LATEST NEWS
ಮಾಜಿ ಸಚಿವ ಬಾಬಾ ಸಿದ್ದಿಕ್ ಗೆ ಗುಂಡಿಕ್ಕಿ ಹತ್ಯೆ; ವಿವಿಧ ಕೋನಗಳಲ್ಲಿ ತನಿಖೆ
ಮಂಗಳೂರು/ಮುಂಬೈ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಮುಂಬೈನಲ್ಲಿ ನಿನ್ನೆ(ಅ.12) ರಾತ್ರಿ ಮೂವರು ದುಷ್ಕರ್ಮಿಗಳ ತಂಡ ಗುಂ*ಡಿಕ್ಕಿ ಹ*ತ್ಯೆ ಮಾಡಿದೆ. ಅವರ ಮೃ*ತದೇಹವನ್ನು ಲೀಲಾವತಿ ಆಸ್ಪತ್ರೆಯಿಂದ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗಿದೆ.
ಮುಂಬೈನ ಬಾಂದ್ರಾ ಪ್ರದೇಶದ ಖೇರ್ ನಗರದಲ್ಲಿ ಬಾಬಾ ಸಿದ್ಧಿಕ್ ಅವರ ಪುತ್ರ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಭಾಗದಲ್ಲಿ ಮೂವರು ದುಷ್ಕ*ರ್ಮಿಗಳು ಅಟ್ಟಾಡಿಸಿಕೊಂಡು ಬಂದು ಗುಂ*ಡು ಹಾರಿಸಿದ್ದಾರೆ. ರ*ಕ್ತದ ಮಡುವಿನಲ್ಲಿ ಬಿದ್ದ ಸಿದ್ದಿಕಿ ಅವರನ್ನು ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಲೀಲಾವತಿ ಆಸ್ಪತ್ರೆಯ ತುರ್ತು ವೈದ್ಯಕೀಯ ಸೇವೆಗಳಿಗೆ ಸ್ಥಳಾಂತರಿಸಲಾಯಿತು.
ನಂತರ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು, ಅಲ್ಲಿ ಬದುಕುಳಿಸಲು ಸಾಕಷ್ಟು ಪ್ರಯತ್ನ ಮಾಡಲಾಯಿತಾದರೂ ಸಾಧ್ಯವಾಗಲಿಲ್ಲ. ಕೊನೆಗೆ ರಾತ್ರಿ 11:27 ಕ್ಕೆ ನಿಧನರಾದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ತುಂಡುಡುಗೆ ತೊಟ್ಟು ದುರ್ಗಾ ಪೂಜೆಗೆ ಬಂದ ಯುವತಿಯರು; ಜನರ ಆಕ್ರೋಶ….!!
ಅವರ ಹ*ತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಆರಂಭಿಸಿದ್ದಾರೆ. ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬಾಬಾ ಸಿದ್ದಿಕ್ ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ಮೂರು ಬಾರಿ ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ, ಸಿದ್ದಿಕ್ ಹಲವಾರು ಬಾಲಿವುಡ್ ತಾರೆಗಳಿಗೆ ಹತ್ತಿರವಾಗಿದ್ದರು.
LATEST NEWS
ಹಿರಿಯಡ್ಕ: ಉದ್ಯಮಿ ಪ್ರಸನ್ನ ಶೆಟ್ಟಿ ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಆತ್ಮಹ*ತ್ಯೆ
ಹಿರಿಯಡ್ಕ: ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಶುಕ್ರವಾರ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವಾವಿದ್ದರು ಎಂದು ಹೇಳಲಾಗಿದ್ದು ನಿನ್ನೆ ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದ ಕಾರಣ ಅನುಮಾನ ಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಆತ್ಮಹ*ತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಫ್ಯಾನ್ಗೆ ಸೀರೆಯಿಂದ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪ್ರಸನ್ನ ಬೆಂಗಳೂರಿನಿಂದ ಮಡದಿಯ ಸೀರೆಯೊಂದನ್ನು ತಂದಿದ್ದು ಹೊರಡುವ ಮೊದಲೇ ಆತ್ಮಹ*ತ್ಯೆಯ ಬಗ್ಗೆ ಯೋಚಿಸಿದ್ದರು ಎಂದು ತಿಳಿದು ಬಂದಿದೆ. ಅಂತ್ಯ*ಕ್ರಿಯೆಯನ್ನು ಇಂದು ಅವರ ಹಿರಿಯರ ಮನೆಯಾದ ಕೊಂಡಾಡಿಯಲ್ಲಿ ನೆರವೇರಿಸಲಾಗಿದೆ. ಮೃ*ತರು ಪತ್ನಿ, ಎರಡು ವರ್ಷದ ಪುತ್ರಿ, ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾ*ವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್ ಮೂಲದಿಂದ ಮಾಹಿತಿ ಲಭ್ಯವಾಗಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು.
LATEST NEWS
ಈವೆಂಟ್ ಮ್ಯಾನೆಜ್ಮೆಂಟ್ ಹೆಸರಿಟ್ಟುಕೊಂಡು ವೇಶ್ಯವಾಟಿಕೆ.. !
ಮಂಗಳೂರು/ಬೆಂಗಳೂರು: ಈವೆಂಟ್ ಮ್ಯಾನೆಜ್ಮೆಂಟ್ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ.
ಪಟ್ಟೆಗರಪಾಳ್ಯದ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಬಂಧಿತ ಆರೋಪಿ.
ಆರೋಪಿಗಳು ತಮ್ಮ ನೈಜ್ಯ ಹೆಸರು ಬಾರದಂತೆ ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡಿದ್ದರು. ಬಡ ಹೆಣ್ಣು ಮಕ್ಕಳನ್ನು ಟಾರ್ಗೇಟ್ ಮಾಡಿ ಉತ್ತರ ಕರ್ನಾಟಕ ಭಾಗದ ಬಡ ಹೆಣ್ಣುಮಕ್ಕಳಿಗೆ ಕೆಲಸದ ಆಮೀಷವೊಡ್ಡಿ ಬೆಂಗಳೂರಿಗೆ ಕರೆತರುತ್ತಿದ್ದರು.
ಕೆಲಸ ಮುಗಿಸಿದ ತಕ್ಷಣ ವೇಶ್ಯವಾಟಿಕೆ ದಂಧೆಗೆ ಹೆಣ್ಣು ಮಕ್ಕಳನ್ನು ದೂಡುತ್ತಿದ್ದರು. ಬಳಿಕ ಈವೆಂಟ್ ಮ್ಯಾನೇಜ್ಮೆಂಟ್ ಕೆಲಸದವೆಂದು ವಾರಕೊಮ್ಮೆ ತಮೀಳುನಾಡು, ಪುದುಚೇರಿ ರೆಸಾರ್ಟ್ಗಳಲ್ಲಿ ನಡೆಯುವ ಪಾರ್ಟಿಗಳಿಗೆ ಕರೆದೊಯ್ದು ವೇಶ್ಯವಾಟಿಕೆಯಲ್ಲಿ ತೊಡಗುವಂತೆ ಆಮಿಷವೊಡ್ಡುತ್ತಿದ್ದರು.
ಐಷರಾಮಿ ಪಾರ್ಟಿಗೆ ಈ ದಂಪತಿ ಮದ್ಯ ಪೂರೈಕೆ ಮಾಡುತ್ತಿದ್ದು, ಪಾರ್ಟಿಗೆ ಬರುವ ಒಬ್ಬರಿಗೆ ತಲಾ 25 ಸಾವಿರ ರೂ.ನಿಂದ 50 ಸಾ.ರೂ.ವರೆಗೆ ಶುಲ್ಕ ನಿಗದಿಪಡಿಸುತ್ತಿದ್ದರು.
ಬೆಂಗಳೂರಿನಿಂದ ಯುತಿಯರನ್ನು ಕರೆದೊಯ್ಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಪ್ರಕಾರ ಸಿಸಿಬಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂದಿಸಿದ್ದಾರೆ. ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ.
BIG BOSS
ಬಿಗ್ಬಾಸ್ ಮನೆಯಲ್ಲಿ ಜಗದೀಶ್- ಹಂಸಾ ಡುಯೇಟ್ ! ಶುರುವಾಯ್ತು ಪ್ರೇಮ್ ಕಹಾನಿ
ಬಿಗ್ಬಾಸ್ ಗ್ರ್ಯಾಂಡ್ ಓಪನಿಂಗ್ ಪಡೆದು ಯಶಸ್ವಿಯಾಗಿ ಸಾಗುತ್ತಿದೆ. ಬಿಗ್ ಮನೆಯೊಳಗೆ ಸ್ಪರ್ಧಿಗಳು ಕೂಡ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಶನಿವಾರ-ಭಾನುವಾರ ಬಂದರೆ ಸಾಕು ಪ್ರೇಕ್ಷಕರೆಲ್ಲ ಕಿಚ್ಚನ ಪಂಚಾಯತಿಗಾಗಿ ಕಾಯುತ್ತಿರುತ್ತಾರೆ. ಶನಿವಾರದ ಪಂಚಾಯತಿಯಲ್ಲಿ ಸ್ಪರ್ಧಿಗಳಿಗೆ ಬಹುಮಾನ ನೀಡಲಾಗಿತ್ತು. ಇದರ ಜೊತೆಗೆ ಏನೇನು ಆಗಿದೆ ಎಂದು ನಿಮಗೆಲ್ಲ ಗೊತ್ತಿದೆ. ಸದ್ಯ ಇಂದಿನ ಕಿಚ್ಚನ ಪಂಚಾಯತಿಯಲ್ಲಿ ಏನೆಲ್ಲ ನಡೆಯಲಿದೆ?
ಇಂದಿನ ಕಿಚ್ಚನ ಪಂಚಾಯತಿ ಫುಲ್ ಜೋಶ್ನಲ್ಲಿ ಇರಬಹುದೆಂದು ಸೋಶಿಯಲ್ ಮೀಡಿಯಾದಲ್ಲಿ ರಿಲೀಸ್ ಆದ ವಿಡಿಯೋ ನೋಡಿದರೆ ಗೊತ್ತಾಗುತ್ತದೆ. ಹಂಸಾ ಅವರ ಕ್ಯಾಪ್ಟನ್ಸಿಯಲ್ಲಿ ಏನೇನು ಫೆಸಲಿಟಿ ಇತ್ತು ಎಂದು ಲಾಯರ್ ಜಗದೀಶ್ಗೆ ಸುದೀಪ್ ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ಲಾಯರ್ ಜಗದೀಶ್ ಫುಲ್ ಕಾಮಿಡಿಯಾಗಿ ಉತ್ತರಿಸಿದ್ದು ಬೇಜಾರ ಎಂದರೆ ನನ್ನ ಜೊತೆ ಡುಯೇಟ್ ಮಾಡಿದ್ದು ಅಂತ ಹೇಳಿ ಎಲ್ಲ ಸ್ಪರ್ಧಿಗಳನ್ನ ನಕ್ಕು ನಲಿಸಿದ್ದಾರೆ.
ಇನ್ನು ಹಂಸಾನೂ ಮಾತನಾಡಿ ಲಾಯರ್ ಬಳಿ ಮಾತಿನಿಂದ ಗೆಲ್ಲಲು ಆಗಲ್ಲ. ಮನಸಾದ್ರೂ ಗೆದ್ದರೇ ನನ್ನ ಕೆಲಸ ಮಾಡಿಕೊಳ್ಳಬಹುದು ಎಂದಿದ್ದಾರೆ. ಹೀಗೆ ಹೇಳುತ್ತಿದ್ದಂತೆ ಕಿಚ್ಚ ಏನ್ ಗೆದ್ದರೇ ಎಂದು ಪ್ರಶ್ನಿಸುತ್ತಿದ್ದಂತೆ ಎಲ್ಲರೂ ನಕ್ಕಿದ್ದಾರೆ. ಇನ್ನು ಧನ್ರಾಜ್ ಕೂಡ ಪಂಚಾಯತಿಯಲ್ಲಿ ಲಾಯರ್ ಬಗ್ಗೆ ಮಾತನಾಡಿ, ರಾತ್ರಿ ಮಲಗಿಕೊಳ್ಳಬೇಕಾದರೆ, ನನಗೆ ಫೀಲ್ ಆಗ್ತಿದೆ. ನನ್ನ ಹೆಂಡತಿ ಜೊತೆ ಒಂದು ಸಾರಿನೂ ಈ ತರ ಡುಯೇಟ್ ಮಾಡಿಲ್ಲ ಎಂದು ಹೇಳಿದ್ದಾರೆ ಎಂದಿದ್ದಾರೆ. ಇನ್ನು ಜಗದೀಶ್ ಹಾಗೂ ಹಂಸಾ ಸಾಂಗ್ಗೆ ಡ್ಯಾನ್ಸ್ ಕೂಡ ಮಾಡಿದ್ದಾರೆ. ಇದೆಲ್ಲ ನೋಡಲು ಇನ್ನು ಕೆಲ ಗಂಟೆ ಕಾಯಬೇಕಾಗಿದೆ.
- FILM5 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS5 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA6 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು
- BIG BOSS6 days ago
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!