FILM
ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!
ನವದೆಹಲಿ : ಖ್ಯಾತ ಕಿರುತೆರೆ ನಟ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಜನಪ್ರಿಯ ಕಾರ್ಯಕ್ರಮ ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಮೂಲಕ ಗಮನ ಸೆಳೆದಿರುವ ನಟ ಗುರುಚರಣ್ ಸಿಂಗ್ ಅವರು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ನಟನ ತಂದೆ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ಏನಿದೆ?
ದೆಹಲಿ ಪೊಲೀಸರಿಗೆ ತಂದೆ ನೀಡಿರುವ ದೂರಿನ ಪ್ರಕಾರ, 50ರ ಹರೆಯದ ನಟ ಏಪ್ರಿಲ್ 22 ರಂದು ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಿದ್ದಾರೆ. ಅಂದಿನಿಂದ ಅವರು ನಾಪತ್ತೆಯಾಗಿದ್ದಾರೆ. ಅವರು ಮುಂಬೈಗೆ ಬಂದಿಳಿಯಬೇಕಿತ್ತು, ಆದರೆ ಮುಂಬೈ ತಲುಪಿಲ್ಲ. ಮನೆಗೂ ವಾಪಸಾಗಲಿಲ್ಲ. ಫೋನ್ ಸಂಪರ್ಕಕ್ಕೂ ಸಿಗಲಿಲ್ಲ. ಈ ಹಿನ್ನೆಲೆ ಪೊಲೀಸ್ ಠಾಣಾ ಮೆಟ್ಟಿಲೇರಬೇಕಾಯಿತು ಎಂದು ತಿಳಿಸಲಾಗಿದೆ.
“ಅವರು ಮಾನಸಿಕವಾಗಿ ಸ್ಥಿರವಾಗಿದ್ದು, ನಾವು ಅವರನ್ನು ಹುಡುಕಿದ್ದೇವೆ. ಆದರೆ, ಈಗ ಅವರು ಕಾಣೆಯಾಗಿದ್ದಾರೆ” ಎಂದು ಗುರುಚರಣ್ ಸಿಂಗ್ ತಂದೆ ಪೊಲೀಸರಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಈ ನಾಪತ್ತೆ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ನಾವು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಗುರುಚರಣ್ ಸಿಂಗ್ ಕೊನೆಯದಾಗಿ ಏಪ್ರಿಲ್ 22 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರು ಮುಂಬೈಗೆ ತೆರಳಿದ್ದರು ಎನ್ನಲಾಗಿದೆ. ಆದರೆ, ಅವರು ಮುಂಬೈಗೆ ತಾವು ತಲುಪಬೇಕಾಗಿದ್ದ ಸ್ಥಳಕ್ಕೆ ತಲುಪಿಲ್ಲ. ಮನೆಗೂ ಹಿಂತಿರುಗಿಲ್ಲ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ತಿಳಿದು ಬಂದಿದೆ. ನಟನ ದಿಢೀರ್ ಕಣ್ಮರೆ ಪ್ರಕರಣ ಆತಂಕ ಸೃಷ್ಟಿಸಿದೆ.
ಇದನ್ನೂ ಓದಿ : ಕೊನೆಗೂ ಪ್ರಭಾಸ್ ‘ಕಲ್ಕಿ 2898AD’ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್! ಯಾವಾಗ ತೆರೆಗೆ?
ಶೋ ತೊರೆದಿದ್ದ ನಟ :
ಗುರುಚರಣ್ ಅವರು ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಚಿತ್ರದಲ್ಲಿ ಸೋಧಿ ಪಾತ್ರ ನಿರ್ವಹಿಸಿದ್ದರು. ಈ ಮೂಲಕ ಜನಪ್ರಿಯತೆ ಸಂಪಾದಿಸಿದ್ದರು. ಅದಾಗ್ಯೂ, ಅವರು ಕೆಲ ವರ್ಷಗಳ ಹಿಂದೆ ಕಾರ್ಯಕ್ರಮವನ್ನು ತೊರೆದರು. ತಂದೆಯ ಅನಾರೋಗ್ಯ ಹಿನ್ನೆಲೆ ಶೋ ಬಿಡಬೇಕಾಯಿತು.
ಇದೀಗ ಅವರ ನಾಪತ್ತೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೇ, ಅವರ ಅಭಿಮಾನಿಗಳಲ್ಲಿ ಆತಂಕ ಹುಟ್ಟು ಹಾಕಿದೆ.
FILM
ಪ್ರತಿಷ್ಟಿತ ಮೆಟ್ ಗಾಲ ಸಮಾರಂಭದಲ್ಲಿ ಮಿಂಚಿದ ಆಲಿಯಾ ಭಟ್; ಆಲಿಯಾ ವಿಶಿಷ್ಟ ಉಡುಗೆಗೆ ಬೆರಗಾದ್ರು ಫ್ಯಾನ್ಸ್
ಜಗತ್ತಿನ ವಿವಿಧ ಮನರಂಜನಾ ಕ್ಷೇತ್ರಗಳಲ್ಲಿ ತೊಡಗಿರುವ ಗಣ್ಯರು ಭಾಗಿಯಾಗುವ ಪ್ರತಿಷ್ಠಿತ ಮೆಟ್ ಗಾಲ ಸಮಾರಂಭದಲ್ಲಿ ಈ ಬಾರಿ ಆಲಿಯಾ ಭಟ್ ತನ್ನ ವಿಶಿಷ್ಟ ಉಡುಗೆಯ ಮೂಲಕ ಗಮನ ಸೆಳೆದಿದ್ದಾರೆ. ಅವರು ಸಬ್ಯಸಾಚಿ ಮುಖರ್ಜಿ ವಿನ್ಯಾಸದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಅವರ ಲುಕ್ಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ. ಅವರ ಸೊಗಸಾದ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ದೇಸಿ ಉಡುಪಿಗೂ ಟ್ರೇನ್ ವಿನ್ಯಾಸ:
ತಿಳಿ ನೀಲಿ, ಬಿಳಿ ಮಿಶ್ರಿತ ಸುಂದರ ಸೀರೆಯಲ್ಲಿದ್ದ ಉದ್ದನೆಯ ಟ್ರೇನ್ ಸೆರಗು ಸೀರೆಗೆ ಮೆರುಗು ನೀಡಿತ್ತು. ಸಾಮಾನ್ಯವಾಗಿ ಗೌನ್ ಗೆ ಇಂತಹ ಟ್ರೇನ್ ವಿನ್ಯಾಸಗೊಳಿಸಲಾಗುತ್ತದೆ. ದೇಸಿ ಉಡುಪಿಗೂ ಟ್ರೇನ್ ವಿನ್ಯಾಸಗೊಳಿಸಿ ಕಂಟೆಂಪರರಿ ಸ್ಪರ್ಶ ನೀಡಬಹುದು ಎಂದು ಆಲಿಯಾ ಭಟ್ ತೋರಿಸಿದ್ದಾರೆ.
‘ಗಾರ್ಡನ್ ಆಫ್ ಟೈಮ್’ ಡ್ರೆಸ್ ಕೋಡ್ ಗೆ ಅನುಗುಣವಾಗಿ ತಿಳಿ ಗುಲಾಬಿ ಎಂಬ್ರಾಯ್ಡರಿ ಹೂವು, ತಿಳಿ ಹಸಿರು ಎಲೆ, ಬಳಿಗಳ್ಳ ವಿನ್ಯಾಸವಿದೆ. ಸೀರೆಗೊಪ್ಪುವ ಹರಳು ಖಚಿತ ಬ್ಲೌಸ್, ಕಿವಿಗೆ ದೊಡ್ಡ ಇಯರಿಂಗ್ಸ್, ಬೈತಲೆಗೆ ಹರಳಿನ ಆಭರಣ ಧರಿಸಿದ್ದು ಮತ್ತಷ್ಟು ಮೆರುಗು ನೀಡಿತ್ತು.
ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!
ಆಲಿಯಾ ಪಾವತಿಸಿದ್ದು ಎಷ್ಟು?
ಮೆಟ್ ಗಾಲಾ ಫ್ಯಾಶನ್ ಹೆಸರಲ್ಲಿ ಪ್ರತಿ ವರ್ಷ ಮೇ ತಿಂಗಳ ಮೊದಲ ಸೋಮವಾರದಂದು ನಡೆಯುವ ನಿಧಿ ಸಂಗ್ರಹಣೆ ಕಾರ್ಯಕ್ರಮವಾಗಿದೆ. ಇಲ್ಲಿ ಭಾಗವಹಿಸುವವರು ಪ್ರತಿ ಟಿಕೆಟ್ಗೆ ಪ್ರತಿ ವ್ಯಕ್ತಿಗೆ USD 75,000 ವೆಚ್ಚವಾಗುತ್ತದೆ, ಇದನ್ನು ಭಾರತೀಯ ಕರೆನ್ಸಿಗೆ ಪರಿವರ್ತಿಸಿದಾಗ ಸುಮಾರು ರೂ. 63 ಲಕ್ಷ ರೂ.ಗಳಾಗುತ್ತವೆ. ಪ್ರತಿ ಸಂಪೂರ್ಣ ಟೇಬಲ್ನ ಬೆಲೆ ಸುಮಾರು USD 350,000, ಇದು ಸುಮಾರು ರೂ. 2 ಕೋಟಿ 92 ಲಕ್ಷವಾಗುತ್ತದೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಯಾವುದೇ ಕಂಪನಿಯ ಮೂಲಕ ಹೋದರೆ, ಅವರ ವೆಚ್ಚವನ್ನು ಆ ಕಂಪನಿಗಳೇ ಭರಿಸುತ್ತವೆ.
ಆದರೆ, ವೈಯಕ್ತಿಕವಾಗಿ ಹೋದಾಗ ವ್ಯಕ್ತಿಯೇ ತಮ್ಮ ಟಿಕೆಟ್ಗಾಗಿ ಪಾವತಿಸುತ್ತಾರೆ. ಹೀಗಾಗಿ, ಆಲಿಯಾ ಭಟ್ ಕನಿಷ್ಠ 63 ಲಕ್ಷ ರೂ.ನಿಂದ 2 ಕೋಟಿ ರೂ.ವರೆಗೆ ಈ ಪ್ರದರ್ಶನದಲ್ಲಿ ಭಾಗವಹಿಸಲು ಸ್ವತಃ ಪಾವತಿಸಿದ್ದಾರೆ. ಈ ಬಾರಿ ಆಲಿಯಾ ಎರಡನೇ ಬಾರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
DAKSHINA KANNADA
ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!
ಮಂಗಳೂರು : ತುಳುನಾಡು ದೈವಾರಾಧನೆಯ ನೆಲೆಬೀಡು. ಇಲ್ಲಿ ದೈವಗಳ ಮೇಲೆ ಅತೀವ ನಂಬಿಕೆಯಿದೆ. ನಂಬಿದವರ ಕೈಬಿಡದು ದೈವ ಎಂಬ ನಂಬಿಕೆ ತುಳವರದು. ಸೆಲೆಬ್ರಿಟಿಗಳೂ ದೈವಗಳನ್ನು ನಂಬುತ್ತಾರೆ. ಊರಿಗೆ ಬಂದು ದೈವಗಳಿಗೆ ಕೈ ಮುಗಿಯುತ್ತಾರೆ. ನಟಿ ಶ್ರೀನಿಧಿ ಶೆಟ್ಟಿ ಸಿನಿರಂಗದಲ್ಲಿ ಯಶಸ್ಸು ಬಾಚಿಕೊಳ್ಳುತ್ತಿದ್ದರೂ ಕೂಡ ದೈವಾರಾಧನೆ ಮರೆತಿಲ್ಲ. ಅವರು ತಾವು ಹೊತ್ತ ಹರಕೆಯನ್ನು ಪೂರೈಸಿದ್ದಾರೆ.
ಅಭಯವಿತ್ತ ದೈವ :
ಕೆಜಿಎಫ್ ಖ್ಯಾತಿಯ ಶ್ರೀನಿಧಿ ಶೆಟ್ಟಿ ಅವರ ಹರಕೆಯ ನೇಮೋತ್ಸವ ಕಿನ್ನಿಗೋಳಿಯ ಅವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ನಡೆಯಿತು. ಈ ಹಿಂದೆ ತಾನು ಹರಕೆ ಹೊತ್ತಂತೆ ಸೋಮವಾರ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದ್ದು, ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.
ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!
‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿವೆ. ಸದ್ಯ ಶ್ರೀನಿಧಿ ಶೆಟ್ಟಿ ಸಿನಿಮಾಗಳಲ್ಲು ಬಿಝಿ ಆಗಿದ್ದಾರೆ. ಸಕತ್ ಚ್ಯೂಸಿ ಕೂಡ ಆಗಿದ್ದಾರೆ. ಕೆಜಿಎಫ್ 2 ಚಿತ್ರದಲ್ಲೂ ಬಿಝಿ ಆಗಿದ್ದಾರೆ. ಅತ್ತ ತೆಲುಗು ಸಿನಿರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ 47 ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ.
DAKSHINA KANNADA
ಕಾಮಿಡಿ ಕಿಲಾಡಿಗಳು ಸೀಸಲ್-7ರಲ್ಲಿ ಮಿಂಚಲಿದ್ದಾರೆ ಪುತ್ತೂರಿನ ಪ್ರತಿಭೆಗಳು .!!
ಮಂಗಳೂರು: ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್ ಆರಂಭಗೊಂಡಿದ್ದು ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್ ನಿರೂಪಕರುಗಳಾದ ಅನುಶ್ರೀ, ಮಾಸ್ಟರ್ ಆನಂದ್, ಅಕುಲ್ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್ ರವರು ಜಡ್ಜಸ್ಗಳಾಗಿದ್ದಾರೆ. ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ತಯಾರುಗುತ್ತಿದೆ. ಇನ್ನು ಕಿಲಾಡಿ ಪ್ಲೇಯರ್ಗಳಲ್ಲಿ ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.
ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದ 2,500ಕ್ಕು ಮಿಕ್ಕಿ ಸ್ಪರ್ಧಿಗಳ ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿದ್ದಾರೆ.
ಮುಂದೆ ಓದಿ..; ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?
ಪುತ್ತೂರಿನ ಪವಿತ್ರ ಹೆಗ್ಡೆ ಆಯ್ಕೆ:
ಪವಿತ್ರ ಹೆಗ್ಡೆ ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. ಹಲವಾರು ನಾಟಕ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲೇ ಕಲಾ ಕ್ಷೇತ್ರಕ್ಕೆ ಧುಮುಕಿದ ಇವರು 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ತಂಡವಾದ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ, ಹೀಗೆ ಹಲವಾರು ತಂಡಳದಲ್ಲಿ ತಮ್ಮ ಅಭಿನಯ ಪಾತ್ರ ಮಾಡಿದ್ದಾರೆ. ತುಳು ಸಿನೆಮಾ ಮತ್ತು ತುಳು ಮತ್ತು ಕನ್ನಡ ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ. ನಮ್ಮ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಬಲೆತಲಿಪಾಲೆ’ ಸೀಸನ್ 7ರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿ4 ನ್ಯೂಸ್ನಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 2ನಲ್ಲಿ ಮತ್ತು ಸೀಸನ್ 3ಯಲ್ಲಿ ಅಭಿನಯಿಸಿ ಬೆಸ್ಟ್ ಫರ್ಫಾಮೆನ್ಸ್ ಅವಾರ್ಡ್ ಪಡೆದಿದ್ದಾರೆ. ವಿದೇಶದಲ್ಲೂ ನಾಟಕ ಪ್ರದರ್ಶನ ನೀಡಿದ್ದಾರೆ. ಕನ್ನಡ ಕಸ್ತೂರಿ ಚಾನಲ್ನಲ್ಲಿ ಪ್ರಸಾರವಾಗುತ್ತಿದ್ದ ಕಂಜೂಸ್ ಕಮಂಗಿರಾಯ, ಪುತ್ತೂರು ಚಾನೆಲ್ ದ ಚಾನಲ್ 9ನಲ್ಲಿ ಪುಸಾರವಾಗುತ್ತಿದ್ದ ಕುಡ ತೆಲಿಪುಗ, ಡಾಯಿಜಿ ವರ್ಲ್ಡ್ನಲ್ಲಿ ಪ್ರಸಾರವಾಗುತ್ತಿದ್ದ ಬಾಬಣ್ಣ ಬೂಬಣ್ಣ, ಕಿರುಚಿತ್ರವಾದ ಕಲ್ಕುಡ ಕಲ್ಲುರ್ಟಿ, ವಾತ್ಸಲ್ಯ, ನೋ ಬಾಲ್, ಕೊಕೊನಾಟ್ ಸಹಿತ ಹಲವು ಚಲನಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಇವರಿಗೆ ಹಲವಾರು ಸನ್ಮಾನ ಪತ್ರಗಳು ಲಭಿಸಿದೆ. ಇವರು ಪುತ್ತೂರು ಚಂದ್ರಶೇಖರ್ ಹೆಗ್ಡೆ ಮತ್ತು ಮಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ.
ವೈರಲ್ ಸ್ಟಾರ್ ಗಣರಾಜ್ ಭಂಡಾರಿ:
ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಮಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಪ್ರಮುಖ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದಾರೆ. ಇವರು ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ.
- DAKSHINA KANNADA6 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- dehali6 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY7 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
- LATEST NEWS6 days ago
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
Pingback: ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು...ಆಮೇಲೆ...ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ! - NA
Pingback: WATCH VIDEO : ಕಾಸರಗೋಡಿನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್ - NAMMAKUDLA NEWS - ನಮ್ಮಕುಡ್ಲ ನ್ಯೂಸ್
Pingback: ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ - NAMMAKUDLA NEWS - ನಮ್ಮಕು