LATEST NEWS
ಚಿರತೆ ಸೆರೆ ಹಿಡಿಯುವಲ್ಲಿ ವಿಫಲವಾದ ಅರಣ್ಯ ಇಲಾಖೆ; ಗ್ರಾಮಸ್ಥರು ಏನು ಮಾಡಿದ್ರು ಗೊತ್ತಾ!?
ಮಂಗಳೂರು / ರಾಯಚೂರು : ಕಾಡಿನಿಂದ ನಾಡಿಗೆ ಚಿರತೆ ಬರೋದು ಇತ್ತೀಚೆಗೆ ಸಾಮಾನ್ಯವಾಗಿ ಕೇಳಿ ಬರೋ ಸುದ್ದಿ. ಚಿರತೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗುತ್ತೆ. ಇಲಾಖೆಯವರು ಬೋನಿಟ್ಟು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಮಾಡುತ್ತಾರೆ. ಆದರೆ, ರಾಯಚೂರಿನಲ್ಲಿ ಮಾತ್ರ ಭಿನ್ನವಾದ ಘಟನೆ ನಡೆದಿದೆ.
ಚಿರತೆ ಹಿಡಿದು ಕೊಂದ ಗ್ರಾಮಸ್ಥರು :
ಜಮೀನಿಗೆ ತೆರಳುತ್ತಿದ್ದ ಮೂವರ ಮೇಲೆ ಮಾರ*ಣಾಂತಿಕವಾಗಿ ದಾಳಿ ಮಾಡಿದ ಚಿರತೆಯನ್ನು ಸ್ಥಳೀಯರು ಹೊಡೆದು ಕೊಂ*ದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ರೈತರ ಮೇಲೆ ಚಿರತೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಚಿರತೆಯ ಬಂಧನಕ್ಕೆ ಅರಣ್ಯ ಇಲಾಖೆಗೆ ಒತ್ತಡ ಹಾಕಿದ್ದರು. ಆದ್ರೆ, ಅರಣ್ಯ ಇಲಾಖೆ ಚಿರತೆಯನ್ನು ಹಿಡಿಯಲು ಹರಸಾಹಸ ಪಟ್ಟರೂ ಚಿರತೆ ಕೈಗೆ ಸಿಕ್ಕಿರಲಿಲ್ಲ. ಅರಣ್ಯ ಇಲಾಖೆಯ ಕಾರ್ಯಾಚರಣೆ ವೇಳೆ ಸಾವಿರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದ ಕಾರಣ ಲಾಠಿ ಚಾರ್ಜ್ ಕೂಡ ನಡೆಸಲಾಗಿತ್ತು. ಇದಾದ ಬಳಿಕ ಮತ್ತಷ್ಟು ಆಕ್ರೋಶಗೊಂಡ ಜನರು ತಾವೇ ಚಿರತೆ ಹಿಡಿಯಲು ಮುಂದಾಗಿದ್ದಾರೆ.
ಇದನ್ನೂ ಓದಿ : ಧೋನಿ ಬರ್ತ್ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್
ಕೈನಲ್ಲಿ ಬಡಿಗೆ ಹಿಡಿದು ಕಾರ್ಯಾಚರಣೆ ನಡೆಸಿದ ಗ್ರಾಮಸ್ಥರು ಚಿರತೆಯನ್ನು ಹೊಡೆದು ಕೊಂ*ದಿದ್ದಾರೆ. ಬಳಿಕ ಚಿರತೆಯನ್ನು ತಂದು ಪಶು ಅಂಬ್ಯುಲೆನ್ಸ್ಗೆ ಹಾಕಿದ್ದಾರೆ. ಅರಣ್ಯ ಅಧಿಕಾರಿಗಳ ಮುಂದೆಯೇ ಈ ಘೋರ ಕೃ*ತ್ಯ ನಡೆದಿದ್ದರೂ ಅಧಿಕಾರಿಗಳು ಮಾತ್ರ ಅಸಹಾಯಕರಾಗಿ ನೋಡಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಪ್ರಕರಣದ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
LATEST NEWS
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
ಮಂಗಳೂರು/ಆಗ್ರಾ: ಶಿಕ್ಷಕರಿಗೆ ಗುರು ಸ್ಥಾನ ನೀಡಿ ಆರಾಧಿಸುವುದು ನಮ್ಮ ಸಂಸ್ಕೃತಿ. ನಮ್ಮ ತಪ್ಪನ್ನು ತಿದ್ದುತ್ತಾ, ಸದಾ ನಮ್ಮ ಒಳಿತನ್ನೇ ಬಯಸುವ ನಿಸ್ವಾರ್ಥ ಜೀವಕ್ಕೆ ವಿದ್ಯಾರ್ಥಿಗಳು ಚಿರಋಣಿಗಳಾಗಿ ಇರಬೇಕು. ಆದರೆ ಇಲ್ಲಿ, ವಿದ್ಯಾರ್ಥಿಗಳು ಶಾಲಾ ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಬಳಸಿ ಬ್ಲಾಕ್ಮೇಲ್ ಮಾಡಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆಘಾತಕಾರಿ ಘಟನೆ ನಡೆದಿದೆ.
ಶಿಕ್ಷಕಿಯು ಮಥುರಾ ಶಾಲೆಯಲ್ಲಿ ಪಾಠ ಮಾಡುತ್ತಿದ್ದು, ಹಿಂದಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಎಲ್ಲಾ ರೀತಿಯ ಸಹಕಾರ ಮಾಡುತ್ತಿದ್ದರು.
ವಿದ್ಯಾರ್ಥಿಯೊಬ್ಬ ಕಾಲಕ್ರಮೇಣ ಆಕೆಗೆ ಹತ್ತಿರವಾಗಿ ತನ್ನ ಮೊಬೈಲ್ ಫೋನ್ನಿಂದ ಅ*ಶ್ಲೀಲ ವಿಡಿಯೋ ಮಾಡಿ, ಬಳಿಕ ತನ್ನೊಂದಿಗೆ ಶಾ*ರೀರಕ ಸಂಬಂಧ ಬೆಳೆಸುವಂತೆ ಬ್ಲಾಕ್ಮೇಲ್ ಮಾಡಿದ್ದಾನೆ. ಈ ಹಿನ್ನಲೆಯಿಂದಾಗಿ ಶಿಕ್ಷಕಿಯು ಆತನಿಂದ ಅಂತರ ಕಾಯ್ದುಕೊಂಡಳು. ಸಿಟ್ಟಿನಿಂದ ಆ ಹುಡುಗ ವಿಡಿಯೋವನ್ನು ತನ್ನ ಗ್ರಾಮದ ಮೂವರು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡಿದ್ದಾನೆ. ನಂತರ ವಿದ್ಯಾರ್ಥಿಗಳು ವಾಟ್ಸಾಪ್ನಲ್ಲಿ ಇನ್ನೂ ಹಲವರಿಗೆ ವಿಡಿಯೊ ಕಳುಹಿಸಿದ್ದು, ಇನ್ಸ್ಟಾಗ್ರಾಮ್ನಲ್ಲಿ ಪೇಜ್ ಕೂಡ ಆರಂಭಿಸಿದ್ದಾರೆ.
ಇದರಿಂದ ನೊಂದ ಶಿಕ್ಷಕಿಯು ಮಿಶನ್ ಶಕ್ತಿ ಅಭಿಯಾನ್ ಕೇಂದ್ರಕ್ಕೆ ತೆರಳಿ ತಾನು ಆತ್ಮ*ಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ನೊಂದ ಮಹಿಳೆಯನ್ನು ಸಂತೈಸಿ ಕೇಂದ್ರದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ್ರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನಾಲ್ವರನ್ನೂ ಬಂಧಿಸಲಾಗಿದೆ.
DAKSHINA KANNADA
ಉಪನ್ಯಾಸಕನಿಂದ ದ್ವೇಷದ ಉಪನ್ಯಾಸ.!? ಅರುಣ್ ಉಳ್ಳಾಲ ವಿರುದ್ದ ಕೇಸ್.!
ಮಂಗಳೂರು : ಆಗ್ನೆಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ದುಡಿಯುತ್ತಿರುವ ಉಪನ್ಯಾಸಕ ಅರುಣ್ ಉಳ್ಳಾಲ ವಿರುದ್ದ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಳ್ಳಾಲದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಮಾಡಿದ ದ್ವೇಷದ ಭಾಷಣಕ್ಕೆ ಸಂಬಂಧಿಸಿ ಈ ದೂರು ದಾಖಲಾಗಿದೆ.
ಕಾರ್ಯಕ್ರಮದಲ್ಲಿ ಹಿಂದೂ ಧಾರ್ಮಿಕ ಉಪನ್ಯಾಸ ನೀಡುತ್ತಿದ್ದ ಅರುಣ್ ಉಳ್ಳಾಲ ಅವರು ಕ್ರೈಸ್ತರು ಹಾಗೂ ಮುಸ್ಲಿಂರ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. ಹಿಂದೂಗಳು ಹಿಂದೂಗಳಿಗೆ ಸೇರಿದ ಶಾಲೆಗೆ ಮಕ್ಕಳನ್ನು ಸೇರಿಸಬೇಕು. ಹಿಂದೂಗಳಿಗೆ ಸೇರಿದ ಹಾಲ್ಗಳಲ್ಲೇ ಮದುವೆ ಆಗಬೇಕು ಎಂಬಿತ್ಯಾದಿ ರೀತಿಯ ಮಾತುಗಳನ್ನು ಆಡಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸಾರ್ವಜನಿಕವಾಗಿ ತೀವ್ರ ಟೀಕೆಗೆ ಗುರಿಯಾಗಿತ್ತು. ಕ್ರಿಶ್ಚಿಯನ್ ಸಂಸ್ಥೆಯಲ್ಲೇ ವಿದ್ಯಾಭ್ಯಾಸ ಮಾಡಿ, ಕ್ರಿಶ್ಚಿಯನ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಅರುಣ್ ಉಳ್ಳಾಲ ಅವರ ಈ ಹೇಳಿಕೆ ಎಷ್ಟು ಸರಿ? ಎಂದು ಜನರು ಪ್ರಶ್ನೆ ಮಾಡಿದ್ದರು. ಅರುಣ್ ಉಳ್ಳಾಲ ಅವರು ಕೆಲಸ ಮಾಡುತ್ತಿರುವ ಆಗ್ನೆಸ್ ಕಾಲೇಜು ಆಡಳಿತ ಮಂಡಳಿ ಇವರನ್ನು ಕೆಲಸದಿಂದ ವಜಾ ಮಾಡಬೇಕೆಂಬ ಒತ್ತಾಯ ಕೂಡ ಮಾಡಲಾಗಿದೆ. ಇದೀಗ ಅರುಣ್ ಉಳ್ಳಾಲರ ಭಾಷಣ ವಿವಾದವಾಗುತ್ತಿದ್ದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ಸಂಸದ ಕೋಟ ಹೆಸರಿನಲ್ಲಿ ನಕಲಿ ಖಾತೆ; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು
ಅರುಣ್ ಉಳ್ಳಾಲ ಅವರ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಅರುಣ್ ಗೆ ಬೆಂಬಲ ಸೂಚಿಸಿದ್ದಾರೆ. ನಾವು ನಿಮ್ಮ ಜೊತೆಗೆ ಇದ್ದೇವೆ ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
LATEST NEWS
ಉದ್ಯಾವರ : ಡಿವೈಡರ್ ಮೇಲೇರಿದ ಕಾರು; ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ಕಾಪು ಶಾಸಕ
ಉಡುಪಿ :ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಕಿಯಾ ಶೋರೂಂ ಬಳಿ ನಡೆದ ಅಪಘಾ*ತದ ಗಾ*ಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಣಿಪಾಲದಿಂದ ಪಡುಬಿದ್ರೆಯತ್ತ ಕಾರು ಸಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿ*ಕ್ಕಿ ಹೊಡೆದು ನಿಂತಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 5 ಜನರಿಗೆ ಗಾಯಗಳಾಗಿವೆ.
ಇದನ್ನೂ ಓದಿ : ಮಂಗಳೂರು : ಖಾಸಗಿ ಬಸ್ಸಿಗೆ ‘ಇಸ್ರೇಲ್’ ಹೆಸರು; ತೀವ್ರ ಆಕ್ಷೇಪದ ಬಳಿಕ ‘ಜೆರುಸಲೇಂ’ ಎಂದು ಬದಲಾಯಿಸಿದ ಮಾಲಕ
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಲು ನೆರವಾಗಿದ್ದಾರೆ. ಈ ಸಂದರ್ಭ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದ್ದು, ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಮತ್ತು ಸ್ಥಳೀಯರೂ ನೆರವು ನೀಡಿದರು.
- BIG BOSS6 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- BIG BOSS6 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS2 days ago
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
- LATEST NEWS5 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
Pingback: ಅಲ್ಪಕಾಲದ ಅಸೌಖ್ಯದಿಂದ ಉಳ್ಳಾಲ ಖಾಝಿ ಸ್ವರ್ಗಸ್ಥ - NAMMAKUDLA NEWS - ನಮ್ಮಕುಡ್ಲ ನ್ಯೂಸ್
Pingback: ನೀವು ಪ್ರಾಣಿ ಪ್ರಿಯರಾ? ನಿಮ್ಮ ಮನೆಯಲ್ಲಿ ಸಾಕು ಪ್ರಾಣಿಗಳಿದ್ದಾವಾ? ಹಾಗಾದ್ರೆ ಈ ಸ್ಟೋರಿ ನೋಡಿ - NAMMAKUDLA NEWS - ನಮ್ಮಕು