DAKSHINA KANNADA
ಜು. 1 ರಿಂದ ಗ್ರಾಮ ಪಂಚಾಯಿತಿಯಲ್ಲೇ ಜನನ, ಮರಣ ಪ್ರಮಾಣ ಪತ್ರ ಲಭ್ಯ
ಬೆಂಗಳೂರು: ಜುಲೈ 1 ರಿಂದ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜನನ, ಮರಣ ಪ್ರಮಾಣ ಪತ್ರ ಲಭ್ಯವಿರಲಿದೆ. ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಲಾಗಿದೆ.
ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ ಗ್ರಾಪಂ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಆದೇಶ ಹೊರಡಿಸಲಾಗಿದೆ.
ಜನನ, ಮರಣ ನಡೆದ 21 ದಿನಗಳ ಒಳಗೆ ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣ ಪತ್ರ ವಿತರಿಸಬೇಕು. 21 ರಿಂದ 30 ದಿನಗಳ ನಡುವೆ ನೋಂದಾಯಿಸಿದಲ್ಲಿ ಎರಡು ರೂಪಾಯಿ ಶುಲ್ಕ, 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ 5 ರೂ. ಶುಲ್ಕ ಪಡೆದು ನೋಂದಣಿ ಮಾಡಿಸಬಹುದು. ಒಂದು ವರ್ಷದ ಬಳಿಕ ನೋಂದಣಿ ಮಾಡಿದರೆ ಪ್ರಥಮ ದರ್ಜೆ ದಂಡಾಧಿಕಾರಿ ಆದೇಶದ ಮೇರೆಗೆ 10 ರೂಪಾಯಿ ವಿಳಂಬ ಶುಲ್ಕ ಪಡೆದು ನೋಂದಣಿ ಮಾಡಿಸಬಹುದು.
ವಿವರಗಳಿಗಾಗಿ ಇ-ಜನ್ಮ ಸಹಾಯವಾಣಿ ಸಂಖ್ಯೆ 1800 425 6578ಗೆ ಸಂಪರ್ಕಿಸಬಹುದಾಗಿದೆ.
DAKSHINA KANNADA
ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬ*ಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃ*ತ ದುರ್ದೈವಿ. ಯುವತಿ ಕಲ್ಲಡ್ಕದ ಮೆಡಿಕಲೊಂದರಲ್ಲಿ ಕೆಲಸ ಮಾಡುತ್ತಿದ್ದಳು.
ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ಮನೆ ಸಮೀಪದ ರಸ್ತೆಗೆ ಬಂದಿದ್ದಾಳೆ. ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಯುವತಿ ಮೃ*ತಪಟ್ಟಿದ್ದಾಳೆ.
ಇದನ್ನೂ ಓದಿ : ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂ*ತ ಅಂ*ತ್ಯ
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಯುವತಿಯ ಮೃ*ತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
DAKSHINA KANNADA
ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ
ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ನಡೆಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಾದ ಕೃ ತಿಕ್ ಮತ್ತು ಪೃತ್ವಿಕ್ 6 ರಿಂದ 10ನೇ ತರಗತಿಯ ಮಕ್ಕಳಿಗೆ ಯೋಗವನ್ನು ಹೇಳಿಕೊಟ್ಟರು.
ಶಾಲೆಯ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
DAKSHINA KANNADA
ವಿಟ್ಲ : ಬಾಲವಿಕಾಸದಲ್ಲಿ ‘ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್’
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಸೂಕ್ತವಾದ ವೇದಿಕೆಯನ್ನು ಒದಗಿಸಲು ಮೂರು ದಿನಗಳ ಕಾಲ ನಡೆಯಲಿರುವ ಶಾಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು “ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್ ” ಹಾಗೂ ವಿಜ್ಞಾನ ಮತ್ತು ಕಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
“ವಿಕಾಸೋತ್ಸವ 2024-25 ದ ಕಲ್ಚರಲ್ ಫೆಸ್ಟ್ -ಫೆಸ್ಟಿವಿಟಿ ಆಫ್ ಕ್ರಿಯೇಟಿವಿಟಿ ” ಎಂದು ಉಲ್ಲೇಖಿಸಲಾದ ವಿಜಯದ ಚೌಕಟ್ಟಿನ ಪರದೆಯನ್ನು ಅನಾವರಣಗೊಳಿಸುವುದರ ಮೂಲಕ ಹಾಗೂ ವಿವಿಧ ಲಲಿತ ಕಲೆಗಳನ್ನು ಬಿಂಬಿಸುವಂತಹ ವಿನ್ಯಾಸವಿರುವ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳಿರುವ ಪೆಟ್ಟಿಗೆಯನ್ನು ತೆರೆಯುವ ಮೂಲಕ ವಿಕಾಸೋತ್ಸವ 2024-25 ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ನಂತರ “ಇನಾಗರೇಷನ್ ಆಫ್ ಸೈನ್ಸ್ ಅಂಡ್ ಆರ್ಟ್ಸ್ ಕ್ಲಬ್ ” ಎಂದು ಉಲ್ಲೇಖಿಸಲಾದ ಎಲ್ ಈ ಡಿ ಬೋರ್ಡಿನ ಗುಂಡಿಯನ್ನು ಒತ್ತುವ ಮೂಲಕ 2024-25ನೇ ಶೈಕ್ಷಣಿಕ ಸಾಲಿನ ವಿಜ್ಞಾನ ಹಾಗೂ ಕಲಾ ಸಂಘವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ, ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ತಮ್ಮನ್ನು ತಾವು ಸೀಮಿತಗೊಳಿಸದೆ ವಿಕಾಸೋತ್ಸವದಂತಹ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಪೋಷಕರ ಹಾಗೂ ಶಿಕ್ಷಕರ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಂಡು ತಮ್ಮಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಪ್ರಯತ್ನವನ್ನು ಮಾಡಿ ಜಯಗಳಿಸಬೇಕು ಎಂದು ಶುಭಹಾರೈಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ ವಿವೇಕಾನಂದ ಕೇಂದ್ರೀಯ ಶಾಲೆಯ ಅಧ್ಯಕ್ಷ ವಸಂತಿ ಕೆ. , “ಮಾಣಿಯಂತಹ ಗ್ರಾಮೀಣ ಪರಿಸರದಲ್ಲಿ ಒಂದು ಅಚ್ಚುಕಟ್ಟಾದ ಹಾಗೂ ಸೌಲಭ್ಯಭರಿತ ಅತ್ಯದ್ಭುತವಾದ ಶಾಲಾ ಕಟ್ಟಡವನ್ನು ನಿರ್ಮಿಸಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅತ್ಯುತ್ತಮವಾದ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ತ್ಯಾಗ ಮತ್ತು ಸೇವಾ ಮನೋಭಾವನೆ ಶ್ಲಾಘನೀಯವಾದುದು. ಶಾಲೆಯಲ್ಲಿ ರಚನೆ ಮಾಡುವ ವಿಜ್ಞಾನ ಸಂಘಗಳಂತಹ ವಿವಿಧ ಸಂಘಗಳು ವಿದ್ಯಾರ್ಥಿಗಳನ್ನು ವಿವಿಧ ಸಂಶೋಧನಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ0ತೆ ಮಾಡಿ ಜೀವನಾನುಭವಗಳನ್ನು ಗಳಿಸಿಕೊಳ್ಳಲು ನೆರವಾಗುತ್ತವೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿ ಸ್ವಂತಿಕೆ ಮತ್ತು ಜೀವನಾಸಾಕ್ತಿಗಳನ್ನು ಹೆಚ್ಚಿಸಿಕೊಳ್ಳಬೇಕು “ಎಂದರು.
ಇನ್ನೋರ್ವ ಮುಖ್ಯ ಅತಿಥಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಮಾತನಾಡಿ, ” ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಒಂದು ಅತ್ಯುತ್ತಮ ಶಿಕ್ಷಣ ಸಂಸ್ಥೆ. ಎಲ್ಲಾ ಪೋಷಕರು ತಮ್ಮ ನಿಷ್ಕಲ್ಮಶ ಮನಸ್ಸಿನ ಮಕ್ಕಳಿಗೆ ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣವನ್ನು ಒದಗಿಸುತ್ತಿರುವುದು ಸಾರ್ಥಕ. ಹಳ್ಳಿಯ ಪರಿಸರದಲ್ಲಿ ಸುಂದರವಾದ ಪ್ರಕೃತಿ ಮಾತೆಯ ಮಡಿಲಲ್ಲಿ ಅತ್ಯದ್ಭುತವಾದ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವ ಇಂತಹ ಶಾಲೆಯಲ್ಲಿ ನಾನು ಕೂಡ ಒಬ್ಬ ವಿದ್ಯಾರ್ಥಿಯಾಗಿರಬೇಕಿತ್ತು ಎಂದು ಅನಿಸುತ್ತಿದೆ. ವಿದ್ಯೆ ಕದಿಯಲಾಗದ ಸಂಪತ್ತು. ಅಂತಹ ವಿದ್ಯೆಯನ್ನು ಮಕ್ಕಳೆಲ್ಲರೂ ಇಷ್ಟಪಟ್ಟು ಕಲಿತು ವಿದ್ಯೆಯ ಜೊತೆಗೆ ಸಾಂಸ್ಕೃತಿಕವಾಗಿಯೂ ಕೂಡ ಬೆಳೆಯಬೇಕು. ಈ ಮೂರು ದಿನಗಳ ಕಾಲ ಶಾಲೆಯಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಕ್ಕಳೆಲ್ಲರೂ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿ ಜೀವನದಲ್ಲಿ ಸಾಧನೆಯನ್ನು ಮಾಡಬೇಕು” ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
“ಬಾಲವಿಕಾಸ ನೀಡುತ್ತಿರುವ ಈ ಅದ್ಭುತವಾದ ಶಿಕ್ಷಣ ಸೇವೆ ಇನ್ನೂ ಹಲವಾರು ವರ್ಷಗಳವರೆಗೆ ಹಾಗೇ ಮುಂದುವರಿಯಲಿ ” ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಾಲಾ ವ್ಯವಸ್ಥಾಪಕಿ ನಯನ ಎಂ, ಶಾಲಾ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಜಯಲಕ್ಷ್ಮಿ ವಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ : ಕಚೇರಿಗೆ ತೆರಳಲು ಸಿದ್ಧವಾಗುತ್ತಿದ್ದಾಗ ಹೃದಯಾ*ಘಾತ; 24 ವರ್ಷದ ಯುವತಿ ದುರ್ಮ*ರಣ
ಶಾಲಾ ಪ್ರಾಂಶುಪಾಲರಾದ ರವೀಂದ್ರ ದರ್ಬೆ ಸ್ವಾಗತಿಸಿ, ಸಹಶಿಕ್ಷಕಿ ಯಜ್ಞೆಶ್ವರಿ ಎನ್ ವಂದಿಸಿ, ಸಹಶಿಕ್ಷಕಿಯರಾದ ಜಯಶ್ರೀ ಆಚಾರ್ಯ ಹಾಗೂ ಅನಿತಾ ಜಿ. ನಿರೂಪಿಸಿದರು.
ಜೂನ್ 26 ರಿಂದ ಜೂನ್ 28ರವರೆಗೆ 3 ದಿನಗಳ ಕಾಲ ನಡೆಯುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಒಟ್ಟು 83 ಸ್ಪರ್ಧೆಗಳು ನಡೆಯಲಿದ್ದು ಒಂದರಿಂದ ಹತ್ತನೆ ತರಗತಿಯವರೆಗಿನ ಒಟ್ಟು 647 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
- LATEST NEWS6 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS3 days ago
ಪ್ರೀತಂ ಗೌಡ ಸೇರಿ ನಾಲ್ವರ ಮೇಲೆ ಎಫ್ಐಆರ್..! ಪ್ರಜ್ವಲ್ ಗೆ ಮತ್ತೊಂದು ಸಂಕಷ್ಟ
- DAKSHINA KANNADA4 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- DAKSHINA KANNADA4 days ago
ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ