Connect with us

    DAKSHINA KANNADA

    2024ರ ಪ್ಯಾರಿಸ್‌ ಒಲಿಂಪಿಕ್ಸ್ ನಲ್ಲಿ ಐವರು ಆಳ್ವಾಸ್ ಹಳೆ ವಿದ್ಯಾರ್ಥಿಗಳು..!

    Published

    on

    ಮಂಗಳೂರು:  ಪ್ಯಾರಿಸ್‌ನಲ್ಲಿ ಇಂದು ಆರಂಭಗೊಳ್ಳಲಿರುವ ಒಲಿಂಪಿಕ್ಸ್ ಅಥ್ಲೆಟಿಕ್ಸ್‌ನಲ್ಲಿ ನಮ್ಮ ಕರಾವಳಿಯ ಹೆಜ್ಜೆ ಗುರುತುಗಳು ಕಾಣಲಿವೆ.

    ಹೌದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ವಿದ್ಯಾರ್ಥಿಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. 4×400 ರಿಲೇಯಲ್ಲಿ ಪೂವಮ್ಮ ರಾಜು, ಸಂತೋಷ್ ಕುಮಾರ್ ತಮಿಳರಸನ್, ಸುಭಾ ವೆಂಕಟೇಶನ್ ಮತ್ತು ಮಿಜೋ ಚಾಕೋ ಕುರಿಯನ್ ಹಾಗೂ ಟ್ರಿಪಲ್ ಜಂಪ್‌ನಲ್ಲಿ ಪ್ರವೀಣ್ ಸಿ ಭಾಗವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕ್ರೀಡಾಸಕ್ತಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿಕೊಂಡು ಬಂದಿದ್ದು, ಕ್ರೀಡಾಪ್ರತಿಭೆಗಳಿಗೆ ಉಚಿತ ಶಿಕ್ಷಕಣದ ಅವಕಾಶವನ್ನು ಕಲ್ಪಿಸಿದ್ದರು. ತಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಾಧನೆಗೆ ಆಳ್ವಾಸ್ ಪ್ರತಿಷ್ಠಾನದ ಡಾ ಮೋಹನ್ ಆಳ್ವ ಸಂಸತ ವ್ಯಕ್ತಪಡಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.

    ಪೂವಮ್ಮ ರಾಜು ಕರ್ನಾಟಕದ ಕೊಡಗು ಮೂಲದವರಾಗಿರುವ ಇವರು 2016ರ ಒಲಿಂಪಿಕ್ಸ್‌ನಲ್ಲಿ ಭಾರತ ತಂಡದ ಸದಸ್ಯರಾಗಿದ್ದರು. 2014 ಮತ್ತು 2018ರ ಏಷ್ಯನ್ ಗೇಮ್ಸ್ ಹಾಗೂ 2013 ಮತ್ತು 2017ರ ಚಾಂಪಿಯನ್‌ಶಿಪ್‌ನಲ್ಲಿ 100 ಮೀ.ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದರು. ಆಳ್ವಾಸ್ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಅವರು 2012ರ ಅಖಿಲ ಭಾರತ ವಿಶ್ವವಿದ್ಯಾಲಯ ಕೂಟದಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ 400 ಮೀಟರ್‌ಗಳಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು. ಇದೀಗ 4×400 ಮೀಟರ್ಸ್‌ ರಿಲೇಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

    ಸಂತೋಷ್ ತಮಿಳರಸನ್ ತಮಿಳುನಾಡಿನವರಾಗಿದ್ದು 2017ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ 400 ಹರ್ಡಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. 2017ರಲ್ಲಿ ಆಳ್ವಾಸ್ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದ ಸಂತೋಷ್ ತಮಿಳರಸ್ ಗುಂಟೂರಿನಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಯಲ್ಲಿ 400 ಮೀ.ಹರ್ಡಲ್ಸ್ ಮತ್ತು 400 ಮೀ. ರಿಲೇಯಲ್ಲಿ ಮಂಗಳೂರು ವಿವಿಗೆ ಚಿನ್ನದ ಪದಕ ಗೆದ್ದಿದ್ದರು. ಪ್ಯಾರೀಸ್ ಒಲಿಂಪಿಕ್ಸ್‌ ನಲ್ಲಿ ಸಂತೋಷ್ ರಿಲೇ 4×400 ತಂಡದ ಸದಸ್ಯರಾಗಿದ್ದು ಭಾರತವನ್ನು ಪ್ರತಿನಿಧಿಸಲಿದ್ದಾರೆ.

    ಸುಭಾ ವೆಂಕಟೇಶನ್ ತಮಿಳುನಾಡಿನ ತಿರುಚಿರಾಪಳ್ಳಿ ಮೂಲದವರಾಗಿದ್ದು 2019ರ ಚಾಂಪಿಯನ್‌ಶಿಪ್‌ನಲ್ಲಿ 4×400 ರಿಲೇಯಲ್ಲಿ ಭಾರತೀಯ ಜರ್ಸಿಯನ್ನು ಧರಿಸಿದ್ದರು. 2022ರ ಏಷ್ಯನ್ ಗೇಮ್ಸ್‌ನಲ್ಲಿ 4×400 ಮೀಟರ್ ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 2017ರಲ್ಲಿ ಆಳ್ವಾಸ್ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದರು. ಸುಭಾರವರು ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ 4×400 ಮೀ ರಿಲೇ ತಂಡದ ಸದಸ್ಯರಾಗಿದ್ದಾರೆ.

    ಪ್ರವೀಣ್ ಚಿತ್ರವೇಲ್ ತಮಿಳುನಾಡಿನವರಾಗಿದ್ದು ಟ್ರಿಪಲ್ ಜಂಪ್‌ನಲ್ಲಿ ರಾಷ್ಟ್ರೀಯ ದಾಖಲೆ ಮಾಡಿದ್ದಾರೆ. 2018ರಲ್ಲಿ ಯೂತ್ ಒಲಿಂಪಿಕ್ಸ್, 2022ರ ಕಾಮನ್‌ ವೆಲ್ತ್‌ ಆಟ, 2022 ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಇವರು ಇದೀಗ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸುತ್ತಿದ್ದಾರೆ. 2017ರಲ್ಲಿ ಆಳ್ವಾಸ್ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದ ಇವರು ಅಖಿಲ ಭಾರತ ವಿಶ್ವವಿದ್ಯಾಲಯದ ಕೂಟದಲ್ಲಿ ಟ್ರಿಪಲ್ ಜಂಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ.

    ಮಿಜೋ ಚಾಕೋ ಕುರಿಯನ್ ಕೇರಳ ಮೂಲದವರಾಗಿದ್ದು, 2022ರ ಏಷ್ಯನ್ ಗೇಮ್ಸ್‌ನಲ್ಲಿ 4×400 ರಿಲೇ ತಂಡದ ಸದಸ್ಯರಾಗಿದ್ದರು. 2016ರಲ್ಲಿ ಕೊಯಮತ್ತೂರಿನ ಆಳ್ವಾಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಮಿಜೋ ಅಖಿಲ ಭಾರತ ವಿಶ್ವವಿದ್ಯಾಲಯ ಕೂಟದಲ್ಲಿ 800 ಮೀಟರ್ಸ್ ಮತ್ತು 400 ಮೀಟರ್‌ಗಳಲ್ಲಿ ಪದಕ ವಿಜೇತರಾಗಿದ್ದರು. 2022ರಲ್ಲಿ ಕರ್ನಾಟಕ ರಾಜ್ಯ ಕ್ರೀಡಾಪಟು ಎಂದು ಆಯ್ಕೆ ಮಾಡಲಾಗಿದೆ. ಉತ್ತಮ ಸಮಯ 46.1 ಸೆಕೆಂಡ್ ಈ ವಾಯುಪಡೆಯ ತಾರೆ ಪ್ಯಾರಿಸ್ ಒಲಿಂಪಿಕ್ಸ್‌ ರಿಲೇ ತಂಡದ ಸದಸ್ಯರಾಗಿದ್ದಾರೆ.

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending