Connect with us

LATEST NEWS

ಅನ್ಯಧರ್ಮೀಯ ಕಲಾವಿದೆ ನೃತ್ಯ ಪ್ರದರ್ಶನಕ್ಕೆ ನಕಾರ: ಪ್ರತಿಭೆಗೂ ಬೇಲಿಯಾಯ್ತ ಧರ್ಮದ ಅಮಲು..?

Published

on

ತಿರುವನಂತಪುರ: ಕರ್ನಾಟಕದಲ್ಲಿ ಜಾತ್ರೆ, ಹಬ್ಬ ಮತ್ತು ದೇವಸ್ಥಾನಗಳ ಸುತ್ತಮುತ್ತ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ಒತ್ತಾಯಗಳ ಬೆನ್ನಲ್ಲೇ, ಕೇರಳದಲ್ಲಿ ಹಿಂದೂ ಅಲ್ಲ ಎಂಬ ಕಾರಣಕ್ಕೆ ದೇವಸ್ಥಾನದ ಉತ್ಸವವೊಂದರಲ್ಲಿ ಶಾಸ್ತ್ರೀಯ ನೃತ್ಯಗಾರ್ತಿಯೊಬ್ಬರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.


ಮದ್ರಾಸ್ ವಿ.ವಿಯಿಂದ ಎಂ.ಎ ಭರತನಾಟ್ಯಂ ಕೋರ್ಸ್‌ನಲ್ಲಿ ಮೊದಲ ರ‍್ಯಾಂಕ್ ಪಡೆದ ಶಾಸ್ತ್ರೀಯ ನೃತ್ಯಗಾರ್ತಿ ಮಾನ್ಸಿಯಾ ವಿ.ಪಿ ಅವರು ಹಿಂದೂ ಅಲ್ಲ ಎಂಬ ಕಾರಣಕ್ಕೆ ತ್ರಿಶ್ಶೂರು ಜಿಲ್ಲೆಯ ಇರಿಂಜಲಕುಡ್ಡದಲ್ಲಿರುವ ಕೂಡಲ್‌ಮಾಣಿಕ್ಯಂ ದೇವಸ್ಥಾನದಲ್ಲಿ ನೃತ್ಯ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.

ಈ ವಿಚಾರದ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ದೇವಸ್ಥಾನದ ಈ ನಿರ್ಧಾರಕ್ಕೆ ಕೇರಳದ ಮಾಜಿ ಆರೋಗ್ಯ ಸಚಿವೆ ಹಾಗೂ ಸಿಪಿಎಂ ಹಿರಿಯ ನಾಯಕಿ ಕೆ.ಕೆ ಶೈಲಜಾ ಅವರು ಸೇರಿದಂತೆ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಬ್ಬದ ಉತ್ಸವದ ಭಾಗವಾಗಿ ಏಪ್ರಿಲ್ 21ರಂದು ಮಾನ್ಸಿಯ ಅವರ ನೃತ್ಯ ಪ್ರದರ್ಶನ ನಿಗದಿಯಾಗಿತ್ತು. ಈ ಕುರಿತು ಜಾಹೀರಾತನ್ನು ದೇವಸ್ಥಾನ ಪ್ರಕಟಿಸಿತ್ತು.

ಆದರೆ ಕೆಲ ದಿನಗಳ ಬಳಿಕ ಹಿಂದೂ ಧರ್ಮಕ್ಕೆ ಸೇರಿದವರು ಅಲ್ಲ ಎಂಬ ಕಾರಣಕ್ಕೆ ದೇವಸ್ಥಾನದಲ್ಲಿ ನೃತ್ಯಕ್ಕೆ ಅವಕಾಶ ನೀಡಲಾಗದು ಎಂದು ಮಾನ್ಸಿಯಾ ಅವರಿಗೆ ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ದೇವಸ್ಥಾನದ ಸಂಪ್ರದಾಯದ ಪ್ರಕಾರ ಹಿಂದೂ ಧರ್ಮದ ನಂಬಿಕಸ್ತರಿಗೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶ ನೀಡಲಾಗುತ್ತದೆ. ನೃತ್ಯದ ವೇದಿಕೆ ದೇವಸ್ಥಾನದ ಒಳಗಿರುವ ಕಾರಣ ಮಾನ್ಸಿಯಾ ಅವರ ನೃತ್ಯಕ್ಕೆ ಅವಕಾಶ ನೀಡಲಾಗದು ಎಂದು ಕೆಲ ಮಾಧ್ಯಮ ಪ್ರತಿನಿಧಿಗಳಿಗೆ ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನದ ಹಬ್ಬದ ಉತ್ಸವದಲ್ಲೂ ಇದೇ ಕಾರಣಕ್ಕೆ ನನ್ನ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು ಎಂದು ಮಾನ್ಸಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.

DAKSHINA KANNADA

ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!

Published

on

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

DAKSHINA KANNADA

Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

Published

on

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.

ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.

ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.

 

 

Continue Reading

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

LATEST NEWS

Trending