Connect with us

    LATEST NEWS

    ಲಕ್ಷ್ಮೀ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರದ ಆಫರ್‌ ನೀಡಿದ ಮಾಜಿ ಸಚಿವ

    Published

    on

    ಬೆಂಗಳೂರು/ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರವರಿಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಒಂದು ಕೆಜಿ ಚಿನ್ನದ ಆಫರ್‌ ನೀಡಿದ್ದಾರೆ. ಹೆಬ್ಬಾಳ್ಕರ್‌ ರಿಗೆ ಮಾಜಿ ಸಚಿವರು ಸವಾಲೊಂದನ್ನು ನೀಡಿದ್ದು ಸವಾಲು ಈಡೇರಿಸಿದರೆ ಒಂದು ಕೆಜಿ ಚಿನ್ನದ ಜೊತೆಗೆ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

     

    ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಮ್ಮ ಸರ್ಕಾರ ಇದ್ದಾಗ ಲಕ್ಷ್ಮೀ ಅವರು 2ಎ ಮೀಸಲಾತಿ ಮಾಡಿ ಕೊಟ್ರೆ ಒಂದು ಕೆಜಿ ಕುಂದಾ ತಂದು ಸನ್ಮಾನ ಮಾಡೋದಾಗಿ ಹೇಳಿದ್ದರು. ನಿಮ್ಮ ಕೈಯಲ್ಲಿ ಆಗದಿದ್ದಲ್ಲಿ ಮೂರು ತಿಂಗಳ ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2ಎ ಮೀಸಲಾತಿ ಮಾಡಿಕೊಡ್ತೇವೆ. ಆಗ ನೀವು ಒಂದು ಜತೆ ಬಂಗಾರದ ಬಳೆ ಮಾಡಿಸಿ ಕೊಡಿ ಎಂದು ಹೇಳಿದ್ದರು. ಈಗ ಅವರದ್ದೇ ಸರ್ಕಾರ ಬಂದು ಒಂದೂವರೆ ವರ್ಷ ಆಯ್ತು, ಈಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲಿ. 2ಎ ಮೀಸಲಾತಿ ಕೊಟ್ಟರೆ ಲಕ್ಷ್ಮಿ ಅವರಿಗೆ ಒಂದು ಕೆಜಿ ಬಂಗಾರ ಕೊಟ್ಟು ಸನ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

    LATEST NEWS

    ಕೊಲ್ಲೂರು ದೇಗುಲ ವ್ಯವಸ್ಥಾಪನ ಸಮಿತಿಗೆ ಡಾ.ಅಭಿಲಾಷ್ ಪಿ.ವಿ ಆಯ್ಕೆ.

    Published

    on

    ಮಂಗಳೂರು ( ಕೊಲ್ಲೂರು ) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಮಂಗಳೂರಿನ ಡಾ। ಅಭಿಲಾಷ್ ಪಿ.ವಿ. ನೇಮಕವಾಗಿದ್ದಾರೆ.


    2011ರಿಂದ 17ರ ವರೆಗೆ 2 ಅವಧಿಗೆ ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಸೆನೆಟ್ ಸದಸ್ಯರಾಗಿದ್ದ ಅವರು ಮೆಸ್ಕಾಂ ನಿರ್ದೇಶಕರಾಗಿ, ಕೇಂದ್ರೀಯ ಸೆನ್ಸಾರ್ ಮಂಡಳಿ ಸದಸ್ಯರಾಗಿ, 2018ರಿಂದ 2021ರ ವರೆಗೆ ಕೊಲ್ಲೂರು ದೇಗುಲದ ಟ್ರಸ್ಟಿಯಾಗಿದ್ದರು. ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋ ಥೆರಪಿಯಲ್ಲಿ ಅಸೋಸಿ ಯೆಟ್ ಪ್ರೊಫೆಸರ್ ಹಾಗೂ ಪಿಆರ್‌ಒ ಆಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    Continue Reading

    chikkamagaluru

    ಗೈರು ಹಾಜರಾದ ವಿದ್ಯಾರ್ಥಿಗಳಿಂದ ಹಣ ವಸೂಲಿ ಸಂಚು; ತಾವು ಬೀಸಿದ ಬಲೆಗೆ ತಾವೇ ಸಿಕ್ಕಿಬಿದ್ದ ಆರೋಪಿಗಳು

    Published

    on

    ಮಂಗಳೂರು/ಚಿಕ್ಕಮಗಳೂರು: ಅನಿವಾರ್ಯ ಕಾರಣಗಳಿಂದ ಕಾಲೇಜಿಗೆ ವಿದ್ಯಾರ್ಥಿಗಳು ಗೈರು ಹಾಜರಾಗುವುದು ಸಹಜ. ಹಾಗೆ ಬಾರದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಬೇಕೆಂದಿದ್ದರೆ, ಹಣ ನೀಡುವಂತೆ ಆದೇಶಿಸಿದ್ದ ಬೀರೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


    ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ.ಹರೀಶ್‌ ಮುಖಾಂತರ ಹಣದ ಬೇಡಿಕೆಯನ್ನಿಟ್ಟಿದ್ದ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.
    ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಫೋನ್‌ ಪೇ ಮೂಲಕ 10 ಸಾವಿರ ಹಾಗೂ ಪ್ರಾಂಶುಪಾಲ ಎಂ.ಕೆ.ಪ್ರವೀಣ್ ಕುಮಾರ್‌ 5 ಸಾವಿರ ರೂ. ಕಸಿದುಕೊಂಡಿರುವುದಾಗಿ ಪ್ರಕರಣ ದಾಖಲಾಗಿದೆ.
    ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ತಿರುಮಲೇಶ್, ಬಿ.ಮಲ್ಲಿಕಾರ್ಜುನ್‌, ಅನಿಲ್ ರಾಥೋಡ್ ಇತರರು ಪಾಲ್ಗೊಂಡಿದ್ದರು.

    Continue Reading

    LATEST NEWS

    ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ-ಸುಪ್ರೀಂ ಕೋರ್ಟ್ ಎಚ್ಚರಿಕೆ

    Published

    on

    ನವದೆಹಲಿ: ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಹೇಳಿದ್ದಾರೆ.

    ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ವಿರುದ್ದ ಸುಮೋಟೋ ಪ್ರಕರಣದ ವಿಚಾರಣೆ ವೇಳೆ ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ ಎಂದು ಹೇಳಿದೆ.

    ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್‌ ‘ಸು ಮೋಟೊ’ (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿತ್ತು. ನ್ಯಾಯಮೂರ್ತಿ ಶ್ರೀಶಾನಂದ ವಿರುದ್ಧದ ‘ಸು ಮೋಟೊ’ ಪ್ರಕರಣದ ವಿಚಾರಣೆಯಲ್ಲಿ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿತ್ತು. ಇದೀಗ ನ್ಯಾಯಮೂರ್ತಿ ಶ್ರೀಶಾನ೦ದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ವು ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

    Continue Reading

    LATEST NEWS

    Trending