Connect with us

    LATEST NEWS

    ಮೊದಲ ರಾತ್ರಿ ವಿಡಿಯೋ ವೈರಲ್; ಪತಿಯಿಂದ ಪತ್ನಿಗೆ ಬ್ಲ್ಯಾಕ್‌ಮೇಲ್…ಏನಿದು ಪ್ರಕರಣ ?

    Published

    on

    ಮಂಗಳೂರು/ರಾಯಚೂರು: ಮೊದಲ ರಾತ್ರಿಯ ವಿಡಿಯೋ ಮಾಡಿ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ರಾಯಚೂರಿನ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ಆರೋಪ ಕೇಳಿಬಂದಿದೆ.

    ಈ ಕುರಿತು ರಾಯಚೂರು ಜಿಲ್ಲೆ ಮಾನ್ವಿ ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

    ಫಸ್ಟ್ ನೈಟ್ ವಿಡಿಯೋ ರೆಕಾರ್ಡ್ ಮಾಡಿ ಇಟ್ಟುಕೊಂಡಿರುವ ಪತಿ, ತನ್ನ ವಿರುದ್ಧ ಮಾತನಾಡಿದರೆ ಖಾಸಗಿ ಕ್ಷಣದ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಾನ್ವಿ ವಿಭಾಗದ ಜೆಸ್ಕಾಂನಲ್ಲಿ ಮೇಲ್ವಿಚಾರಕ ಹುದ್ದೆಯಲ್ಲಿರುವ ಗುರುರಾಜ್ ಎಂಬವರ ವಿರುದ್ಧ ದೂರು ದಾಖಲಾಗಿದೆ.

    ಮದುವೆಯ ಹಿನ್ನಲೆ :

    ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಗುರುರಾಜ್​ನನ್ನು ನಂಬಿ ಮದುವೆಯಾಗಿದ್ದಾಳೆ. ಗುರುರಾಜ್ ತನ್ನ ಚಾಲಕನನ್ನು ಬಳಸಿಕೊಂಡು ಸಾಕಷ್ಟು ಜನರಿಗೆ ಪತ್ನಿಯ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ತೋರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಕೆಲವು ಮಂದಿ ಬೇರೆ ಹೆಣ್ಣುಮಕ್ಕಳಿಗೂ ಇದೇ ರೀತಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಮತ್ತೊಬ್ಬನ ಬಳಿ ಹೆಂಡತಿಯನ್ನು ಕಳುಹಿಸಲು ಮುಂದಾಗಿದ್ದ ಭೂಪ:

    ತಮಗೆ ಯಾರ ಬಳಿ ಕೆಲಸ ಆಗತ್ತದೆಯೋ ಅಂಥವರ ಬಳಿ ಹೋಗು ಎಂದು ಗುರುರಾಜ್ ಪತ್ನಿಗೆ ಟಾರ್ಚರ್ ಕೊಟ್ಟಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯರಿಗೆ ಅಶ್ಲೀಲವಾಗಿ ವಿಡಿಯೋ ಕಾಲ್ ಮಾಡಿರುವ ಸಾಕ್ಷಿಗಳಿವೆ ಎಂದೂ ಸಂತ್ರಸ್ತೆ ಆರೋಪಿಸಿದ್ದಾರೆ. ಜತೆಗೆ, ಈಗಾಗಲೇ ಪತಿ ಗುರುರಾಜ್ ನಾಲ್ಕು ಮದುವೆ ಆಗಿದ್ದಾರೆ. ತಾನಗೆ ಕೋಟಿಗಟ್ಟಲೇ ಲಾಭ ಬರತ್ತದೆ ಎಂದು ನಂಬಿಸಿ ಮದುವೆಯಾಗಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

    ಸಾಕಷ್ಟು ಬಾರಿ ಪತ್ನಿ ಮೇಲೆ ದಾಳಿ ಮಾಡಿದ್ದು, ರಕ್ಷಣೆಯ ಕೋರಿಕೆ ಕುರಿತು ಮಾನ್ವಿ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

    LATEST NEWS

    ಟ್ರೆಂಡಿಂಗ್ ಹೆಸರಲ್ಲಿ ಕೋಟಿ ಕೋಟಿ ವಂಚನೆ; ಬ್ಯಾಂಕ್ ಮ್ಯಾನೇಜರ್ ಸಹಿತ 8 ಜನ ಅರೆಸ್ಟ್

    Published

    on

    ಮಂಗಳೂರು/ಬೆಂಗಳೂರು; ಟ್ರೆಡಿಂಗ್ ಹೆಸರಿನಲ್ಲಿ 265 ಜನರಿಗೆ 97 ಕೋಟಿ ರೂಪಾಯಿ ವಂಚನೆ ಮಾಡಿದ 8 ಜನರನ್ನು ಬಂಧಿಸಲಾಗಿರುವ ಘಟನೆ ಬೆಂಗಳುರಿನಲ್ಲಿ ನಡೆದಿದೆ.


    ಸ್ವಲ್ಪ ಬುದ್ದಿ ಖರ್ಚು ಮಾಡಿ ಇನ್ವೆಸ್ಟ್ ಮಾಡಿದ್ರೆ, ಹಾಕಿದ್ದ ಹಣಕ್ಕೆ ಒಳ್ಳೆ ರಿಟರ್ನ್ ಸಿಗೋ ಮಾರ್ಗ ಇರುತ್ತವೆ. ಅದರೆ ಟ್ರೆಡಿಂಗ್ ಹೆಸರಿನಲ್ಲಿ ಬರೊಬ್ಬರಿ 265 ಜನರಿಗೆ 97 ಕೋಟಿ ರೂಪಾಯಿ ನಾಮ ಹಾಕಲಾಗಿದೆ.‌ ಈ ಸ್ಕ್ಯಾಮ್ ನಲ್ಲಿ ಖಾಸಗಿ ಬ್ಯಾಂಕ್ ಮ್ಯಾನೇಜರ್ ಶಾಮೀಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.‌ ವ್ಯಕ್ತಿಯೊಬ್ಬರು ನೀಡಿದ ದೂರಿನ‌ ಆಧಾರದಲ್ಲಿ ಪ್ರಕರಣ ಭೇದಿಸಿದ ಪೊಲೀಸರು ಬ್ಯಾಂಕ್ ಮ್ಯಾನೇಜರ್ ಸಹಿತ 8 ಜನರನ್ನ ಬಂಧಿಸಿದ್ದಾರೆ.‌

    ಬ್ಯಾಂಕ್ ಮ್ಯಾನೇಜರ್ ಕಿಶೋರ್ ಸಾಹು, ಸೇಲ್ಸ್ ಮ್ಯಾನ್ ಗಳಾದ ಮನೋಹರ್, ಕಾರ್ತಿಕ್, ರಾಕೇಶ್ ಪೊಲೀಸರ ಬಲೆಗೆ ಬಿದಿದ್ದಾರೆ.‌ ಹಾಗೂ ಅಕೌಂಟ್ ಹೊಲ್ಡರ್ ಗಳಾದ ರಘುರಾಜ್, ಕಾರ್ತಿಕ್, ಲಕ್ಷ್ಮಿಕಾಂತ, ಕೆಂಚೇಗೌಡ ಹಾಗು ಮಾಲಾ ಎಂಬಾಕೆಯನ್ನ ಪೊಲೀಸರು ಬಂಧಿಸಿದ್ದಾರೆ.

    ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ ಮಾಡಲು ಜನರಿಗೆ l ಸೇಲ್ಸ್ ಮ್ಯಾನ್ ಪ್ರಚೋದನೆ ನೀಡ್ತಿದ್ದರು. ಆಕರ್ಷಕ ಸ್ಕೀಂಗಳನ್ನ ನಂಬಿದ ಜನರು ಲಕ್ಷಾಂತರ ಹಣವನ್ನು ಹೂಡಿಕೆ ಮಾಡ್ತಿದ್ದು, ನಂತರ ಟ್ರೇಡಿಂಗ್ ಅಕೌಂಟ್ ನಲ್ಲಿ ಕೋಟಿ ಲೆಕ್ಕದಲ್ಲಿ ಹಣ ತೋರಿಸಿ ವಂಚನೆ ಮಾಡಿದ್ದರು.

    ಅದೇ ರೀತಿ ದೂರುದಾರನ ಟ್ರೇಡಿಂಗ್ ಅಕೌಂಟ್ ನಲ್ಲಿ 28 ಕೋಟಿ ತೋರಿಸಿ, ಡ್ರಾ ಮಾಡಿಕೊಳ್ಳಲು 75 ಲಕ್ಷ ಕೊಡಬೇಕು ಎಂದು ಆಸೇ ತೋರಿಸಿ ಗ್ರಾಹಕರಿಂದ ಹಣ ಹಾಕಿಸಿಕೊಳ್ಳುತ್ತಿದ್ದರು.

    ಗ್ರಾಹಕರು ಟ್ರಾನ್ಸ್ಫರ್ ಮಾಡುವ ಹಣವು ನಾಗರಭಾವಿಯಲ್ಲಿರುವ ಖಾಸಗಿ ಬ್ಯಾಂಕ್ ನ ಟ್ರೇಡಿಂಗ್ ಅಕೌಂಟ್ ಗೆ ಬೀಳುತ್ತಿತ್ತು. ಈ ಅಕೌಂಟ್ ಹೋಲ್ಡರ್ ಆಗಿ ಕೆಂಚೇಗೌಡ, ಮಾಲ, ಲಕ್ಷ್ಮಿಕಾಂತ ಹಾಗೂ ರಘು ಹೆಸರಿನಲ್ಲಿದ್ದು, ಇದಕ್ಕೆ ಸಾಥ್ ನೀಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಕಿಶೋರ್ ಸಾಹು, ಕಮೀಷನ್ ರೂಪದಲ್ಲಿ ತನ್ನ ಅಕೌಂಟ್‌ಗೆ ಟ್ರಾನ್ಸ್ಫರ್ ಮಾಡಿಕೊಲ್ಳುತ್ತಿದ್ದ.

    ಸದ್ಯ ಆರು ಜನರ ಅಕೌಂಟ್ ನಲ್ಲಿದ್ದ 28 ಲಕ್ಷ ಹಣವನ್ನ ಫ್ರೀಝ್ ಮಾಡಲಾಗಿದೆ. ಮತ್ತಷ್ಟು ವಂಚನೆಯಾಗಿರುವುದರ ಬಗ್ಗೆ ಮಾಹಿತಿ ಇದ್ದು ಸೈಬರ್ ಪೊಲೀಸರು ಮತ್ತಷ್ಟು ವಿಚಾರಣೆ ಮುಂದುವರೆಸಿದ್ದಾರೆ.

    Continue Reading

    LATEST NEWS

    ಉಡುಪಿ: ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿ ಪೊಲೀಸರ ವಶಕ್ಕೆ

    Published

    on

    ಉಡುಪಿ: ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿ ನಗರದ ಜಿಟಿಎಸ್ ಶಾಲೆಯ ಎದುರಿನ ವಿದ್ಯಾಜ್ಯೋತಿ ಕಟ್ಟಡದಲ್ಲಿರುವ ಕಬ್ರಾಲ್ ಗನ್ ಹೌಸ್ ನಡೆದಿದೆ.

    ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಸುಳಿವಿನ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ.

    ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆವರಣದಲ್ಲಿದ್ದ ಒಟ್ಟು 40 ಕೆ.ಜಿ. ಪಟಾಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ರೊನಾಲ್ಡ್ ಜಿ. ಕ್ಯಾಬ್ರಾಲ್ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೆ ಈ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದು, ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇನ್ನು ಪರವಾನಗಿ ಇಲ್ಲದಿರುವುದರಿಂದ ಈ ಸ್ಫೋಟಕಗಳ ಶೇಖರಣೆಯು ಕಾನೂನುಬಾಹಿರ ಎಂದು ಪೊಲೀಸರು ತಿಳಿಸಿದ್ದಾರೆ.

    Continue Reading

    LATEST NEWS

    ಘೋರ ದುರಂ*ತ : ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸೇರಿ ಮೂವರು ಸಾ*ವು!

    Published

    on

    ಮಂಗಳೂರು/ರಾಯಚೂರು:  ಹೊಲದ ಬದುವಿಗೆ ಹಾಕಿದ್ದ ಬೃಹತ್ ಗಾತ್ರದ ಬಂಡೆಯೊಂದು ಉರುಳಿ ಬಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಸಾ*ವನ್ನಪ್ಪಿರುವ ಘಟನೆ ಲಿಂಗಸುಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ನಡೆದಿದೆ.

    8 ವರ್ಷದ ವೈಶಾಲಿ, 9 ವರ್ಷದ ಮಂಜುನಾಥ್, 23 ವರ್ಷದ ರಘು ಮೃ*ತ ದುರ್ದೈವಿಗಳು. ಇಬ್ಬರು ಸ್ಥಳದಲ್ಲೇ ಇಹಲೋಕ ತ್ಯಜಿಸಿದ್ದು, ಗಂಭೀ*ರವಾಗಿ ಗಾಯಗೊಂಡಿದ್ದ ರಘು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃ*ತಪಟ್ಟಿದ್ದಾನೆ.

    ಇದನ್ನೂ ಓದಿ : WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದರು. ಈ ಸಂದರ್ಭ ದುರ್ಘ*ಟನೆ ಸಂಭವಿಸಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending