Connect with us

WORLD

ಕುವೈಟ್: ಭಾರತೀಯ ಪ್ರವಾಸಿ ಪರಿಷತ್ತಿನಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Published

on

ಕುವೈಟ್: ಭಾರತೀಯ ಪ್ರವಾಸಿ ಪರಿಷತ್ ಕುವೈಟ್ ನಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಫರ್ವಾನಿಯಾದ ಬದ್ರ್ ಅಲ್ ಸಮಾ ವೈದ್ಯಕೀಯ ಕೇಂದ್ರದ ಸಮನ್ವಯದಲ್ಲಿ ನಡೆಸಲಾಯಿತು.

ಕುವೈಟ್‌ನಲ್ಲಿ ಭಾರತೀಯ ಸಮುದಾಯದ ಸೇವೆಯ ಭಾಗವಾಗಿ ಈ ಶಿಬಿರವನ್ನು ಆಯೋಜಿಸಲಾಗಿದ್ದು, ಮುಖ್ಯ ಅತಿಥಿಗಳಾಗಿ ಇಎನ್ಟಿ ತಜ್ಞೆ ಡಾ.ಸೌಮ್ಯ ಆರ್.ಶೆಟ್ಟಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸೀನಿಯರ್ ಮ್ಯಾನೇಜರ್ ನಾಗರಾಜ ತಂತ್ರಿ ಮತ್ತು ಮನೋಜ್ ಮಾಳೇವಿಕರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವು ಬೇಬಿ ಸಾನ್ವಿ ರಾಜೇಶ್ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ, ನಂತರ ಮುಖ್ಯ ಅತಿಥಿಗಳಾದ ಡಾ.ಸೌಮ್ಯ ಆರ್.ಶೆಟ್ಟಿ, ನಾಗರಾಜ್ ತಂತ್ರಿ ಮತ್ತು ಮನೋಜ್ ಮಾಳೇವಿಕರ ದೀಪ ಬೆಳಗಿಸಿದರು. ಇನ್ನು ಕಾರ್ಯಕ್ರಮ ಆಯೋಜಕರಾದ ಭಾರತೀಯ ಪ್ರವಾಸಿ ಪರಿಷತ್ ಕುವೈಟ್ – ಕರ್ನಾಟಕ ವಿಭಾಗದ ಅಧ್ಯಕ್ಷರಾದ ರಾಜ್ ಭಂಡಾರಿಯವರು ಅವರು ಸದಸ್ಯರನ್ನು ಸ್ವಾಗತಿಸಿದರು.

ಬೆಳಗ್ಗೆ ಆರಂಭವಾದ ಶಿಬಿರ ಮಧ್ಯಾಹ್ನ 1.30ರವರೆಗೆ ನಡೆಯಿತು. ಭಾರತೀಯರು ಮತ್ತು ಇತರ ರಾಷ್ಟ್ರೀಯತೆಯ 192 ಕ್ಕೂ ಹೆಚ್ಚು ಸದಸ್ಯರು ಸೇವೆಯ ಪ್ರಯೋಜನ ಪಡೆದರು. ಭಾರತೀಯ ಪ್ರವಾಸಿ ಪರಿಷತ್ತು ಕುವೈತ್ – ಕರ್ನಾಟಕ ವಿಭಾಗದ ತಂಡವು ಶಿಬಿರವನ್ನು ನಿರ್ವಹಿಸುವಲ್ಲಿ ಅತ್ಯುತ್ತಮ ಕಾರ್ಯ ಮಾಡಿ ಇಡೀ ಕಾರ್ಯಕ್ರಮವನ್ನು ಸುಗಮವಾಗಿ ನಿರ್ವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

bangalore

ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…

Published

on

Film: ಕನ್ನಡ ರಿಯಾಲಿಟಿ ಶೋನಲ್ಲಿ ಹೆಸರುವಾಸಿಯಾಗಿರುವ ಮಂಗ್ಳೂರು ಬೆಡಗಿ ಆಂಕರ್ ಅನುಶ್ರಿ ಇದೀಗ ಆಸ್ಟ್ರೇಲಿಯಾದತ್ತ ಟ್ರಿಪ್ ಹೋಗಿರುವ ಪೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕರಾವಳಿ ಬೆಡಗಿ ಆಗಿರುವ ಅನುಶ್ರೀ ಕನ್ನಡ ಕಿರುತೆರೆಯಲ್ಲಿ ಉತ್ತಮ ಆಂಕರ್ ಆಗಿ ಅವರ್ಡ್ ಪಡೆದುಕೊಂಡ ಅನುಶ್ರೀಯ ಮಾತು ಕೇಳೊಕೆ ಎಲ್ಲರಿಗೆ ಅಚ್ಚು ಮೆಚ್ಚು. ಬಾಯಿ ತೆರೆದರೆ ಪಟಪಟನೇ ಮಾತನಾಡುವ ಆಂಕರ್ ಇದೀಗ ಆಸ್ಟ್ರೇಲಿಯಾದತ್ತ ಕಾಲಿಟ್ಟಿದ್ದಾರೆ.


ಪ್ರತಿದಿನ ಆಂಕರ್ ಮಾಡೋದು ಅಲ್ಲ ಸೊಲ್ಪ ಹೊರಗಿನ ಪ್ರಪಂಚಕ್ಕೆ ಕಾಲಿಡಬೇಕು. ಪ್ರಕೃತಿ ಸೌಂದರ್ಯವನ್ನು ಎಂಜಾಯ್ ಮಾಡಬೇಕು. ಅದೇ ರೀತಿ ಆಸ್ಟ್ರೇಲಿಯಾಕ್ಕೆ ತೆರಳಿದ ಅನುಶ್ರೀ ಆಸ್ಟ್ರೇಲಿಯಾ ಬೀಚ್ ನಲ್ಲಿ ಅಪ್ಪು ಎಂದು ಬರೆದುಕೊಂಡಿದ್ದಾರೆ.

 

ಅಲ್ಲಿರುವ ಆಸ್ಟ್ರೇಲಿಯಾ ಸ್ಕೈ ಪಾಯಿಂಟ್, ಬೀಚ್‌ಗಳು ಹಾಗೂ ಪ್ರಾಣಿ ಸಂಗ್ರಹಾಲಯಕ್ಕೆ ಹಾಗೂ ಹಲವು ಕಡೆ ಭೆಟಿ ನೀಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ ಮಾಡಿದ್ದಾರೆ.


ಜೀ ಕುಟುಂಬ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಅತಿ ಸುಂದರವಾಗಿ ನಿರೂಪಣೆ ಮಾಡಿ, ಬೆಸ್ಟ್​ ಆ್ಯಂಕರ್​ ಪ್ರಶಸ್ತಿಯನ್ನೂ ಪಡೆದ ನಟಿ ಆ್ಯಂಕರ್​ ಅನುಶ್ರೀ ಈಗ ಆಸ್ಟ್ರೇಲಿಯಾಕ್ಕೆ ಹಾರಿದ್ದಾರೆ.


ಬ್ರಿಸ್ಬೇನ್‌ನ ಉತ್ತರದ ಸನ್‌ಶೈನ್ ಕೋಸ್ಟ್ ತೀರದತ್ತ ಸಂಚಾರ ನಡೆಸಿದ ಅವರು ಸ್ಯಾಂಡಲ್ ವುಡ್ ನ ನಟ ನಗು ಮೊಗದ ಅಪ್ಪು ಪುನೀತ್ ರಾಜ್‌ಕುಮಾರ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

Continue Reading

LATEST NEWS

ಪ್ರಧಾನಿ ಮೋದಿ ಜೊತೆ ಸೆಲ್ಫೀ ಕ್ಲಿಕ್ಕಿಸಿದ ಇಟಲಿಯ ಲೇಡಿ ಪಿಎಂ

Published

on

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಕ್ಲಿಕ್ಕಿಸಿಕೊಂಡ ಸೆಲ್ಫಿ ಪೊಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ.

ಸಿಓಪಿ 28 ಶೃಂಗಸಭೆಯ ನಿಮಿತ್ತ ದುಬೈಗೆ ತೆರಳಿದ್ದ ಪ್ರಧಾನಿ ನರೇಂದ ಮೋದಿ ಅವರ ಜೊತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮಾತುಕತೆ ನಡೆಸಿ ಸೆಲ್ಫೀ ಪೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಮೋದಿ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಮೆಲೋನಿ ಅವರು, ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿ “ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ” ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು. ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ ಸಂದರ್ಭದಲ್ಲಿ ಮೋದಿಯವರು, ವಿವಿಧ ರಾಷ್ಟ್ರಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.

 

ಮೋದಿಯವರು ಮೆಲೋನಿ ಅವರಲ್ಲದೆ, ಪ್ರಧಾನಿ ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಪ್ರಧಾನಿ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟಿಷ್ ವಿದೇಶಾಂಗ ಸಚಿವ ಡೇವಿಡ್ ಕ್ಯಾಮರೂನ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಭೇಟಿಯಾದರು.

Continue Reading

LATEST NEWS

ಯುವತಿಯ ಹೃದಯವನ್ನು ಬೇಯಿಸಿ ಅಡುಗೆ ಮಾಡಿ ಬಡಿಸಿದ ಕೊಲೆಗಾರ

Published

on

ಅಮೇರಿಕಾ : ಯುವತಿಯೋರ್ವಳನ್ನು ಕೊಲೆ ಮಾಡಿ ಆಕೆಯ ದೇಹದ ಹೃದಯವನ್ನು ಕತ್ತರಿಸಿ ಬಳಿಕ ಮನೆಯವರಿಗೆ ಅಡುಗೆ ಮಾಡಿ ಬಡಿಸಿದ ಘಟನೆ ದೂರದ ಅಮೇರಿಕಾದಲ್ಲಿ ನಡೆದಿದೆ.
ಕೊಲೆ ಮಾಡಿದ ನಂತರ ಆ ದೇಹವನ್ನು ಬಿಸಾಡುವ ಮೊದಲು ಆ ಶವವನ್ನು ಕತ್ತರಿಸಿ, ಅದರಲ್ಲಿರುವ ಹೃದಯವನ್ನು ಹೊರಗೆ ತೆಗೆದು, ಅದನ್ನು ಆಲೂಗಡ್ಡೆಯ ಜೊತೆ ಬೇಯಿಸಿ, ಮನೆಯವರಿಗೆ ಸಾಂಬಾರ್ ಮಾಡಿ ಬಡಿಸಿರುವ ವಿಚಿತ್ರ ಮತ್ತು ಭಯಾನಕ ಘಟನೆಯೊಂದು ಅಮೆರಿಕಾದ ವಾಷಿಂಗ್ಟನ್ ನಲ್ಲಿ ನಡೆದಿದೆ.


ಆಕೆಯ ದೇಹದಿಂದ ಹೃದಯವನ್ನು ಕತ್ತರಿಸಿ, ಆಲೂಗಡ್ಡೆಯೊಂದಿಗೆ ಬೇಯಿಸಿ ಅಡುಗೆ ಮಾಡಿ ಕುಟುಂಬಿಕರಿಗೆ ಬಡಿಸಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಲಾರೆನ್ಸ್ ಪಾಲ್ ಆಂಡರ್ಸನ್ ಎಂದು ಗುರುತಿಸಲಾಗಿದೆ.
ಮೃತ ಮಹಿಳೆಯ ಹೃದಯವನ್ನು ತನ್ನ ಚಿಕ್ಕಪ್ಪನ ಮನೆಗೆ ತಂದು ಅಲ್ಲಿ ಅದನ್ನು ಆಲೂಗಡ್ಡೆಯೊಂದಿಗೆ ಬೇಯಿಸಿ ಚಿಕ್ಕಪ್ಪ ಮತ್ತು ಅವರ ಹೆಂಡತಿಗೆ ಬಡಿಸಿದ್ದಾನೆ ಎಂದು ತನಿಖಾಧಿಕಾರಿಗಳು ಚಿಕಾಶಾದ ಗ್ರೇಡಿ ಕೌಂಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದಾದ ಬಳಿಕ ಆಂಡರ್ಸನ್ ಆ ಮನೆಯಲ್ಲಿದ್ದ ಚಿಕ್ಕಪ್ಪ ಮತ್ತು ಅವರ ನಾಲ್ಕು ವರ್ಷದ ಮೊಮ್ಮಗಳನ್ನು ಕೂಡ ಕೊಂದಿದ್ದಾನೆ. ತನ್ನ ಚಿಕ್ಕಪ್ಪನಿಗೆ ಚಾಕುವಿನಿಂದ ತಿವಿದು ತೀವ್ರವಾಗಿ ಗಾಯಗೊಳಿಸಿದ್ದಾನೆ ಎಂದು ವರದಿಯಾಗಿದೆ.

Continue Reading

LATEST NEWS

Trending