MANGALORE
ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಎ.ಜೆ ಆಸ್ಪತ್ರೆಯಲ್ಲಿ ಮಂಗಳೂರು ನಗರ ಪೊಲೀಸರಿಗೆ ಕ್ಯಾನ್ಸರ್ ತಪಾಸಣಾ ಶಿಬಿರ
ಮಂಗಳೂರು: ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಪ್ರಯುಕ್ತ ಫ಼ೆ. 4ರಂದು ವಿಶ್ವ ಕ್ಯಾನ್ಸರ್ ದಿನವನ್ನು ನಗರದ ಕುಂಟಿಕಾನದಲ್ಲಿರುವ ಎ. ಜೆ.ಆಸ್ಪತ್ರೆಯಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಎ. ಜೆ. ವೈದ್ಯಕೀಯ ಮಹಾವಿದ್ಯಾಲಯ. ಮಂಗಳೂರು ನಗರ ಪೊಲೀಸ್ ಮತ್ತು ಭಾರತೀಯ ಕ್ಯಾನ್ಸರ್ ಸೊಸೈಟಿ-ಮಂಗಳೂರು ಶಾಖೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್, ಟ್ರಾಫಿಕ್ ಎಸಿಪಿ , ನಟರಾಜ್, ಎ ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎ ಜೆ ಶೆಟ್ಟಿ, ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಪ್ರಶಾಂತ್ ಮಾರ್ಲ, ಎ ಜೆ ಇನ್ಸ್ಟಿಟೂಟ್ ಆಫ್ ಮೆಡಿಕಲ್ ಸೈನ್ಸಸ್ ಡೀನ್ ಡಾ. ಅಶೋಕ್ ಹೆಗ್ಡೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಡಿಸಿಪಿ ಹರಿರಾಮ್ ಶಂಕರ್, ಎಜೆ ಆಸ್ಪತ್ರೆ ಮತ್ತು ಭಾರತೀಯ ಕ್ಯಾನ್ಸರ್ ಸೊಸೈಟಿಯು ಮಂಗಳೂರು ವಿಭಾಗದ ಪೊಲೀಸ್ ಸಿಬ್ಬಂದಿಗೆ ಕ್ಯಾನ್ಸರ್ ಬಗ್ಗೆ ಅರಿವು ಮತ್ತು ಉಚಿತ ಕ್ಯಾನ್ಸರ್ ತಪಾಸಣಾ ಪರೀಕ್ಷೆಯನ್ನು ನೀಡುವಲ್ಲಿ ಬೆಂಬಲ ನೀಡಿದಕ್ಕಾಗಿ ಕೃತಜ್ಞತೆ. ಪೊಲೀಸ್ ಸಿಬ್ಬಂದಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಾ.ಎ.ಜೆ.ಶೆಟ್ಟಿ ಮಾತನಾಡಿ, ನಮ್ಮ ಸೇವೆ ಮತ್ತು ರಕ್ಷಣೆಗಾಗಿ ಶ್ರಮಿಸುವ ಪೊಲೀಸ್ ಸಿಬ್ಬಂದಿಯ ಅನುಕೂಲಕ್ಕಾಗಿ ಎ ಜೆ ಆಸ್ಪತ್ರೆಯು ಈ ಕಾರ್ಯಕ್ರಮಕ್ಕೆ ಬೆಂಬಲ ನೀಡಲಿದೆ, ಅವರ ಸೇವೆಯು ಶ್ಲಾಘನೀಯ ಮತ್ತು ಅವರಿಗೆ ನಾವು ಕೃತಜ್ಞರಾಗಿರಬೇಕು. ದಶಕಗಳ ಹಿಂದೆ ಕ್ಯಾನ್ಸರ್ ಗುಣಪಡಿಸುವುದು ಕಷ್ಟಕರವಾಗಿತ್ತು, ಆದರೆ ಈಗ ಮುಂದುವರಿದ ತಂತ್ರಜ್ಞಾನದಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆ ಮಾಡಿದರೆ ಗುಣಪಡಿಸಬಹುದು. ರೋಗದ ಸ್ವರೂಪವನ್ನು ಅವಲಂಬಿಸಿ ಶಸ್ತ್ರಚಿಕಿತ್ಸೆ, ಕೀಮೋಥೆರಪಿ, ವಿಕಿರಣ ಚಿಕಿತ್ಸೆ ಮುಂತಾದ ವಿವಿಧ ವಿಧಾನಗಳ ಮೂಲಕ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುವುದು.
ರೇಡಿಯೇಶನ್ ಆಂಕಲಾಜಿ ವಿಭಾಗದ ಮುಖ್ಯಸ್ಥ ಡಾ. ಕಮಲಾಕ್ಷ ಶೆಣೈಮಾತನಾಡಿ, ರೋಗತಡೆಗಟ್ಟುವಿಕೆ, ಶೀಘ್ರ ಪತ್ತೆ ಹಚ್ಚುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು ಮತ್ತು ಆರಂಭಿಕ ಹಂತದಲ್ಲಿ ಪತ್ತೆಹಚ್ಚುವ ನಿಟ್ಟಿನಲ್ಲಿ ಕೆಲಸ ಮಾಡುವ ಅಗತ್ಯ ಮತ್ತು ಮಹತ್ವವನ್ನು ಒತ್ತಿ ಹೇಳಿದರು.
ಭಾರತೀಯ ಕ್ಯಾನ್ಸರ್ ಸೊಸೈಟಿಯ ಪ್ರಾದೇಶಿಕ ಆಪರೇಷನ್ ಮ್ಯಾನೇಜರ್ ಶೈಲಾ ಲೋಬೋ ಅವರು ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವಲ್ಲಿ, ಕ್ಯಾನ್ಸರ್ ಪತ್ತೆ ಮತ್ತು ಗುಣಪಡಿಸುವಲ್ಲಿ ಕ್ಯಾನ್ಸರ್ ಸೊಸೈಟಿಯ ಪಾತ್ರದ ಕುರಿತು ವಿವರಿಸಿದರು.
ಎ.ಜೆ. ಆಸ್ಪತ್ರೆಯು ಎಲ್ಲಾ ಅಧುನಿಕ ಸೌಲಭ್ಯಗಳನ್ನು ಹೊಂದಿರುವ ಸಮಗ್ರ ಶುಶ್ರೂಷಾ ಕೆಂದ್ರವನ್ನು ಹೊಂದಿದೆ. ಮೆಡಿಕಲ್ ಒಂಕೋಲಾಜಿ, ರೆಡಿಯೇಶನ್ ಒಂಕೋಲಾಜಿ, ಸರ್ಜಿಕಲ್ ಒಂಕೋಲಾಜಿ, ಹೆಮಟೋ ಒಂಕೋಲಾಜಿ, ನೋವು ನಿರ್ವಹಣೆ ಹಾಗೂ ದಕ್ಶಿಣ ಕನ್ನಡ ಜಿಲ್ಲೆಯಲ್ಲಿಯೇ ಮೊದಲನೆಯದಾದ ಪೆಟ್-ಸಿ.ಟಿ. (PET-CT) ಸಹಿತ ನ್ಯೂಕ್ಲಿಯರ್ ಮೆಡಿಸಿನ್ ವಿಭಾಗ ಮತ್ತು ಐಯೋಡಿನ್ ಥೆರಪಿ ವಾರ್ಡನ್ನು ಹೊಂದಿದೆ.
ನಟರಾಜ್, ಎಸಿಪಿ (ಸಂಚಾರ) ಸ್ವಾಗತಿಸಿದರು ಮತ್ತು ಡಾ.ಕಮಲಾಕ್ಷ ಶೆಣೈ ವಂದಿಸಿದರು. ಕಾರ್ಯಕ್ರಮವನ್ನು ಎಜೆ ಆಸ್ಪತ್ರೆಯ ಮಾನವ ಸಂಪನ್ಮೂಲ ವಿಭಾಗದ ಕುಮಾರಿ ಪೂಜಾ ಜಯರಾಮ್ ನಿರೂಪಿಸಿದರು.
ಮಂಗಳೂರು ನಗರ ಪೊಲೀಸ್ ಸಿಬ್ಬಂದಿಗಾಗಿ ಎ.ಜೆ. ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಪರೀಕ್ಷೆಗಳನ್ನು ಒಳಗೊಂಡ ಕ್ಯಾನ್ಸರ್ ತಪಾಸಣೆ ನಡೆಸಲಾಗುತ್ತಿದೆ.
DAKSHINA KANNADA
ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ
ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.
ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
DAKSHINA KANNADA
ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ.
ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ.
ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್ಗಳು ನೇರವಾಗಿ ಪ್ಲಾಟ್ಫಾರ್ಮ್ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.
ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- LATEST NEWS7 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- LATEST NEWS6 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS6 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA6 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!