Connect with us

LATEST NEWS

ತಾಯಿಯ ಕೊಂ*ದ ತಂದೆ; ತಂದೆಯ ಕೊಂ*ದ ಮಗ….ಇದೊಂದು ದುರಂ*ತ ಕಥೆ!

Published

on

ದಾವಣಗೆರೆ : ತಾಯಿಯನ್ನು ಕೊ*ಲೆಗೈದ ತಂದೆಯನ್ನು ಮಗನೊಬ್ಬ ಹ*ತ್ಯೆಗೈದಿದ್ದಾನೆ. ಈ ಘಟನೆ ನಡೆದಿರುವುದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕಂಪುರ ಗ್ರಾಮದಲ್ಲಿ. ಮಗನ ಮದುವೆ ಯೋಚನೆಯಲ್ಲಿದ್ದ ತಾಯಿ ಇಹಲೋಕ ತ್ಯಜಿಸಿದ್ರೆ, ಅತ್ತ ಮಾಡಬಾರದ ತಪ್ಪು ಮಾಡಿದ ತಂದೆ ಮಗನಿಂದ ಹ*ತನಾಗಿದ್ದಾನೆ.

ಉಲ್ಟಾ ಹೊಡೆದ ಪ್ಲಾನ್…ಮಗನಿಂದ ಸಾ*ವು!

ಅಂಜನಪ್ಪ( 55) ತನ್ನ ಪತ್ನಿ ತಿಪ್ಪಮ್ಮ(49 ) ಎಂಬವರನ್ನು ನೇಣು ಬಿಗಿದು ಕೊ*ಲೆ ಮಾಡಿದ್ದಾನೆ. ಬಳಿಕ ಆಕೆಯ ಮೈಮೇಲಿದ್ದ ಚಿನ್ನದ ಆಭರಣವನ್ನು ತೆಗೆದುಕೊಳ್ಳೋ ಪ್ಲಾನ್ ಮಾಡಿದ್ದ. ಜೊತೆಗೆ ಪತ್ನಿಯೇ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಕೂಡ ಕಟ್ಟಿದ್ದಾನೆ. ಈ ವಿಷಯ ಮಗ ರಮೇಶ್​ಗೆ ಗೊತ್ತಾಗಿ ತಂದೆಯನ್ನು ಕಲ್ಲು ಎತ್ತಿ ಹಾಕಿ ಕೊ*ಲೆಗೈದಿದ್ದಾನೆ.

ಮಗನ ಮದುವೆ ತಯಾರಿಯಲ್ಲಿದ್ದಾಕೆ ಮಸಣ ಸೇರಿದಳು :

ಅಂಜನಪ್ಪ ಕುಡಿತದ ಚಟಕ್ಕೆ ದಾಸನಾಗಿದ್ದ, ತನ್ನ ಪತ್ನಿಗೆ ಅಂಗನವಾಡಿ ಶಿಕ್ಷಕಿ ಹುದ್ದೆ ಸಿಕ್ಕರೂ ಬೇಡ ಎಂದು ನೌಕರಿ ಬಿಡಿಸಿದ್ದ. ಕುಡುಕ‌ ಗಂಡನ ಕಟ್ಟಿಕೊಂಡ ಆಕೆ, ಗ್ರಾಮದ ಶಾಲೆಯಲ್ಲಿ ಬಿಸಿಯೂಟ ಮಾಡುತ್ತಾ ಮೂರು ಮಕ್ಕಳನ್ನು ಸಲಹಿದ್ದಳು. ಅದರಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿದ್ದಳು. ಮಗನ ಮದುವೆ ಯೋಜನೆಯಲ್ಲಿ ಇದ್ದ ಆಕೆಯ ಉಸಿರು ನಿಲ್ಲಿಸಿದ್ದಾನೆ.

ಮಗನಿಂದ ನಡೆಯಿತು ತಂದೆಯ ಹ*ತ್ಯೆ!

ಆರೋಪಿ ಮಗ ರಮೇಶ್ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಏ.25 ರಂದು ಸಂಬಂಧಿಕರ ಮದುವೆಗೆ ಬಂದಿದ್ದ. ತಡರಾತ್ರಿ ತನ್ನ ತಾಯಿಯನ್ನ ತಂದೆಯೇ ಕೊ*ಲೆ ಮಾಡಿದ್ದಾನೆ ಎಂಬ ವಿಚಾರ ತಿಳಿದಿದೆ. ಕೂಡಲೇ ಗ್ರಾಮಕ್ಕೆ ಬಂದಿದ್ದ ಆತ. ಇದೇ ವೇಳೆ ತಂದೆ ಎದುರಿಗೆ ಬಂದಿದ್ದಾನೆ. ತಕ್ಷಣ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿ ಹಾಕಿ ತಂದೆಯನ್ನು ಕೊ*ಲೆಗೈದಿದ್ದಾನೆ.

ಇದನ್ನೂ ಓದಿ : WATCH VIDEO : ಮತ್ತೆ ಎಡವಿದ ಸಿಎಂ… ಹೆಲಿಕ್ಯಾಪ್ಟರ್‌ನಲ್ಲಿ ಬಿದ್ದು ಗಾ*ಯ…!

ಇದೊಂದು ದುರಂ*ತವೇ ಸರಿ. ತಂದೆಯ ಕುಡಿತದ ಚಟಕ್ಕೆ ಇಡೀ ಕುಟುಂಬ ಬ*ಲಿಯಾಗಿದೆ. ತಾಯಿ – ತಂದೆ ಇಹಲೋಕದ ಯಾತ್ರೆ ಮುಗಿಸಿದ್ದರೆ, ಇತ್ತ ಮದುವೆಯ ಹೊಸ್ತಿಲಲ್ಲಿದ್ದ ಮಗ ಕಂಬಿ ಎಣಿಸುತ್ತಿದ್ದಾನೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

Published

on

ಮಂಗಳೂರು:  2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.  ಈ ಪೈಕಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಹಾಜರಾಗಿದ್ದರು. 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ  ಶೇಕಡಾ 94 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಹೊಂದಿದೆ. ಶಿವಮೊಗ್ಗ ಶೇ.88.67 ಫಲಿತಾಂಶದಿಂದ  ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ರಾಜ್ಯಕ್ಕೆ ಬಾಲಗಲಕೋಟೆ ಮುಧೋಳಿನ ಅಂಕಿತಾ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ದಕ್ಷಿಣ ಕನ್ನಡ ಚಿನ್ಮಯ್ 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮುಂದೆ ಓದಿ..; ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದು. kseab.karnataka.gov.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದಾಗಿದೆ.

Continue Reading

LATEST NEWS

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

Published

on

ಮಹಾರಾಷ್ಟ್ರ: ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ಸಾವನ್ನಪ್ಪಿದ್ದಾನೆ.

ಪ್ರಾರ್ಥಮೇಶ್ ಮೃತ ದುರ್ದೈವಿ. ಚಿಕನ್​​ ಶವರ್ಮಾ ಸೇವಿಸಿದ ಮರುದಿನ ಯುವಕನಿಗೆ ತೀವ್ರ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಇದಲ್ಲದೇ ಆತನೊಂದಿಗೆ 5 ಜನ ಶವರ್ಮಾ ತಿಂದಿದ್ದು, ಐವರು ಸಹ ತೀವ್ರ ಅಸ್ವಸ್ಥರಾಗಿದ್ದಾರೆ.

ಹಾಳಾದ ಕೋಳಿಯನ್ನು ಶವರ್ಮಾದಲ್ಲಿ ಬಳಸಿದಕ್ಕಾಗಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಶವರ್ಮಾ ಅಂಗಡಿ ನಡೆಸುತ್ತಿದ್ದ ಇಬ್ಬರ ವಿರುದ್ಧ ಕೇಸ್​​ ದಾಖಲಾಗಿದ್ದು ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ.

Continue Reading

DAKSHINA KANNADA

ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

Published

on

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20 ವ) ಎಂಬವರು ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮೇ.8ರಂದು ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದೆ. ನಗರದ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದ ನಿತೇಶ್ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

suicide

ಮುಂದೆ ಓದಿ..; PUTTUR : ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ತೆಗೆದವರಿಗೆ ಬಿತ್ತು ಧರ್ಮದೇಟು!

ಇವರು ಉಡುಪಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ 2 ವರ್ಷಗಳಿಂದ ಮಂಗಳೂರು ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು 5 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಈ ಬಗ್ಗೆ ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

LATEST NEWS

Trending