DAKSHINA KANNADA
ದ.ಕ ಜಿಲ್ಲೆಯವರಿಗೆ ಉಚಿತ ಪೊಲೀಸ್ ತರಬೇತಿ: ನಾಳೆಯಿಂದ ದಾಖಲಾತಿ ಆರಂಭ
ಇತ್ತೀಚಿನ ದಿನಗಳಲ್ಲಿ ದ.ಕ ಜಿಲ್ಲೆಯಿಂದ ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಸಂಖ್ಯೆ ಬಹಳ ಕಡಿಮೆಯಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಉದ್ದೇಶದಿಂದ ಒಂದು ತಿಂಗಳ ಕಾರ್ಯಗಾರವನ್ನು ಮಂಗಳೂರು ನಗರ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಇದರಲ್ಲಿ ಪೊಲೀಸ್ ಇಲಾಖೆಗೆ ಇತ್ತೀಚಿನ ತಂಡಗಳಲ್ಲಿ ನೇಮಕಾತಿ ಹೊಂದಿದ ಪಿ.ಎಸ್.ಐ ಹಾಗೂ ಸಿಬ್ಬಂದಿಗಳನ್ನೊಳಗೊಂಡ ನುರಿತ ತಂಡ ಒಂದು ತಿಂಗಳ ಕಾಲ ತರಬೇತಿಯನ್ನು ನೀಡಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
1. ವಿಳಾಸದ ಬಗ್ಗೆ ಅಧಿಕೃತ ದಾಖಲಾತಿಯನ್ನು ಸಲ್ಲಿಸುವುದು,
2. ಯಾವುದೇ ಘಟಕದಲ್ಲಿ ಎಸ್ಐ/ಪಿಸಿ ನೇಮಕಾತಿಯ ಇಟಿ/ಪಿಎಸ್ಟಿ (ಫಿಸಿಕಲ್ ಟೆಸ್ಟ್) ನಲ್ಲಿ ಉತ್ತೀರ್ಣಗೊಂಡ ಬಗ್ಗೆ ದಾಖಲಾತಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
3 ಅಭ್ಯರ್ಥಿಗಳು RTPCR ನೆಗೆಟೀವ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವುದು
4 ದ.ಕ ಜಿಲ್ಲೆಯವರಿಗೆ ಮೊದಲ ಆದ್ಯತೆಯಿದ್ದು, ನಂತರದಲ್ಲಿ ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು,
5 ಇದು ಕ್ರಾಸ್ ಕೋರ್ಸ್ ರೀತಿಯ 30 ದಿನಗಳ ಕಾರ್ಯಾಗಾರವಾಗಿದ್ದು, ಮರುಷ ಮತ್ತು ಮಹಿಳಾ ಆಕಾಂಕ್ಷಿಗಳೆಲ್ಲರಿಗೂ ಅವಕಾಶವಿರುತ್ತದೆ.
6 ಮೊದಲನೇ ಹಂತದಲ್ಲಿ 100 ಅಭ್ಯರ್ಥಿ ಆಕಾಂಕ್ಷಿಗಳಿಗೆ ತರಬೇತಿಯನ್ನು ನೀಡಲಾಗುವುದು.
7 ಊಟ ಮತ್ತು ವಸತಿ ಸೌಲಭ್ಯ ಉಚಿತವಾಗಿದ್ದು, ಕಡ್ಡಾಯವಾಗಿ ನಿಗದಿಪಡಿಸಿದ ಸ್ಥಳದಲ್ಲಿಯೇ ವಾಸ್ತವ್ಯವಿರುವುದು. (ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ)
8. ತರಗತಿ-ತರಬೇತಿ-ಓದುವುದು ಮುಂಜಾನೆ 08.00 ಗಂಟೆಯಿಂದ ರಾತ್ರಿ 08.00 ಗಂಟೆಯವರೆಗೆ ಕಡ್ಡಾಯವಾಗಿದ್ದು, ಅಭ್ಯರ್ಥಿಗಳು ಇಲ್ಲೇ ಇದ್ದು ಸಕ್ರಿಯವಾಗಿ ಪಾಲ್ಗೊಳ್ಳುವುದು,
9. ಅವಶ್ಯಕ ಅಧ್ಯಯನ ಸಾಮಾಗ್ರಿಗಳನ್ನು ವೈಯುಕ್ತಿಕವಾಗಿ ಅಭ್ಯರ್ಥಿಗಳೇ ಖರೀದಿ ಮಾಡಬೇಕು,
ಈ ಪ್ರಕಾರ ತರಬೇತಿಗೆ ಆಸಕ್ತಿ ಇಚ್ಛೆ ಹೊಂದಿರುವ ಆಕಾಂಕ್ಷಿಗಳು, ಸೋಮವಾರ ದಿ:09.08.2021 ರಿಂದ ಮಂಗಳೂರು ಪೊಲೀಸ್ ಕಮೀಷನರ ಕಛೇರಿಯಲ್ಲಿ ತೆರೆಯಲಾಗುವ REGISTRATION DESK ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಸಬಹುದು. ಈ ಕಾರಾಗಾರಕ್ಕೆ ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿಯು ವಾಸ್ತವ್ಯ, ಕ್ಲಾಸ್ ರೂಂ ಮತ್ತು ಲೈಬ್ರೇರಿಯ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಆಸಕ್ತ ಆಕಾಂಕ್ಷಿಗಳು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಈ ಕಾರ್ಯಗಾರದ ಸದುಪಯೋಗ ಪಡಿಸಿಕೊಳ್ಳಬಹುದು.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- DAKSHINA KANNADA7 days ago
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!