International news
ಚಿಟ್ಟೆಗಳ ಕಳ್ಳಸಾಗಣಿಕೆಗೆ ಯತ್ನಿಸಿದ ತಂದೆ-ಮಗನ ಬಂಧನ
ಮಂಗಳೂರು/: ಸಾಮಾನ್ಯವಾಗಿ ಬೆಲೆ ಬಾಳುವ ವಸ್ತುಗಳನ್ನು ಕಳ್ಳ ಸಾಗಣೆ ಮಾಡಲಾಗುತ್ತದೆ. ಪ್ರಾಣಿಗಳ ವಿಚಾರ ನೋಡೋದಾದರೆ ಕೆಲವರು ಸಾಕು ಪ್ರಾಣಿಗಳಿಗೂ ಕನ್ನ ಹಾಕುವವರಿದ್ದಾರೆ. ಅದರ ಹೊರತಾಗಿ ಗಂಭೀರ ಪ್ರಕರಣವಾದ ಇರ್ತಲೆ ಹಾವು ಸಾಗಾಟ, ನಕ್ಷತ್ರ ಆಮೆ ಸಾಗಾಟ, ಅಂಬರ್ ಗ್ರೀಸ್ ಸಾಗಾಟ ಮಾಡಿ ತಗಲಾಕ್ಕೊಂಡವರಿದ್ದಾರೆ. ಆದರೆ, ಇಲ್ಲಿ ಮಾತ್ರ ವಿಚಿತ್ರ ಘಟನೆ ನಡೆದಿದೆ.
ತಂದೆ, ಮಗ ಸೇರಿಕೊಂಡು ಹಲವಾರು ಚಿಟ್ಟೆ ಮತ್ತು ಕೀಟಗಳನ್ನು ಹಿಡಿದು ಕಳ್ಳ ಸಾಗಾಣಿಕೆಗೆ ಯತ್ನಿಸಿದ್ದಾರೆ. ಚಿಟ್ಟೆಗಳನ್ನು ಕಳವು ಮಾಡುವಾಗ ಈ ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅಂದಹಾಗೆ ಈ ಘಟನೆ ನಡೆದಿರೋದು ಶ್ರೀಲಂಕಾದಲ್ಲಿ. ಇಟಲಿಯಲ್ಲಿ ವೃತ್ತಿಯಲ್ಲಿ ವೈದ್ಯ ಹಾಗೂ ಮೊಡೆನಾ ಸಿಟಿಯ ಕೀಟಶಾಸ್ತ್ರ ಸಂಘದ ಸದಸ್ಯ ಲುಯಿಗಿ ಫೆರಾರಿ (68) ಮತ್ತು ಆತನ ಮಗ ಮಟ್ಟಿಯಾ ಫೆರಾರಿ (28) ಬಂಧಿತ ಆರೋಪಿಗಳು.
ಇವರ ಈ ಕೃ*ತ್ಯಕ್ಕೆ ನ್ಯಾಯಾಲಯ ಬರೋಬ್ಬರಿ $200000 ಡಾಲರ್ ಅಂದ್ರೆ ಸುಮಾರು 1.62 ಕೋಟಿ ರೂ. ದಂಡ ವಿಧಿಸಿದೆ. ನಿಗದಿತ ಸಮಯದೊಳಗೆ ದಂಡ ಪಾವತಿಸದಿದ್ದರೆ, 2 ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದೆ.
ರಾಸಾಯನಿಕ ಬಳಸಿ ಚಿಟ್ಟೆ ಹಿಡಿಯುತ್ತಿದ್ದ ಆರೋಪಿಗಳು :
ಇಟಲಿಯಿಂದ ಶ್ರೀಲಂಕಾಗೆ ಪ್ರವಾಸ ಬಂದಿದ್ದ ತಂದೆ – ಮಗ ಅಲ್ಲಿಂದ ಚಿಟ್ಟೆಗಳನ್ನು ಕಳ್ಳಸಾಗಣಿಕೆ ಮಾಡಲು ಯತ್ನಿಸಿದ್ದಾರೆ. ಮೇಣ ಮತ್ತು ಮತ್ತಿತರ ರಾಸಾಯನಿಕಗಳನ್ನು ಬಳಸಿ ಶ್ರೀಲಂಕಾದ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮವಾಗಿ ಚಿಟ್ಟೆಗಳನ್ನು ಹಿಡಿಯುತ್ತಿದ್ದರು. ಈ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಇವರನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಮಗುವಿನ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ದೌರ್ಜನ್ಯ; ಬಟ್ಟೆ ಬಿಚ್ಚಿಸಿ ವೀಡಿಯೋ ಮಾಡಿದ ಕಿರಾತಕ
ಇವರ ಬಳಿ ಪತ್ತೆಯಾದ ಸಾವಿರಾರು ಅಪರೂಪದ ಕೀಟಗಳು ಮತ್ತು 92 ಬಗೆಯ ಅಪರೂಪದ ಜಾತಿಯ ಚಿಟ್ಟೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಹಲವು ಅಪರೂಪದ ಜಾತಿಯ ಕೀಟಗಳು ಸಾ*ವನ್ನಪ್ಪಿವೆ. ವನ್ಯಜೀವಿ ಕಾಯ್ದೆಯಡಿ ಗಂಭೀರ ಸೆಕ್ಷನ್ಗಳ ಅಡಿಯಲ್ಲಿ ತಂದೆ ಮಗನ ವಿರುದ್ಧ ಎಫ್.ಐ.ಆರ್ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
International news
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
ಮಂಗಳೂರು / ಕೇಪ್ ಕ್ಯಾನವೆರೆಲ್ : ಇತ್ತೀಚೆಗೆ ಬಾಹ್ಯಕಾಯಕ್ಕೆ ತೆರಳಿದ್ದ ಗಗನಯಾತ್ರಿಗಳು ಸುರಕ್ಷಿತವಾಗಿ ಭಾನುವಾರ(ಸೆ.15) ಸಂಜೆ ಭೂಮಿಗೆ ಬಂದಿಳಿದಿದ್ದಾರೆ. ಸ್ಪೇಸ್ ಎಕ್ಸ್ ಸಹಯೋಗದೊಂದಿಗೆ ಈ ಬಾಹ್ಯಾಕಾಶ ಯಾತ್ರೆ ಕೈಗೊಳ್ಳಲಾಗಿತ್ತು.
ಇದು ಪ್ರಪಂಚದ ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ ಕಾರ್ಯಕ್ರಮವಾಗಿತ್ತು. ಇದರಲ್ಲಿ ಇಬ್ಬರು ನಾಸಾ ಪೈಲಟ್ ಗಳು ಸೇರಿ ಒಬ್ಬ ಸ್ಪೇಸ್ ಎಕ್ಸ್ ಉದ್ಯೋಗಿ ಹಾಗೂ ಬಿಲಿಯನೇರ್ ಜೇರೆಡ್ ಐಸಾಕ್ ಮನ್ ಇದ್ದರು.
ಇವರನ್ನುಹೊತ್ತಿದ್ದ ನೌಕೆ ಭಾನುವಾರ ಸಂಜೆ ಮೆಕ್ಸಿಕೊ ಕೊಲ್ಲಿಯಲ್ಲಿ ಯಶಸ್ವಿಯಾಗಿ ಇಳಿಯಿತು. ಬಿಲಿಯನೇರ್ ಜೇರೆಡ್ ಐಸಾಕ್ ಮನ್ ಬಾಹ್ಯಾಕಾಶ ನಡೆಸಿದ ಮೊದಲ ಖಾಸಗಿ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಖಾಸಗಿಯಾಗಿ ಆಯೋಜಿಸಲಾಗಿದ್ದ ‘ವಿಶ್ವದ ಮೊದಲ ಬಾಹ್ಯಾಕಾಶ ನಡಿಗೆ’ಯು ಯಶಸ್ವಿಯಾಗಿದೆ.
ಸಾಮಾನ್ಯವಾಗಿ ತರಬೇತಿ ಹೊಂದಿದ ಗಗನಯಾತ್ರಿಗಳನ್ನು ಮಾತ್ರವೇ ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ. ಆದರೆ, ಅವರ ಹೊರತಾಗಿ ಸಾಮಾನ್ಯರೂ ಬಾಹ್ಯಾಕಾಶಕ್ಕೆ ಹೋಗಿರುವುದು ಅಪರೂಪದ ಘಟನೆ.
ಇದನ್ನೂ ಓದಿ : ವಾರ ಕಳೆದ್ರೂ ವೈರಲ್ ಫೀವರ್ ಗುಣ ಆಗ್ತಿಲ್ವಾ? ಈ ಮನೆಮದ್ದು ಪ್ರಯತ್ನಿಸಿ, ಜ್ವರದೊಂದಿಗೆ ಮೈಕೈನೋವು ಮಾಯವಾಗುತ್ತೆ
ಐಸಾಕ್ ಮನ್ ಕುರಿತು :
ಭೂಮಿಯಿಂದ 740 ಕಿ.ಮೀ ದೂರದ ಕಕ್ಷೆಯಲ್ಲಿ ‘ಬಾಹ್ಯಾಕಾಶ ನಡಿಗೆ’ ಯಶಸ್ವಿಯಾಗಿ ನಡೆಯಿತು. ಬಾಹ್ಯಾಕಾಶ ನಡಿಗೆ ಗುರುತಿಸಲಾಗಿದ್ದ ಅನುಕೂಲಕರ ಸ್ಥಳದಲ್ಲಿ ನೌಕೆಯು ನಿಂತಿತು. ಇದರಿಂದ ಹೊರಬಂದ ಐಸಾಕ್ ಮನ್ ಬಾಹ್ಯಾಕಾಶ ನಡಿಗೆಯನ್ನು ಸಂಭ್ರಮಿಸಿದ್ದರು. 41 ವರ್ಷದ ಐಸಾಕ್ ಮನ್ ಅವರು ‘ಶಿಫ್ಟ್ 4’ ಎಂಬ ಕ್ರೆಡಿಟ್ ಕಾರ್ಡ್ ಪ್ರೊಸೆಸಿಂಗ್ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿಇಒ. ಇದುವರೆಗೆ 12 ದೇಶಗಳ ಸುಮಾರು 263 ಜನರು ಬಾಹ್ಯಾಕಾಶ ನಡಿಗೆಯಲ್ಲಿ ಭಾಗವಹಿಸಿದ್ದಾರೆ. 1965ರಲ್ಲಿ ರಷ್ಯಾದ ಅಲೆಕ್ಸಿ ಲಿಯೋನೊವ್ ಮೊದಲ ಬಾರಿಗೆ ಬಾಹ್ಯಾಕಾಶ ನಡಿಗೆ ಕೈಗೊಂಡಿದ್ದರು
dehali
Paralympics 2024: 29 ಪದಕಗಳೊಂದಿಗೆ ದಾಖಲೆ ಬರೆದ ಭಾರತ
Paralympics 2024: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಅದ್ಭುತ ಸಾಧನೆಯೊಂದಿಗೆ ಪಯಣ ಮುಗಿಸಿದೆ. ಕ್ರೀಡಾಕೂಟದ ಕೊನೆಯ ದಿನವಾದ ಇಂದು ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇವುಗಳಲ್ಲಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚು ಸೇರಿವೆ.
ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಷ್ಟು ಸಂಖ್ಯೆಯ ಪದಕಗಳನ್ನು ಗೆದ್ದಿದ್ದು, ಇದೇ ಮೊದಲು. ಇದಕ್ಕೂ ಮೊದಲು ಟೊಕಿಯೋ ಪ್ಯಾರಾಲಿಂಪಿಕ್ನಲ್ಲಿ 19 ಪದಕಗಳನ್ನು ಗೆದ್ದಿದ್ದು, ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು. ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದೆ.
International news
ಶಾಲೆಯಲ್ಲಿ ಗುಂ*ಡಿನ ದಾ*ಳಿ ನಡೆಸಿದ 14 ರ ಬಾಲಕ..! ನಾಲ್ವರನ್ನು ಬ*ಲಿ ಪಡೆದ ವಿದ್ಯಾರ್ಥಿ..!
ಮಂಗಳೂರು/ಅಮೆರಿಕಾ : ಶಾಲೆಯಲ್ಲಿ ಗುಂ*ಡಿನ ದಾ*ಳಿ ನಡೆಸಿ ಇಬ್ಬರು ಸಹ ವಿದ್ಯಾರ್ಥಿಗಳ ಸಹಿತ ಇಬ್ಬರು ಶಿಕ್ಷರನ್ನು 14 ವರ್ಷದ ವಿದ್ಯಾರ್ಥಿಯೊಬ್ಬ ಕೊಂ*ದಿರುವ ಆಘಾ*ತಕಾರಿ ಘಟನೆ ನಡೆದಿದೆ. ಅಮೆರಿಕಾದ ಜಾರ್ಜಿಯಾದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಎಫ್ಬಿಐ ಅವರು ವಶಕ್ಕೆ ಪಡೆದಿದ್ದಾರೆ.
ಜಾರ್ಜಿಯಾದ ರಾಜಧಾನಿ ಅಟ್ಲಾಂಟದಿಂದ ಸುಮಾರು ಒಂದು ಗಂಟೆಗಳ ಪ್ರಯಾಣದ ದೂರ ಇರುವ ವಿಂಡರ್ನ ಅಪಾಲಾಚಿ ಹೈಸ್ಕೂಲ್ನಲ್ಲಿ ಈ ಘಟನೆ ಬುಧವಾರ(ಸೆ.4) ನಡೆದಿದೆ. ವಿದ್ಯಾರ್ಥಿ ನಡೆಸಿದ ಗುಂ*ಡಿನ ದಾ*ಳಿಗೆ ಒಂಬತ್ತು ಮಂದಿ ಗಂಭೀರವಾಗಿ ಗಾ*ಯಗೊಂಡಿದ್ದು, ನಾಲ್ವರು ಇಹಲೋಕ ತ್ಯಜಿಸಿದ್ದಾರೆ.
ಕೋಲ್ಟ್ ಗ್ರೇ ಈ ಕೃ*ತ್ಯ ಎಸಗಿದ ವಿದ್ಯಾರ್ಥಿ. ವಿಶೇಷ ಅಂದ್ರೆ ಈತನ ಬಗ್ಗೆ 2023 ರಲ್ಲೇ ಎಫ್ಬಿಐ ಒಂದು ಕಣ್ಣು ಇಟ್ಟಿತ್ತಂತೆ. ಕಳೆದ ವರ್ಷವೇ ಈತ ತನ್ನ ಮನೆಯ ಪಕ್ಕದ ಶಾಲೆಗಳಿಗೆ ಆನ್ಲೈನ್ ಮೂಲಕ ಬೆದರಿಕೆ ಹಾಕಿದ ಆರೋಪ ಎದುರಾಗಿತ್ತು. ಆದ್ರೆ, ಆ ವೇಳೆ ಆತನ ವಿರುದ್ಧ ಸರಿಯಾದ ಸಾಕ್ಷ್ಯ ಸಿಗದ ಕಾರಣ ಆತನ ಬಂಧನವಾಗಿರಲಿಲ್ಲ ಎಂದು ಎಫ್ಬಿಐ ಮಾಹಿತಿ ನೀಡಿದೆ.
ಆರೋಪಿ ಕೋಲ್ಟ್ ಗ್ರೇಯ ತಂದೆಯ ಬಳಿ ಬೇಟೆಯಾಡುವ ಬಂದೂಕುಗಳಿದ್ದು, ಅದು ಅವರ ಮೇಲ್ವಿಚಾರಣೆಯಲ್ಲೇ ಇತ್ತು. ಆದ್ರೆ, ಇದೇ ಬಂದೂಕನ್ನು ಶಾಲೆಗೆ ತೆಗೆದುಕೊಂಡು ಬಂದಿದ್ದ ಆರೋಪಿ ವಿದ್ಯಾರ್ಥಿ ಶಾಲೆಯಲ್ಲಿ ಮನ ಬಂದಂತೆ ಗುಂ(ಡು ಹಾರಿಸಿ ಇಬ್ಬರು ವಿದ್ಯಾರ್ಥಿ ಹಾಗೂ ಇಬ್ಬರು ಶಿಕ್ಷರನ್ನು ಬ*ಲಿ ಪಡೆದಿದ್ದಾನೆ.
ಇದನ್ನೂ ಓದಿ : ಪ್ರೇಯಸಿಯನ್ನು ಹ*ತ್ಯೆಗೈದಿದ್ದವನಿಗೆ ಜೀ*ವಾವಧಿ ಶಿಕ್ಷೆ; ಪೊಲೀಸ್ ಆಗಬೇಕಾಗಿದ್ದವನು ಕೊ*ಲೆಗಾರನಾದ ಕಥೆ
ಘಟನೆಯ ಬಳಿಕ ವಿದ್ಯಾರ್ಥಿ ಪೊಲೀಸರಿಗೆ ಶರಣಾಗತನಾಗಿದ್ದು, ಎಫ್ಬಿಐ ಅಧಿಕಾರಿಗಳು ಆರೋಪಿ ಬಾಲಕನನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಶ್ವೇತ ಭವನ ಕೂಡ ಈ ಘಟನೆಯನ್ನು ಖಂಡಿಸಿದ್ದು, ದೇಶದಲ್ಲಿ ನಡೆಯುತ್ತಿರುವ ಬಂದೂಕು ದುರ್ಬಳಕೆಯ ಬಗ್ಗೆ ಸೂಕ್ತ ಕ್ರಮದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.