ಮೈಸೂರು: ಮದುವೆಯಾದ ನಾಲ್ಕು ತಿಂಗಳಿಗೆ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.
ಮೃತ ನವದಂಪತಿ ಗ್ರಾಮದ ರಾಕೇಶ್ (25), ಅರ್ಚನಾ(20)ಎಂದು ಗುರುತಿಸಲಾಗಿದೆ.
ರಾಕೇಶ್, ಅರ್ಚನಾ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಒಂದೇ ಊರಿನ ಅಕ್ಕ-ಪಕ್ಕದ ಮನೆಯವರಾಗಿದ್ದರು.
ನಾಲ್ಕು ತಿಂಗಳ ಹಿಂದೆ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದರು. ತಡರಾತ್ರಿ ಗ್ರಾಮದ ಊರ ಹೊರವಲವಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಈ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.