Connect with us

LATEST NEWS

ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದು ಹಾಕಿದ್ದ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

Published

on

ಬೆಂಗಳೂರು: ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಿದ್ದ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದು ಹಾಕಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.


‘ನೃಪತುಂಗ ರಸ್ತೆ ಹಾಗೂ ಹಡ್ಸನ್‌ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರವಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಫ್ಲೆಕ್ಸ್ ಅಳವಡಿಸಲಾಗಿತ್ತು. ಶನಿವಾರ ರಾತ್ರಿ ಸ್ಥಳಕ್ಕೆ ಹೋಗಿದ್ದ ಪುನೀತ್ ಕೆರೆಹಳ್ಳಿ ಹಾಗೂ ಇತರರು, ಫ್ಲೆಕ್ಟ್ ಹರಿದು ಹಾಕಿದ್ದಾರೆ.
ಇದರ ವಿರುದ್ಧ ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ದೂರು ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಬಂಧಿಸಲಾಗಿದೆ. ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ.
‘ಫ್ಲೆಕ್ಸ್ ಹರಿದು ಹಾಕುತ್ತಿರುವ ದೃಶ್ಯವನ್ನು ಆರೋಪಿಗಳೇ ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಅದೇ ವಿಡಿಯೊವನ್ನು ಪುರಾವೆಯಾಗಿ ಪರಿಶೀಲಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

Click to comment

Leave a Reply

Your email address will not be published. Required fields are marked *

LATEST NEWS

ನಟಿ ಅಮೂಲ್ಯ ಮಾವನ ಮನೆಗೆ ಚುನಾವಣಾ ಅಧಿಕಾರಿಗಳ ದಾಳಿ.. 31 ಲೀಟರ್ ಮದ್ಯ ವಶ..!!

Published

on

ಬೆಂಗಳೂರು: ನಟಿ ಅಮೂಲ್ಯ  ಅವರ ಮಾವ ರಾಜರಾಜೇಶ್ವರಿ ನಗರ  ಮಾಜಿ ಕಾರ್ಪೋರೇಟರ್ ರಾಮಚಂದ್ರಪ್ಪರವರ  ಮನೆ ಮೇಲೆ ಎ.24ರಂದು ರಾತ್ರಿ ಚುನಾವಣಾ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಆರ್ ನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮನೆಯಲ್ಲಿ ಶೋಧ ಮಾಡಿದ್ದಾರೆ. ರಾತ್ರಿ ‌10 ಗಂಟೆ ಸುಮಾರಿಗೆ 10 ವಾಹನಗಳಲ್ಲಿ ಬಂದಿದ್ದ 30ಕ್ಕೂ ಹೆಚ್ಚು ಚುನಾವಣಾ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ರಾಮಚಂದ್ರ, ನಟಿ ಅಮೂಲ್ಯ ಮತ್ತು ಪತಿ ಜಗದೀಶ್ ಮನೆಯಲ್ಲೇ ಇದ್ದರು. ಚುನಾವಣಾ ಅಧಿಕಾರಿ, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ನಡೆದ ಜಂಟಿ ದಾಳಿಯಲ್ಲಿ ಸತತ 4 ಗಂಟೆಗಳ ಕಾಲ‌ ಶೋಧ‌ ನಡೆಸಿದ್ದಾರೆ.

amulya

31 ಲೀಟರ್ ಮದ್ಯ ವಶ:

ಇನ್ನು ಚುನಾವಣಾ ಅಧಿಕಾರಿಗಳ ದಾಳಿ ವೇಳೆ ರಾಮಚಂದ್ರಪ್ಪ ಅವರ ನಿವಾಸದಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿಲ್ಲ ಬದಲಾಗಿ 31 ಲೀಟರ್ ಮದ್ಯವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಚಂದ್ರಪ್ಪ ಮೊಮ್ಮಕ್ಕಳ ಹುಟ್ಟುಹಬ್ಬಕ್ಕಾಗಿ ಮದ್ಯ ತರಿಸಿದ್ದೆವು. ಆದರೆ ಚುನಾವಣೆ ಹಿನ್ನೆಲೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಆಗುವುದಿಲ್ಲ. ಇದೀಗ ಮದ್ಯವನ್ನು ವಶಕ್ಕೆ ಪಡೆದಿದದ್ದಾರೆ. ಇನ್ನು ವಶಕ್ಕೆ ಪಡೆದಿದ್ದಾರೆ ಎನ್ನುವುದಕ್ಕೆ ನನ್ನ ಸಹಿಯನ್ನು ಪಡೆದುಕೊಂಡು ಹೋಗಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಲೀಡ್ ಬರುತ್ತೆ. ಇದನ್ನು ಸಹಿಸಲಾಗದ ಕೆಲವರು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಕಾಂಗ್ರೆಸ್ ಹಣವನ್ನು ಹಂಚಿಕೆ ಮಾಡುತ್ತಿತ್ತು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ‌ ದಾಳಿ ಮಾಡಿದ್ದಾರೆ ಎಂದು ದೂರಿದರು.

amulya

ಮುಂದೆ ಓದಿ..; ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

ಅಧಿಕಾರಿಗಳಿಗೆ ಪದೇ ಪದೇ ಬರುತ್ತಿದ್ದ ಫೋನ್ ಕಾಲ್:

ದಾಳಿ ವೇಳೆ ಆರ್‌ಓಗೆ ಪದೇ ಪದೇ ಫೋನ್ ಬರುತಿತ್ತು. ಅವರನ್ನು ಎರಡು ದಿನ ಒಳಗಡೆ ಹಾಕಿಸಿ ಎಂದು ಫೋನಿನಲ್ಲಿ ಇದ್ದ ವ್ಯಕ್ತಿ ಹೇಳುತ್ತಿದ್ದರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆ ಮದ್ಯ ತರಿಸಿದ್ದೆ. ‌‌ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಆಚರಿಸಬಾರದು ಎಂದು ಸುಮ್ಮನೆ ಆಗಿದ್ದೆವು. ಏನೋ ದೊಡ್ಡದಾಗಿ ಸಿಗುತ್ತೆ ಎಂದು ಕೂಲ್ ಆಗಿ ಬಂದ ಅಧಿಕಾರಿಗಳು ಹಾಟ್ ಆಗಿ ಹೊರ ನಡೆದರು ಎಂದು ರಾಮಚಂದ್ರಪ್ಪ ಹೇಳಿದ್ದಾರೆ.

 

Continue Reading

DAKSHINA KANNADA

ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!

Published

on

ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.

ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್‌ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಇದು ಕೋವಿಡ್‌ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!

ಏನಿದು ಹಕ್ಕಿ ಜ್ವರ?

ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.

ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಮತದಾರರ ಚೀಟಿಯಲ್ಲಿ ಕ್ಯೂಆರ್‌ ಕೋಡ್! ಮಂಗಳೂರು ದಕ್ಷಿಣ ಉತ್ತರದಲ್ಲಿ ಅನುಷ್ಠಾನ

Published

on

ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್‌ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ ಮಾಹಿತಿ ನೀಡಲು ಮುಂದಾಗಿದೆ.

ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ದ.ಕ. ಜಿಲ್ಲೆಯ ನಗರಕ್ಕೆ ಹೊಂದಿಕೊಂಡಿರುವ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ಇದರಂತೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರದಲ್ಲಿ ಸ್ಲಿಪ್ ಮೂಲಕ ಮತದಾರರಿಗೆ ಮತಗಟ್ಟೆಯ ವಿವರ ಒದಗಿಸಲಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗುವ ನಿರೀಕ್ಷೆ ಹೊಂದಲಾಗಿದೆ.

ಮತದಾರರ ಸ್ಲಿಪ್‌ನಲ್ಲಿ ಮತಗಟ್ಟೆಯ ವಿವರ ನಗರದಲ್ಲಿನ ಅನೇಕರಿಗೆ ಮತಗಟ್ಟೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಮತದಾನಕ್ಕಾಗಿ ಮತಗಟ್ಟೆಗಳನ್ನು ಅರಸಿಕೊಂಡು ಹೋಗಬೇಕಾಗುತ್ತದೆ. ಇದನ್ನು ನೀಗಿಸಲು ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕ್ಯಾನ್ ಮಾಡಿದ ವೇಳೆ ಮಯಗಟ್ಟೆಯ ಲೊಕೇಷನ್ ಪಡೆಯಬಹುದು. ಈ ಮೂಲಕ ಮತಗಟ್ಟೆ ಹುಡುಕಿ ತೆರಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ.

Continue Reading

LATEST NEWS

Trending