Connect with us

    DAKSHINA KANNADA

    ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ

    Published

    on

    ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.

    ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
    ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ

    Published

    on

    ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.

    ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.

    ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್‌ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.

    Continue Reading

    DAKSHINA KANNADA

    ಮಾಜಿ ಸಚಿವ ಜನಾರ್ದನ ಪೂಜಾರಿಯಿಂದ ಕುದ್ರೋಳಿ ದಸರಾ ಉದ್ಘಾಟನೆ

    Published

    on

    ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಕಳೆದ 34 ವರ್ಷಗಳಿಂದ ವಿಜೃಂಭಣೆಯ ದಸರಾ ಮಹೋತ್ಸವ ನಡೆಸಲಾಗುತ್ತಿದೆ. ಈ ಬಾರಿಯೂ ವಿಜೃಂಭಣೆಯಿಂದ ನಡೆಯಲಿರುವ ದಸರಾ ಉತ್ಸವಕ್ಕೆ ಇಂದು(ಅ.3) ಮುಂಜಾನೆ ಹನ್ನೊಂದು ಘಂಟೆಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಚಾಲನೆ ನೀಡಿದ್ದಾರೆ.

    ಮುಂಜಾನೆ 8.30ಕ್ಕೆ ಗುರು ಪೂಜೆಯೊಂದಿಗೆ ಕುದ್ರೋಳಿ ಕ್ಷೇತ್ರದ ನವರಾತ್ರಿ ಉತ್ಸವದ ಧಾರ್ಮಿಕ ವಿಧಿವಿಧಾನ ಆರಂಭಗೊಂಡಿತ್ತು. ನಾರಾಯಣ ಗುರುಗಳಿಗೆ, ಕ್ಷೇತ್ರದ ದೇವರು ಹಾಗೂ ಪರಿವಾರ ದೈವಗಳಿಗೆ ವಿಶೇಷ ಪೂಜೆಯ ಬಳಿಕ ನವರಾತ್ರಿ ಉತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಶಾರದೆಯನ್ನು ಹೊತ್ತು ತಂದ ಭಕ್ತರು ಇಲ್ಲಿನ ದರ್ಬಾರ್ ಹಾಲ್‌ನಲ್ಲಿ ಶಾರದೆಯನ್ನು ಪ್ರತಿಷ್ಠಾಪಿಸುವ ಮೂಲಕ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ.

    ಇದನ್ನೂ ಓದಿ : ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅದ್ದೂರಿ ಚಾಲನೆ

    ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಪುನರ್‌ ನಿರ್ಮಾಣದ ರೂವಾರಿ ಹಾಗೂ ದಸರಾ ಉತ್ಸವದ ಕಾರಣೀಕರ್ತರು ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ. ಈ ಬಾರಿ ಅವರೇ  ದಸರಾ ಉತ್ಸವವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಿದ್ದಾರೆ. ಈ ಬಾರಿಯ ದಸರಾ ಮಹೋತ್ಸವದ ಪ್ರತಿಯೊಂದ ವಿಚಾರವನ್ನು ಗಮನಿಸಿರುವ ಜನಾರ್ಧನ ಪೂಜಾರಿಯವರು ಕಳೆದೆರಡು ದಿನಗಳಿಂದ ಕ್ಷೇತ್ರಕ್ಕೆ ನಿರಂತರ ಭೇಟಿ ನೀಡಿ ದಸರಾ ಸಿದ್ಧತೆಗಳನ್ನು ವೀಕ್ಷಣೆ ಮಾಡಿದ್ದರು. ಇಂದು ದಸರಾ ಉದ್ಘಾಟನೆಗೆ ದರ್ಬಾರ್‌ ಹಾಲ್‌ನಲ್ಲಿ ನಡೆದುಕೊಂಡೇ ಬಂದ ಪೂಜಾರಿಯವರು ಗಮನ ಸೆಳೆದಿದ್ದರು. ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಗಣ್ಯ ಅತಿಥಿಗಳು ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಭಾಗವಹಿಸಿ, ಶಾರದೆ ಹಾಗೂ ನವದುರ್ಗೆಯರ ಆಶೀರ್ವಾದ ಪಡೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಕರಾವಳಿಯಲ್ಲಿ ದಸರಾ ಸಂಭ್ರಮ; ಜಗಮಗಿಸುತ್ತಿರುವ ಮಂಗಳೂರು

    Published

    on

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮುಖ್ಯವಾಗಿ ಮಂಗಳೂರು ದಸರಾವನ್ನು ಆಚರಿಸುತ್ತಾರೆ. ನವರಾತ್ರಿ ಹಬ್ಬ, ವಿಜಯದಶಮಿ ಎಂಬುವುದಾಗಿಯೂ ಕರೆಯುತ್ತಾರೆ. ಈ ಹಬ್ಬದ ಸಮಯದಲ್ಲಿ ಹುಲಿ ನೃತ್ಯ, ಸಿಂಹ ನೃತ್ಯ ಮತ್ತು ಕರಡಿ ನೃತ್ಯ ಬಹು ಆಕರಷಣೀಯವಾಗಿರುತ್ತದೆ. 10 ದಿನಗಳ ಕಾಲ ಮಂಗಳೂರಿನ ಬಹುತೇಕ ರಸ್ತೆಗಳಲ್ಲಿ ದಸರಾ ಮೆರವಣಿಗೆಗಾಗಿ ದೀಪಗಳು ಮತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವುದನ್ನು ಕಾಣಬಹುದು. . ಮಂಗಳೂರು ದಸರಾವನ್ನು ಬಿ.ಆರ್.ಕರ್ಕೇರ ಮೊದಲು ಪ್ರಾರಂಭಿಸಿದರು.

    ಹುಲಿವೇಷದ ಅಬ್ಬರ:
    ಹುಲಿವೇಷ ದಸರಾ ಸಂದರ್ಭದಲ್ಲಿ ಮಾಡುವ ಜಾನಪದ ನೃತ್ಯವಾಗಿದೆ. ವಿಶಿಷ್ಟವಾಗಿ ಯುವ ಪುರುಷರು ಪಡೆ ರಚಿಸಿಕೊಂಡು ಹುಲಿಗಳಂತೆ ಬಣ್ಣ ಹಚ್ಚಿ ವೇಷಭೂಷಣವನ್ನು ಧರಿಸುತ್ತಾರೆ. ತುಳುವಿನಲ್ಲಿ ಇದನ್ನು ತಾಸೆ ತಂಡ ಎಂದು ಕರೆಯುತ್ತಾರೆ.


    ಈ ಪಡೆಗಳು ತಮ್ಮ ಬ್ಯಾಂಡ್‌ಗಳ ಡ್ರಮ್ ಬೀಟ್‌ಗಳೊಂದಿಗೆ ಪಟ್ಟಣಗಳ ಬೀದಿಗಳಲ್ಲಿ ಸಂಚರಿಸುತ್ತಾರೆ. ಅವರು ಸುಮಾರು ಹತ್ತು ನಿಮಿಷಗಳ ಕಾಲ ಬಿಡುವಿಲ್ಲದೆ ಪ್ರದರ್ಶನವನ್ನು ನೀಡುತ್ತಾರೆ. ದೇವಿಯ ನೆಚ್ಚಿನ ಪ್ರಾಣಿ ಹುಲಿಯಾದ್ದರಿಂದ ಪಿಲಿನಲಿಕೆ ಶಾರದಾ ದೇವಿಯನ್ನು ಗೌರವಿಸಲು ನಡೆಸಲಾಗುತ್ತದೆ.
    ಗೋಕರ್ಣನಾಥೇಶ್ವರ ದೇವಾಲಯದ ದೇವಿ ವಿಗ್ರಹಗಳು:
    ನವರಾತ್ರಿಯ ಸಮಯದಲ್ಲಿ ಶಾರದಾ ದೇವಿಯೊಂದಿಗೆ ವಿವಿಧ ಮೂರ್ತಿಗಳನ್ನು ಸ್ವರ್ಣ ಕಲಾಮಂಟಪದಲ್ಲಿ ಸ್ತೋತ್ರಗಳ ಪಠಣ ಹಾಗೂ ವೈದಿಕ ಆಚರಣೆಗಳ ನಡುವೆ ಪ್ರತಿಷ್ಠಾಪಿಸುತ್ತಾರೆ. ಒಂಬತ್ತು ದಿನಗಳ ಆಚರಣೆಗಳಲ್ಲಿ, ಮಹಾಗಣಪತಿ ಮತ್ತು ನವದುರ್ಗೆಯರ ಜೊತೆಗೆ ಶಾರದಾ ದೇವಿಯ ಅಲಂಕೃತ ವಿಗ್ರಹಗಳನ್ನು ಪೂಜಿಸಲಾಗುತ್ತದೆ.


    ನವರಾತ್ರಿ ನವದುರ್ಗೆಯರು:
    ಶಾರದಾ ದೇವಿಯ, ಮಹಾಗಣಪತಿ, ಆದಿ ಶಕ್ತಿ ದೇವಿಯನ್ನು ವಿಶೇಷವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಜೊತೆಗೆ ನವದರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾಯಿನಿ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿ ಹಾಗೂ ಸಿದ್ಧಿದಾತ್ರಿ ಯನ್ನು ಪ್ರತಿಷ್ಠಾಪಿಸಿರುತ್ತಾರೆ,

    ಸಂಭ್ರಮದ ಮೆರವಣಿಗೆ:
    ವಿಜಯ ದಶಮಿ ದಿನ ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಿ ಮರುದಿನ ಮುಂಜಾನೆ ನಡೆಯುತ್ತದೆ. ಮಹಾಗಣಪತಿ ಮತ್ತು ಶಾರದೆಯ ಜೊತೆಗೆ ನವದುರ್ಗೆಯರ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಈ ಮೆರವಣಿಗೆಯಲ್ಲಿ ಪುಷ್ಪಗಳು, ಅಲಂಕಾರಿಕ ಛತ್ರಿಗಳು, ಬ್ಯಾಂಡ್‍ಗಳು, ಚೆಂಡೆ ಮತ್ತು ಸಾಂಪ್ರದಾಯಿಕ ನೃತ್ಯ, ಜಾನಪದ ನೃತ್ಯಳ, ಯಕ್ಷಗಾನ ಪಾತ್ರಗಳು, ಡೊಳ್ಳು ಕುಣಿತ, ಪಿಲಿನಲಿಕೆ ಮತ್ತು ಇತರ ಸಾಂಪ್ರದಾಯಿಕ ಕಲಾ ಪ್ರಕಾರಗಳು ಇರುತ್ತದೆ. ಕುದ್ರೋಳಿ, ಮಣ್ಣಗುಡ್ಡ, ಲೇಡಿಹಿಲ್, ಲಾಲ್‌ಬಾಗ್, ಕೆಎಸ್ ರಾವ್ ರಸ್ತೆ, ಹಂಪನಕಟ್ಟೆ, ಕಾರ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಈ ಮೆರವಣಿಗೆ ಸಾಗುತ್ತದೆ.
    ದಸರಾ ಸಂಭ್ರಮದ ಇತರ ಸ್ಥಳಗಳು:
    ಮಂಗಳೂರು ದಸರಾವನ್ನು ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವದ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಮುಲ್ಕಿ ಬಪ್ಪನಾಡು ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ, ಶ್ರೀ ವೆಂಕಟ್ರಮಣ ದೇವಸ್ಥಾನ, ಶ್ರೀ ಜೋಡುಮುತ್ತು ಮುಂತಾದ ದೇವಸ್ಥಾನಗಳಲ್ಲಿ ಆಚರಣೆಯನ್ನುಆಯೋಜಿಸುತ್ತಾರೆ.


    ಬಹು ವಿಶೇಷ ಮಂಗಳಾದೇವಿ ದಸರಾ:
    ಮಂಗಳಾದೇವಿ ದೇವಸ್ಥಾನ, ಬೋಳಾರ್ ಭಾರತದಾದ್ಯಂತ ಇರುವ ಭಕ್ತರನ್ನು ಆಕರ್ಷಿಸುತ್ತದೆ. ಮಂಗಳೂರು ಎಂಬ ಹೆಸರು ಮಂಗಳಾದೇವಿಯಿಂದ ಬಂದಿದೆ. ಮಂಗಳಾದೇವಿ ದೇವಸ್ಥಾನವು ಜಾನಪದ, ಸಂಗೀತ, ನಾಟಕ, ವಿವಿಧ ವಿಷಯಗಳ ನಾಟಕಗಳು, ಮತ್ತು ಭಕ್ತಿಗೀತೆಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತದೆ. ಮಹಾನವಮಿ ಎಂದು ಕರೆಯಲ್ಪಡುವ ಒಂಬತ್ತನೇ ದಿನದಂದು ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ಅಲಂಕೃತ ದೇವಿಯನ್ನು ಭವ್ಯ ರಥದ ಮೇಲೆ ಕೂರಿಸಿದ ನಂತರ ರಥವನ್ನು ಎಳೆಯಲಾಗುತ್ತದೆ.

    Continue Reading

    LATEST NEWS

    Trending