Connect with us

DAKSHINA KANNADA

ಪುತ್ತೂರು: SSLC ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಸನ್ಮಾನ

Published

on

ಪುತ್ತೂರು: SSLC ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಹಾಗೂ ಸ್ವಸಹಾಯ ಸಂಘಗಳ ಸನ್ಮಾನ ನಡೆಯಿತು.


ಪುತ್ತೂರು ತಾಲೂಕಿನ ಶಿಸ್ತು ಅಭಿವೃದ್ಧಿ ಯೋಜನಾ ಅಧಿಕಾರಿಯವರಾದ ಲತಾ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಜಲಾಡಿ ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಮೋಹಿನಿ ವಹಿಸಿದ್ದರು.

2021/22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಆಶೀಕ.ಕೆ, ಗೌರವ್ ಆರ್.ಕೆ, ಫಾತಿಮತ್ ಬುಶ್ರಾ, ವಿದ್ಯಾಶ್ರೀ ರೈ, ಇವರನ್ನು ಹಾಗೂ ವಿಕಲಚೇತನ ಮಗು ಗೌಶಿಕ್ ರೈ, ಇವರನ್ನು ಸನ್ಮಾನಿಸಿದರು.

ಸುನಿತಾ ರೈ‌ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಶಕ್ತಿ ಸಂಘದ ಸದಸ್ಯೆ ಶೋಭಾವತಿ ಯು.ರೈ ಪ್ರಾರ್ಥನೆಗೈದರು. ಯವರು ನೆರೆವೆರಿಸಿದರು.

ಪೂರ್ಣಿಮಾ ಸ್ವಾಗತ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಶೋಭಾ ರವರು ಧನ್ಯವಾದ ಅರ್ಪಿಸಿದರು. ಗೌಶಿಕ್ ರೈ ಯವರ‌ ಸನ್ಮಾನದ ಎಲ್ಲಾ ಖರ್ಚುಗಳನ್ನು ಸೂಫಿ ಬಲ್ಲಮಜಲು ಇವರು ನೀಡಿದರು.


ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಆರ್ಯಾಪು ಗ್ರಾಮ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನಾಗೇಶ್ ಹಾಗೂ ಯುವ ಉದ್ಯಮಿಗಳಾದ ಶಿವರಾಮ ಆಳ್ವಾ, ಪಂಚಾಯತ್ ಸದಸ್ಯರಾದ ಬೂಡಿಯಾರ್ ಪುರುಷೋತ್ತಮ ರೈ,

ನಾಗೇಶ್ ಕುರಿಯ, ಯಾಕುಬ್ ಕುರಿಯ, ಕಲಾವತಿ ಮಲಾರ್, ಕುರಿಯ ಶಾಲಾ SDMC ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಎಂ ಎಸ್, ಹಳೆ ವಿದ್ಯಾರ್ಥಿ ಅಶ್ರಫ್ ಕುರಿಯ, ಹಾಗೂ ಕುರಿಯ ಶಾಲಾ ಶಿಕ್ಷಕರಾದ ಜಗದೀಶ್ ಹಾಗೂ ನವಿನ್ ಸರ್,

ಅಜಲಾಡಿ‌ ಅಂಗನವಾಡಿ ಕಾರ್ಯಕರ್ತೆ ಶೋಭಾ , ಅಂಗನವಾಡಿ ಸಹಾಯಕಿಯರ ಸಂಘದ ತಾಲೂಕು ಅಧ್ಯಕ್ಷೆ ಕಮಲ, ಹಾಗೂ ಅಬ್ದುಲ್ ಕುಞ್ಙಿ ಕುರಿಯ,

ಪತ್ರಕರ್ತ ಸಮೀರ್ ಶಾಝ್ ಹಾಗೂ ಊರಿನ ಪ್ರಮುಖ ವ್ಯಕ್ತಿಗಳು ಹಾಗೂ ದಾನಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಅಧಿಕಾರಿಗಳು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending