FILM
ಚಿತ್ರರಂಗಕ್ಕೆ ಶಾಕ್; ಯಶ್ ‘ಕಿರಾತಕ’ ವಿಲನ್ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ
ಬೆಂಗಳೂರು : ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ನಟನಾಗಿ ಗಮನ ಸೆಳೆದಿದ್ದ ನಟ ಡ್ಯಾನಿಯಲ್ ಬಾಲಾಜಿ ಶುಕ್ರವಾರದಂದು (ಮಾರ್ಚ್ 29) (48) ವಿಧಿವ*ಶರಾಗಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾ*ಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಶುಕ್ರವಾರ ಡ್ಯಾನಿಯಲ್ ಬಾಲಾಜಿಗೆ ಏಕಾಏಕಿ ಹೃದಯಾ*ಘಾತ ಸಂಭವಿಸಿದ್ದು, ಕೂಡಲೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಪಾರ್ಥಿವ ಶರೀರವನ್ನು ಶನಿವಾರ ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ತಿಳಿದು ಬಂದಿದೆ.
ನಟ ಡ್ಯಾನಿಯಲ್ ಬಾಲಾಜಿ ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರಾಗಿದ್ದು, ಖಳನಾಯಕನ ಪಾತ್ರಗಳ ಮೂಲಕ ಜನಪ್ರಿಯರಾಗಿದ್ದರು. ತಮಿಳು ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರು ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಮಿಂಚಿದ್ದರು.
ಇದನ್ನೂ ಓದಿ ರೋಮ್ಯಾನ್ಸ್ ಸೀನ್ನಲ್ಲಿ ಕಂಟ್ರೋಲ್ ತಪ್ಪಿದವರು..!
ಡ್ಯಾನಿಯಲ್ ಬಾಲಾಜಿ ಕನ್ನಡದಲ್ಲಿ ಕಿರಾತಕ, ಶಿವಾಜಿನಗರ, ಬೆಂಗಳೂರು ಅಂಡರ್ವರ್ಲ್ಡ್ ಹಾಗೂ ಡವ್ ಸಿನಿಮಾಗಳಲ್ಲಿ ನಟಿಸಿ ಖ್ಯಾತರಾಗಿದ್ದರು. ಧಾರ್ಮಿಕ ಕಾರ್ಯಗಳಲ್ಲೂ ಡ್ಯಾನಿಯಲ್ ಬಾಲಾಜಿ ಸಕ್ರಿಯರಾಗಿದ್ದು, ಅನೇಕ ದೇವಾಲಯಗಳನ್ನು ಕಟ್ಟಿಸಿದ್ದಾರೆ. ಬಾಲಾಜಿ ನಿ*ಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇನ್ನು ಡ್ಯಾನಿಯಲ್ ಬಾಲಾಜಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತಮ್ಮ ಕಣ್ಣುಗಳನ್ನು ದಾನ ಮಾರುವ ಮೂಲಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ.
FILM
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
ಬೆಂಗಳೂರು : ಬಿಗ್ ಬಾಸ್ ಕನ್ನಡ ಕಿರುತೆರೆಯಲ್ಲಿ ಬಹಳ ಸದ್ದು ಮಾಡುವ ಅತಿದೊಡ್ಡ ರಿಯಾಲಿಟಿ ಶೋ. ಹಿರಿತೆರೆ, ಕಿರುತೆರೆ, ಸಾಮಾನ್ಯ ವ್ಯಕ್ತಿ, ಸಾಧಕ ಶೋನಲ್ಲಿ ಭಾಗಿಯಾಗ್ತಾನೆ. ಈ ಶೋ ಯಾವಾಗಲೂ ಸದ್ದು ಮಾಡುತ್ತಿರುತ್ತದೆ. ಸ್ಪರ್ಧಿಗಳೂ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ, ನಟಿ ನಮ್ರತಾ ಗೌಡ ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ.
ಪ್ಲ್ಯಾನ್ ಪ್ರಕಾರ ನಡೆಯುತ್ತಿಲ್ಲ:
ನಮ್ರತಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ. ನಾಗಿಣಿ ಎಂದಾಕ್ಷಣ ತಟ್ಟನೆ ನೆನಪಾಗುವ ಹೆಸರು. ಕನ್ನಡ ಕಿರುತೆರೆಯಲ್ಲಿ ಖ್ಯಾತರಾದವರು. ನಾಗಿಣಿ ಮುಗಿಯುತ್ತಿದ್ದಂತೆ ಬಿಗ್ ಬಾಸ್ ನತ್ತ ಲಗ್ಗೆ ಇಟ್ಟರು. ಬಿಗ್ ಬಾಸ್ ನಲ್ಲಿ ಇದ್ದಾಗ ವಿನಯ್ ಗೌಡ, ನಮ್ರತಾ, ರಕ್ಷಕ್ ಬುಲೆಟ್, ಈಶಾನಿ, ಮೈಕಲ್ ಅಜಯ್ ಜೊತೆಯಾಗಿ ಇರುತ್ತಿದ್ದರು.
ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಹೊರಗೆ ಪ್ರತಿ ವಾರ ಸಿಗೋಣ, ಪಾರ್ಟಿ ಮಾಡೋಣ ಎಂದೆಲ್ಲ ಪ್ಲ್ಯಾನ್ ಮಾಡಿದ್ದರು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಆರಂಭದಲ್ಲಿ ಕೆಲವು ಬಾರಿ ಇವರು ಭೇಟಿ ಆಗಿದ್ದು ಇದೆ. ಈಗ ಆ ರೀತಿಯ ಭೇಟಿಗಳು ನಿರಂತರವಾಗಿ ನಡೆಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?
ದಿನವೂ ಸಿಗಬೇಕು ಇಲ್ಲವಾದರೆ ವಾರಕ್ಕೆ ಒಮ್ಮೆ ಆದರೂ ಸಿಗಬೇಕು ಎಂದು ಬಿಗ್ ಬಾಸ್ನಲ್ಲಿ ಪ್ಲ್ಯಾನ್ ಮಾಡಿದ್ದೀವಿ. ಆದರೆ, ಅದೆಲ್ಲ ನಡೆಯುತ್ತಿಲ್ಲ. ನನ್ನ ಸರ್ಕಲ್ನಲ್ಲಿ ಇರುವವರನ್ನು ನನ್ನ ಬರ್ತ್ ಡೇ ಕರೆದಿದ್ದೆ. ನಾನು ರೆಗ್ಯುಲರ್ ಆಗಿ ಯಾರ ಜೊತೆಗೂ ಕಂಟ್ಯಾಕ್ಟ್ ಇಲ್ಲ. ವಿನಯ್, ಈಶಾನಿ ಜೊತೆ ಆಗಾಗ ಕಾಲ್ನಲ್ಲಿ ಮಾತನಾಡುತ್ತೇನೆ. ರಕ್ಷಕ್, ಕಾರ್ತಿಕ್ ಹಾಗೂ ಇತರರು ಈವೆಂಟ್ನಲ್ಲಿ ಮಾತಾಡ್ತೀನಿ ಎಂದಿದ್ದಾರೆ.
ಕಾರು ಖರೀದಿಸಿದ ನಟಿ :
ಇತ್ತೀಚೆಗಷ್ಟೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಮ್ರತಾ ಗೌಡ, ಅಂದು ನಮ್ರತಾ ಗೌಡ ಅವರು ಹೊಸ ಕಾರೊಂದನ್ನು ಖರೀದಿಸಿದ್ದರು. ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರನ್ನು ನಮ್ರತಾ ಗೌಡ ಖರೀದಿಸಿದ್ದರು. ಈ ಕಾರಿನ ಬೆಲೆ 8 ರಿಂದ 9 ಲಕ್ಷ ರೂ. ಆಗಿದೆ. ಕಾರು ಕೊಂಡ ಸಂಭ್ರಮವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅವರ ಅಭಿಮಾನಿಗಳು ಶುಭಹಾರೈಸಿದ್ದರು.
FILM
ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್ಗೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್ ಆಗಿದ್ದು ಹಿಟ್ ಲಿಸ್ಟ್ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್ಗೆ ತಯಾರಾಗಿದೆ.
ರಿ ರಿಲೀಸ್ ಯಾವಾಗ?
ಪುನೀತ್ ರಾಜ್ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್ಎಮ್ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು. 2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್ಎನ್ ಕುಮಾರ್ ತಿಳಿಸಿದ್ದಾರೆ.
ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್ ಸಾಂಗ್ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
FILM
ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ಬಿಹಾರ್: ಯುವ ನಟಿಯೊಬ್ಬರು ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.27ರಂದು ಬಿಹಾರದಲ್ಲಿ ನಡೆದಿದೆ. ಜೋದ್ಪುರಿ ನಟಿ ಅಮೃತಾ ಪಾಂಡೆ ಆತ್ಮಹ*ತ್ಯೆಗೆ ಶರಣಾದವರು. ಆತ್ಮಹ*ತ್ಯೆಗೂ ಮೊದಲು ನಿಗೂಢಾರ್ಥದಲ್ಲಿ ವ್ಯಾಟ್ಸಪ್ ಸ್ಟೇಟಸ್ ಬರೆದು ಹಾಕಿದ್ದರು.
ಪೊಲೀಸರಿಗೆ ಅದಾಮ್ಪುರದ ದಿವ್ಯಾಧರ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮ*ಹತ್ಯೆ ನಡೆದಿದೆ ಎಂದು ಕರೆ ಬರುತ್ತದೆ. ಪೊಲೀಸರು ಬಂದು ಪರಿಶೀಲಿಸಿದಾಗ ಬೆಡ್ ಮೇಲೆ ಅಮೃತಾ ಮೃತದೇಹ ಇತ್ತು. ಇದಕ್ಕೆ ಮೊದಲು ಅಮೃತಾಳ ಸಹೋದರಿ ರೂಂ ನ ಒಳಗಡೆ ಹೋಗಿದ್ದಾರೆ. ಅಕ್ಕನನ್ನು ನೋಡಿ ಶಾಕ್ ಆಗಿದ್ದರು. ಆ ಕೂಡಲೇ ಕೆಳಗಿಳಿಸುವ ಪ್ರಯತ್ನ ಮಾಡಿದ್ದಾರೆ. ಆಗಾಗಲೇ ಸಮಯ ಮಿಂಚಿ ಹೋಗಿತ್ತು.
ಮುಂದೆ ಓದಿ..; ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!
ಅದೇನಿತ್ತು ವ್ಯಾಟ್ಸಾಪ್ ಸ್ಟೇಟಸ್ನಲ್ಲಿ..!
ಅಮೃತಾ ಸಾಯುವುದಕ್ಕೂ ಮೊದಲು ವ್ಯಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದರು. “ಅವರ ಜೀವನ ಎರಡು ದೋಣಿಗಳ ಮೇಲಿದೆ. ನಾವು ನಮ್ಮ ದೋಣಿಯನ್ನು ಮುಳುಗಿಸುವ ಮೂಲಕ ಅವರ ಮಾರ್ಗವನ್ನು ಸಡಿಲಗೊಳಿಸಿದ್ದೇವೆ” ಎಂದು ಬರೆದು ಸ್ಟೇಟಸ್ ಹಾಕಿದ್ದಾರೆ. ಇದನ್ನೆಲ್ಲಾ ಗಮನಿಸಿದಾಗ ಪತಿ ಚಂದ್ರಮಣಿ ಇನ್ನೋರ್ವಳನ್ನು ಪ್ರೀತಿಸುತ್ತಿದ್ದರೇ ಎನ್ನುವ ಅನುಮಾನ ಹುಟ್ಟಿಹಾಕಿದೆ. ಇನ್ನು ಅಮೃತಾಳ ಪತಿ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, 2022ರಲ್ಲಿ ಅಮೃತಾ ಚಂದ್ರಮಣಿಯನ್ನು ಮದುವೆ ಆಗಿದ್ದರು.
ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು
ಇನ್ನೂ ಕುಟುಂಬ ಸದಸ್ಯರು ಅಮೃತಾ ಖಿನ್ನತೆಗೆ ಒಳಗಾಗಿದ್ದಳು. ಸಿನೆಮಾದಲ್ಲಿ ಸರಿಯಾದ ಚಾನ್ಸ್ ಸಿಗುತ್ತಿಲ್ಲ ಎಂದು ಖಿನ್ನತೆ ಒಳಗಾಗಿದ್ದಳು ಎಂದು ಹೇಳಿದ್ದಾರೆ. ಅವರು ‘ಪ್ರತಿಶೋಧ’ ಹೆಸರಿನ ಸೀರಿಸ್ನಲ್ಲಿ ನಟಿಸಿದ್ದರು. ಅವರು ‘ದೀವಾನಪನ್’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಅವರ ಸಾವಿಗೆ ನಿಜಕ್ಕೂ ಖಿನ್ನತೆ ಕಾರಣವೇ ಅಥವಾ ಬೇರೆ ಏನಾದರೂ ಬೇರೆ ಕಾರಣವೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- DAKSHINA KANNADA5 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- LATEST NEWS6 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!