LATEST NEWS
ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಇನ್ನಿಲ್ಲ..!
ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಇನ್ನಿಲ್ಲ..!
ಬ್ಯೂನಸ್ ಐರಿಸ್ : ಫುಟ್ಬಾಲ್ ದಂತ ಕಥೆ, ಕೋಟ್ಯಾಂತರ ಕ್ರೀಡಾಭಿಮಾನಿಗಳ ಆರಾಧ್ಯ ದೈವ ಅರ್ಜೈಂಟಿನಾದ ಡಿಯಾಗೋ ಮರಡೋನಾ ವಿಧಿವಶರಾಗಿದ್ದಾರೆ.
60 ವರ್ಷದ ಮರಡೋನಾ ಖಾಸಗಿ ಆಸ್ಪತ್ರೆಯಲ್ಲಿ ಹೃದಯಸ್ಥಂಭನಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಡಿಯಾಗೋ ಮರಡೋನಾ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಇದೀಗ ಹಠಾತ್ ನಿಧನರಾಗುವ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ.
1986 ರ ವಿಶ್ವಕಪ್ ವಿಜೇತ ಮರಡೋನಾ ಅವರಿಗೆ ಭಾರತವೂ ಸೇರಿದಂತೆ ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳಿದ್ದರು.
2018 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಮರಡೋನಾ ಈ ಸಂದರ್ಭದಲ್ಲಿ 2008 ರಲ್ಲಿ ಕೋಲ್ಕತ್ತಾಗೆ ಭೇಟಿ ನೀಡಿದ್ದನ್ನು ಮೆಲುಕು ಹಾಕಿದ್ದರು.
ಫುಟ್ಬಾಲ್ ನಿಂದ ನಿವೃತ್ತಿಗೊಂಡ ಬಳಿಕ ಅರ್ಜೈಂಟಿನಾದ ಮುಖ್ಯ ಕೋಚ್ ಆಗಿಯೂ ಮರಡೋನಾ ಕಾರ್ಯ ನಿರ್ವಹಿಸಿದ್ದರು.
ಕಾಲ್ಚೆಂಡಿನ ಆಟದ ಲೋಕದಲ್ಲಿ ಮಿಂಚಿ ಅತ್ಯಂತ ಕಲರ್ಫುಲ್ ಲೈಪ್ ಎಂಜಾಯ್ ಮಾಡಿದ್ದ ಮರಡೋನಾ ಇನ್ನು ನೆನಪು ಮಾತ್ರ. ಫುಟ್ಬಾಲ್ ಇತಿಹಾಸದಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ಮರಡೋನಾರ ಬದುಕಲ್ಲಿ ಹಲವು ಸ್ವಾರಸ್ಯಕರ ಘಟನೆಗಳು, ವಿವಾದಾತ್ಮಕ ಘಟನೆಗಳು ನಡೆದು ಹೋಗಿದ್ದವು.
ಸಾಮಾನ್ಯವಾಗಿ ಮರಡೋನಾ ಅಂದ ಕೂಡಲೇ ನೆನಪಾಗೋದೇ ಒಂದು ಫುಟ್ಬಾಲ್.. ಇನ್ನೊಂದು ಅವರ ವಿವಾದತ್ಮಕ ಬದುಕುಗಳು ನೆನಪಾಗುತ್ತವೆ. ಫುಟ್ಬಾಲ್ ಜಗತ್ತಿನ ಬ್ಯಾಡ್ ಬ್ಯಾಯ್ ಎಂದೇ ಕರೆಸಿಕೊಳ್ತಿದ್ದ ಮರಡೋನಾ ಅವರನ್ನ ‘ದೋಷಪೂರಿತ ಪ್ರತಿಭೆ’ ಅಂದವರೂ ಇದ್ದಾರೆ. ಹೀಗಿದ್ದೂ ಅವರನ್ನ ಬೆಂಬಲಿಸುವವರ ಸಂಖ್ಯೆ ಮಾತ್ರ ಲೆಕ್ಕಕ್ಕೆ ಸಿಗಲ್ಲ. ಅದಕ್ಕೆ ಕಾರಣ ಅವರ ಮಿಂಚಿನ ಆಟ, ಅವರಿಗಿದ್ದ ಅತ್ಯದ್ಭುತ ಪ್ರತಿಭೆ.
1986ರಲ್ಲಿ ಅರ್ಜೆಂಟೀನಾ ಮತ್ತು ಇಂಗ್ಲೆಂಡ್ ನಡುವಿನ ಕ್ವಾರ್ಟರ್-ಫೈನಲ್ ಪಂದ್ಯದ ವೇಳೆ ಅವರು ವಿವಾದಾತ್ಮಕ ಗೋಲ್ ಒಂದನ್ನ ಗಳಿಸಿದರು. ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ವಿವಾದಾತ್ಮಕ ಗೋಲು ಇದಾಗಿದೆ ಅಂತಾ ಹೇಳಲಾಗುತ್ತದೆ. ಗೋಲ್ ಕೀಪರ್ ಪೀಟರ್ ಶಿಲ್ಟನ್ನನ್ನು ದಾಟಿದ ಅವರು ತಮ್ಮ ಕೈಯಿಂದ ಚೆಂಡನ್ನ ಹೊಡೆದು ಗೋಲ್ ಮಾಡಿದ್ದರು ಅದನ್ನ ಅವರು ಹ್ಯಾಂಡ್ ಆಫ್ ಗಾಡ್ ಅಂತಾ ಕರೆದಿದ್ರು.
ಮಾದಕ ವಸ್ತುಗಳ ಚಟಕ್ಕೆ ಬಿದ್ದಿದ್ದರಿಂದ ತಮ್ಮ ವೃತ್ತಿ ಜೀವನದಲ್ಲಿ ಸ್ವಲ್ಪ ಏರುಪೇರು ಅನುಭವಿಸಿದರು. 1982ರಲ್ಲಿ ಮಾದಕ ದ್ರವ್ಯ ವಸ್ತುಗಳನ್ನ ಸೇವನೆ ಮಾಡಿ ಸಿಕ್ಕಿಹಾಕಿಕೊಂಡರು. 1991ರಲ್ಲೂ ಸಿಕ್ಕಿಬಿದ್ದರು. ಇದರಿಂದ 15 ತಿಂಗಳ ಕಾಲ ನಿಷೇಧಕ್ಕೆ ಒಳಗಾದರು. ಅಲ್ಲದೇ 1994ರ ಫುಟ್ಬಾಲ್ ವಿಶ್ವಕಪ್ನಲ್ಲಿ ಡ್ರಗ್ಸ್ ಸೇವಿಸಿರೋದು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನ ಮನೆಗೆ ಕಳುಹಿಸಲಾಗಿತ್ತು.
ಅಂದ್ಹಾಗೆ ಮರಡೋನಾ 1983ರಲ್ಲಿ ಸ್ಪೇನ್ಗೆ ತೆರಳಿದ್ದರು. ಅಲ್ಲಿಂದ ದುಶ್ಚಟಗಳಿಗೆ ದಾಸರಾಗಿದ್ದರು ಅಂತಾ ಹೇಳಲಾಗುತ್ತದೆ. ಒಮ್ಮೆ ಮಾದಕ ವಸ್ತುಗಳಿಗೆ ಅಡಿಕ್ಟ್ ಆದ ಮರಡೋನಾ ಅವರು, ಅದರಿಂದ ಹೊರ ಬರಲಾಗದೇ ಪರದಾಡಿದರು. ಇದರ ಪರಿಣಾಮ ಇತ್ತೀಚೆಗಿನ ದಿನಗಳಲ್ಲಿ ಅವರ ತೂಕ 130 ಕೆಜಿಯಿಂದ ವಿಪರೀತ ಏರಿಕೆ ಕಂಡಿತ್ತು. ಇದರ ಪರಿಣಾಮ ಆರೋಗ್ಯ ಸಮಸ್ಯೆಯನ್ನ ಎದುರಿಸಿದರು. 2007 ಹೆಪಟೈಟಸ್ಗೆ ಚಿಕಿತ್ಸೆಗೆ ಒಳಗಾಗದ ಅವರು, ಕೊನೆಗೆ ಗ್ಯಾಸ್ಟ್ರಿಕ್ಟ್ ಸಮಸ್ಯೆ ಹಿನ್ನೆಲೆಯಲ್ಲಿ ಬೈಪಾಸ್ ಸರ್ಜರಿಗೆ ಒಳಗಾಗಿದ್ದರು. ಅಲ್ಲದೆ 2019 ರಲ್ಲಿ ಹೊಟ್ಟೆಯೊಳಗೆ ಇವರಿಗೆ ರಕ್ತಸ್ರಾವ ಕೂಡ ಸಂಭವಿಸಿತ್ತು.
FILM
ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್
ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.
ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.
ಬಿಗ್ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್. ಈಗ ಗುಟ್ಟು ರಟ್ಟಾಗಿದೆ.
‘ವರ್ತೂರ ಸಂತೋಷ್ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.
ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore5 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್