Connect with us

LATEST NEWS

ಮಂಗಳೂರು: ಸಾಲ ನೀಡುವುದಾಗಿ ಹೇಳಿ 1.25 ಲಕ್ಷ ವಂಚನೆ-ದೂರು ದಾಖಲು

Published

on

ಮಂಗಳೂರು: ವ್ಯಕ್ತಿಯೋರ್ವರಿಗೆ ಸಾಲ ನೀಡುವುದಾಗಿ ಹೇಳಿ 1,25,400 ರೂ. ವಂಚನೆಗೈದಿರುವ ಬಗ್ಗೆ ಮಂಗಳೂರಿನ ವ್ಯಕ್ತಿಯೋರ್ವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ
ಮೋಸ ಹೋಗಿರುವ ವ್ಯಕ್ತಿಗೆ 2021 ಅಕ್ಟೋಬರ್ 19ರಂದು ಬೆಳಗ್ಗೆ 11ರ ಸುಮಾರಿಗೆ 7303554551 ಸಂಖ್ಯೆಯಿಂದ ಮೊಬೈಲ್‌ಗೊಂದು ಕರೆ ಬಂದಿದ್ದು,

ಅತ್ತ ಕಡೆಯಿಂದ ಆದಿತ್ಯ ಬಿರ್ಲಾ ಫಿನಾನ್ಸ್ ಕಂಪೆನಿ ಸಿಬ್ಬಂದಿ ಎಂಬುವುದಾಗಿ ವ್ಯಕ್ತಿ ತಿಳಿಸಿದ್ದಾನೆ.

ಆತ ಮತ್ತೊಬ್ಬ ಅಪರಿಚಿತ ವ್ಯಕ್ತಿಗೆ ಕಾನ್ಫರೆನ್ಸ ಕಾಲ್ ಕನೆಕ್ಟ್ ಮಾಡಿದ್ದಾನೆ. ಆತ ಸಂತ್ರಸ್ತ ವ್ಯಕ್ತಿಯಲ್ಲಿ ಮಾತನಾಡಿ 12 ಲಕ್ಷ ರೂ. ಸಾಲವನ್ನು ಕಂಪೆನಿಯಿಂದ ಕೊಡುವುದಾಗಿ ತಿಳಿಸಿದ್ದಾನೆ. ಅದಕ್ಕೆ ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಅನ್ನು ವಾಟ್ಸ್‌ಆ್ಯಪ್ ಮಾಡಬೇಕೆಂದು ತಿಳಿಸಿದ್ದಾನೆ.

ಬಳಿಕ ಮತ್ತೊಬ್ಬ ಅಪರಿಚಿತ ಕರೆ ಮಾಡಿ ಭಾರತೀಯ ಅಕ್ಸ ಇನ್ಸೂರೆನ್ಸ್ ಪಾಲಿಸಿ ಬಾಂಡ್ ಅನ್ನು ಆದಿತ್ಯ ಬಿರ್ಲಾ ಫಿನಾನ್ಸ್ ಕಂಪೆನಿ ಸಿಬ್ಬಂದಿಯ ಮೊಬೈಲ್ ಸಂಖ್ಯೆಗೆ ಕಳುಹಿಸಬೇಕೆಂದು ತಿಳಿಸಿದ್ದಾನೆ.

ಬಳಿಕ ಅ.23ರಂದು ಭಾರತೀಯ ಅಕ್ಸ ಇನ್ಸೂರೆನ್ಸ್ ಸಿಬ್ಬಂದಿ ಎಂದು ಹೇಳಿದ ಕರೆ ಮಾಡಿರುವಾತ ಅರ್ಧ ವರ್ಷದ ಪ್ರೀಮಿಯಂ 60,000 ರೂ. ಹಾಗೂ ಜಿಎಸ್ಟಿ 2,700 ರೂ. ಪಾವತಿಸುವಂತೆ ತಿಳಿಸಿ ಲಿಂಕ್ (Lhttps://buy.stripe.com/00gcOXeK17qr800aEl–) ಒಂದನ್ನು ಕಳುಹಿಸಿದ್ದಾನೆ.

ಆ ಲಿಂಕ್ ಅನ್ನು ಒಪನ್ ಮಾಡಿ ತನ್ನ ಎಸ್‌ಬಿಐ ಕ್ರೆಡಿಟ್ ಕಾರ್ಡ್ ನಿಂದ 22,700 ರೂ. ಹಾಗೂ ಐಡಿಎಫ್‌ಸಿ ಕ್ರೆಡಿಟ್ ಕಾರ್ಡ್‌ನಿಂದ 40,000 ರೂ. ಪಾವತಿ ಮಾಡಿದ್ದಾರೆ.

ಅ.28ರಂದು ವ್ಯಕ್ತಿಯೋರ್ವನು ಕರೆ ಮಾಡಿ ಒಂದು ವರ್ಷದ ಪ್ರೀಮಿಯಂ ಪಾವತಿಸಿದರೆ ಲೋನ್ ನೀಡುವುದಾಗಿ ತಿಳಿಸಿರುತ್ತಾರೆ.

ಅದಕ್ಕೆ ಮತ್ತೆ ಲಿಂಕ್ ಕಳಿಸಿದ್ದು, ಮತ್ತೆ 62,700 ರೂ. ಪಾವತಿ ಮಾಡಿದ್ದರು. ಹೀಗೆ ಹಂತ ಹಂತವಾಗಿ ಒಟ್ಟು 1,25,400 ರೂ. ಹಣ ಪಾವತಿ ಮಾಡಿದ್ದರೂ, ಸಾಲ ಕೊಡದೆ ಮೋಸ ಮಾಡಿರುವುದಾಗಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

LATEST NEWS

ತಾಯಿಯ ಕೊಂ*ದ ತಂದೆ; ತಂದೆಯ ಕೊಂ*ದ ಮಗ….ಇದೊಂದು ದುರಂ*ತ ಕಥೆ!

Published

on

ದಾವಣಗೆರೆ : ತಾಯಿಯನ್ನು ಕೊ*ಲೆಗೈದ ತಂದೆಯನ್ನು ಮಗನೊಬ್ಬ ಹ*ತ್ಯೆಗೈದಿದ್ದಾನೆ. ಈ ಘಟನೆ ನಡೆದಿರುವುದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕಂಪುರ ಗ್ರಾಮದಲ್ಲಿ. ಮಗನ ಮದುವೆ ಯೋಚನೆಯಲ್ಲಿದ್ದ ತಾಯಿ ಇಹಲೋಕ ತ್ಯಜಿಸಿದ್ರೆ, ಅತ್ತ ಮಾಡಬಾರದ ತಪ್ಪು ಮಾಡಿದ ತಂದೆ ಮಗನಿಂದ ಹ*ತನಾಗಿದ್ದಾನೆ.

ಉಲ್ಟಾ ಹೊಡೆದ ಪ್ಲಾನ್…ಮಗನಿಂದ ಸಾ*ವು!

ಅಂಜನಪ್ಪ( 55) ತನ್ನ ಪತ್ನಿ ತಿಪ್ಪಮ್ಮ(49 ) ಎಂಬವರನ್ನು ನೇಣು ಬಿಗಿದು ಕೊ*ಲೆ ಮಾಡಿದ್ದಾನೆ. ಬಳಿಕ ಆಕೆಯ ಮೈಮೇಲಿದ್ದ ಚಿನ್ನದ ಆಭರಣವನ್ನು ತೆಗೆದುಕೊಳ್ಳೋ ಪ್ಲಾನ್ ಮಾಡಿದ್ದ. ಜೊತೆಗೆ ಪತ್ನಿಯೇ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಕೂಡ ಕಟ್ಟಿದ್ದಾನೆ. ಈ ವಿಷಯ ಮಗ ರಮೇಶ್​ಗೆ ಗೊತ್ತಾಗಿ ತಂದೆಯನ್ನು ಕಲ್ಲು ಎತ್ತಿ ಹಾಕಿ ಕೊ*ಲೆಗೈದಿದ್ದಾನೆ.

ಮಗನ ಮದುವೆ ತಯಾರಿಯಲ್ಲಿದ್ದಾಕೆ ಮಸಣ ಸೇರಿದಳು :

ಅಂಜನಪ್ಪ ಕುಡಿತದ ಚಟಕ್ಕೆ ದಾಸನಾಗಿದ್ದ, ತನ್ನ ಪತ್ನಿಗೆ ಅಂಗನವಾಡಿ ಶಿಕ್ಷಕಿ ಹುದ್ದೆ ಸಿಕ್ಕರೂ ಬೇಡ ಎಂದು ನೌಕರಿ ಬಿಡಿಸಿದ್ದ. ಕುಡುಕ‌ ಗಂಡನ ಕಟ್ಟಿಕೊಂಡ ಆಕೆ, ಗ್ರಾಮದ ಶಾಲೆಯಲ್ಲಿ ಬಿಸಿಯೂಟ ಮಾಡುತ್ತಾ ಮೂರು ಮಕ್ಕಳನ್ನು ಸಲಹಿದ್ದಳು. ಅದರಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿದ್ದಳು. ಮಗನ ಮದುವೆ ಯೋಜನೆಯಲ್ಲಿ ಇದ್ದ ಆಕೆಯ ಉಸಿರು ನಿಲ್ಲಿಸಿದ್ದಾನೆ.

ಮಗನಿಂದ ನಡೆಯಿತು ತಂದೆಯ ಹ*ತ್ಯೆ!

ಆರೋಪಿ ಮಗ ರಮೇಶ್ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಏ.25 ರಂದು ಸಂಬಂಧಿಕರ ಮದುವೆಗೆ ಬಂದಿದ್ದ. ತಡರಾತ್ರಿ ತನ್ನ ತಾಯಿಯನ್ನ ತಂದೆಯೇ ಕೊ*ಲೆ ಮಾಡಿದ್ದಾನೆ ಎಂಬ ವಿಚಾರ ತಿಳಿದಿದೆ. ಕೂಡಲೇ ಗ್ರಾಮಕ್ಕೆ ಬಂದಿದ್ದ ಆತ. ಇದೇ ವೇಳೆ ತಂದೆ ಎದುರಿಗೆ ಬಂದಿದ್ದಾನೆ. ತಕ್ಷಣ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿ ಹಾಕಿ ತಂದೆಯನ್ನು ಕೊ*ಲೆಗೈದಿದ್ದಾನೆ.

ಇದನ್ನೂ ಓದಿ : WATCH VIDEO : ಮತ್ತೆ ಎಡವಿದ ಸಿಎಂ… ಹೆಲಿಕ್ಯಾಪ್ಟರ್‌ನಲ್ಲಿ ಬಿದ್ದು ಗಾ*ಯ…!

ಇದೊಂದು ದುರಂ*ತವೇ ಸರಿ. ತಂದೆಯ ಕುಡಿತದ ಚಟಕ್ಕೆ ಇಡೀ ಕುಟುಂಬ ಬ*ಲಿಯಾಗಿದೆ. ತಾಯಿ – ತಂದೆ ಇಹಲೋಕದ ಯಾತ್ರೆ ಮುಗಿಸಿದ್ದರೆ, ಇತ್ತ ಮದುವೆಯ ಹೊಸ್ತಿಲಲ್ಲಿದ್ದ ಮಗ ಕಂಬಿ ಎಣಿಸುತ್ತಿದ್ದಾನೆ.

Continue Reading

LATEST NEWS

Trending