Connect with us

LATEST NEWS

ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಮಾಜಿ ಸಿಎಂ ಸಿದ್ದರಾಮಯ್ಯ..!

Published

on

ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಮಾಜಿ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಮಾಜಿ ಸಿಎಂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿದ್ದು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಡುವಾಗ ತನ್ನ ಆರೈಕೆ ಮಾಡಿದ ವೈದ್ಯರು, ದಾದಿಯರು ಹಾಗೂ ಇತರ ಸಿಬಂದಿಗಳಿಗೆ ಹೂಗುಚ್ಚ ನೀಡಿ ಅವರ ಸೇವೆಯನ್ನು ಸ್ಮರಿಸಿ ಧನ್ಯವಾದ ಹೇಳಿದರು.

ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು‌ ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.

ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು. ಎಂದು ಸಿದ್ದ ರಾಮಯ್ಯ ಅವರು ಧನ್ಯವಾದ ಹೇಳಿದ್ದಾರೆ. ಎರಡನೇ ಬಾರಿಗೆ ಅವರ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯನ್ನು ವೈದ್ಯರು ನಡೆಸಿದ್ದು ರಿಪೋರ್ಟ್​​ ನೆಗಿಟಿವ್​ ಬಂದಿದೆ.

ಹೀಗಾಗಿ ಸಿದ್ದರಾಮಯ್ಯ ಮನೆಗೆ ಹೋಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

. ಸಿದ್ದರಾಮಯ್ಯಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಆರಂಭದ ಎರಡು ದಿನ ಮಾತ್ರ ಜ್ವರ ಇತ್ತು. ಉಳಿದಂತೆ ಯಾವುದೇ ಕೊರೋನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿರಲಿಲ್ಲ.

ಸದ್ಯ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದು, ಕೋವಿಡ್ ಮಾರ್ಗ ಸೂಚಿ ಮತ್ತು ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ನಲ್ಲಿರುತ್ತಾರೆ.

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೋನಾ ಪಾಸಿಟಿವ್​​ ಕಾಣಿಸಿಕೊಂಡಿತ್ತು.ಒಂದು ವಾರದ ಹಿಂದೆ ಸಿದ್ದರಾಮಯ್ಯ ಮಣಿಪಾಲ್​​ ಆಸ್ಪತ್ರೆಗೆ ದಾಖಲಾಗಿದ್ದರು.

LATEST NEWS

27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಕೆಜಿಎಫ್ ಹೊಗಳಿದ್ದ ಯೂಟ್ಯೂಬರ್!

Published

on

ಮುಂಬೈ : ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಪ್ರಖ್ಯಾತರಾಗಿರುವ ಅಬ್ರದೀಪ್ ಸಹಾ ಇಹಲೋಕ ತ್ಯಜಿಸಿದ್ದಾರೆ. ಅಂಗ್ರಿ ರ್‍ಯಾಂಟ್‌‌ಮ್ಯಾನ್‌ ಎಂದೇ ಖ್ಯಾತರಾಗಿರುವ ಅಬ್ರದೀಪ್ ಸಹಾ ತಮ್ಮ 27 ನೇ ವಯಸ್ಸಿಗೆ ಅಸುನೀಗಿದ್ದಾರೆ. ಅವರು ಏಪ್ರಿಲ್ 16 ರಂದು ವಿ*ಧಿವಶರಾಗಿದ್ದಾರೆ. ಅವರ ನಿ*ಧನದ ಸುದ್ದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಅಂಗ್ರಿ ರಾಂಟ್ ಮ್ಯಾನ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಕಳೆದ ತಿಂಗಳು ಅಪರೇಷನ್ ಗೆ ಒಳಗಾಗಿದ್ದರು. ಅವರ ಸ್ಥಿತಿ ಗಂಭೀರವಾಗಿದೆ. ಐಸಿಯುವಿನಲ್ಲಿದ್ದಾರೆ ಎಂದು ಹೇಳಲಾಗಿತ್ತು. ಕಳೆದೊಂದು ತಿಂಗಳಿಂದ ಅಬ್ರದೀಪ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರಲಿಲ್ಲ. ಹಾಗಾಗಿ, ಈ ಸುದ್ದಿ ಖಚಿತ ಎಂದೇ ಹೇಳಲಾಗಿತ್ತು. 11 ದಿನಗಳ ಹಿಂದೆ ಅವರ ತಂದೆ ಅಭಿಮಾನಿಗಳಿಗೆ, ಐಸಿಯುನಲ್ಲಿ ರ್‍ಯಾಂಟ್‌‌ಮ್ಯಾನ್‌ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ : ಬೆಂಗಳೂರಿನ ಖ್ಯಾತ ಯೂಟ್ಯೂಬರ್ ಬಂಧನ; ಮುಳುವಾಯ್ತು ಆ ಒಂದು ವೀಡಿಯೋ!

ಖ್ಯಾತಿ ಕೊಟ್ಟ ಕೆಜಿಎಫ್ :

ಕೋಲ್ಕತ್ತಾದವರಾದ ಆ್ಯಂಗ್ರಿ ರ್‍ಯಾಂಟ್‌‌ಮ್ಯಾನ್‌ ಫೆಬ್ರವರಿ 19, 1996 ರಂದು ಜನಿಸಿದರು. ‘ಆಂಗ್ರಿ ರಾಂಟ್‌ಮ್ಯಾನ್’ ಎಂಬ ಅವರ ಯೂಟ್ಯೂಬ್ ಚಾನೆಲ್ 481k ಚಂದಾದಾರರನ್ನು ಮತ್ತು Instagram ನಲ್ಲಿ 119k ಫಾಲೋವರ್ಸ್​ ಹೊಂದಿದ್ದರು. 2018ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಕೆಜಿಎಫ್‌ ಸಿನಿಮಾ ವಿಮರ್ಶೆ ಮಾಡುವ ಮೂಲಕ ಅಬ್ರದೀಪ್ ಸಹಾ ಖ್ಯಾತಿ ಗಳಿಸಿದರು.
ಕೆಜಿಎಫ್ ಸಿನಿಮಾವನ್ನು ಹೊಗಳಿದ್ದ ಅವರು, ಬಾಲಿವುಡ್ ಸಿನಿಮಾರಂಗವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾ ಹೇಗೆ ಮಾಡಬೇಕು ಎಂದು ದಕ್ಷಿಣ ಭಾರತೀಯ ಚಿತ್ರರಂಗ ನೋಡಿ ಕಲಿಯಿರಿ ಎಂದು ಹೇಳಿದ್ದರು. ಈ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

Continue Reading

DAKSHINA KANNADA

ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ

Published

on

ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.

udaya poojary

ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್‌ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್‌ ಕುಂಪಲ ಎಲ್ಲಿದ್ದರು…?

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್‌ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್‌ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್‌ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.

ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!

ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ

ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್‌ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್‌ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.

ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ

ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್‌ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.

Continue Reading

LATEST NEWS

ಬಿಡುವಿಲ್ಲದ ವೇಳೆಯೂ ಬಾಲರಾಮನ ‘ಸೂರ್ಯ ತಿಲಕ’ವನ್ನು ವೀಕ್ಷಿಸಿದ ಪ್ರಧಾನಿ…

Published

on

ಅಯೋಧ್ಯೆ: 500 ವರ್ಷಗಳ ಬಳಿಕ ಅಯೋಧ್ಯೆ ಶ್ರೀರಾಮನ ಜನ್ಮಸ್ಥಳದಲ್ಲಿ ನಡೆದ  ಐತಿಹಾಸಿಕ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಕಣ್ತುಂಬಿಕೊಂಡಿದ್ದಾರೆ. ಹೌದು, ಇಂದು ಶ್ರೀರಾಮನವಮಿ ದಿನದಂದು ಬಾಲರಾಮನ ಹಣೆಗೆ ಸೂರ್ಯರಶ್ಮಿಯ ಕಿರಣ ಸ್ಪರ್ಶಗೊಂಡಿದೆ. ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ತನ್ನ ಬಿಡುವಿಲ್ಲದ ಸಮಯದಲ್ಲೂ ಈ ಐತಿಹಾಸಿಕ ಸುಂದರ ಕ್ಷಣವನ್ನು  ಕಣ್ತುಂಬಿಕೊಂಡಿದ್ದಾರೆ. ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡದೆ ಇದ್ದರೂ ದೃಶ್ಯವನ್ನು ಟ್ಯಾಬ್ ಮೂಲಕ ಕಣ್ತುಂಬಿಕೊಂಡಿದ್ದಾರೆ. ಇವರು ಅಸ್ಸಾಂ ನಲ್ಲಿನ ಬಿಜೆಪಿ ಸಮಾವೇಶದಲ್ಲಿ ಈ ವೇಳೆ ಭಾಗವಹಿಸಿದ್ದರು.

narendra modi

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾನು ನಲ್ಬರಿಯಲ್ಲಿ ನಡೆದ ಚುನಾವಣಾ ರ್ಯಾಲಿಯ ನಂತರ ರಾಮ್ ಲಲ್ಲಾನನ್ನು ಸೂರ್ಯ ತಿಲಕ ಸ್ಪರ್ಶಿಸುವ ಕ್ಷಣವನ್ನು ವೀಕ್ಷಿಸಿದ್ದೇನೆ. ಕೋಟಿಗಟ್ಟಲೆ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಕ್ಷಣ. ಅಯೋಧ್ಯೆಯ ರಾಮನವಮಿಯು ಐತಿಹಾಸಿಕವಾಗಿದೆ. ಈ ಸೂರ್ಯ ತಿಲಕ ನಮ್ಮ ಜೀವನಕ್ಕೆ ಶಕ್ತಿಯನ್ನು ತರಲಿ ಮತ್ತು ನಮ್ಮ ರಾಷ್ಟ್ರವು ವೈಭವದ ಹೊಸ ಎತ್ತರವನ್ನು ಏರಲು ಪ್ರೇರೇಪಿಸಲಿ ಎಂದು ಹೇಳಿದ್ದಾರೆ.

narendra modi

READ MORE..; ಬಿಜೆಪಿಗೆ ಸವಾಲಾದ ಬಿರುವೆರ್..! ವರ್ಕೌಟ್‌ ಆಗಿಲ್ಲ ನಮೋ ಪ್ಲ್ಯಾನ್‌…!

Continue Reading

LATEST NEWS

Trending