Connect with us

    LATEST NEWS

    ಖರಗ್ ಪುರ ಎಕ್ಸ್ ಪ್ರೆಸ್ ರೈಲು ಹರಿದು ನಾಲ್ವರು ಕಾರ್ಮಿಕರ ಭಯಾನಕ ಸಾವು..!

    Published

    on

    ಖರಗ ಪುರ : ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ  ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ಪುರುಷರು ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಬೆಳಗ್ಗೆ 10ಗಂಟೆ ಸಂದರ್ಭ  ಹಳಿಯಲ್ಲಿ  ಒಟ್ಟು ಐವರು ಕೆಲಸ ಮಾಡುತ್ತಿದ್ದರು ಆಗ ಎಕ್ಸ್ ಪ್ರೆಸ್ ರೈಲು ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆ ಸಂದರ್ಭ  ಓರ್ವ ಕುಡಿಯುವ ನೀರು ತರಲೆಂದು ಹೋಗಿದ್ದು ಆತ ಬದುಕುಳಿದಿದ್ದಾನೆ ಎನ್ನಲಾಗಿದೆ.

    ಉಳಿದ ನಾಲ್ವರು ಭೀಕರ ಸಾವನ್ನಪ್ಪಿದ್ದಾರೆ.

    BANTWAL

    ಉಳಾಯಿಬೆಟ್ಟು ದರೋಡೆ ಪ್ರಕರಣ : 10 ಜನರ ಬಂಧನ

    Published

    on

    ಜೂನ್ 21 ರಂದು ಉಳಾಯಿಬೆಟ್ಟಿನ ಪೆರ್ಮಂಕಿಯ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 7.45 ರ ಸುಮಾರಿಗೆ ಮುಸುಕುಧಾರಿ ವ್ಯಕ್ತಿಗಳು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಹಲ್ಲೆ ಮಾಡಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿತ್ತು.

    ಗುತ್ತಿಗೆದಾರ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಮನೆಗೆ ನುಗ್ಗಿದ್ದ ದರೋಡೆಕೋರರು ಇಲ್ಲಿ ಅಪಾರ ಪ್ರಮಾಣದ ಹಣ ಹಾಗೂ ನಗದು ಅಡಗಿಸಿ ಇಡಲಾಗಿದೆ ಎಂಬ ಹಿನ್ನೆಲೆಯಲ್ಲಿ ದರೋಡೆ ನಡೆಸಿದ್ದಾರೆ. ದರೋಡೆ ನಡೆದ ಬಳಿಕ ಮನೆಯ ಸಿಸಿ ಟಿವಿ ಪರಿಶೀಲಿಸಿದ ಪೊಲೀಸರಿಗೆ ಇದು ಉದ್ಯಮಿಯ ಪರಿಚಯದವರದೇ ಕೃತ್ಯ ಎಂಬುವುದು ಕೂಡಾ ಅರ್ಥವಾಗಿದೆ. ಹೀಗಾಗಿ ಮೊದಲಿಗೆ ಉದ್ಯಮಿಯ ಜೊತೆಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ನೀರುಮಾರ್ಗದ ವಸಂತ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರಗೆ ಬಂದಿದೆ. ಅರೋಪಿ ವಸಂತ ಜೊತೆಯಲ್ಲಿ ನೀರುಮಾರ್ಗದ ಇನ್ನೋರ್ವ ಆರೋಪಿ ರಮೇಶ್ ಪೂಜಾರಿ ಹಾಗೂ ಅಡ್ಯನಡ್ಕದ ರೇಮಂಡ್ ಡಿಸೋಜಾ ಎಂಬವರು ಮಾಹಿತಿದಾರರಾಗಿ ಕೆಲಸ ಮಾಡಿದ್ದಾರೆ. ಇವರ ಜೊತೆ ಕಾಸರಗೋಡು ಜಿಲ್ಲೆಯ ಉಪ್ಪಳದ ಬಾಲಕೃಷ್ಣ ಶೆಟ್ಟಿ ಕೂಡಾ ಕೈ ಜೋಡಿಸಿ ಕೇರಳದ ದರೋಡೆ ತಂಡಕ್ಕೆ ಮಾಹಿತಿ ರವಾನಿಸಿದ್ದಾನೆ.

    ಈ ನಾಲ್ಕು ಆರೋಪಿಗಳು ನೀಡಿದ ಮಾಹಿತಿ ಪ್ರಕಾರ, ಕೇರಳದ ಬಿಜು ಹಾಗೂ ಸತೀಶ್ ಬಾಬು ಎಂಬ ಕ್ರಿಮಿನಲ್ ಗಳು ತಮ್ಮ ಎರಡು ತಂಡದ ಸದಸ್ಯರನ್ನು ದರೋಡೆ ನಡೆಸಲು ಮಂಗಳೂರಿಗೆ ಕಳುಹಿಸಿದ್ದಾರೆ. ಈ ದರೋಡೆಯ ಸಂಚಿನಲ್ಲಿ ಒಟ್ಟು ಹದಿನೈದು ಜನರು ಭಾಗಿಯಾಗಿದ್ದು, ಸದ್ಯ ಹತ್ತು ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಜಾಕಿರ್, ವಿನೋಜ್ ಪಿಕೆ, ಸಜೀಶ್, ಶಿಜೋ ದೇವಸ್ಸಿ, ಸತೀಶ್ ಬಾಬು, ಬಿಜು ಕೇರಳದವರಾಗಿದ್ದರೆ, ಉಳಿದ ನಾಲ್ವರೂ ಕರ್ನಾಟಕದವರಾಗಿದ್ದಾರೆ.

    ಉದ್ಯಮಿ ಮನೆಯಲ್ಲಿ ಕೋಟ್ಯಂತರ ರೂಪಾಯಿಯ ಚಿನ್ನ ಹಾಗೂ ನಗದು ಇದೆ ಎಂದು ಈ ದರೋಡೆಗೆ ಸಂಚು ರೂಪಿಸಲಾಗಿತ್ತು. ದರೋಡೆ ನಡೆಸಿದ ಆರೋಪಿಗಳು ಬಚ್ಚಿಟ್ಟ ಚಿನ್ನಾಭರಣ ನೀಡುವಂತೆ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರಿಗೆ ಚಾಕುವಿನಿಂದ ಹಲ್ಲೆ ಕೂಡಾ ಮಾಡಿದ್ದರು. ಬಳಿಕ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು

    Continue Reading

    kerala

    ಕೇರಳದಲ್ಲಿ ಅಮೀಬಾ ಕಾಯಿಲೆಗೆ 3 ಮಕ್ಕಳ ಬಲಿ..!

    Published

    on

    ಮಂಗಳೂರು ( ಕೇರಳ ) : ಕೇರಳದಲ್ಲಿ ಪ್ರೈಮರಿ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (PAM) ಎಂದು ಕರೆಯಲಾಗುವ ಮೆದಳು ಸಂಬಂಧಿ ಕಾಯಿಲೆ ಮಕ್ಕಳು ಬಲಿಯಾಗುತ್ತಿದ್ದಾರೆ. ಇಂದು ಕೋಯಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷ ಪ್ರಾಯದ ಮೃದುಲ್ ಎಂಬ ಬಾಲಕನ ಸಾವಿನೊಂದಿಗೆ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

    ಪ್ರೈಮರಿ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (PAM) 

    ಅಮೀಬಾ ನೇಗ್ಲೇರಿಯಾ ಫೌಲೆರಿ ಎಂದು ಕರೆಯಲಾಗುವ ಮೆದುಳು ತಿನ್ನುವ ಅಮೀಬಾದಿಂದ ಈ ಕಾಯಿಲೆ ಹರಡುತ್ತದೆ. ವಿಶೇಷ ಅಂದ್ರೆ ಈ ಕಾಯಿಲೆ ನಿಂತ ನೀರಿನ ಕೆರೆ, ಈಜುಕೊಳ ಮೊದಲಾದ ಕಡೆಯಲ್ಲಿ ಸ್ನಾನ ಮಾಡಿದವರಿಗೆ ಹರಡಿದ್ದು ಮೃತ ಮೂವರೂ ಈ ರೀತಿ ಸ್ನಾನ ಮಾಡಿದವರಾಗಿದ್ದಾರೆ. ಇಲ್ಲಿಂದಲೇ ಈ ಅಮಿಬಾ ಮಕ್ಕಳ ದೇಹ ಪ್ರವೇಶ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಜೂನ್ 16 ರಂದು ಕೋಯಿಕ್ಕೋಡ್‌ನ ಅಚಂಕುಲಂ ಫಾರೂಕ್ ಕಾಲೇಜು ಬಳಿಯ ಕೆರೆಯಲ್ಲಿ ಮೃದುಲ್ ಈಜಾಡಿದ್ದಾನೆ . ಬಳಿಕ ಮೃದುಲ್‌ಗೆ ರೋಗ ಲಕ್ಷಣ ಕಾಣಿಸಿದ ತಕ್ಷಣ ಪಾಲಿಕೆ ಅಧಿಕಾರಿಗಳು ಕೆರೆಯನ್ನು ಮುಚ್ಚಿದ್ದಾರೆ. ಕಣ್ಣೂರಿನ 13 ವರ್ಷದ ದಕ್ಷಿಣಾ ಎಂಬ ಬಾಲಕಿ ಜೂನ್ 12 ರಂದು ಇದೇ ಕಾಯಿಲೆಯಿಂದ ಮೃತ ಪಟ್ಟಿದ್ದಳು. ಜನವರಿಯಲ್ಲಿ ಶಾಲೆಯಿಂದ ಮುನ್ನಾರ್‌ಗೆ ಅಧ್ಯಯನ ಪ್ರವಾಸ ಹೋಗಿದ್ದಾಗ ಈಜುಕೊಳದಲ್ಲಿ ಸ್ನಾನ ಮಾಡಿದ ಬಳಿಕ ಈ ರೋಗ ಲಕ್ಷಣ ಕಾಣಿಸಿಕೊಂಡಿತ್ತು. ಇನ್ನು ಮಲ್ಲಪುರಂ ಜಿಲ್ಲೆಯ ಮುನ್ನಿಯೂರ್ ಕಲಿಯತ್ತಮುಕ್ ಮೂಲದ ಫದ್ವಾ ಎಂಬ 5 ವರ್ಷದ ಮಗು ಕೂಡಾ ಇದೇ ರೋಗ ಲಕ್ಷಣದಿಂದ ಮೃತ ಪಟ್ಟಿದ್ದು, ಮಗು ಮನೆಯ ಸಮೀಪದ ಕಾಡುಂಡಿಪುಳ ಎಂಬಲ್ಲಿ ಸ್ನಾನ ಮಾಡಿದ ಬಳಿಕ ಜ್ವರ ಕಾಣಿಸಿಕೊಂಡಿತ್ತು.

    ರೋಗದ ಗುಣ ಲಕ್ಷಣ

    ನಾಗ್ಲೇರಿಯಾ ಫೌಲೆರಿ ಅಮೀಬಾ ಮೂಗಿನ ಮೂಲಕ ವಾಸನೆಯನ್ನು ಗ್ರಹಿಸುವ ನರಗಳ ಮೂಲಕ ಮೆದುಳನ್ನು ಪ್ರವೇಶಿಸುತ್ತವೆ. ಮೆದುಳು ಮತ್ತು ಮೆನಿಂಜಸ್ ಎಂಬ ಭಾಗವನ್ನು ಆವರಿಸಿಕೊಳ್ಳುವ ಮೂಲಕ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ರೋಗಾಣುಗಳು ಮೆದುಳಿಗೆ ಪ್ರವೇಶಿಸಿದ 5-7 ದಿನಗಳಲ್ಲಿ ರೋಗಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಸಾಮಾನ್ಯ ರೋಗಲಕ್ಷಣಗಳೆಂದರೆ ಅಧಿಕ ಜ್ವರ, ತಲೆನೋವು, ವಾಂತಿ, ಅರೆನಿದ್ರಾವಸ್ಥೆ ಹಾಗೂ ನಿತ್ರಾಣ ಉಂಟಾಗುತ್ತದೆ. ಮೆದುಳನ್ನು ಅಮೀಬಾ ತಿನ್ನುವುದರಿಂದ ಮೆದುಳಿನ ಕೋಶಗಳು ನಾಶವಾಗಿ ಜೀವಹಾನಿ ಸಂಭವಿಸುತ್ತಿದೆ. 10,000 ಜನರಲ್ಲಿ ಒಬ್ಬರಿಗೆ ಬರುವ ಈ ಅಪರೂಪದ ಕಾಯಿಲೆಯಲ್ಲಿ ಬದುಕುಳಿಯುವ ಸಾಧ್ಯತೆ ಕೇವಲ 3% ಮಾತ್ರ.

    Continue Reading

    LATEST NEWS

    ಮದುವೆಗೂ ಮೊದಲು ಹುಡುಗರು ಹುಡುಗಿಯ ಬಳಿ ಈ ಪ್ರಶ್ನೆಗಳನ್ನು ಕೇಳಲೇಬೇಕಂತೆ!

    Published

    on

    ಮಂಗಳೂರು: ಮದುವೆ, ಸಂಸಾರ ಹಾಗೂ ಮಕ್ಕಳು ಎಲ್ಲವೂ ಸರಿಯಾದ ಸಮಯಕ್ಕೆ ಆದರೇನೇ ಚಂದ ಎನ್ನುವ ಮಾತಿದೆ. ಆದರೆ ಈಗಿನ ಕಾಲದಲ್ಲಿ ಮದುವೆಯನ್ನು ಮುಂದಕ್ಕೆ ಹಾಕುವವರೇ ಹೆಚ್ಚಾಗಿದ್ದಾರೆ. ಮದುವೆಗೆ ವಧು ಹುಡುಕುತ್ತಿರುವಾಗ, ಮನೆಯ ಹಿರಿಯರು ಹುಡುಗಿಯ ಮನೆಗೆ ಹೋಗುವ ಸಂಪ್ರದಾಯವಿದೆ. ಹುಡುಗಿ ನೋಡುವ ಶಾಸ್ತ್ರದ ಬಳಿಕ ಹುಡುಗ ಮತ್ತು ಹುಡುಗಿ ಪರಸ್ಪರ ಮಾತನಾಡಲು ಅವಕಾಶವಿರುತ್ತದೆ. ಈ ವೇಳೆ ಆಕೆಯ ಬಳಿ ಈ ಪ್ರಶ್ನೆಗಳನ್ನು ಕಡ್ಡಾಯವಾಗಿ ಕೇಳಲೇ ಬೇಕಂತೆ. ಹುಡುಗಿಯು ನೀಡುವ ಉತ್ತರವು ಈಕೆಯು ತನಗೆ ಸಂಗಾತಿಯಾಗಲು ಅರ್ಹಳೇ ಎನ್ನುವುದಕ್ಕೆ ಸ್ಪಷ್ಟತೆಯೂ ಸಿಗುತ್ತದೆಯಂತೆ.

    ಯಾವ ರೀತಿಯ ಜೀವನ ಸಂಗಾತಿಯ ಬೇಕೆಂದು ಪ್ರಶ್ನಿಸಿ

    ತಮ್ಮ ಜೀವನ ಸಂಗಾತಿಯ ಕುರಿತು ಎಲ್ಲರೂ ಕನಸುಗಳನ್ನು ಕಟ್ಟಿರುತ್ತಾರೆ. ಹೀಗಾಗಿ ಹುಡುಗರು ಹುಡುಗಿಯ ಬಳಿ ಯಾವ ರೀತಿಯ ವ್ಯಕ್ತಿಯನ್ನು ತನ್ನ ಜೀವನ ಸಂಗಾತಿಯನ್ನಾಗಿ ಪಡೆಯಲು ಬಯಸುತ್ತೀರಾ ಎನ್ನುವ ಪ್ರಶ್ನೆಯನ್ನು ಕೇಳುವುದು ಒಳ್ಳೆಯದು. ಆಕೆಯ ಉತ್ತರಕ್ಕೆ ತಕ್ಕಂತೆ ನೀವಿದ್ದರೆ ನೀವು ಅವರಿಗೆ ಸರಿಯಾದ ಸಂಗಾತಿಯಾದಂತೆಯೇ ಎನ್ನುವುದು ನಿಮಗೆ ತಿಳಿಯುತ್ತದೆ.

    ಇಷ್ಟ ಕಷ್ಟಗಳ ಬಗ್ಗೆ ತಿಳಿಯಿರಿ

    ಹುಡುಗ ಹುಡುಗಿಯ ಮಾತುಕತೆಯ ವೇಳೆಯಲ್ಲಿ ತನ್ನ ಇಷ್ಟ ಕಷ್ಟಗಳ ಬಗ್ಗೆ ಚರ್ಚಿಸುವುದು ಒಳ್ಳೆಯದು. ಹುಡುಗಿಯ ಇಷ್ಟವೇನು ಎನ್ನುವುದು ತಿಳಿಯುವುದು ಮುಖ್ಯ. ಇಬ್ಬರ ಇಷ್ಟ ಕಷ್ಟಗಳು ಒಂದೇಯಾಗಿದ್ದರೆ ಮದುವೆಯ ನಿರ್ಧಾರಕ್ಕೆ ಹೋಗಬಹುದು. ಒಂದು ವೇಳೆ ಇಬ್ಬರ ಇಷ್ಟಗಳು ತದ್ವಿರುದ್ದವಾಗಿದ್ದರೆ ಸಂಬಂಧವನ್ನು ಮುಂದುವರೆಸುವುದೇ ಬೇಡವೇ ಎನ್ನುವುದರ ಬಗ್ಗೆ ನಿಮಗೆ ಸ್ಪಷ್ಟ ಚಿತ್ರಣವು ಸಿಗುತ್ತದೆ.

    ಸೇವಿಸುವ ಆಹಾರದ ಬಗ್ಗೆ ಮಾತನಾಡಿ

    ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ನಿಮ್ಮ ಭವಿಷ್ಯದ ಜೀವನ ಸಂಗಾತಿಯ ಬಳಿ ಸಸ್ಯಾಹಾರಿ ಅಥವಾ ಮಾಂಸಾಹಾರಿಯೇ? ಎನ್ನುವ ಪ್ರಶ್ನೆಗಳನ್ನು ಕೇಳಲೇಬೇಕು. ಇಬ್ಬರ ಆಹಾರ ಹಾಗೂ ಅಭಿರುಚಿಗಳು ಬೇರೆ ಬೇರೆಯಾಗಿದ್ದರೆ ಬದುಕು ಕಷ್ಟವೆನಿಸುತ್ತದೆ.

    ಭವಿಷ್ಯದ ಯೋಜನೆಯ ಬಗ್ಗೆ ಪ್ರಶ್ನಿಸಿ

    ಈಗಿನ ಕಾಲದಲ್ಲಿ ಬಹುತೇಕ ಹುಡುಗಿಯರು ಉದ್ಯೋಗದಲ್ಲಿರುತ್ತಾರೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಕೆಲವೊಮ್ಮೆ ಕೆಲಸಕ್ಕೆ ಹೋಗಲು ಸಾಧ್ಯವಾಗದೇ ಇರಬಹುದು. ಆದರೆ ಕೆಲ ವಿವಾಹದ ಬಳಿಕ ಉದ್ಯೋಗಕ್ಕೆ ಹೋಗಬೇಕು, ಹೀಗೆ ಜೀವನ ನಡೆಯಬೇಕು ಎಂದು ಕೊಂಡಿರುತ್ತಾರೆ. ಪರಸ್ಪರ ಪ್ರಶ್ನಿಸಿ ಉತ್ತರ ಕಂಡುಕೊಂಡರೆ ಇಬ್ಬರಿಗೂ ತಮ್ಮ ಭವಿಷ್ಯದ ಯೋಜನೆಯ ಬಗ್ಗೆ ಸ್ಪಷ್ಟನೆ ಸಿಗುತ್ತದೆ. ಇಬ್ಬರ ಜೀವನದ ಗುರಿಗಳು ವಿರುದ್ಧ ದಿಕ್ಕಿನಲ್ಲಿದ್ದರೆ ಜೊತೆಯಾಗಿ ಬದುಕಲು ಕಷ್ಟವಾಗಬಹುದು. ಈ ಪ್ರಶ್ನೆಯನ್ನು ಮದುವೆಗೂ ಮುಂಚಿತವಾಗಿ ಕೇಳುವುದು ಸೂಕ್ತ.

    Continue Reading

    LATEST NEWS

    Trending