Connect with us

    FILM

    ದಕ್ಷಿಣ ಭಾರತದ ಖ್ಯಾತ ವಿಲನ್ ವಿಧಿವಶ; “ಕೀರಿಕ್ಕಡನ್ ಜೋಸ್” ಇನ್ನಿಲ್ಲ

    Published

    on

    ಮಂಗಳೂರು/ತಿರುವನಂತಪುರಂ: ಮಲಯಾಳಂ ಚಿತ್ರರಂದ ಖ್ಯಾತ ನಟ, ವಿಲನ್ ಆಗಿ ಜನಪ್ರಿಯತೆ ಪಡೆದಿರುವ ಮೋಹನ್ ರಾಜ್ (70) ನಿನ್ನೆ (ಅ.1)ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.


    ‘ಕಿರೀಟಂ’ ಸಿನಿಮಾದ ‘ಕೀರಿಕ್ಕಡನ್ ಜೋಸ್’ ಎಂಬ ಪಾತ್ರದಲ್ಲಿ ಮಿಂಚಿದ್ದು, ಬಳಿಕ ಅದೇ ಹೆಸರಿನಿಂದ ಪ್ರಖ್ಯಾತಿಯಾಗಿದ್ದರು. ಮೋಹನ್ ಲಾಲ್ ಹಿರೋ ಆಗಿ ನಟಿಸಿದ್ದ ಈ ಸಿನಿಮಾ, ಮಲಯಾಳಂ ಚಿತ್ರರಂಗದಲ್ಲಿ ಬಿಗ್ ಹಿಟ್ ಸಿನಿಮಾದಲ್ಲಿ ಒಂದಾಗಿದೆ.
    ಚಿತ್ರರಂಗಕ್ಕೆ ಕಾಲಿಡುವ ಮುನ್ನ ಕೇಂದ್ರ ಸರ್ಕಾರದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೊದಲ ಸಿನಿಮಾ ಹಿಟ್ ಆದ ನಂತರ ಸಾಲು ಸಾಲು ಚಿತ್ರಗಳಲ್ಲಿ ನಟಿಸುವ ಅವಕಾಶ ಪಡೆದಿದ್ದರು. ಸುಮಾರು 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.


    ಮಲಯಾಳಂ, ತೆಲುಗು ಸಿನಿಮಾದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಖ್ಯಾತ ವಿಲನ್ ಆಗಿ ಗುರುತಿಸಿಕೊಂಡಿದ್ದರು. ಕೆಲವು ವರ್ಷಗಳ ಹಿಂದೆ ತೆಲುಗು ಸಿನಿಮಾದ ‘ಸ್ಪಂಟ್’ ದೃಶ್ಯವೊಂದರ ಚಿತ್ರೀಕರಣ ವೇಳೆ ಕಾಲಿಗೆ ಗಾಯವಾಗಿದ್ದು, ಚೇತರಿಸಿಕೊಳ್ಳಲು ಆಗಿರಲಿಲ್ಲ.
    ಇಂದು (ಅ.4) ತಿರುವನಂತಪುರಂನಲ್ಲಿ ಪ್ರಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲದವರು ತಿಳಿಸಿದ್ದಾರೆ.

    FILM

    ದಳಪತಿ ವಿಜಯ್ ಕೊನೆ ಸಿನಿಮಾಕ್ಕೆ ಮುಹೂರ್ತ ಫಿಕ್ಸ್ … ಯಾವಾಗ ಗೊತ್ತಾ ..?

    Published

    on

    ದಳಪತಿ ವಿಜಯ್ ಕೊನೆಯದಾಗಿ ಒಂದು ಸಿನಿಮಾದಲ್ಲಿ ಅಭಿನಯಿಸಿ ಸಿನಿಕ್ಷೇತ್ರಕ್ಕೆ ವಿಧಾಯ ಹೇಳಲಿದ್ದಾರೆ. ಕೆವಿಎನ್ ಈ ಸಿನಿಮಾ ನಿರ್ಮಾಣ ಮಾಡಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ. ಅದರ ಚಿತ್ರಗಳು ಸದ್ಯ ಫುಲ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.


    ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿರುವ ಬಾಲಿವುಡ್​ನ ಸ್ಟಾರ್ ನಟ ಬಾಬಿ ಡಿಯೋಲ್‌ಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.


    ಕನ್ನಡತಿ ಪ್ರಿಯಾಮಣಿ ಸಹ ಸಿನಿಮಾದಲ್ಲಿ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.


    ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.


    ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


    ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.

    Continue Reading

    BIG BOSS

    BBK11: ಬಿಗ್​ಬಾಸ್​ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 11 ಭಾನುವಾರ ಗ್ರ್ಯಾಂಡ್​ ಆಗಿ ಓಪನಿಂಗ್​​ ಕಂಡಿದೆ. ಹೊಸ ಅಧ್ಯಾಯದೊಂದಿಗೆ ಶುರುವಾದ ಬಿಗ್​ಬಾಸ್​​ಗೆ ಕಂಟಕವೊಂದು ಎದುರಾಗಿದೆ.

    ಹೌದು, ಮೊನ್ನೆಯಷ್ಟೇ ಬಹಳ ಅದ್ಧೂರಿಯಾಗಿ ಬಿಗ್​​ಬಾಸ್​ ಸೀಸನ್ 11 ಓಪನಿಂಗ್​ ಪಡೆದುಕೊಂಡಿತ್ತು. ಒಟ್ಟು 17 ಸ್ಪರ್ಧಿಗಳು ಬಿಗ್​ಬಾಸ್​ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ್​​ಬಾಸ್ ಶೋ‌ ವಿರುದ್ಧ ವಕೀಲೆಯೊಬ್ಬರು ದೂರು ದಾಖಲಿಸಿದ್ದಾರೆ. ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ.

    ದೂರಿನಲ್ಲಿ ಏನಿದೆ?

    ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್​ಬಾಸ್ ಸೀಸನ್​ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್​ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ.

    ಆ ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿರುವುದು ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಲಗುವ ವ್ಯವಸ್ಥೆ ನೀಡದೆ ಅವರನ್ನು ದೈಹಿಕ ಬಾದ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಬಿಗ್​ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನ ಬಾಹಿರವಾಗಿದೆ.

    Continue Reading

    BIG BOSS

    ಕನ್ನಡ ಬಿಗ್‌ಬಾಸ್‌ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!

    Published

    on

    ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸಿ, ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.

    ಹಿಂದಿ ಬಿಗ್ ಬಾಸ್ ನ 10ನೇ ಸೀಸನ್ ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್ಲ ಅಲ್ಲವೇ ಅಲ್ಲ’ ಎಂದಿದ್ದರು.ವೀಕೆಂಡ್ ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

    ಕನ್ನಡದಲ್ಲೂ ಬಿಗ್ ಬಾಸ್ ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.

    Continue Reading

    LATEST NEWS

    Trending