LATEST NEWS
ಬಿಪಿನ್ ರಾವತ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಪತನದ ಕೊನೆಯ ದೃಶ್ಯ ಸೆರೆ
ಕೂನೂರು: ತಮಿಳುನಾಡಿನ ಕೂನೂರು ಬಳಿ ನಿನ್ನೆ ನಡೆದ ಭೀಕರ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಹುತಾತ್ಮರಾಗಿದ್ದಾರೆ. ನತದೃಷ್ಟ ಹೆಲಿಕಾಪ್ಟರ್ ಪತನಕ್ಕೂ ಮುನ್ನ ಸೆರೆಯಾದ ವಿಡಿಯೋ ವೈರಲ್ ಆಗಿದೆ.
ಹೆಲಿಕಾಪ್ಟರ್ ಬರುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸ್ಥಳೀಯರು ಚಿತ್ರೀಕರಿಸಿದ್ದಾರೆ. ಆದರೆ, ಇದಾದ ಕೆಲವೇ ಹೊತ್ತಲ್ಲಿ ಹೆಲಿಕಾಪ್ಟರ್ ದೊಡ್ಡ ಶಬ್ದದೊಂದಿಗೆ ಪತನವಾಗಿದೆ ಎಂದು ಕೂನೂರು ಪ್ರದೇಶದ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ವೀಡಿಯೋವನ್ನು ಎಎನ್ಐ ಸುದ್ದಿ ಸಂಸ್ಥೆ ಟ್ವಿಟ್ಟರ್ನಲ್ಲಿ ಬಿಡುಗಡೆ ಮಾಡಿದೆ. ನಿನ್ನೆಯಿಂದ ಹಲವು ವೀಡಿಯೋಗಳು ವೈರಲ್ ಆಗುತ್ತಿದ್ದು, ಅವೆಲ್ಲವೂ ಹಳೆಯದ್ದಾಗಿದ್ದು. ಇಂದು ಬಿಡುಗಡೆಯಾದ ವೀಡಿಯೋ ನಿನ್ನೆಯದ್ದು ಎಂದು ತಿಳಿಸಿದ್ದಾರೆ.
#WATCH | Final moments of Mi-17 chopper carrying CDS Bipin Rawat and 13 others before it crashed near Coonoor, Tamil Nadu yesterday
(Video Source: Locals present near accident spot) pic.twitter.com/jzdf0lGU5L
— ANI (@ANI) December 9, 2021
LATEST NEWS
60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!
ಹೆಚ್ಚಾಗಿ ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.
ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.
ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಅನೇಕರು ಆಕೆ ಮಿಸ್ ಯುನಿವರ್ಸ್ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದಾರೆ. ಜೊತೆಗೆ ಬಗೆ ಬಗೆಯ ಕಾಮೆಂಟ್ ಬರೆಯುತ್ತಿದ್ದಾರೆ.
LATEST NEWS
ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಪುತ್ತೂರು : ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.
ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.
ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
LATEST NEWS
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ