Connect with us

DAKSHINA KANNADA

ಉಳ್ಳಾಲದ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆ ಬೋಟು ದುರಂತ!ಇಬ್ಬರ ಶವ ಪತ್ತೆ ಉಳಿದವರ ಹುಡುಕಿಕೊಡಲು ಒತ್ತಾಯ

Published

on

ಉಳ್ಳಾಲದ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆ ಬೋಟು ದುರಂತ!ಇಬ್ಬರ ಶವ ಪತ್ತೆ ಉಳಿದವರ ಹುಡುಕಿಕೊಡಲು ಒತ್ತಾಯ

ಮಂಗಳೂರು:ಆಳ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟು ಅಳಿವೆಬಾಗಿಲಿನಲ್ಲಿ ನೀರುಪಾಲಾಗಿ ಆರು ಜನರು ಕಣ್ಮರೆಯಾಗಿದ್ದರು.  ಅದರಲ್ಲಿ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ.ಈ ನಡುವೆ ಉಳಿದ ಮೀನುಗಾರರ ಮೃತದೇಹವನ್ನು ಪತ್ತೆ ಹಚ್ಚಿಕೊಡುವಂತೆ ನಾಗರಿಕರು  ಪ್ರತಿಭಟನೆ ನಡೆಸಿದ್ದಾರೆ. ಜನಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆಗೆ ಎಲ್ಲಾ ನೆರವು ನೀಡುವಂತೆ ಸಾಮಾಜಿಕ ಮುಖಂಡ ಮುನೀಬ್ ಬೆಂಗ್ರೆ ಅವರು ಆಗ್ರಹಿಸಿದ್ದಾರೆ.ಪ್ರಸ್ತುತ ಉಳಿದ ನಾಲ್ವರು ಮೀನುಗಾರರ ಮೃತದೇಹ ಪತ್ತೆಯಾಗುವವರೆಗೂ ಇಲ್ಲಿ ಮೀನುಗಾರಿಕೆಗೆ ಯಾವುದೇ  ಅವಕಾಶ ಮಾಡಿ ಕೊಡುವುದಿಲ್ಲ ಎಂದು ಬೆಂಗರೆ ನಾಗರಿಕರು ನಿನ್ನೆ ಮಧ್ಯರಾತ್ರಿ ದಿಢೀರ್ ಶಾಂತಿಯುತ ಪ್ರತಿಭಟನೆ ನಡೆಸಿದ್ದಾರೆ.ಮೀನುಗಾರಿಕೆಗೆ ತೆರಳಿ ಇಂತಹ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಕರಾವಳಿ ರಕ್ಷಣಾ ಪಡೆ ಯಾವುದೇ ರೀತಿಯ ಶೋಧನೆಯನ್ನು ನಡೆಸದೆ , ಸ್ಥಳೀಯವಾಗಿ ಇತರ ಮೀನುಗಾರರು, ಮುಳುಗು ತಜ್ಞರು ಮಾಡಿದ ಕೆಲಸವನ್ನು ನಾವೇ ಮಾಡಿದ್ದು , ಎಂದು ಹೇಳಿಕೊಂಡು  ಬರ್ತಾ ಇದ್ದಾರೆ.ತಮ್ಮ ಜೀವದ ಹಂಗು ತೊರೆದು ಆಳ ಸಮುದ್ರದಲ್ಲಿ ಮೀನುಗಾರಿಕೆ ಗೆ ತೆರಳಿ ಮೀನು ಹಿಡಿದು ದಡ ಸೇರುತ್ತಾರೆ, ಇಲ್ಲಿ ಮೀನುಗಾರನಿಗೆ ಯಾವುದೇ ಸೌಲಭ್ಯ ಒದಗಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಮೀನುಗಾರರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇಂದು ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ, ಯಾವುದೇ ಬೇರೆ ಚಟುವಟಿಕೆ ನಡೆಯಲು ಬಿಡುವುದಿಲ್ಲ  ಮೀನುಗಾರರು ಪತ್ತೆಯಾಗುವವರೆಗೂ ಪ್ರತಿಭಟನೆ ನಡೆಸುವುದಾಗಿ   ನಗರ ಪಾಲಿಕೆ ಸದಸ್ಯ ಮುನೀಬ್ ಬೆಂಗರೆ ಎಚ್ಚರಿಸಿದ್ದಾರೆ.

ಇಂದು ನಸುಕಿನಿಂದಲೇ ಪೊಲೀಸರ ತಂಡ ಮತ್ತು ಮುಳುಗು ತಜ್ಞರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.

, ಕಾಂಗ್ರೆಸ್ ಮುಖಂಡ ಬಿಲಾಲ್ ಮೊಯ್ಯೂದ್ದೀನ್ ಹಾಗೂ ಸ್ಥಳೀಯ ನಾಯಕರು ಮತ್ತು ಸಾರ್ವಜನಿಕರು  ಭಾಗವಹಿಸಿದ್ದರು.

Updates

ಮಂಗಳೂರು:

ಮೀನುಗಾರಿಕೆಗೆ ಹೋಗಿದ್ದ ಶ್ರೀ ರಕ್ಷಾ ಹೆಸರಿನ ಬೋಟು ಅಳಿವೆ ಬಾಗಿಲಿನಲ್ಲಿ ನೀರುಪಾಲಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇಂದು ನಸುಕಿನ ಜಾವ ಹುಡುಕಾಟ ಶುರು ಮಾಡಿದ ಮೀನುಗಾರಿಕಾ ತಂಡಕ್ಕೆ ಮೂರನೇ ಶವ ಪತ್ತೆಯಾಗಿದೆ.ಸೋಮವಾರ ಸಂಜೆ ದುರಂತ ಸಂಭವಿಸಿದ ವೇಳೆ ಒಟ್ಟು 6 ಮಂದಿ ಕಣ್ಮರೆಯಾಗಿದ್ದರು. ಬೋಟ್ ಮುಳುಗಡೆಯಾದ ಜಾಗದ ಸ್ವಲ್ಪ ದೂರದಲ್ಲಿ ಬಲೆಯೊಳಗೆ ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಮೃತ ಮೀನುಗಾರರನ್ನು ಅನ್ಸರ್ ಎಂದು ಖಚಿತ ಪಡಿಸಲಾಗಿದೆ. ಇವರು ಮಂಗಳೂರಿನ ಬೆಂಗ್ರೆ ನಿವಾಸಿ.ತಣ್ಣೀರುಬಾವಿ ಮುಳುಗು ತಜ್ಞರ ತಂಡದಿಂದ ಕಾರ್ಯಾಚರಣೆ ನಡೆಸಿದಾಗ ಅನ್ಸಾರ್ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಬೊಕ್ಕಪಟ್ಣ ಪಾಂಡುರಂಗ ಸುವರ್ಣ ಮತ್ತು ಬೊಕ್ಕಪಟ್ಣ ಪ್ರೀತಂ ಅವರ ಮೃತದೇಹ ಪತ್ತೆಯಾಗಿತ್ತು.ಅತ್ಯಂತ ಬಡ ಕುಟುಂಬದಿಂದ ಬಂದಿರುವ ಮುಹಮ್ಮದ್‌ ಅನ್ಸಾರ್‌ ಮೀನುಗಾರಿಕೆಯಲ್ಲಿ ತೊಡಗಿ ತಮ್ಮ ಜೀವನವನ್ನು ನಿರ್ವಹಣೆ ಮಾಡುತ್ತಿದ್ದರು.

ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಇವರಿಗೆ ಮೂವರು ಪುತ್ರರು, ಪುತ್ರಿ ಇದ್ದಾರೆ. ಮನೆಗೆ ಇವರು ಆಧಾರ ಸ್ಥಂಭವಾಗಿದ್ದರು.

ಇವರು ಈ ಹಿಂದೆ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಕುಟುಂಬ ಸಲಹುವಷ್ಟು ವೇತನ ಸಿಗದ ಹಿನ್ನೆಲೆಯಲ್ಲಿ ಅವರು ಮೀನುಗಾರಿಕೆ ಕಾರ್ಮಿಕರಾಗಿ ದುಡಿಯುತ್ತಿದ್ದರು.

ಇವರನ್ನು ಕಳೆದುಕೊಂಡಿರುವ ಮನೆ ಮಂದಿಯ ರೋದನ ಮುಗಿಲು ಮುಟ್ಟಿದೆ. ಅನ್ಸಾರ್ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ಅವರ ಪತ್ನಿ ಮೂರ್ಛೆ ಹೋಗಿದ್ದರು.

updates

ಮಂಗಳೂರು: ದುರಂತ ಸಂಭವಿಸಿದ ನಿನ್ನೆ ಬೊಕ್ಕಪಟ್ಣ ಬೆಂಗ್ರೆಯ ಪಾಂಡುರಂಗ ಸುವರ್ಣ (58) ಮತ್ತು ಪ್ರೀತಂ (25) ಎಂಬುವವರ ಮೃತದೇಹ ಪತ್ತೆಯಾಗಿತ್ತು.

ಸಮುದ್ರದ ಅಲೆಗಳ ಏರಿಳಿತ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತು ಸಂಜೆಯಾದ ಕಾರಣ ರಕ್ಷಣಾ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಇದರಂತೆ ಇಂದು ಬೆಳಿಗ್ಗೆ ಪುನಃ ಕಾರ್ಯಾಚರಣೆ ಆರಂಭಿಸಿ ಮತ್ತಿಬ್ಬರ ಮೃಹದೇಹವನ್ನು ಮೇಲಕ್ಕೆತ್ತಿದ್ದಾರೆ. ಮತ್ತಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಪ್ರಸ್ತುತ ಪತ್ತೆಯಾಗಿರುವ ನಾಲ್ವರ ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending