DAKSHINA KANNADA
ತುಳುನಾಡಿನಲ್ಲೇ ತುಳು ಭಾಷಾ ಶಿಕ್ಷಕರ ಗೋಳು: 2 ವರ್ಷದಿಂದ ಇಲ್ಲ ಗೌರವ ಸಂಬಳ..!
ಮಂಗಳೂರು: ತುಳು ಭಾಷೆ ನಮ್ಮ ಹೆಮ್ಮೆ, ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ಇದಕ್ಕಾಗಿ ಸಾರ್ವಜನಿಕ ಧರಣಿ, ಪ್ರತಿಭಟನೆ, ಟ್ವಿಟ್ಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹ್ಯಾಶ್ ಟ್ಯಾಗ್ ಆಂದೋಲನ ನಡೆಸುತ್ತಿರುವವರು. ಈ ಕರುಣಾಜನಕ ಕಥೆ ಕೇಳಲೇಬೇಕು.
ತುಳು ಅಕಾಡೆಮಿಯು ಸರಿಸುಮಾರು ಒಂದೂವರೆ ವರ್ಷದಿಂದೀಚೆಗೆ ತುಳು ಕಲಿಸುವ ಶಿಕ್ಷಕರಿಗೆ ಸಂಬಳ ನೀಡುತ್ತಿಲ್ಲ.
ಇದರ ಮಧ್ಯೆ ಸಂಬಳ ಸಿಗದಿದ್ದರೂ ಟೀಚರ್ಗಳು ತುಳುವಿನ ಮೇಲಿನ ಅಭಿಮಾನ ಮತ್ತು ಪ್ರೀತಿಯಿಂದ ತಮ್ಮ ಜ್ಞಾನವನ್ನು ಮಕ್ಕಳಿಗೆ ಧಾರೆ ಎರೆಯುತ್ತಿದ್ದಾರೆ.
ತುಳುವರ ಒತ್ತಾಸೆಯ ಮೇರೆಗೆ 2017ರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ತೃತೀಯ ಭಾಷೆಯಾಗಿ ತುಳುವನ್ನು ಪಠ್ಯಪುಸ್ತಕದಲ್ಲಿ ಸೇರಿಸಲಾಯಿತು.
ಇದರಂತೆ ಉಡುಪಿ ಜಿಲ್ಲೆಯಲ್ಲಿ 5 ಶಾಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 37 ಶಾಲೆಗಳು ಸೇರಿ ಒಟ್ಟಿಗೆ 42 ಶಾಲೆಗಳಲ್ಲಿ 43 ಶಿಕ್ಷಕರು ತುಳು ಭಾಷೆಯನ್ನು ಪಠ್ಯವಾಗಿ ಕಲಿಸುವ ಕಾಯಕ ಮಾಡುತ್ತಿದ್ದಾರೆ.
ಈ ಶಿಕ್ಷಕರಿಗೆ 3000 ಸಾವಿರ ರೂಪಾಯಿ ಗೌರವಧನವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ನೀಡಲಾಗುತಿತ್ತು.
ಅದರಂತೆ ಪ್ರತಿಯೊಂದು ತರಗತಿಗೆ ವಾರದಲ್ಲಿ ಸರಿಸುಮಾರು 4 ಗಂಟೆಗಳಷ್ಟು ತರಗತಿಗಳನ್ನು ತೆಗೆದುಕೊಳ್ಳಬೇಕು ಎಂಬುವುದು ನಿಯಮ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಶಾಲೆಗಳು ಹೊರತುಪಡಿಸಿ 8 ರಿಂದ 10ನೇ ತರಗತಿವರೆಗೆ ತುಳು ಐಚ್ಛಿಕ ಭಾಷೆಯನ್ನು ಕಲಿಸಲಾಗುತ್ತಿದೆ.
ಕೊರೋನಾ ಆರಂಭಕ್ಕೂ ಮುನ್ನ ಈ ಶಿಕ್ಷಕರಿಗೆ ಪ್ರತಿತಿಂಗಳು ಕ್ಲಪ್ತಸಮಯಕ್ಕೆ ಗೌರವಧನ ಬರುತ್ತಿತ್ತು.
ನಂತರ ಕೊರೋನಾ ಅಲೆಯಿಂದಾಗಿ ಶಾಲೆಗಳು ಮುಚ್ಚಿ ಹೋದ ಪರಿಣಾಮ ತರಗತಿಗಳನ್ನು ಸ್ಥಗಿತಗೊಳಿಸಲಾಗಿತ್ತು.
ಆದರೆ ಇದೀಗ ಕೊರೋನಾ ಪ್ರಭಾವ ಕಡಿಮೆಯಾದ ಕಾರಣ ಮತ್ತೆ ತರಗತಿ ಪ್ರಾರಂಭವಾಗಿವೆ.
ಇದಾಗಿ ತಿಂಗಳು ಐದಾಗುತ್ತಾ ಬಂದರೂ ಇದುವರೆಗೂ ತುಳು ಶಿಕ್ಷಕರಿಗೆ ಗೌರವಧನ ಮಾತ್ರ ಮರೀಚೀಕೆಯಾಗಿ ಉಳಿದಿದೆ.
ಇದನ್ನೇ ನಂಬಿಕೊಂಡಿರುವ ಹತ್ತಾರು ಶಿಕ್ಷಕರ ಬದುಕು ಮೂರಾಬಟ್ಟೆಯಾಗಿದೆ. 2019ರ ಶೈಕ್ಷಣಿಕ ವರ್ಷದಲ್ಲಿ 1020 ಮಕ್ಕಳು ತುಳು ಐಚ್ಛಿಕ ಭಾಷೆಯನ್ನಾಗಿ ಆರಿಸಿದ್ದಾರೆ. ಪ್ರಸ್ತುತ ಎಷ್ಟು ಮಕ್ಕಳು ತುಳು ಭಾಷೆಯನ್ನು ಆರಿಸಿಕೊಂಡಿದ್ದಾರೆಂಬ ಸರಿಯಾದ ಮಾಹಿತಿ ಸಿಕ್ಕಿಲ್ಲ. ಈವರೆಗೆ ನಡೆದ ಪರೀಕ್ಷೆಗಳಲ್ಲಿ ಶೇಕಡಾ 100ರಷ್ಟು ಫಲಿತಾಂಶ ಪಡೆದು ಪಾಸು ಸಹ ಆಗಿದ್ದಾರೆ.
ಈ ಫಲಿತಾಂಶಕ್ಕೆ ತುಳು ಶಿಕ್ಷಕರ ಬದ್ಧತೆ ಮುಖ್ಯ ಕಾರಣವಾಗಿದೆ. ಈ ಮುಂಚೆ ಕೊರೋನಾ ಸಮಯದಲ್ಲಿ ಒಂದು ಬಾರಿ ಅಕಾಡೆಮಿ ವತಿಯಿಂದ ಮೂರು ಸಾವಿರ ಹಾಗೂ ತುಳು ಕೂಟದಿಂದ
ಮೂರು ಸಾವಿರ ಸೇರಿಸಿ ಆರು ಸಾವಿರ ಗೌರವಧನ ನೀಡಿದ್ದು ಬಿಟ್ಟರೆ ಮತ್ತೇನು ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಹೆಸರು ಹೇಳಲಿಚ್ಛಿಸದ ತುಳು ಶಿಕ್ಷಕಿ.
ಜಿಲ್ಲೆಯ ಒಂದು ಶಾಲೆಯಲ್ಲಂತೂ ವಿದ್ಯಾರ್ಥಿಗಳು ಪಾಠದಿಂದ ವಂಚಿತರಾಗಬಾರದೆಂಬ ನಿಟ್ಟಿನಲ್ಲಿ ತುಳು ಕಲಿಸುವ ಶಿಕ್ಷಕಿಗೆ ಅಲ್ಲಿನ ಮುಖ್ಯ ಶಿಕ್ಷಕರೇ ಹಲವು ತಿಂಗಳ ಕಾಲ ತಮ್ಮ ಕೈಯಿಂದ ಸಂಬಳ ನೀಡಿದ್ದಾರೆ ಎಂಬವುದು ಪರಿಸ್ಥಿತಿಗೆ ಹಿಡಿದ ಕೈಗನ್ನಡಿ.
ಕೊರೋನಾ ಅಲೆ ಆರಂಭವಾದ ನಂತರ ತುಳು ಕಲಿಯುವ ಮಕ್ಕಳು ಕಲಿಕೆಯಿಂದ ವಂಚಿತಾಗಬಾರೆಂಬ ಉದ್ದೇಶದಿಂದ ಆನ್ಲೈನ್ ಪಾಠಗಳು ಪ್ರಾರಂಭಿಸಲಾಗಿತ್ತು.
ಈ ವೇಳೆ ತಮ್ಮ ಮನೆಯಿಲ್ಲ ದೈನಂದಿನ ಖರ್ಚಿಗೆ ತತ್ವಾರ ಇದ್ದರೂ, ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಧಾರೆ ಎರೆದಿದ್ದಾರೆ ಈ ಶಿಕ್ಷಕರು.
ತುಳು ಅಕಾಡಮಿ ಅವರನ್ನು ಸಂಬಳ ನೀಡದೇ ನಡು ನೀರಿನಲ್ಲಿ ಕೈ ಬಿಟ್ಟರೂ ಶಿಕ್ಷಕರು ಮಾತ್ರ ತುಳು ವಿದ್ಯಾರ್ಥಿಗಳ ಕೈ ಬಿಟ್ಟಿಲ್ಲ.
ಇದೀಗ ಕೊರೋನಾ ಬಂದಾಗಿನಿಂದ ಇದು ಮೂರನೇ ಶೈಕ್ಷಣಿಕ ವರ್ಷ, ಇನ್ನು 3 ತಿಂಗಳಲ್ಲಿ ಮತ್ತೆ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ಅದರಲ್ಲೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಭವಿಷ್ಯ ಈ ತುಳುವ ಶಿಕ್ಷಕರ ಕೈಯಲ್ಲಿದೆ.
ಸಂಬಳ ಕೊಡುವ ಯೋಗ್ಯತೆ ಇಲ್ಲದಿದ್ದರೆ ಯಾಕೆ ಅಕಾಡೆಮಿ ನಡೆಸುತ್ತೀರಿ?
ತುಳು ಅಕಾಡೆಮಿಗೆ ಸರ್ಕಾರದಿಂದ ಲಕ್ಷಾಂತರ ರೂಪಾಯಿ ಅನುದಾನ ಬರುತ್ತದೆ. ಜೊತೆಗೆ ಸ್ಥಳೀಯರ ದೊಡ್ಡ ಸಂಸ್ಥೆಗಳು ತುಳು ಭಾಷಾ ಮೆಲಿನ ಅಭಿಮಾನದಿಂದ ಹಣಕಾಸು ನೆರವು ಅಕಾಡೆಮಿಗೆ ನೀಡುತ್ತಿದೆ.
ತುಳು ಹಬ್ಬ, ಹರಿದಿನದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಅಕಾಡೆಮಿಗೆ ತುಳುವನ್ನು ಮುಂದಿನ ಪೀಳಿಗೆಗೆ ಧಾರೆಯೆರೆಯುವ ಶಿಕ್ಷಕರಿಗೆ ಸಂಬಳ ನೀಡುವ ಯೋಗ್ಯತೆ ಇಲ್ಲವೇ? ಎಂದು ತುಳು ಭಾಷಾ ಪ್ರೇಮಿಯೊಬ್ಬರು ಖಾರವಾಗಿ ಪ್ರಶ್ನಿಸಿದ್ದಾರೆ.
ಹೈಸ್ಕೂಲು ಟೀಚರಗಳದ್ದು ಡೋಲಾಯಾಮಾನ ಬದುಕು
ದಕ್ಷಿಣ-ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರೌಢಶಾಲೆಗಳು ಖಾಸಗಿ ಶಾಲೆಗಳಾಗಿವೆ. ಇದರಲ್ಲಿ ಸೇವೆ ಸಲ್ಲಿಸುವ ಶಿಕ್ಷಕರು ಮಧ್ಯಮ ಹಾಗೂ ಬಡ ವರ್ಗದವರು.
ಇವರಿಗೆ ಸಿಗುವ ಗೌರವಧನ ಮೂರು ಸಾವಿರ ರೂಪಾಯಿ ದೊಡ್ಡ ಮೊತ್ತವೇ ಸರಿ.
ಕೆಲವು ಶಾಲೆಗಳಲ್ಲಿ ಕೇವಲ ತುಳು ಭಾಷೆ ಬೋಧಿಸಲೆಂದೇ ದೂರದೂರಿನಿಂದ ಶಿಕ್ಷಕರು ಬರುತ್ತಾರೆ. ಖರ್ಚಿಗೆ ದುಡ್ಡಿಲ್ಲದಿದ್ದರೂ ಇಂದು ಅಥವಾ ನಾಳೆ ನಮಗೆ ಬರಬೇಕಾದ ಗೌರವ ಧನ ಬರಬಹುದೆಂಬ ನಿರೀಕ್ಷೆಯಿಂದ ಅಲ್ಲಿ-ಇಲ್ಲಿ ಸಾಲ ಮಾಡಿ ಹಣ ಒಟ್ಟುಗೂಡಿಸಿ ಪ್ರಯಾಣಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಿದ್ದಾರೆ.
ಆದರೆ ಒಂದೂವರೇ ವರ್ಷ ಕಳೆದರೂ ಒಂದು ನಯಾಪೈಸೆಯನ್ನು ತುಳು ಶಿಕ್ಷಕರಿಗೆ ನೀಡದಿರುವುದು ಬೇಸರ ತರಿಸಿದೆ.
DAKSHINA KANNADA
ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!
ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.
ಏನಿದು ತ್ರಿಶೂರ್ ಪೂರಂ ಹಬ್ಬ
ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.
ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ
ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.
ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ
ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ ಬಹುಶಃ ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.
ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ
ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.
DAKSHINA KANNADA
MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ
ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.
ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.
ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ