Connect with us

LATEST NEWS

ಫೇಕ್‌ ನ್ಯೂಸ್‌: ಮಂಗಳೂರು ಬೀಚ್‌ನಲ್ಲಿ ಮತ್ಸ್ಯಕನ್ಯೆ-ವೀಡಿಯೋ ವೈರಲ್‌

Published

on

ಮಂಗಳೂರು: ಮಂಗಳೂರಿನ ಬೀಚ್‌ನಲ್ಲಿ ಮತ್ಸ್ಯಕನ್ಯೆಯೊಂದು ಪತ್ತೆಯಾಗಿದೆ ಎಂಬ ತಲೆಬರಹದಡಿ ವೀಡಿಯೋವೊಂದು ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹೆಚ್ಚಿನ ಜನರು ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಇಂಡಿಯಾ ಟುಡೇ ವಾಹಿನಿಯ  ಎಎಫ್‌ಡಬ್ಲ್ಯೂಎ (ಆ್ಯಂಟಿ ಫೇಕ್‌ ನ್ಯೂಸ್‌ ವಾರ್‌ ರೂಮ್‌) ಇದು ಫೇಕ್‌ ನ್ಯೂಸ್‌ ಎಂದಿದೆ.


ಮಂಗಳೂರಿನ ಕಡಲತೀರದಲ್ಲಿ ಮತ್ಸ್ಯಕನ್ಯೆ ಕಾಣಿಸಿಕೊಂಡಿದ್ದಾಳೆ ಎಂಬ ಹೇಳಿಕೆಯೊಂದಿಗೆ ಮಹಿಳೆಯೊಬ್ಬಳ ದೇಹದ ಅರ್ಧದಷ್ಟು ಭಾಗ ಮೀನಿನಂತೆ ಕಾಣುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಒಂದೆರಡು ಯುವಕರು ಅವಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ಮರಳಿನ ಮೇಲೆ ಬಿದ್ದಿರುವ ಮತ್ಸ್ಯಕನ್ಯೆ ಕಸದಿಂದ ಕತ್ತು ಹಿಸುಕಿದಂತೆ ಕೂಗುತ್ತಿರುವುದನ್ನು ಕಾಣಬಹುದು.

ಇಂಡಿಯಾ ಟುಡೇ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ (ಎಎಫ್‌ಡಬ್ಲ್ಯೂಎ) ವಿಡಿಯೋದೊಂದಿಗೆ ತಪ್ಪು ಸಂದೇಶ ರವಾನೆ ಮಾಡಲಾಗಿದೆ ಎಂದು ಕಂಡು ಹಿಡಿದಿದೆ. ವೈರಲ್ ಕ್ಲಿಪಿಂಗ್‌ನ್ನು ಶ್ರೀಲಂಕಾದಲ್ಲಿ ಚಿತ್ರೀಕರಿಸಲಾಗಿದೆ. ಇದು ಸಮುದ್ರದ ಜಲಚರಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವೀಡಿಯೋದ ಭಾಗವಾಗಿದೆ.
ಈ ಪೋಸ್ಟ್ ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲೂ ಪ್ರಸಾರವಾಗುತ್ತಿದೆ. AFWA ತನಿಖೆ ವಿಡಿಯೋವನ್ನು ಸೂಕ್ಷ್ಮವಾಗಿ ಆಲಿಸಿ ಅಲ್ಲಿನ ಜನರು ಮಾತನಾಡುವ ಭಾಷೆ ಶ್ರೀಲಂಕಾದ ಸಿಂಹಳ ಭಾಷೆ ಎನ್ನುವುದು ಗೊತ್ತಾಗುತ್ತದೆ ಎಂದು ವರದಿ ಮಾಡಿದ್ದಾರೆ.

ಇದು ಶ್ರೀಲಂಕಾ ಮೂಲದ ಟ್ರಿಪ್ ಪಿಸ್ಸೊ ಎಂಬ ಪರಿಶೀಲಿಸಿದ ಯೂಟ್ಯೂಬ್ ಚಾನೆಲ್‌ನಲ್ಲಿ ಜೂನ್ 7, 2021 ರಂದು ಅಪ್‌ಲೋಡ್ ಮಾಡಲಾಗಿತ್ತು. ಈ ವಿಡಿಯೋದ ಶೀರ್ಷಿಕೆಯಲ್ಲಿ “ಶ್ರೀಲಂಕಾದಲ್ಲಿ ಸಿಕ್ಕಿಬಿದ್ದ ನಿಜವಾದ ಮತ್ಸ್ಯಕನ್ಯೆ” ಎಂದು ಬರೆಯಲಾಗಿತ್ತು.

ಸಮುದ್ರದಲ್ಲಿರುವ ಜಲಚರಗಳ ರಕ್ಷಣೆಯ ಜಾಗೃತಿ ಮೂಡಿಸುವ ವಿಡಿಯೋವನ್ನು ಟ್ರಿಪ್ ಪಿಸ್ಸೊ ಕ್ರೆಡಿಟ್ ಮಾಡಿದೆ. ಇದರ ಸಹ-ಸಂಸ್ಥಾಪಕರಾದ ಉದಯ ಹೆವಾಗಮ ಈ ವಿಡಿಯೋ ಕಾಲ್ಪನಿಕ ಎಂದು ಹೇಳಿದ್ದಾರೆ. ಎಎಫ್‌ಡಬ್ಲ್ಯೂಎಗೆ ಟ್ರಿಪ್ ಪಿಸ್ಸೊದ ಮುಖ್ಯ ಮಾರ್ಕೆಟಿಂಗ್ ಮ್ಯಾನೇಜರ್ ಹಶಾನ್ ಮಧುಷ್ಕಾ ಮಾತನಾಡಿ, “ನಾವು ಸಾಮಾನ್ಯವಾಗಿ ನಮ್ಮ ಚಾನಲ್‌ನಲ್ಲಿ ನೈಸರ್ಗಿಕ ಅದ್ಭುತಗಳ ವೀಡಿಯೊಗಳನ್ನು ಪೋಸ್ಟ್ ಮಾಡುತ್ತೇವೆ. ಈ ವರ್ಷ ವಿಶ್ವ ಸಾಗರ ದಿನದಂದು (ಜೂನ್ 8) ನಾವು ವಿಶಿಷ್ಟವಾಗಿ ಏನನ್ನಾದರೂ ಮಾಡಲು ಯೋಚಿಸಿದ್ದೆವು.

ಎಕ್ಸ್-ಪ್ರೆಸ್ ಪರ್ಲ್ ಸರಕು ಸಾಗಣೆ ಹಡಗು ರಾಸಾಯನಿಕಗಳನ್ನು ಹೊತ್ತೊಯ್ದು ಶ್ರೀಲಂಕಾ ಕರಾವಳಿಯಲ್ಲಿ ಬೆಂಕಿ ಹೊತ್ತಿಕೊಂಡು ಪರಿಸರ ವಿಕೋಪಕ್ಕೆ ಕಾರಣವಾಯಿತು. ಈ ಘಟನೆಯು ಸಾಗರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ನಮಗೆ ಸ್ಫೂರ್ತಿ ನೀಡಿತು ಮತ್ತು ಮತ್ಸ್ಯಕನ್ಯೆಯ ಕಲ್ಪನೆಯು ಬಂದಿತು. ಟ್ರಿಪ್ ಪಿಸೊದ ಫೇಸ್ಬುಕ್ ಪುಟದಲ್ಲಿ ನಾವು ಕಿರುಚಿತ್ರದ ತೆರೆಮರೆಯ ವೀಡಿಯೊವನ್ನು ಹಂಚಿಕೊಂಡಿದ್ದೇವೆ ಎಂದಿದ್ದಾರೆ.

https://www.indiatoday.in/fact-check/story/fact-check-know-real-story-behind-not-so-little-mermaid-mangalore-beach-1867564-2021-10-21

Click to comment

Leave a Reply

Your email address will not be published. Required fields are marked *

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

LATEST NEWS

Trending