DAKSHINA KANNADA
ಎಚ್ಚರ! ಟೆಲಿಗ್ರಾಂ ಆಪ್ ಟಾಸ್ಕ್ ಮೂಲಕ ನಡೆಯುತ್ತೆ ವಂಚನೆ; ಮಂಗಳೂರಿನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಮಹಿಳೆ
ಮಂಗಳೂರು : ಟೆಲಿಗ್ರಾಂ ಆ್ಯಪ್ನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಗಾಯತ್ರಿ ಎಂಬವರಿಂದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ. ಫೆ.23 ರಂದು ತನಗೆ ಟೆಲಿಗ್ರಾಂ ನಂಬರ್ಗೆ ಲಿಂಕ್ ಮೂಲಕ ಮೆಸೇಜ್ ಬಂದಿತ್ತು. ಅದನ್ನು ತೆರೆದಾಗ ಅವರನ್ನು ಟೆಲಿಗ್ರಾಂ ಗ್ರೂಪ್ಗೆ ಸೇರ್ಪಡೆಗೊಳಿಸಲಾಗಿತ್ತು.
ಬಳಿಕ ಸ್ಟಾರ್ ರೇಟಿಂಗ್ ಎಂಬ ಟಾಸ್ಕ್ ನೀಡಲಾಗಿದ್ದು, ತನಗೆ ಅವರಿಂದ 3,000 ರೂ. ಜಮೆ ಆಗಿತ್ತು. ಅದಕ್ಕೆ ಪ್ರತಿಯಾಗಿ 9,440 ರೂ.ಗಳನ್ನು ಅವರ ಖಾತೆಗೆ ಜಮೆ ಮಾಡಲಾಯಿತು.
ಬಳಿಕ ಗ್ರೂಪ್ ಮಚೆರ್ಂಟ್ ಟಾಸ್ಕ್ ಮಿಷನ್ ಪೂರ್ಣಗೊಳಿಸಲು ಹಣ ಪಾವತಿಸುವಂತೆ ತಿಳಿಸಿ ಫೆ.24ರಿಂದ 28ರವರೆಗೆ ಹಂತಹಂತವಾಗಿ 11,15,500 ರೂ. ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ಗಾಯತ್ರಿ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.
DAKSHINA KANNADA
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!
ಮಂಗಳೂರು: ಹೂವುಗಳ ಅಲಂಕಾರದಿಂದ ದೇವರ ಕೋಣೆ ಸುಂದರವಾಗಿ ಕಾಣಿಸುತ್ತದೆ. ಅಲ್ಲದೇ ದೇವರ ಪೂಜೆ ಪೂರ್ಣವೆನಿಸುತ್ತದೆ. ಹೂವುಗಳು ಮನೆಯ ಶಕ್ತಿಯನ್ನು ಬದಲಾಯಿಸುತ್ತದೆ. ಆದರೆ ಅದೇ ಹೂಗಳು ನಿಮ್ಮ ಮನೆಯಲ್ಲಿ ದೋಷಗಳನ್ನು ಸೃಷ್ಟಿಸಲು ಪ್ರಾರಂಭಿಸುತ್ತದೆ.
ಒಣಗಿದ ಹೂವುಗಳನ್ನು ನಿಮ್ಮ ಮನೆಯಲ್ಲಿ ಇರಿಸಿದರೆ ಅಥವಾ ಅದನ್ನು ತೆಗೆಯದೇ ಹಾಗೇ ಬಿಟ್ಟರೆ, ಅದು ನಿಮ್ಮ ಮನೆಯ ಶಕ್ತಿಯನ್ನು ಹಾಳು ಮಾಡುತ್ತದೆ. ಹಾಗಾಗಿ ಒಣಗಿದ ಅಥವಾ ಬಾಡಿದ ಹೂವುಗಳನ್ನು ಮನೆಯಲ್ಲಿ ಇಡಬಾರದು. ದೇವರಿಗೆ ಆಗಿರಬಹುದು ಅಥವಾ ಮನೆಯಲ್ಲೇ ಆಗಿರಬಹುದು ಯಾವಾಗಲೂ ಪರಿಮಳಯಕ್ತ ಹೂವುಗಳನ್ನು ಮಾತ್ರ ಇಟ್ಟುಕೊಳ್ಳಬೇಕು.
ತಾಜಾ ಹೂವುಗಳಿಗೆ ಅದ್ಭುತವಾದ ಧನಾತ್ಮಕ ಶಕ್ತಿಯನ್ನು ಸೃಷ್ಟಿಸುವ ಸಾಮರ್ಥ್ಯವಿರುತ್ತದೆ. ಅವುಗಳಿಂದ ಉತ್ಪತ್ತಿಯಾಗುವ ಶಕ್ತಿಯು ಧನಾತ್ಮಕವಾಗಿ ನಮ್ಮ ಸುತ್ತಮುತ್ತಲಿನ ಸ್ಥಳವನ್ನು ಬದಲಾಯಿಸುತ್ತದೆ. ತಾಜಾ ಹೂವುಗಳು ಇರುವಲ್ಲೆಲ್ಲಾ ತಮ್ಮ ಸುತ್ತಲಿನ ಜೀವಿಗಳನ್ನು ಸಕಾರಾತ್ಮಕವಾಗಿರಿಸುತ್ತದೆ. ಅದೇ ಹೂವುಗಳು ಒಣಗಲು ಪ್ರಾರಂಭವಾದಾಕ್ಷಣ ಅದರಿಂದ ನಕಾರಾತ್ಮಕ ಕಂಪನಗಳು ಹರಡಲು ಪ್ರಾರಂಭವಾಗುತ್ತದೆ.
ಪೂಜೆಯಲ್ಲಿ ಒಣಗಿದ ಹೂವುಗಳನ್ನು ಬಳಸುವುದರಿಂದ ಆ ಪೂಜೆಯಿಂದ ಯಾವುದೇ ರೀತಿಯ ಫಲವನ್ನು ನಮಗೆ ಅನುಭವಿಸಲು ಸಾಧ್ಯವಾಗುವುದಿಲ್ಲ. ಮತ್ತೊಂದೆಡೆ ಪೂಜೆಯು ಯಾವುದೇ ಶುಭ ಫಲವನ್ನು ಪಡೆಯುವುದಿಲ್ಲ. ಬದಲಾಗಿ ಅಶುಭ ಫಲಗಳನ್ನು ಅನುಭವಿಸುವಂತಾಗುತ್ತದೆ.
ಅದಕ್ಕಾಗಿಯೇ ಹೂವುಗಳನ್ನು ಒಣಗುತ್ತಿದ್ದಂತೆ ಅವುಗಳನ್ನು ತಕ್ಷಣವೇ ಅಲ್ಲಿಂದ ಬದಲಾಯಿಸಬೇಕು. ಒಂದು ವೇಳೆ ಒಣಗಿದ ಹೂವುಗಳು ಇದ್ದರೆ ಅದು ಆರೋಗ್ಯದ ಮೇಲೆಯೂ ಮತ್ತಷ್ಟು ಕೆಟ್ಟ ಪರಿಣಾಮ ಬೀರಬಹುದು.
DAKSHINA KANNADA
ಎಸ್ ಎಸ್ ಎಲ್ ಸಿ ಫಲಿತಾಂಶ: ಜಿಯಾ ಸ್ವೀಡಲ್ ಲಸ್ರಡೊಗೆ 599 ಅಂಕ
ಪುತ್ತೂರು : ಸುದಾನ ರೆಸಿಡೆನ್ಶಿಯಲ್ ಸ್ಕೂಲ್, ನೆಹರು ನಗರ, ಮಂಜಲ್ಪಡ್ಪು ಇಲ್ಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ
ಜಿಯಾ ಸ್ವೀಡಲ್ ಲಸ್ರಡೊ 599 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಕೆದಿಲ ಗ್ರಾಮದ ಕಲ್ಲಾಜೆ ನಿವಾಸಿ ಪಾಟ್ರಿಕ್ ಲಸ್ರಡೊ, ಅಮಿತಾ ಲಸ್ರಡೊ ದಂಪತಿ ಪುತ್ರಿ.
DAKSHINA KANNADA
ಕುಟುಂಬ ಸದಸ್ಯರ ಮಾರಣ ಹೋಮ..! ಆರು ಜೀವಗಳು ಬಲಿ..!
ಮಂಗಳೂರು ( ಉತ್ತರ ಪ್ರದೇಶ ) : ಮದರ್ ಡೇ ದಿನವೇ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಪಿ ಮಗ ತನ್ನ ಇಡೀ ಕುಟುಂಬದವರನ್ನು ಸಾಯಿಸಿದ್ದಾನೆ. ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಭರವಾಗಿ ಹ*ತ್ಯೆಮಾಡಿದ ಆರೋಪಿ ಬಳಿಕ ತಾನೂ ಕೂಡಾ ಗುಂಡು ಹಾರಿಸಿ ಜೀವಾಂತ್ಯಗೊಳಿಸಿದ್ದಾನೆ.
ಈ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಆರೋಪಿ ಅನುರಾಗ್ ಸಿಂಗ್ ಎಂಬಾತ ತನ್ನ ಪತ್ನಿಯ ತಲೆಗೆ ಹ್ಯಾಮರ್ನಿಂದ ಹೊಡೆದಿದ್ದು, ತಾಯಿಗೆ ಗುಂಡು ಹೊಡೆದು ಸಾ*ಯಿಸಿದ್ದಾನೆ. ಬಳಿಕ ತನ್ನ ಮೂವರು ಮಕ್ಕಳನನ್ನು ಮಹಡಿಯಿಂದ ಕೆಳಕ್ಕೆ ಎಸೆದಿದ್ದಾನೆ. ಅನುರಾಗ್ ಸಿಂಗ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಆದ್ರೆ ವಿಪರೀತವಾಗಿ ಮದ್ಯ ಸೇವನೆಯ ಚಟ ಹೊಂದಿದ್ದ ಅಂತಾನೂ ಪೊಲೀಸರು ತಿಳಿಸಿದ್ದಾರೆ. ಇದೇ ಕಾರಣದಿಂದ ತಾಯಿ , ಪತ್ನಿ, ಹಾಗೂ ಮೂವರು ಮಕ್ಕಳು ಹ*ತ್ಯೆ ಮಾಡಿದ್ದಾನೆ ಎನ್ನಲಾಗಿದೆ.
62 ವರ್ಷ ಪ್ರಾಯದ ಸಾವಿತ್ರಿ ಸಿಂಗ್, 40 ವರ್ಷ ಪ್ರಾಯದ ಪ್ರಿಯಾಂಕ, ಮಕ್ಕಳಾದ 12 ವರ್ಷದ ಅಸ್ವಿ, 8 ವರ್ಷದ ಅರ್ನಾ, ಹಾಗೂ 4 ವರ್ಷದ ಅದ್ವಿಕ್ ಅನುರಾಗ್ ಸಿಂಗ್ ಕೈನಿಂದ ಹತರಾದವರಾಗಿದ್ದಾರೆ. ಬಳಿಕ ಆರೋಪಿ ಕೂಡಾ ಗುಂಡು ಹಾರಿಸಿ ಸ್ವಯಂ ಹ*ತ್ಯೆ ಮಾಡಿಕೊಂಡಿದ್ದಾನೆ.
- LATEST NEWS6 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- FILM7 days ago
ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?
- DAKSHINA KANNADA6 days ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- LATEST NEWS6 days ago
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!