ಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
Published
5 years agoon
By
Adminಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
ಮಂಗಳೂರು : ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕದ್ರಿ ಪಾದೆಯ ಬಳಿ 50 ಲಕ್ಷದ ಬೃಹತ್ ಚರಂಡಿ ತಡೆಗೋಡೆ ಕಾಮಗಾರಿಗೆ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಕದ್ರಿ ಉತ್ತರ ವಾರ್ಡಿನ ಕದ್ರಿ ಪಾದೆಯ ಪರಿಸರದ ನಿವಾಸಿಗಳ ಬಹು ದಿನದ ಬೇಡಿಕೆಯಾಗಿದ್ದ ತಡೆಗೋಡೆ ರಚನೆ ಕಾಮಗಾರಿಗೆ ಸಾರ್ವಜನಿಕರ ಸಮ್ಮುಖದಲ್ಲಿ ಗುದ್ದಲಿಪೂಜೆ ನೆರವೇರಿಸಲಾಗಿದೆ.
ಈ ಪರಿಸರದ ಜನರ ಬಹು ದಿನದ ಬೇಡಿಕೆಯ ತೋಡಿನ ತಡೆಗೋಡೆ ನಿರ್ಮಾಣ ಕಾಮಗಾರಿಗೆ 50 ಲಕ್ಷ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಳೆಗಾಲದ ಸಂಧರ್ಭದಲ್ಲಿ ಈ ತೋಡಿನ ಮೂಲಕ ಹರಿದು ಹೋಗುವ ಮಳೆನೀರು ಉಕ್ಕಿ ಹರಿದು ಮನೆಗಳಿಗೆ ನುಗ್ಗುತ್ತಿತ್ತು.
ಇಲ್ಲಿನ ಸಾರ್ವಜನಿಕರು ಮಳೆಗಾಲದ ಸಂಧರ್ಭದಲ್ಲಿ ಸಂಕಷ್ಟಪಡುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು.
ಈ ತೋಡಿನ ಒಂದು ಭಾಗದಲ್ಲಿ ಈಗಾಗಲೇ ತಡೆಗೋಡೆಯಿದೆ. ಇನ್ನೊಂದು ಭಾಗದಲ್ಲಿ ಸ್ವಲ್ಪ ಎತ್ತರವಾಗಿ ಈ ತಡೆಗೋಡೆ ನಿರ್ಮಾಣಗೊಳ್ಳುತ್ತದೆ.
ತೋಡಿನಿಂದ ಉಕ್ಕಿ ಹರಿಯುವ ನೀರು ಮನೆಗಳಿಗೆ ನುಗ್ಗದಂತೆ ತಡೆಯಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಜನರ ಬೇಡಿಕೆಗಳನ್ನು ವಿಶೇಷವಾಗಿ ಪರಿಗಣಿಸಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲಾಗುತ್ತದೆ.
ಹಾಗೂ ಮಂಗಳೂರಿನ ಕುರಿತು ವಿಶೇಷ ಪ್ರೀತಿ ಹೊಂದಿರುವ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿ ಸರಕಾರ ರಚನೆಯಾದ ಬಳಿಕ ನೂರಾರು ಕೋಟಿ ಅನುದಾನಗಳನ್ನು ನೀಡಿದ್ದಾರೆ.
ಜನರ ಬೇಡಿಕೆಗಳನ್ನು ಪೂರೈಸಲು ಸರಕಾರವು ಬದ್ಧವಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸ್ಥಳೀಯ ಪಾಲಿಕೆ ಸದಸ್ಯೆ ಶಕಿಲಾ ಕಾವ ಅವರು ಮಾತನಾಡಿ, ಈ ಪರಿಸರದ ಬಹುದಿನದ ಬೇಡಿಕೆಯಾಗಿದ್ದ ತಡೆಗೋಡೆ ನಿರ್ಮಾಣಕ್ಕೆ ದೊಡ್ಡ ಮೊತ್ತದ ಅನುದಾನ ಬಿಡುಗಡೆಗೊಳಿಸಿದ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ವಾರ್ಡಿನ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು..
ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ.ಡಿ ಬಂಗೇರಾ, ಜಿಲ್ಲಾ ಕಾರ್ಯದರ್ಶಿ ಮಂಗಳ ಆಚಾರ್ಯ, ಪ್ರಮುಖರಾದ ರಾಮಕೃಷ್ಣ, ವೆಂಕಟೇಶ್, ಸಂಜೀವ ಅಡ್ಯಾರ್, ವಸಂತ್ ರಾವ್, ಚರಿತ್ ಪೂಜಾರಿ, ನೈನಾ ವಿಶ್ವನಾಥ್,ಸುಂದರ್ ಶೆಟ್ಟಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
You may like
International news
ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳ ಗುಂಡಿಕ್ಕಿ ಹ*ತ್ಯೆ
Published
10 hours agoon
18/01/2025By
NEWS DESK3ಮಂಗಳೂರು/ಟೆಹ್ರಾನ್ : ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹ*ತ್ಯೆ ಮಾಡಿರುವ ಘಟನೆ ಟೆಹ್ರಾನ್ನಲ್ಲಿ ಇಂದು (ಶನಿವಾರ) ನಡೆದಿದೆ.
ಈ ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್ಸೈಟ್ ವರದಿ ಮಾಡಿದೆ. ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹ*ತ್ಯೆಗೀಡಾದ ನ್ಯಾಯಮೂರ್ತಿಗಳು.
ಸುಪ್ರೀಂ ಕೋರ್ಟ್ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: ಅಮೆರಿಕ ಗಡಗಡ… ಒಳಾಂಗಣದಲ್ಲಿ ಟ್ರಂಪ್ ಪ್ರಮಾಣವಚನ
ನ್ಯಾಯಾಧೀಶರನ್ನು ಗುರಿಯಾಗಿಸಿಕೊಂಡು ದಾಳಿಗಳು ಅಪರೂಪವಾಗಿದ್ದರೂ, ಕಳೆದ ವರ್ಷ ಇರಾನ್ನ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ಗುಂಡಿನ ದಾಳಿಗಳು ನಡೆದಿವೆ.
ಏಪ್ರೀಲ್ 2023ರಲ್ಲಿ, ಅಬ್ಬಾಸ್ಅಲಿ ಸೊಲೈಮನಿ ಎಂದು ಗುರುತಿಸಲಾದ ಪ್ರಬಲ ಧರ್ಮಗುರುವನ್ನು ಕೂಡ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಕಳೆದ ಅಕ್ಟೋಬರ್ನಲ್ಲಿ, ಕಜೆರೌನ್ನಲ್ಲಿ ಶುಕ್ರವಾರದ ಪ್ರಾರ್ಥನೆಯ ನೇತೃತ್ವ ವಹಿಸಿದ ಶಿಯಾ ಮುಸ್ಲಿಂ ಬೋಧಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.
LATEST NEWS
ಆರ್.ಜಿ.ಕರ್ ವಿದ್ಯಾರ್ಥಿನಿಯ ಅತ್ಯಾ*ಚಾರ, ಕೊ*ಲೆ ಪ್ರಕರಣ; ನ್ಯಾಯಾಲಯದಿಂದ ಮಹತ್ವದ ತೀರ್ಪು
Published
11 hours agoon
18/01/2025By
NEWS DESK4ಮಂಗಳೂರು/ಕೊಲ್ಕತ್ತಾ : ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾ*ಚಾರ ಹಾಗೂ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಶನಿವಾರ(ಜ.18)ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ(ಜ.20) ಪ್ರಕಟಿಸಲಿದ್ದಾರೆ.
2024ರ ಆಗಸ್ಟ್ 9 ರಂದು ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ನಡೆಸಿ, ಹ*ತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶ ಕೇಳಿ ಬಂದಿತ್ತು. ದೇಶದ ಬಹುತೇಕ ಭಾಗಗಳಲ್ಲಿ ವೈದ್ಯರು ಮುಷ್ಕರ ನಡೆಸಿದ್ದರು. ಆಗಸ್ಟ್ 10 ರಂದು ಸಂಜಯ್ ರಾಯ್ನನ್ನು ಬಂಧಿಸಲಾಯಿತು.
ಇದನ್ನೂ ಓದಿ : WATCH : ಆ ಒಂದು ರೀಲ್ಸ್ನಿಂದ ಗಿನ್ನಿಸ್ ದಾಖಲೆ ಬರೆದ ಕೇರಳದ ಯುವಕ
ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಆರೋಪಿಗೆ ಗ*ಲ್ಲು ಶಿಕ್ಷೆ ಆಗಬೇಕು ಎಂದು ಸಿಬಿಐ ವಾದಿಸಿದೆ. ಪ್ರಕರಣದ ವಿಚಾರಣೆ ನವೆಂಬರ್ 12 ರಂದು ಆರಂಭವಾಗಿತ್ತು. ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದೆ. ಆರೋಪಿಯ ವಿಚಾರಣೆ ಜ.9ರಂದು ಕೊನೆಗೊಂಡಿತ್ತು.
LATEST NEWS
ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡ ಪ್ರಕಟ
Published
11 hours agoon
18/01/2025By
NEWS DESK3ಮಂಗಳೂರು/ಮುಂಬೈ : ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ಚಾಂಪಿಯನ್ಸ್ ಟ್ರೋಫಿ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ, 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್ನೆಸ್ ಸಮಸ್ಯಗೆ ಒಳಗಾಗಿದ್ದ ಜಸ್ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಖ್ಯಾತ ಡಾಲಿ ಚಾಯ್ವಾಲ ಮಂಗಳೂರಿಗೆ ಆಗಮನ
ಚಾಂಪಿಯನ್ಸ್ ಟ್ರೋಫಿಯು ಫೆ. 19ರಿಂದ ಆರಂಭವಾಗಲಿದ್ದು, ಪಾಕಿಸ್ತಾನವು ಆತಿಥ್ಯ ವಹಿಸಿದೆ. ಫೈನಲ್ ಮಾರ್ಚ್ 9ಕ್ಕೆ ನಡೆಯಲಿದೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.
LATEST NEWS
ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ
ಭಾರತೀಯರಿಗೆ ಬಿಗ್ ಶಾ*ಕ್; ಸೌದಿ ಅರೇಬಿಯಾದಲ್ಲಿ ಹೊಸ ವೀಸಾ ನಿಯಮಗಳು ಜಾರಿ
ಅಮೆರಿಕ ಗಡಗಡ… ಒಳಾಂಗಣದಲ್ಲಿ ಟ್ರಂಪ್ ಪ್ರಮಾಣವಚನ
ಸುಖ ದಾಂಪತ್ಯ ಜೀವನಕ್ಕೆ ಸರಳ ಸೂತ್ರಗಳು ಇಲ್ಲಿದೆ
WATCH : ಆ ಒಂದು ರೀಲ್ಸ್ನಿಂದ ಗಿನ್ನಿಸ್ ದಾಖಲೆ ಬರೆದ ಕೇರಳದ ಯುವಕ
ಈ ವಾರ ಮನೆಯಿಂದ ಹೊರ ಬರುವ ಕಂಟೆಸ್ಟೆಂಟ್ಸ್ಗಳು ಇವರೇ ?
Trending
- BIG BOSS6 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS4 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS4 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
- BIG BOSS5 days ago
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?