DAKSHINA KANNADA
ಫಾಝಿಲ್ ಹತ್ಯೆ ಪ್ರಕರಣ: ಕಾರು ಚಾಲಕ ಅಜಿತ್ ಕ್ರಾಸ್ತಾ ವಶಕ್ಕೆ-ಚುರುಕುಗೊಂಡ ತನಿಖೆ
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಹಲವು ಪ್ರಗತಿ ಕಂಡಿದ್ದು ಪ್ರಮುಖ ಸಾಕ್ಷ್ಯಾಧಾರಗಳು ದೊರೆತಿದೆ, ಜೊತೆಗೆ ಇದಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ದೃಢಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ‘ಫಾಝಿಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ವಿಚಾರಣೆ ಶಾಂತಿ ರೀತಿಯಲ್ಲಿ ಮುಗಿದಿದೆ. ತನಿಖೆಗೆ ಲೀಡ್ ಆಗುವಂತಹ ಸಾಕಷ್ಟು ವ್ಯಕ್ತಿಗಳನ್ನು ನಾವು ವಿಚಾರಣೆಗೆ ಒಳಪಡಿಸಿದ್ದೇವೆ.
ಪ್ರಾರಂಭದಲ್ಲಿ 14 ಜನ ನಂತರದಲ್ಲಿ 21 ಅನಂತರದಲ್ಲಿ ಸುಮಾರು 16 ಜನ, ಒಟ್ಟು 51ಕ್ಕಿಂತ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದೆವು.
ಕಾರು ಮಾಲೀಕನನ್ನು ವಿಚಾರಣೆ ಮಾಡಿದ್ದೇವೆ. ಆತ ವಿಚಾರಣೆಯಲ್ಲಿ ಕೆಲವೊಂದು ಮಾಹಿತಿಯನ್ನು ಡಿಸ್ಕ್ಲೋಸ್ ಮಾಡಿದ್ದಾನೆ. ಅಂದ್ರೆ ಇವನಿಂದ ಯಾರು ಕಾರು ತೆಗೆದುಕೊಂಡು ಹೋದ್ರು.
ನಂತರ ಎಷ್ಟು ಹಣ ಕೊಡ್ತೇವೆ ಅಂತ ಹೇಳಿದ್ರು ಎನ್ನುವಂತಹ ಎಲ್ಲ ಮಾಹಿತಿಯನ್ನು ಹೇಳಿದ್ದಾನೆ. ಈಗ ನ್ಯಾಯಾಲಯಕ್ಕೆ ಹಾಜರುಪಡಿಸಿ ಅವನನ್ನು ನಂತರ ನಾವು ವಶಕ್ಕೆ ಪಡೆಯಲಿದ್ದೇವೆ. ನಂತರ ಹೆಚ್ಚಿನ ಪ್ರಶ್ನೆಗಳನ್ನು ಅವನಿಗೆ ಮತ್ತೆ ಕೂಡಾ ಕೇಳಲಾಗುತ್ತೆ.
ನಂತರ ಈ ಪ್ರಕರಣದ ಆರೋಪಿಗಳ ಬಗ್ಗೆ ಒಂದು ನಿರ್ದಿಷ್ಟ ಮಾಹಿತಿ ಸಿಗುತ್ತೆ. ಈಗಾಗಲೇ ಆತನ ಕೊಟ್ಟ ಮಾಹಿತಿಯಂತೆ ತನಿಖೆ ನಡೆಸಲು ನಮ್ಮ ತನಿಖಾ ತಂಡಗಳು ಮುಂದೆ ಹೋಗಿದೆ.
ಆರೋಪಿಗಳಲ್ಲಿ ಒಬ್ಬ ಆರೋಪಿ ಈತನಿಗೆ ಆಪ್ತ ಸ್ನೇಹಿತ. ಇದಕ್ಕೂ ಮೊದಲು ಕೂಡಾ ಆತ ಈತನಿಂದ ಕಾರು ಪಡೆದುಕೊಳ್ಳುತ್ತಿದ್ದ. ಈತನಲ್ಲಿ ಲಾರಿ, ಕಾರು ಎಲ್ಲ ಇದೆ.
ಬೇಕು ಅಂದಾಗ ಹೀಗೆ ಬಾಡಿಗೆ ಕೊಡುತ್ತಿದ್ದ. ಅವನ ಸಂಪೂರ್ಣ ವಿಚಾರ ಇನ್ನೂ ಆಗ್ಬೇಕು. ನಮ್ಮ ಹಿರಿಯ ಅಧಿಕಾರಿಗಳು ಅವನನ್ನು ಪ್ರಶ್ನಿಸಿದ್ದಾರೆ. ಇನ್ನು ನಾನು ಕೂಡಾ ಆತನನ್ನು ವಿಚಾರಣೆ ಮಾಡಲಿದ್ದೇನೆ.
ಮುಖ್ಯವಾಗಿ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ವಿನಂತಿ ಏನಂದ್ರೆ ಅಡ್ವಾನ್ಸ್ ಮಾಹಿತಿ ಅಥವಾ ಇನ್ನೇನೋ ಪೋಸ್ಟ್ ಮಾಡಿ ತನಿಖೆಗೆ ತೊಂದರೆ ಮಾಡ್ಬೇಡಿ. ಕಾರು ಇನ್ನೂ ವಶಕ್ಕೆ ಸಿಕ್ಕಿಲ್ಲ. ಸಿಸಿಟಿವಿ ಫೂಟೇಜ್ನಲ್ಲಿ ಕಾರು ನಂಬರ್ ತುಂಬಾ ಕ್ಲಿಯರ್ ಆಗಿ ಕಾಣೋದಿಲ್ಲ.
ಹಾಗಾಗಿ ಬಣ್ಣ ಮತ್ತು ಆ ಬ್ರಾಂಡ್ ಎಷ್ಟು ವರ್ಷದಿಂದ ಚಾಲ್ತಿಯಲ್ಲಿದೆ. ಮತ್ತು ಯಾವ ಕಡೆಗಳಲ್ಲಿ ಅದು ಎಲ್ಲಿಗೆಲ್ಲ ಸೇಲ್ ಆಗಿದೆ ಅನ್ನುವ ಮಾಹಿತಿಯನ್ನು ನಾವು 2-3 ದಿನದಿಂದ ಕಲೆ ಹಾಕುತ್ತಿದ್ದೇವೆ. ಒಂದು ಮುಖ್ಯವಾದ ಕೆಲಸಕ್ಕೆ ಉಪಯೋಗಿಸುತ್ತೇವೆ ಎಂಬಂತೆ ಆರೋಪಿ ಮತ್ತೆ ಈ ಚಾಲಕನ ನಡುವೆ ಮುಖ್ಯವಾಗಿ ಒಂದು ಚರ್ಚೆ ನಡೆದಿದೆ.
ಈತ ಒಂದು ದಿನದ ಬಾಡಿಗೆಗೆ ವಾಹನ ಕೊಟ್ಟು ಹಣ ತಗೋತ್ತಿದ್ದ. ಹೆಚ್ಚಿಗೆ ಬೇಕಾದ್ರು ಕೇಳು ಕೊಡ್ತೀವಿ ಅನ್ನುವ ಹಾಗೆ ಮಾತಾಡಿದ್ರು ಎಂಬ ವಿಚಾರವನ್ನು ಆತ ಬಹಿರಂಗಪಡಿಸಿದ್ದಾನೆ.
ಇವನು ಒಬ್ಬನೇ ಇದ್ದುದರಿಂದ ಮನಸ್ಸಿಗೆ ಬಂದಂತೆ ಹೇಳ್ತಾನೆ ಅದನ್ನ ಕೊಲಾಬರೇಟ್ ಮಾಡ್ಲಿಕ್ಕೆ ಇನ್ನೊಬ್ಬ ಸಿಕ್ಕಿದ್ರೆ ನಮಗೆ ತನಿಖೆಗೆ ಅನುಕೂಲವಾಗುತ್ತದೆ.
ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರಲ್ಲಿ ಮತ್ತು ಸಾರ್ವಜನಿಕರಲ್ಲಿ ಕೂಡಾ ‘ಅವ್ರನ್ನು ಅರೆಸ್ಟ್ ಮಾಡಿದ್ದಾರೆ, ಇವ್ರನ್ನು ಅರೆಸ್ಟ್ ಮಾಡಿದ್ದಾರೆ ಅಂತ ಸುಳ್ಳು ಸುದ್ದಿ ಹಬ್ಬಿಸಬೇಡಿ.
ಇದೊಂದು ಗಂಭೀರ ಪ್ರಕರಣ ಆಗಿರುವುದರಿಂದ ಆತಂಕ ಉಂಟು ಮಾಡಿದೆ. ವದಂತಿಗಳಿಗೆ ಕಿವಿ ಕೊಡುವುದು ಬೇಡ. ಹಾಗೇನಾದ್ರು ಅಪ್ಡೇಟ್ಸ್ ಇದ್ರೆ ಅಧಿಕೃತವಾಗಿ ಪೊಲೀಶ್ ಇಲಾಖೆ ನೀಡುತ್ತೆ, ನಾನೇ ಹೇಳ್ತೇನೆ.
ನಿನ್ನೆ ನಡೆದ ಶಾಂತಿಸಭೆಯಲ್ಲಿ ಕೂಡಾ ಹಲವರ ಅಹವಾಲು ಸಾಮಾಜಿಕ ಜಾಲತಾಣ ನಿಯಂತ್ರಣದಲ್ಲಿ ಇರಬೇಕು ಎಂದೇ ಆಗಿತ್ತು. ನಮ್ಮ ಆದ್ಯತೆ ಪ್ರಕರಣ ಪತ್ತೆ ಮಾಡುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು.
ಹಾಗಾಗಿ ನಮ್ಮ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಮಂಗಳೂರು ನಗರ ಮತ್ತು ದ.ಕ ಜಿಲ್ಲೆಯಲ್ಲಿ 5 ಪ್ರಕರಣ ದಾಖಲಿಸಿಕೊಂಡಿದೆ.
ಅದೇ ರೀತಿಯಾಗಿ ಇನ್ನೂ ಒಂದು ಕೊಲೆಗೆ ಹತ್ತು ಕೊಲೆಯಾಗ್ಬೇಕು ಅನ್ನುವಂತದ್ದು ಕೂಡಾ ಇದೆ. ಇದರಲ್ಲಿ ವಾಟ್ಸಾಪ್ ನಲ್ಲಿ, ವಾಟ್ಸಾಪ್ ಗ್ರೂಪ್ನಲ್ಲಿ, ಕಮೆಂಟ್ ಹಾಕುವಲ್ಲಿ ಕೂಡಾ ಇದೆ.
ಗುಂಪಿನಲ್ಲಿ ಗೋವಿಂದ ಅನ್ನುವ ರೀತಿ ಯಾರು ಏನು ಮಾಡಿದ್ದಾರೆ ಅದನ್ನು ಕೂಢಾ ನಾವು ಡಾಕ್ಯುಮೆಂಟ್ ಮಾಡಿದ್ದೇವೆ’ ಎಂದು ಅನೇಕ ಮಾಹಿತಿಯನ್ನು ಹಂಚಿಕೊಂಡರು.
DAKSHINA KANNADA
ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!
ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.
ಏನಿದು ತ್ರಿಶೂರ್ ಪೂರಂ ಹಬ್ಬ
ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.
ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ
ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.
ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ
ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ ಬಹುಶಃ ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.
ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ
ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.
DAKSHINA KANNADA
MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ
ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.
ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.
ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ