Connect with us

DAKSHINA KANNADA

ಕುಕ್ಕೆಯಲ್ಲಿ ದೇವರ ನೈವೇದ್ಯ ಸ್ವೀಕರಿಸದೆ ದೇವರ ಮೀನುಗಳು ತೆರಳಿದ್ದು ಯಾಕೆ..!?

Published

on

ಕುಕ್ಕೆಯಲ್ಲಿ ದೇವರ ನೈವೇದ್ಯ ಸ್ವೀಕರಿಸದೆ ದೇವರ ಮೀನುಗಳು ತೆರಳಿದ್ದು ಯಾಕೆ..!?

ಕಡಬ : ದೈವ ಹಾಕಿದ ನೈವೇದ್ಯ ಸ್ವೀಕರಿಸಲು ಈ ಬಾರಿ ಕುಕ್ಕೇ ಶ್ರೀ ಕ್ಷೇತ್ರದಲ್ಲಿ ದೇವರ ಮೀನುಗಳೇ ಇರಲಿಲ್ಲ. ಮೀನುಗಳು ಇರದಿರುವುದನ್ನು ಕಂಡು ದೈವವೂ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಪವಾಡಗಳಿಗೆ ಮತ್ತು ಹಲವಾರು ವೈಶಿಷ್ಟ್ಯಗಳಿಗೆ ಹೆಸರಾದ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರಂತೆ ಮೀನುಗಗಳು ಕೂಡ ಜಾತ್ರೆ ನೋಡಲು ಬರುವುದು ಇಲ್ಲಿನ ವಿಶಿಷ್ಠತೆಯಾಗಿದೆ.

ಶ್ರೀ ಕ್ಷೇತ್ರದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ನಡೆಯುವ ಚಂಪಾ ಷಷ್ಠಿಗೆ ಮತ್ತು ಜಾತ್ರೋತ್ಸವಕ್ಕೆ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ.

ಈ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಂದರ್ಭ ದೇವಾಲಯದ ಕುಮಾರಧಾರ ಸ್ನಾನ ಘಟ್ಟಕ್ಕೆ ಮೀನುಗಳು ಅತಿಥಿಗಳಾಗಿ ಬರುವುದು ಕೂಡ ಒಂದಾಗಿದೆ.

ದೇವಸ್ಥಾನದಲ್ಲಿ ಜಾತ್ರೆಯ ಸಂದರ್ಭ ಕೊಪ್ಪರಿಗೆ ಏರುವ ದ್ವಾದಶಿಯಂದು , ದೂರದ ಏನೆಕಲ್ಲು- ಸಂಕಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮೀನುಗಳು ಇಲ್ಲಿಗೆ ಬರುತ್ತದೆ.

ಜಾತ್ರೆ ಮುಗಿಯುವವರೆಗೂ ಇಲ್ಲೇ ಕಂಡು ಬರುವ ಈ ಮೀನುಗಳು ದೇವಸ್ಥಾನದ ಜಾತ್ರೋತ್ಸವದ ಕೊನೆಯಲ್ಲಿ ನಡೆಯುವ ದೈವದ ಕೋಲದ ಬಳಿಕ ತಮ್ಮ ಸ್ವಸ್ಥಾನಕ್ಕೆ ಮರಳುವುದು ಇಲ್ಲಿ ಪ್ರತಿವರ್ಷ ನಡೆಯುವ ವಾಡಿಕೆಯಾಗಿದೆ.

ದೈವವು ಬಂದು ನದಿಗೆ ನೈವೇದ್ಯ ಹಾಕಿದ ಬಳಿಕ ಅದನ್ನು ತಿಂದು ಅವುಗಳು ಮತ್ತೆ ಬಂದಲ್ಲಿಗೆ ಮರಳುತ್ತವೆ.

ದೇವಸ್ಥಾನದ ಆವರಣದಲ್ಲಿ ನಡೆಯುವ ಪುರುಷರಾಯ ದೈವದ ಕೋಲದ ಬಳಿಕ ಈ ದೈವವು ದೇವಸ್ಥಾನದಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಕುಮಾರಧಾರಾ ಸ್ನಾನಘಟ್ಟದ ಬಳಿಗೆ ಬಂದು ದೇವರ ಮೀನುಗಳಿಗೆ ನೈವೇದ್ಯ ಹಾಕುತ್ತದೆ.

ಆದರೆ ಈ ಬಾರಿ ದೈವ ಹಾಕಿದ ನೈವೇದ್ಯ ಸ್ವೀಕರಿಸಲು ದೇವರ ಮೀನುಗಳೇ ಇರಲಿಲ್ಲ. ಮೀನುಗಳು ಇರದಿರುವುದನ್ನು ಕಂಡು ದೈವವೂ ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ.

ಕುಮಾರಧಾರಾ ಸ್ನಾನಘಟ್ಟದಲ್ಲಿ ಭಕ್ತರಿಗೆ ತೀರ್ಥಸ್ನಾನ ನೆರವೇರಿಸಲು ನೀರನ್ನು ಶೇಖರಿಸಲು ಮೀನುಗಳಿಂದ ತುಂಬಿದ್ದ ಸ್ನಾನಘಟ್ಟದ ಬಳಿ ಜೆಸಿಬಿ ಬಳಸಿ ಹೂಳು ತೆಗೆಯಲಾಗಿತ್ತು.
ಯಂತ್ರಗಳ ಶಬ್ದಕ್ಕೆ ಬೆಚ್ಚಿದ್ದ ಮೀನುಗಳು ಸ್ನಾನಘಟ್ಟದಿಂದ ಬೇರಡೆಗೆ ಸ್ಥಳಾಂತರಗೊಂಡಿದೆ. ತೀರ್ಥಸ್ನಾನ ನೆರವೇರಿಸುವ ಸ್ನಾನಘಟ್ಟದ ಬಳಿ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ಆರಂಭಕ್ಕೆ ಮೊದಲೇ ಹೂಳು ತೆಗೆಯುವ ವ್ಯವಸ್ಥೆಯನ್ನು ಪ್ರತೀ ವರ್ಷ ಮಾಡಲಾಗುತ್ತಿತ್ತು.

ಆದರೆ ಈ ಬಾರಿ ಜಾತ್ರೆ ಆರಂಭಗೊಂಡು ಮೀನುಗಳು ಸ್ನಾನಘಟ್ಟದ ಬಳಿ ಬಂದ ಬಳಿಕ ಹೂಳು ತೆಗೆಯುವ ಕಾಮಗಾರಿ ನಡೆಸಲಾಗಿದೆ. ಇದರಿಂದಾಗಿ ಮೀನುಗಳು ಜಾತ್ರೆ ಕಳೆದ ನೈವೇದ್ಯ ಸ್ವೀಕರಿಸುವ ಮೊದಲೇ ಬೇರೆಡೆಗೆ ಹೋಗಿವೆ.

ದೇವರ ಮೀನುಗಳಿಗಾಗಿಯೇ ಸುಬ್ರಹ್ಮಣ್ಯ ದೇವರ ನೈವೇದ್ಯ ತರುವ ದೈವಕ್ಕೂ ಈ ಬಾರಿ ನಿರಾಶೆಯಾಗಿದೆ. ಈ ವಿಚಾರವಾಗಿ ದೈವವು ತನ್ನ ಅಸಮಾಧಾನವನ್ನು ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಮುಂದೆಯೂ ತೋರಿಸಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending