Connect with us

BANTWAL

ವಿಟ್ಲ: ಬೆಳ್ಳಂಬೆಳಗ್ಗೆ ಹಾಳೆ ತಟ್ಟೆ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ

Published

on

ವಿಟ್ಲ: ಅಡಿಕೆ ಹಾಳೆಯ ತಟ್ಟೆ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ನಡೆದಿದೆ.


ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಕೋ ವಿಶನ್‌ ಎಂಬ ಹಾಳೆ ತಟ್ಟೆ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.


ಇಕೋ ವಿಶನ್‌ ಫ್ಯಾಕ್ಟರಿಯಿಂದ ಏಕಾ ಏಕಿ ದಟ್ಟವಾದ ಹೊಗೆ ಹೊರ ಸೂಸಲು ಆರಂಭವಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.


ಕಾರ್ಖಾನೆಯ ಆವರಣ ಪೂರ್ತಿ ಹೊಗೆ ಆವರಿಸುತ್ತಿದ್ದಂತೆ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದರು.

ಇದೇ ವೇಳೆ ವಿಟ್ಲ ಪೊಲೀಸರು ಕೂಡಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಕ್ಕೆ ಮಾರ್ಗದರ್ಶನ ನೀಡಿದರು. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.


ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಇಕೋ ವಿಶನ್‌ ಎಂಬ ಹಾಳೆ ತಟ್ಟೆ ತಯಾರಿಕಾ ಘಟಕ ಕಳೆದ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ.

 

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

BANTWAL

ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಸಾ*ವು

Published

on

ಬಂಟ್ವಾಳ: ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ.

died

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃ*ತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending