FILM
ಅಪ್ಪಂದಿರ ದಿನ : ತಂದೆಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿನೀಶ್ ದರ್ಶನ್
ಬೆಂಗಳೂರು : ಇಂದು ವಿಶ್ವ ಅಪ್ಪಂದಿರ ದಿನ. ನಟ ದರ್ಶನ್ ಪುತ್ರ ಕೂಡಾ ತಂದೆಯನ್ನು ನೆನೆದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರೂ ಮಗ ವಿನೀಶ್ ಅಪ್ಪಂದಿರ ದಿನದ ಶುಭಾಶಯ ತಿಳಿಸಿದ್ದಾರೆ.
ತನ್ನ ತಂದೆಯೊಂದಿಗೆ ಅಪಾರ ಪ್ರೀತಿ ಹೊಂದಿರುವ ವಿನೀಶ್, ಈ ದಿನ ಅಪ್ಪನನ್ನು ಮಿಸ್ ಮಾಡಿಕೊಳ್ಳುತ್ತಾ ಭಾವುಕ ಪೋಸ್ಟ್ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.
ತಾಯಿ ವಿಜಯಲಕ್ಷ್ಮಿ ಹಾಗೂ ತಂದೆ ದರ್ಶನ್ ಜೊತೆಗಿನ ವಿಶೇಷವಾದ ಫೋಟೋಗಳನ್ನು ಹಂಚಿಕೊಂಡಿರುವ ವಿನೀಶ್, ನಿಮ್ಮನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಐ ಲವ್ ಯು, ಯಾವತ್ತಿಗೂ ನೀವೇ ನನ್ನ ಹೀರೋ ಅಪ್ಪ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ.
ಅತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪೊಲೀಸರ ವಶದಲ್ಲಿದ್ದಾರೆ. ಇತ್ತ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ನೋವು ಅನುಭವಿಸುತ್ತಿದ್ದಾರೆ. ಅತ್ತ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾ ಖಾತೆಗಳನ್ನು ಡಿಲೀಟ್ ಮಾಡಿಕೊಂಡಿದ್ದು, ಇತ್ತ ವಿನೀಶ್ ಇನ್ಸ್ಟಾಗ್ರಾಮ್ ಪೋಸ್ಟ್ ಹಾಕುವ ಮೂಲಕ ತಮ್ಮ ವೇದನೆ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ : ಐಸ್ಕ್ರೀಂ ಪ್ರಿಯರೇ ಎಚ್ಚರ! ಆನ್ಲೈನ್ನಲ್ಲಿ ತರಿಸಿದ ಐಸ್ಕ್ರೀಂನಲ್ಲಿ ಸತ್ತ ಹುಳಗಳು ಪತ್ತೆ!
ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ :
ತಂದೆ ದರ್ಶನ್ ಅರೆಸ್ಟ್ ಆದ ಬಳಿಕ ವಿನೀಶ್ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. ಈ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದರು. ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದ. ನನಗೀಗ 15 ವರ್ಷ, ನನಗೂ ಮನಸ್ಸಿದೆ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲ ಬೇಕಾಗಿದೆ. ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ ಎಂದು ಇನ್ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದರು.
ವಿನೀಶ್ ಇನ್ಸ್ಟಾಗ್ರಾಮ್ನ ಸ್ಟೋರಿ ಸದ್ಯ ಭಾರೀ ವೈರಲ್ ಆಗುತ್ತಿದೆ.
FILM
WATCH : ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್; ವೀಡಿಯೋ ವೈರಲ್ ಆಗುತ್ತಿದ್ದಂತೆ ಏನಂದ್ರು ನಟ?
ಮಂಗಳೂರು : ಸಿನಿಮಾ ನಟರು ಅಂದಾಕ್ಷಣ ಅಭಿಮಾನಿಗಳು ಮುಗಿಬೀಳೋದು ಸಹಜ. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕು, ಸೆಲ್ಫಿ ಗಿಟ್ಟಿಸಿಕೋಬೇಕು ಅನ್ನೋ ಹೆಬ್ಬಯಕೆ ಸಹಜ. ಆದ್ರೆ, ಈ ರೀತಿ ಹೋದ ಅಭಿಮಾನಿಯೊಬ್ಬನನ್ನು ತಳ್ಳಿರೋ ಘಟನೆ ನಡೆದಿದೆ. ಘಟನೆಯ ವೀಡಿಯೋ ಸದ್ಯ ವೈರಲ್ ಆಗಿದೆ.
ವೈರಲ್ ಆಗಿರೋ ವೀಡಿಯೋ ನಟ ನಾಗಾರ್ಜುನ ಅವರದು. ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಯೊಬ್ಬರು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್ ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.
‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್ನೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.
ಇನ್ನು ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ‘ಇದು ಈಗ ತಾನೇ ನನ್ನ ಗಮನಕ್ಕೆ ಬಂತು. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಯಲ್ಲಿ ನಾನು ಕ್ಷಮೆ ಕೇಳುತ್ತೇನೆ. ಇನ್ಮುಂದೆ ಎಚ್ಚರಿಕೆ ವಹಿಸುತ್ತೇನೆ. ಈ ರೀತಿ ಇನ್ನೆಂದೂ ಆಗುವುದಿಲ್ಲ’ ಎಂದಿದ್ದಾರೆ.
ಇದನ್ನೂ ಓದಿ: ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು
ಅಂದಹಾಗೆ ಈ ಘಟನೆ ನಡೆದಾಗ ನಾಗಾರ್ಜುನ ಜೊತೆ ಕಾಲಿವುಡ್ ನಟ ಧನುಷ್ ಕೂಡ ಇದ್ದರು. ಸಿನಿಮಾ ನಟರನ್ನು ಕಂಡಾಗ ಸಿನಿಪ್ರಿಯರು ಹತ್ತಿರ ಬರೋದು ಸಹಜ. ಈ ವೇಳೆ ಬಾಡಿಗಾರ್ಡ್ ಗಳು ನಟರ ಬಳಿ ಬರಲು ಬಿಡುವುದಿಲ್ಲ. ಇಲ್ಲೂ ಹಾಗೇ ಆಗಿದೆ.
FILM
ಟೀಸರ್ ಮೂಲಕ ಭಾರಿ ಸದ್ದು ಮಾಡುತ್ತಿದೆ ‘ಸಾಂಕೇತ್’
ಮಂಗಳೂರು : ಸದ್ಯ ಪೋಸ್ಟರ್, ಟೀಸರ್ ಮೂಲಕ ಭಾರಿ ಹೈಪ್ ಕ್ರಿಯೆಟ್ ಮಾಡಿರುವ ಸಿನಿಮಾ ‘ಸಾಂಕೇತ್’. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಕಥೆಯನ್ನೊಳಗೊಂಡ ವಿನೂತನ ಚಿತ್ರ ಅನ್ನೋದು ಟೀಸರ್ ಮೂಲಕ ಖಚಿತವಾಗಿದೆ. ಟೀಸರ್ ಚಿತ್ರದ ಭಾರಿ ನಿರೀಕ್ಷೆ ಹುಟ್ಟು ಹಾಕಿದೆ.
ಚಿತ್ರ ತಂಡ :
ಚಿತ್ರದ ನಿರ್ದೇಶನವನ್ನು ಜ್ಯೋತ್ಸ್ನಾ ಕೆ. ರಾಜ್ ಮಾಡಿದ್ದು, ಜೊತೆಗೆ ಸೌಂಡ್ ಡಿಸೈನಿಂಗ್, ಎಡಿಟಿಂಗ್ ಹೊಣೆಯನ್ನೂ ಹೊತ್ತಿದ್ದಾರೆ. ಸ್ಕ್ರೀನ್ ಪ್ಲೇ, ಸಿನಿಮಾಟೋಗ್ರಾಫಿ, ಬಿಜಿಎಂ ಆ್ಯಂಡ್ ವಿಎಫ್ ಎಕ್ಸ್ ರಾಜ್ ಕಾರ್ತಿಕ್ ಮಾಡಿದ್ದಾರೆ.
ಸಹಾಯಕ ನಿರ್ದೇಶಕನಾಗಿ, ಛಾಯಾಗ್ರಾಹಕನಾಗಿ ಸನತ್ ಕುಮಾರ್ ಕೆಲಸ ಮಾಡಿದ್ದಾರೆ. ಪ್ರಕಾಶ್ ರಾವ್ ಸಾಹಿತ್ಯ ಚಿತ್ರಕ್ಕಿದೆ. ಪ್ರೊಡಕ್ಸನ್ ಮ್ಯಾನೇಜರ್ ಆಗಿ ನಿಶಾನ್ ತೆಲ್ಲಿಸ್ ಕಾರ್ಯ ನಿರ್ವಹಿಸಿದ್ದಾರೆ.
ಪಾತ್ರವರ್ಗ :
ತುಳನಾಡ ಪ್ರತಿಭೆ ಚೈತ್ರ ಶೆಟ್ಟಿ, ವಿಕ್ಕಿ ರಾವ್, ಮೋಹನ್ ಶೆಣಿ, ರೂಪಶ್ರೀ ವರ್ಕಾಡಿ, ರಾಹುಲ್ ಅಮೀನ್, ನಿರೀಕ್ಷಾ ಶೆಟ್ಟಿ, ಸದಾಶಿವ ಅಮೀನ್, ನಿರೀಕ್ಷಾ ರಾಣಿ, ರಜೀತ್ ಕದ್ರಿ, ಮೇಘನಾ ರಕ್ಷಿತಾ ಮೊದಲಾವರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಇನ್ನು ಚಿತ್ರದ ಟ್ರೇಲರ್ ಇದೇ ಜೂನ್ 29 ರಂದು ಬಿಡುಗಡೆಯಾಗಲಿದೆ.
FILM
ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು
ಬೆಂಗಳೂರು: ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಜೈಲು ಸೇರಿದೆ. ತನಿಖೆಯನ್ನು ಪೂರ್ಣಗೊಳಿಸಲಿರುವ ಅಧಿಕಾರಿಗಳು ಸದ್ಯದಲ್ಲಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ.
ಚಾರ್ಜ್ಶೀಟ್ ಸಲ್ಲಿಕೆ ಆದಮೇಲೆ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ. ಈ ವಿಚಾರ ಚಿತ್ರರಂಗಕ್ಕೂ ಕೂಡ ಆಘಾತಕಾರಿ ಎಂದು ಹೇಳಲಾಗುತ್ತಿದೆ. ಮುಂದೆ ದರ್ಶನ್ ಅವರನ್ನು ಹಾಕಿಕೊಂಡು ಚಿತ್ರ ಮಾಡೋರು ಇನ್ಮೇಲೆ ಇದನ್ನು ಗಮನಿಸಲೇಬೇಕು.
ಚಾರ್ಜ್ ಶೀಟ್ ಬಳಿಕ ಪಾಸ್ ಪೋರ್ಟ್ ರದ್ದಾಗಲಿದೆ. ಕೊ*ಲೆ ಆರೋಪಿ ಪ್ರಭಾವಿ ಆಗಿರುವ ಕಾರಣ ಪಾಸ್ ಪೋರ್ಟ್ ರದ್ಧತಿಗೆ ಪತ್ರ ಬರೆಯಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಕೊ*ಲೆ ಆರೋಪಿ ಬೇರೆ ದೇಶಗಳಿಗೆ ಎಸ್ಕೇಪ್ ಆಗಬಹುದು ಎಂಬ ಕಾರಣದಿಂದ ಪಾಸ್ ಪೋರ್ಟ್ ರದ್ದು ಮಾಡಲು ಪತ್ರ ಬರೆಯುತ್ತಾರೆ ಎನ್ನಲಾಗಿದೆ.
ಆತ ಎಷ್ಟೇ ಪ್ರಭಾವಿ, ಗಣ್ಯನಾಗಿದ್ದರೂ ಪೊಲೀಸರಿಗೆ ಹಾಗೂ ಕಾನೂನಿಗೆ ಆತ ಆರೋಪಿಯಷ್ಟೇ. ಒಂದು ವೇಳೆ ದರ್ಶನ್ ಜೈಲಿನಿಂದ ರಿಲೀಸ್ ಆದ ಬಳಿಕ ಯಾರಾದರೂ ಸಿನಿಮಾ ಮಾಡಬೇಕು ಅಂದರೆ ದೇಶದಲ್ಲಿಯೇ ಮಾಡಬೇಕಿದೆ. ವಿದೇಶದಲ್ಲಿ ಚಿತ್ರೀಕರಣ ಮಾಡುವಂತಿಲ್ಲ.
ಸದ್ಯ ವಿದೇಶದಲ್ಲಿ ಚಿತ್ರೀಕರಣ ಮಾಡುವ ಟ್ರೆಂಡ್ ಇದೆ. ಪೂರ್ತಿ ಆಗದಿದ್ರೂ ಒಂದು ಹಾಡನ್ನಾದರೂ ವಿದೇಶದಲ್ಲಿ ಚಿತ್ರೀಕರಣ ಮಾಡುವ ಟ್ರೆಂಡ್ ಚಿತ್ರರಂಗದಲ್ಲಿದೆ. ಮುಂದಿನ ದಿನಗಳಲ್ಲಿ ವಿದೇಶಿ ಚಿತ್ರೀಕರಣ ಮಾಡಿದರೆ ಅದಕ್ಕೆ ನ್ಯಾಯಾಲಯದ ಅನುಮತಿ ಅಗತ್ಯ ಇದೆ. ನ್ಯಾಯಾಲಯ ಅನುಮತಿ ನೀಡಿದರೆ ಮಾತ್ರ ವಿದೇಶಕ್ಕೆ ತೆರಳಬಹುದು. ಆದರೆ ಪಾಸ್ ಪೋರ್ಟ್ ರದ್ದು ಮಾಡಿದರೆ ವಿದೇಶಿ ಕನಸೂ ಭಗ್ನ ಆಗಲಿದೆ.
Pingback: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಸ್ಟಾರ್ ಆಲ್ ರೌಂಡರ್! - NAMMAKUDLA NEWS - ನಮ್ಮಕುಡ್ಲ ನ್ಯೂಸ್