ಎದೆನೋವು ಹಿನ್ನಲೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು…
ಎದೆನೋವು ಹಿನ್ನಲೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಸೋಮವಾರ (ಮೇ 11) ಬೆಳಿಗ್ಗೆ ತಿಳಿಸಿದೆ.
ರಾತ್ರಿ 8:45ರ ವೇಳೆಗೆ ಮಾಜಿ ಪ್ರಧಾನಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ, ಭಾನುವಾರ (ಮೇ 10) ಸಂಜೆ 87 ವರ್ಷದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ನೀಡುತ್ತಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಭಾನುವಾರ ಸಂಜೆ ಔಷಧಿ ನೀಡಿದ ಬಳಿಕ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ.
ನಂತರ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. 2009ರಲ್ಲಿ ಮನಮೋಹನ್ ಸಿಂಗ್ ಅವರಿಗೆ ಹೃದಯದ ಬೈಪಾಸ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಆಡಳಿತ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ನಡೆಸಿದ ವೇಳೆ, ಮನಮೋಹನ್ ಸಿಂಗ್ ಕೂಡ ಭಾಗಿಯಾಗಿದ್ದರು.
ಇದೀಗ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು, ಮನಹೋಹನ್ ಸಿಂಗ್ ಅನಾರೋಗ್ಯದಿಂದ ಏಮ್ಸ್ ಗೆ ದಾಖಲಾಗಿದ್ದಾರೆ.
ಹಾಗಾಗಿ ಅವರ ಶೀಘ್ರ ಚೇತರಿಕೆ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
2004ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ದೇಶದ ಪ್ರಧಾನಮಂತ್ರಿಯಾದ ಡಾ.ಮನಮೋಹನ್ ಸಿಂಗ್, 10 ವರ್ಷಗಳ 2014ರ ವರೆಗೂ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.
ಅದಕ್ಕೂ ಮೊದಲು ಕೇಂದ್ರದ ವಿತ್ತ ಸಚಿವರಾಗಿ ಅವರ ಕೊಡುಗೆ ಗಣನೀಯ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.