇಲ್ಲಿನ ವಿಶೇಷ ತಾಣಗಳಿಗೆ ಭೇಟಿ ನೀಡಿ ಆನಂದ ಪಟ್ಟರು.
ವಿದೇಶಿ ಹಡಗಿನಲ್ಲಿ ಬಂದಿಳಿದ ಯುಎಸ್ಎ, ನೆದರ್ ಲ್ಯಾಂಡ್, ಉಕ್ರೇನ್, ಯುನೈಟೆಡ್ ಕಿಂಗ್ಡಂ, ಅಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಪಿಲಿಫೈನ್ಸ್ ದೇಶದ ಸುಮಾರು 120 ಜನ ವಿದೇಶಿಗಳು, ಜಗತ್ಪ್ರಸಿದ್ದ ಸಾವಿರ ಕಂಬ ಬಸದಿಗೆ ಭೇಟಿ ನೀಡಿ ಅಲ್ಲಿ ಕಲಾಸೌಂದರ್ಯಕ್ಕೆ ಮಾರು ಹೋದರು.
ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!
ಮಂಗಳೂರು ಮೂಲದ ಕ್ಯಾಲಿಫೋರ್ನಿಯ ಉದ್ಯೋಗಿ ಸಚಿನ್ ಪಡಿವಾಳ್ ಅವರನ್ನು ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭ ಮಂಗಳೂರು ಟ್ರಾವೆಲ್ ಗೈಡ್ ರೋಹನ್, ರೋಷನ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.
DAKSHINA KANNADA
ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!
ಮಂಗಳೂರು : ತುಳುನಾಡು ದೈವಾರಾಧನೆಯ ನೆಲೆಬೀಡು. ಇಲ್ಲಿ ದೈವಗಳ ಮೇಲೆ ಅತೀವ ನಂಬಿಕೆಯಿದೆ. ನಂಬಿದವರ ಕೈಬಿಡದು ದೈವ ಎಂಬ ನಂಬಿಕೆ ತುಳವರದು. ಸೆಲೆಬ್ರಿಟಿಗಳೂ ದೈವಗಳನ್ನು ನಂಬುತ್ತಾರೆ. ಊರಿಗೆ ಬಂದು ದೈವಗಳಿಗೆ ಕೈ ಮುಗಿಯುತ್ತಾರೆ. ನಟಿ ಶ್ರೀನಿಧಿ ಶೆಟ್ಟಿ ಸಿನಿರಂಗದಲ್ಲಿ ಯಶಸ್ಸು ಬಾಚಿಕೊಳ್ಳುತ್ತಿದ್ದರೂ ಕೂಡ ದೈವಾರಾಧನೆ ಮರೆತಿಲ್ಲ. ಅವರು ತಾವು ಹೊತ್ತ ಹರಕೆಯನ್ನು ಪೂರೈಸಿದ್ದಾರೆ.
ಅಭಯವಿತ್ತ ದೈವ :
ಕೆಜಿಎಫ್ ಖ್ಯಾತಿಯ ಶ್ರೀನಿಧಿ ಶೆಟ್ಟಿ ಅವರ ಹರಕೆಯ ನೇಮೋತ್ಸವ ಕಿನ್ನಿಗೋಳಿಯ ಅವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ನಡೆಯಿತು. ಈ ಹಿಂದೆ ತಾನು ಹರಕೆ ಹೊತ್ತಂತೆ ಸೋಮವಾರ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದ್ದು, ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.
ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!
‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿವೆ. ಸದ್ಯ ಶ್ರೀನಿಧಿ ಶೆಟ್ಟಿ ಸಿನಿಮಾಗಳಲ್ಲು ಬಿಝಿ ಆಗಿದ್ದಾರೆ. ಸಕತ್ ಚ್ಯೂಸಿ ಕೂಡ ಆಗಿದ್ದಾರೆ. ಕೆಜಿಎಫ್ 2 ಚಿತ್ರದಲ್ಲೂ ಬಿಝಿ ಆಗಿದ್ದಾರೆ. ಅತ್ತ ತೆಲುಗು ಸಿನಿರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ 47 ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ.
- DAKSHINA KANNADA5 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- dehali6 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY6 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
- DAKSHINA KANNADA7 days ago
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ