DAKSHINA KANNADA
ಫ್ರೀಫಯರ್ ಮೊಬೈಲ್ ಗೇಮ್ ;ಬಾಲಕನ ಕೊಲೆ ಪ್ರಕರಣ; ಆರೋಪಿ ರಿಮಾಂಡ್ ಹೋಂಗೆ..!
ಮಂಗಳೂರು: ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ನಿವಾಸಿ ಆಕೀಫ್ (12) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ರಕ್ಷಣೆ ನೀಡಿದ್ದ ಆತನ ತಂದೆಯನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ಆರೋಪಿ ದೀಪಕ್ ನನ್ನು ರಿಮಾಂಡ್ ಹೋಂಗೆ ಕಳುಹಿಸಲಾಗಿದೆ.ಉತ್ತರಪ್ರದೇಶ ಮೂಲದ ಕೆ.ಸಿ ರೋಡು ಪಿಲಿಕೂರು ನಿವಾಸಿ ಸಂತೋಷ್ (45) ಎಂಬಾತನನ್ನು ಬಂಧಿಸಲಾಗಿದೆ.
ಆಕೀಫ್ ನನ್ನು ಹತ್ಯೆ ನಡೆಸಿ ಬಂದಿದ್ದ ದೀಪಕ್ ತನ್ನ ತಂದೆ ಸಂತೋಷ್ ಅವರಲ್ಲಿ ವಿಚಾರ ತಿಳಿಸಿದ್ದನು. ಘಟನೆ ಕುರಿತು ಯಾರಲ್ಲೂ ತಿಳಿಸದಂತೆ ಹೇಳಿರುವುದು ಮತ್ತು ದೀಪಕ್ ನನ್ನು ಮನೆಯಲ್ಲೇ ರಕ್ಷಣೆ ನೀಡಿದ ಆರೋಪದ ಮೇರೆಗೆ ಪೊಲೀಸರು ಸಂತೋಷ್ನನ್ನು ಬಂಧಿಸಿದ್ದಾರೆ. ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿಯಲ್ಲೇ ಇದ್ದು, ಲಾರಿ ಚಾಲಕನಾಗಿ ದುಡಿಯುತ್ತಿದ್ದರು.ದೀಪಕ್ (17) ಬಾಲಪರಾಧಿ ಆಗಿರುವ ಹಿನ್ನೆಲೆಯಲ್ಲಿ ಉಡುಪಿ ದೊಡ್ಡಣಗುಡ್ಡೆಯ ಬಾಲ ನ್ಯಾಯ ಮಂಡಳಿಗೆ ಸೋಮವಾರ ಹಾಜರುಪಡಿಸಲಾಗಿದೆ.
ನ್ಯಾಯಾಲಯ ಆರೋಪಿಗೆ ರಿಮಾಂಡ್ ಹೋಂ ಶಿಕ್ಷೆ ವಿಧಿಸಿ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ರಿಮಾಂಡ್ ಹೋಂಗೆ ದಾಖಲಿಸಲಾಗಿದೆ. ಇನ್ನೂ ಆಕೀಫ್ ಕೊಲೆ ಕೃತ್ಯವನ್ನು ಪೊಲೀಸರು ಬೇಧಿಸುತ್ತಿದ್ದಂತೆ ದೀಪಕ್ ಮನೆಮಂದಿಗೆ ಸ್ಥಳೀಯರು ಬೆದರಿಕೆಯನ್ನು ಒಡ್ಡಲು ಆರಂಭಿಸಿದ್ದರು.
ಮನೆಯಲ್ಲಿ ಆರೋಪಿ ದೀಪಕ್ ನ ತಾಯಿ ಮತ್ತು ಸಹೋದರ ಮಾತ್ರ ಇರುವ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಭದ್ರತೆಯನ್ನು ಮುಂದುವರಿಸಿದ್ದಾರೆ.
DAKSHINA KANNADA
ದತ್ತಿ ಇಲಾಖೆ ದೇವಸ್ಥಾನದಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ..!
ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.
ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ದತ್ತಿ ಇಲಾಖೆ ದೇವಸ್ಥಾನದ ಸೇವೆಗಳಿಗೆ , ದೀಪಗಳಿಗೆ, ಪ್ರಸಾದ ತಯಾರಿಗೆ ಮತ್ತು ಅನ್ನಛತ್ರದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದೆ.
ತಿರುಪತಿ ದೇವಾಲಯದ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪವೇ ರವಾನೆ ಆಗುತ್ತಿದೆ. ಆದ್ರೆ ಜಗನ್ ರೆಡ್ಡಿಯ ಸರ್ಕಾರದ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಪೂರೈಕೆ ಮಾಡಿರಲಿಲ್ಲ. ಹೀಗಾಗಿ ತಿರುಪತಿ ಲಡ್ಡುವಿಗೆ ಬಳಕೆ ಮಾಡಿದ ತುಪ್ಪಕ್ಕೂ ನಂದಿನಿ ತುಪ್ಪಕ್ಕೂ ಯಾವುದೇ ಸಂಭಂಧ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
BELTHANGADY
ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ
ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.
ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ಮಂಗಳೂರು : ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತರು. ಈ ಪೈಕಿ ಸುಹೈಲ್ ಹಾಗೂ ಝುಬೈರ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್ನ ಸಹಕಾರದಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.