Connect with us

UDUPI

ರಾಜ್ಯದಲ್ಲೇ ಪ್ರಥಮ ಬಾರಿಗೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ…

Published

on

ಮಲ್ಪೆ: ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದ್ದು ಮಲ್ಪೆ ಬೀಚ್‌ಗೆ ಮತ್ತೊಂದು ಗರಿಯಾಗಲಿದೆ.

ಇನ್ನು ಮುಂದೆ ಬೀಚ್‌ಗೆ ಭೇಟಿ ನೀಡುವ ಪ್ರವಾಸಿಗರು ಅಲೆಗಳ ಮೇಲೆ ನಡೆಯುವ ಅನುಭವವನ್ನು ಆನಂದಿಸಬಹುದು. ಸಾಹಸ ಕ್ರೀಡೆ ಇಷ್ಟಪಡುವವರಿಗೆ ಇದು ಅಚ್ಚುಮೆಚ್ಚು.


ಕೇರಳದ ಬೇಪೋರ್ ಬೀಚ್ ನಲ್ಲಿ ಬಿಟ್ಟರೆ ಕರ್ನಾಟಕದ ಕೆಲವೊಂದು ಕಡೆ ಹಿನ್ನೀರಿನಲ್ಲಿ ಮಾತ್ರ ಕಂಡುಬಂದಿದೆ ಎನ್ನಲಾಗಿದೆ.
ಸೇತುವೆಯು 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವನ್ನು ಹೊಂದಿದ್ದು, ಹೆಚ್ಚಿನ ಸಾಂದ್ರತೆಯ ಪೊಂಟೋನ್ಸ್ ಬ್ಲಾಕ್ ಗಳಿಂದ ಮಾಡಲ್ಪಟ್ಟಿದೆ. ಇದರಲ್ಲಿ ಒಂದು ಬಾರಿಗೆ 100 ಜನರು ಸಾಗಬಹುದು.

ಸೇತುವೆಯ ಕೊನೆಯಲ್ಲಿ ಸಮುದ್ರಕ್ಕೆ ಚಾಚಿರುವ 12 ಮೀಟರ್ ಉದ್ದ 7.5 ಮೀಟರ್ ಅಗಲದ ವೇದಿಕೆ ಇದೆ. ಇದರಲ್ಲಿ 15 ನಿಮಿಷ ಕಾಲ ಕಳೆಯಲು ಅವಕಾಶ ಕಲ್ಪಿಸಲಾಗುತ್ತದೆ.

ಸೇತುವೆ ಇಕ್ಕೆಲಗಳಲ್ಲಿ 10 ಮಂದಿ ಲೈಫ್ ಗಾರ್ಡ್ ಇರುತ್ತಾರೆ. ಸ್ಥಳೀಯರು ಈ ತೇಲುವ ಸೇತುವೆಯನ್ನು ಸ್ಥಾಪಿಸಿದ್ದಾರೆ.

ಸೇತುವೆಯು ಸಮುದ್ರದ ಅಲೆಗಳ ಉಬ್ಬರಕ್ಕೆ ಮೇಲೇರಿ ಕೆಳಗಿಳಿಯುವ ಹೊಸ ಅನುಭವವನ್ನು ಇನ್ನು ಮುಮದೆ ನಮ್ಮದಾಗಿಸಬಹುದು.

LATEST NEWS

ಉಡುಪಿ ಜಿಲ್ಲಾ 2 ನೇ ಅಡೀಶನಲ್‌ ಎಸ್‌ಪಿ ಆಗಿ ಪರಮೇಶ್ವರ ಅನಂತ್‌ ಹೆಗಡೆ

Published

on

ಉಡುಪಿ: ರಾಜ್ಯ ಸರಕಾರ ಎಲ್ಲ ಜಿಲ್ಲೆಗಳಿಗೂ ಇಬ್ಬರು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು, ಅದರಂತೆ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್‌ ಹೆಗಡೆ ಅವರನ್ನು ನೇಮಕ ಮಾಡಲಾಗಿದೆ.

ಪಿ.ಎ. ಹೆಗಡೆ ಅವರು ಈ ಹಿಂದೆ ಮಂಗಳೂರು ನಗರ ಅಪರಾಧ ವಿಭಾಗ- ಸಿಸಿಬಿ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. 1994ರಲ್ಲಿ ಎಸ್‌.ಯ. ಆಗಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಅವರು, 2004ರಿಂದ 2006ರವರೆಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ, 2015ರಲ್ಲಿ ಸಿಸಿಬಿಯಲ್ಲಿ ನಿಯೋಜನೆ ಮತ್ತು ವಿಜಯ ನಗರ ಉಪವಿಭಾಗದ ಡ್ಯೂಟಿ ಎಸಿಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಂಟ್ವಾಳದಲ್ಲಿ ಉಪನಿರೀಕ್ಷಕ ಹಾಗೂ ಮೂಲ್ಕಿಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗವನ್ನು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಟಿ. ಸಿದ್ದಲಿಂಗಪ್ಪ ನೋಡಿಕೊಳ್ಳಲಿದ್ದಾರೆ. ಅಪರಾಧ ಹಾಗೂ ಡಿಎಆರ್‌ ವಿಭಾಗವನ್ನು ಪರಮೇಶ್ವರ ಅನಂತ್‌ ಹೆಗಡೆ ನೋಡಿಕೊಳ್ಳಲಿದ್ದಾರೆ.

Continue Reading

LATEST NEWS

Kundapura: ಕಾರು,ಬೈಕ್ ಢಿಕ್ಕಿ- ಖಾಸಗಿ ಬಸ್ ಚಾಲಕ ಸಾವು..!

Published

on

ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ(48) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸು ಚಾಲಕರಾಗಿರುವ ಮಹಾಬಲ ಪೂಜಾರಿ, ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು.

ಈ ವೇಳೆ ಇವರ ಬೈಕಿಗೆ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಮಹಾಬಲ ಪೂಜಾರಿ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

LATEST NEWS

Trending