Connect with us

    LATEST NEWS

    ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಗೆ ನಾಲ್ಕು ಕಾರಣಗಳು..!

    Published

    on

    ಉತ್ತರಪ್ರದೇಶ/ಮಂಗಳೂರು: ಉತ್ತರ ಪ್ರದೇಶದ ಫೈಜಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ಅವಧಿಗೆ ಸಂಸದರಾಗಿದ್ದ ಲುಲ್ಲು ಸಿಂಗ್ ಅವರನ್ನು ಈ ಬಾರಿ ಜನರು ತಿರಸ್ಕರಿಸಿದ್ದಾರೆ. ಇದು ದೇಶದ ರಾಮ ಭಕ್ತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಶಾಕ್ ನೀಡಿದೆ ಅನ್ನೋದು ಸತ್ಯ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿರುವ ಕ್ಷೇತ್ರದಲ್ಲೇ ಈ ಸೋಲನ್ನು ರಾಮ ಭಕ್ತರಿಗೆ ಅರಗಿಸಿಕೊಳ್ಳಲು ಆಗ್ತಾ ಇಲ್ಲ. ಮಂದಿರ ಉದ್ಘಾಟನೆಯಾಗಿ ಕೇವಲ ಐದೇ ತಿಂಗಳಲ್ಲಿ ಆಗಿರುವ ಈ ಬೆಳವಣಿಗೆಗೆ ಅಸಲಿ ಕಾರಣಗಳು ಇಲ್ಲಿದೆ.

    ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದ ಲುಲ್ಲು ಸಿಂಗ್
    ಬಿಜೆಪಿ ಅಭ್ಯರ್ಥಿ ಲುಲ್ಲು ಸಿಂಗ್ ಅವರು ನೀಡಿದ್ದ ಸಂವಿಧಾನ ಬದಲಾವಣೆಯ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗಿತ್ತು. 272 ಸೀಟ್‌ನ ಬಹುಮತ ಸರ್ಕಾರದಿಂದ ಸಂವಿಧಾನ ತಿದ್ದುಪಡಿ ಸಾಧ್ಯವಿಲ್ಲ. ಹೊಸ ಸಂವಿಂಧಾನ ರಚಿಸಬೇಕು ಅಂದ್ರೆ ಮೂರನೇ ಎರಡರಷ್ಟು ಬಹುಮತ ಬೇಕಿದೆ. ಈ ಬಾರಿ ನಾವು ಅದನ್ನು ಪಡೆದು ಸಂವಿಧಾನ ಬದಲಾಯಿಸೋದು ಗ್ಯಾರೆಂಟಿ ಅನ್ನೋ ಹೇಳಿಕೆ ನೀಡಿದ್ದರು. ಇಲ್ಲಿಂದಲೇ ಅವರ ಸೋಲಿನ ಮೊದಲ ಮೆಟ್ಟಿಲು ಆರಂಭವಾಯಿತು ಅಂತ ರಾಜಕೀಯ ವಿಶ್ಲೇಷಕ ನರೇಶ್‌ ತಿವಾರಿ ಅಭಿಪ್ರಾಯ ಪಟ್ಟಿದ್ದಾರೆ. ಈ ಹೇಳಿಕೆಯನ್ನು ಇಂಡಿ ಒಕ್ಕೂಟ ಟ್ರಂಪ್‌ ಕಾರ್ಡ್‌ ಮಾಡಿಕೊಂಡು ಉತ್ತರ ಪ್ರದೇಶದಲ್ಲಿ ಪ್ರಚಾರ ಮಾಡಿತ್ತು. ಇದೇ ಕಾರಣದಿಂದ ಉತ್ತರ ಭಾರತದಲ್ಲಿ ಬಿಜೆಪಿಗೆ ದೊಡ್ಡ ಹೊಡೆತಕ್ಕೂ ಕಾರಣವಾಯ್ತು ಅಂತ ಅವರು ಹೇಳಿದ್ದಾರೆ.

    ಭೂ ಸ್ವಾಧೀನದ ಬಗ್ಗೆ ಜನರ ಅಸಮಾಧಾನ..!
    ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ನಡೆದ ಅಭಿವೃದ್ದಿ ಕಾರ್ಯಗಳು ಬಿಜೆಪಿಯ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಮತ್ತೊಂದು. ರಸ್ತೆ ಅಗಲೀಕರಣ ಹಾಗೂ ರಾಮ ಮಂದಿರ ಸಂಬಂಧಿತ ಯೋಜನೆಗಳಿಗಾಗಿ ನೂರಾರು ವರ್ಷಗಳಿಂದ ವಾಸವಾಗಿದ್ದ ಜನರು ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದರು. ಅಂಗಡಿ ಮುಂಗಟ್ಟುಗಳನ್ನು ಜಿಲ್ಲಾಡಳಿತ ಒತ್ತಾಯ ಪೂರ್ವಕವಾಗಿ ಸ್ವಾಧೀನ ಪಡಿಸಿಕೊಂಡಿತ್ತು. ಇದನ್ನು ಪ್ರತಿಪಕ್ಷಗಳ ಅಸ್ತ್ರವಾಗಿಸಿಕೊಂಡು ಅಲ್ಲಿನ ಜನರ ಕಣ್ಣೋರೆಸುವ ಪ್ರಯತ್ನ ಮಾಡಿತ್ತು. ಆದ್ರೆ ಬಿಜೆಪಿ ಅಂತಹ ಪ್ರಯತ್ನಕ್ಕೆ ಕೈ ಹಾಕದೆ ಜನರನ್ನು ಎಬ್ಬಿಸುವಲ್ಲಿ ಉತ್ಸಾಹ ತೋರಿಸಿದ್ದೇ ಪಕ್ಷದ ಸೋಲಿಗೆ ಎರಡನೇ ಪ್ರಮುಖ ಕಾರಣ.

    ಸ್ಥಳೀಯ ಸಮಸ್ಯೆಗಳನ್ನು ನಿರ್ಲಕ್ಷಿಸಿದ ಲುಲ್ಲು ಸಿಂಗ್‌…!
    ರಾಮ ಮಂದಿರ ನಿರ್ಮಾಣದ ಬಳಿಕ ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ದಿಗೆ ನೀಡಿದ ಆದ್ಯತೆಯನ್ನು ಲುಲ್ಲು ಸಿಂಗ್ ಕ್ಷೇತ್ರದ ಇತರ ಪ್ರದೇಶಗಳಿಗೆ ನೀಡಿರಲಿಲ್ಲ. ಅಯೋಧ್ಯೆ ಮೂಲ ಸೌಕರ್ಯಗಳ ಕೊರತೆಯಿಂದ ನರಳುತ್ತಿದ್ದು , ಗುಂಡಿ ಬಿದ್ದ ರಸ್ತೆಗಳು , ಕಳಪೆ ವಿದ್ಯುತ್ ಸರಬರಾಜು, ಶುಚಿತ್ವದ ಕೊರತೆ ಅಗಲ ಕಿರಿದಾದ ರಸ್ತೆಗಳಿಂದ ಟ್ರಾಫಿಕ್ ಜಾಮ್‌ ಇದೆಲ್ಲವೂ ಇಲ್ಲಿ ಚುನಾವಣಾ ವಿಚಾರವಾಗಿತ್ತು. ಹತ್ತು ವರ್ಷದಲ್ಲಿ ಸಂಸದರಾಗಿದ್ದ ಲುಲ್ಲು ಸಿಂಗ್ ಎರಡೂ ಅವಧಿಯಲ್ಲಿ ಕೇವಲ ಮೋದಿ ಹೆಸರಿನಲ್ಲೇ ಅಧಿಕಾರ ಹಿಡಿದಿದ್ದರು. ಅಭಿವೃದ್ದಿ ಆದ್ಯತೆ ನೀಡದೆ ಕೇವಲ ಮೋದಿ ಹೆಸರನ್ನಷ್ಟೇ ನೆಚ್ಚಿಕೊಂಡಿದ್ದರು. ಆದ್ರೆ ಇಲ್ಲಿ ಪ್ರಚಾರ ನಡೆಸಿದ ಅಖಿಲೇಶ್ ಯಾದವ್‌ ಜನರ ಸಮಸ್ಯೆ, ಭೂಸ್ವಾಧೀನ ಪರಿಹಾರ, ಉದ್ಯೋಗ ಸಮಸ್ಯೆ ನಿವಾರಣೆ ವಿಚಾರಕ್ಕೆ ಒತ್ತು ನೀಡಿದ್ದರು. ಇದು ಜನರು ಬಿಜೆಪಿಯಿಂದ ದೂರವಾಗಲು ಕಾರಣವಾಗಿತ್ತು.

    ಇದನ್ನೂ ಓದಿ..;  ಸರ್ಕಾರ ರಚಿಸಲು ಕಸರತ್ತು..! ಇಂಡಿ ಒಕ್ಕೂಟ ಸೇರಲು ಟಿಡಿಪಿ, ಜೆಡಿಯು ನಾಯಕರಿಗೆ ಆಫರ್‌..!! 

    ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಅಖೀಲೇಶ್ ಯಾದವ್‌..!
    ಅಭ್ಯರ್ಥಿಯ ಆಯ್ಕೆ ಮಾಡುವಲ್ಲಿಯೂ ಸಮಾಜವಾದಿ ಪಕ್ಷದ ನಿರ್ಧಾರ ಇಲ್ಲಿ ವರ್ಕೌಟ್ ಆಗಿದೆ. ಮಿಲ್ಕಿಪುರ್ ಹಾಗೂ ಸೋಹಾವಾಲ್ ಕ್ಷೇತ್ರಗಳಿಂದ ಒಂಭತ್ತು ಬಾರಿ ಶಾಸಕರಾಗಿದ್ದ ಅವಧೇಶ್ ಪ್ರಸಾದ್ ದಲಿತ ಮತಗಳನ್ನು ತಮ್ಮತ್ತ ಸೆಳೆದಿದ್ದಾರೆ. ಫೈಜಾಬಾದ್‌ನಲ್ಲಿ ಅತ್ಯಂತ ಹೆಚ್ಚಿನ ದಲಿತ ಮತಗಳಿದ್ದು, ಜೊತೆಗೆ ಮುಸ್ಲಿಂ ಹಾಗೂ ಯಾದವ ಸಮೂದಾಯದ ಮತಗಳು ಹೆಚ್ಚಾಗಿದೆ. ಈ ನಡುವೆ ಬಿಎಸ್‌ಪಿ ಬ್ರಾಹ್ಮಣ ಅಭ್ಯರ್ಥಿ ಸಚ್ಚಿದಾನಂದ್ ಪಾಂಡೆ ಅವರನ್ನು ಕಣಕ್ಕೆ ಇಳಿಸಿತ್ತು. ಬಿಎಸ್‌ಪಿ 46 ಸಾವಿರ ಮತಗಳನ್ನು ಪಡೆದು ಬಿಜೆಪಿ ಸೋಲಿಗೆ ತನ್ನ ಪಾಲು ನೀಡಿತ್ತು.

    2014 ರಲ್ಲಿ ಲುಲ್ಲು ಸಿಂಗ್ 2.82 ಲಕ್ಷ ಮತಗಳ ಅಂತರದ ಜಯಗಳಿಸಿದ್ದರು, ಆದರೆ 2019 ರಲ್ಲಿ ಎಸ್‌ಪಿ ಹಾಗೂ ಬಿಎಸ್‌ಪಿ ಮೈತ್ರಿಯಿಂದ ಅಂತರ ಕಡಿಮೆ ಆಗಿದ್ರೂ ಗೆಲುವು ಸಾಧಿಸಿದ್ದರು. ಆದ್ರೆ ಈ ಬಾರಿ, ಒಬಿಸಿ, ಮುಸ್ಲಿಂ ಮತಗಳು ಎಸ್‌ಪಿ ಯತ್ತ ಹರಿದಿವೆ. ಮುಸ್ಲಿಂ ಮತಗಳು ಇಂಡಿ ಒಕ್ಕೂಟದ ಹಿಂದೆ  ಕ್ರೂಢೀಕರಿಸಲ್ಪಟ್ಟವು ಮತ್ತು ಒಬಿಸಿಗಳು, ಬ್ರಾಹ್ಮಣರು ಮತ್ತು ಠಾಕೂರ್‌ಗಳಲ್ಲಿ ಬಿಜೆಪಿಯ ಬಗ್ಗೆ ಅಸಮಾಧಾನವನ್ನು ಸಹ ಲಾಭ ಮಾಡಿಕೊಂಡಿತು.

    ಇದನ್ನು ಓದಿ..; ಇನ್ನು ಮುಂದೆ ಅಯೋಧ್ಯೆಯಲ್ಲಿ ಮೊಬೈಲ್ ಬಳಕೆ ನಿಷೇಧ..!

    ಒಟ್ಟಾರೆ ತಾನು ಮಾಡಿದ ತಪ್ಪಿನಿಂದಲೇ ಬಿಜೆಪಿ ಅಯೋಧ್ಯೆ ಶ್ರೀರಾಮನ ನಗರಿ ಇರುವ ಕ್ಷೇತ್ರವನ್ನು ಕಳೆದುಕೊಳ್ಳಬೇಕಾಗಿ ಬಂದಿದೆ. ರಾಮ ಭಕ್ತರು ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಇದು ನಂಬಲು ಸಾಧ್ಯವಾಗ್ತಾ ಇಲ್ಲವಾದ್ರೂ, ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಜನರು ಸಮಸ್ಯೆ ಹಾಗೂ ಅಭಿವೃದ್ದಿಗೆ ಒತ್ತು ನೀಡಿ ಮತ ಚಲಾಯಿಸಿದ್ದಾರೆ ಅನ್ನೋದು ಸ್ಪಷ್ಟವಾಗಿದೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending