LATEST NEWS
ಇನ್ಮುಂದೆ ವಾಟ್ಸಾಪ್ನಲ್ಲಿ ವಾಯ್ಸ್ ಮೆಸೇಜ್ ಕೂಡಾ ಸ್ಟೇಟಸ್ ಹಾಕ್ಬೋದು…!
Published
2 years agoon
By
Adminಬೆಂಗಳೂರು: ಮೆಟಾ-ಮಾಲೀಕತ್ವದ ವಾಟ್ಸಾಪ್ ಈಗಾಗಲೇ ಅನೇಕ ಹೊಸ ಫೀಚರ್ಗಳನ್ನು ಪರಿಚಯಿಸಿದ್ದು ಇನ್ಮುಂದೆ ವಾಟ್ಸಾಪ್ ಸ್ಟೇಟಸ್ನಲ್ಲಿ 30 ಸೆಕೆಂಡಿನ ವಾಯ್ಸ್ ಮೆಸೇಜನ್ನು ಕೂಡಾ ಹಾಕಬಹುದಾಗಿದೆ. ನಿಮ್ಮ ನಂಬರ್ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಬಿಡುಗಡೆ ಮಾಡಿದ್ದು, ಈ ಹೊಸ ಮೆಸೇಜ್ ವಿಥ್ ಯುವರ್ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್ನಲ್ಲಿ ಕಾಣಿಸಿಕೊಳ್ಳಲಿದೆ.
ಜನಪ್ರಿಯ ಅಪ್ಲಿಕೇಶನ್ ವಾಟ್ಸ್ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್ಗಳನ್ನು ಪರಿಚಯಿಸಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್ ದಾಟಿದ್ದು, ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಈ ಅಪ್ಲಿಕೇಶನ್ ಬಳಸುತ್ತಿದ್ದಾರೆ.
ವಿಶ್ವದಲ್ಲಿಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಅಪ್ಲಿಕೇಶನ್ ಆಗಿ ಬೆಳೆದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಪ್ ದಿನಕ್ಕೊಂದು ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸ್ಆ್ಯಪ್ ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್ ಅನ್ನು ಪರಿಚಯಿಸಿದ ಬಳಿಕ ಸ್ಟೇಟಸ್ ನಲ್ಲಿ ವಾಯ್ಸ್ ನೋಟ್ ಹಾಕುವ ಫೀಚರ್ ಪರಿಚಯಿಸಲು ಮುಂದಾಗಿದೆ.
ಇದೀಗ ಮತ್ತೊಂದು ವೈಶಿಷ್ಟ್ಯವನ್ನು ಪರಿಚಯ ಮಾಡಿದೆ . ಸದ್ಯದಲ್ಲೇ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದ್ದಾಗಿದ್ದು, ವಾಯ್ಸ್ ನೋಟ್ ಅನ್ನು ಸ್ಟೇಟಸ್ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಲಭ್ಯವಾಗಲಿದೆ.
ಈವರೆಗೆ ಸ್ಟೇಟಸ್ನಲ್ಲಿ ವಿಡಿಯೋ, ಫೋಟೋ, ಲಿಂಕ್ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಾಗಿತ್ತು. ಆದರೆ ಇನ್ನೂ ಮುಂದೆ, ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್ಗಳನ್ನು ಶೇರ್ ಮಾಡಬಹುದಾಗಿದೆ.
30 ಸೆಕೆಂಡ್ಗಳ ಕಾಲ ಇದು ಇರಲಿದೆ. ಮುಂದಿನ ವಾರದಿಂದಲೇ ಎಲ್ಲರಿಗೂ ಬಳಕೆಗೆ ಸಿಗಲಿದೆ ಎನ್ನಲಾಗುತ್ತಿದೆ. ವಾಟ್ಸ್ಆ್ಯಪ್ನ ಈ ಹೊಸ ಮೆಸೇಜ್ ವಿಥ್ ಯುವರ್ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್ನಲ್ಲಿ ಕಾಣಲಿದ್ದು, ವಾಟ್ಸ್ಆ್ಯಪ್ ತೆರೆದು ನ್ಯೂ ಚಾಟ್ನಲ್ಲಿ ಕಾಂಟೆಕ್ಟ್ ಲಿಸ್ಟ್ ತೆರೆದಾಗ ಅಲ್ಲಿ ಬಳಕೆದಾರರಿಗೆ ಅವರದ್ದೇ ನಂಬರ್ ಕಾಣಸಿಗುತ್ತದೆ.
ಅದರ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸುವ ಹೊಸ ಫೀಚರ್ ದೊರೆಯಲಿದೆ. ಈ ಮೆಸೇಜ್ ಚಾಟ್ ಬಾಕ್ಸ್ನಲ್ಲಿ ಬಳಕೆದಾರರಿಗೆ ಎಲ್ಲ ರೀತಿಯ ಆಯ್ಕೆ ದೊರೆಯಲಿದ್ದು, ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್ಗಳನ್ನು ರವಾನೆ ಮಾಡಬಹುದಾಗಿದೆ.
ಅಲ್ಲದೆ, ಅಗತ್ಯ ದಾಖಲೆಗಳನ್ನು ಕೂಡ ಸೇವ್ ಮಾಡಬಹುದಾಗಿದೆ.
LATEST NEWS
ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತಂದೆ, ಮಗ
Published
11 hours agoon
12/01/2025By
NEWS DESK3ಮಂಗಳೂರು/ಮಹಾರಾಷ್ಟ್ರ : ತಂದೆ ಮತ್ತು ಮಗ ಇಬ್ಬರೂ ಒಂದೇ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
‘ತಂದೆ ತನಗೆ ಸ್ಮಾರ್ಟ್ ಫೋನ್ ಕೊಡಿಸಲಿಲ್ಲ’ ಎಂದು ಮನನೊಂದು 16 ವರ್ಷದ ಬಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನೊಂದು ವಿಚಿತ್ರವೆಂದರೆ ಮಗನ ಶವ ನೋಡಿ ಆತನ ತಂದೆ ‘ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಲಿಲ್ಲ’ ಎಂದು ತಾನೂ ಸಹ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಂದೇಡ್ ಜಿಲ್ಲೆಯ ಬಿಳೋಳಿ ಮಿನಾಕಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ರಾಜು ಅವರಿಗೆ ಮೂವರು ಮಕ್ಕಳು. ಕೊನೆಯ ಮಗ ಓಂಕಾರ್ ಹಾಸ್ಟೆಲ್ ಒಂದರಲ್ಲಿ ಇದ್ದುಕೊಂಡು 10 ನೇ ತರಗತಿ ಓದುತ್ತಿದ್ದ. ಮಕರ ಸಂಕ್ರಮಣದ ರಜೆ ಇರುವುದರಿಂದ ಮನೆಗೆ ಬಂದಿದ್ದ.
ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಐವರು ಯುವಕರು
‘ಇದೇ ವೇಳೆ ಬಾಲಕ ಓಂಕಾರ್ ತನ್ನ ತಂದೆಗೆ ಸ್ಮಾರ್ಟ್ ಫೋನ್ ಕೊಡಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಬಡ ರೈತ ಕುಟುಂಬದ ರಾಜು, ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಿರಲಿಲ್ಲ. ಇದರಿಂದ ಡೆತ್ ನೋಟ್ ಬರೆದಿಟ್ಟು ಹೊಲದಲ್ಲಿನ ಮರಕ್ಕೆ ಬಾಲಕ ನೇಣು ಹಾಕಿಕೊಂಡಿದ್ದ. ಅದೇ ರಾತ್ರಿ ಮಗನನ್ನು ಹುಡುಕಿಕೊಂಡು ಹೋಗಿದ್ದ ತಂದೆಯೂ ಮಗ ನೇಣೂ ಹಾಕಿಕೊಂಡಿದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ನಾಂದೇಡ್ ಎಸ್ ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಮೃತ ಬಾಲಕನ ತಾಯಿ ನೀಡಿದ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
LATEST NEWS
ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು
Published
12 hours agoon
12/01/2025By
NEWS DESK4ಮಂಗಳೂರು/ಬೆಂಗಳೂರು : ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಕೃ*ತ್ಯ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ದು*ಷ್ಕರ್ಮಿಗಳು ವಿ*ಕೃತಿ ಮೆರೆದಿದ್ದಾರೆ. ರಸ್ತೆಯಲ್ಲಿ ಮಲಗಿದ್ದ ಕೆಚ್ಚಲುಗಳನ್ನು ಕೊಯ್ದು ಕಿ*ಡಿಗೇಡಿಗಳು ಪರಾರಿಯಾಗಿದ್ದಾರೆ.
ರಾತ್ರಿಯಿಡೀ ಹಸುಗಳು ರ*ಕ್ತದ ಮಡುವಿನಲ್ಲಿ ನರಳಾಡಿವೆ. ಇಂದು(ಡಿ.12) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದಿದ್ದಾರೆ.
ಸಂಸದ ಪಿಸಿ ಮೋಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸುವಿನ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ.
ಮಂಗಳೂರು/ಹೈದರಾಬಾದ್ : ರೀಲ್ಸ್ ಮಾಡಲು ಹೋದ ಐವರು ಯುವಕರು ನೀರುಪಾಲಾದ ಘಟನೆ ತೆಲಂಗಾಣದ ಸಿದ್ದಿ ಪೇಟ್ ಜಿಲ್ಲೆಯ ಕೊಂಡ ಪೋಚಮ್ಮ ಸಾಗರ ಜಲಾಶಯದಲ್ಲಿ ನಡೆದಿದೆ.
ಇಂದು ಏಳು ಮಂದಿ ಯುವಕರ ತಂಡ ಬೆಳಗ್ಗೆ ಒಂಬತ್ತರ ಸುಮಾರಿಗೆ ಜಲಾಶಯದ ಬಳಿ ಬಂದು, ಅಲ್ಲೇ ತಿರುಗಾಡಿ ಕೊನೆಗೆ ನೀರಿಗೆ ಇಳಿದಿದ್ದರು. ನೀರಿಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದ ದೃಶ್ಯವನ್ನು ಈಜು ಬಾರದ ಇಬ್ಬರು ಬದಿಯಲ್ಲಿ ನಿಂತು ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು.
ಇದನ್ನೂ ಓದಿ: ಕಡಬ : ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾ*ವು
ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಐವರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಇಬ್ಬರು ಅವರ ರಕ್ಷಣೆಗೆ ಮುಂದಾದ್ರೂ ಸಾಧ್ಯವಾಗಿಲ್ಲ. ಮುಶೀರಾಬಾದ್ನ ಸಹೋದರರಾದ ಧನುಷ್ (20), ಲೋಹಿತ್ (17), ಬನ್ಸಿಲಾಲ್ ಪೇಟೆಯ ದಿನೇಶ್ವರ್ (17), ಖೈರತಾಬಾದ್ನ ಚಾಂತಲ್ ಬಸ್ತಿಯ ಜತಿನ್ (17), ಮತ್ತು ಸಾಹಿಲ್ (19) ನೀರು*ಪಾಲಾದ ಯುವಕರು. ಮೃಗಾಂಕ್ (17) ಮತ್ತು ಇಬ್ರಾಹಿಂ (19) ಇಬ್ಬರು ನೀರಿನ ಆಳಕ್ಕೆ ಇಳಿಯದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
ಜಲಾಶಯದ ಬಳಿ ಜನರ ಓಡಾಟ ಕಡಿಮೆ ಇದ್ದ ಕಾರಣ ಮುಳುಗುತ್ತಿದ್ದ ಐವರ ರಕ್ಷಣೆಗೆ ಯಾರೂ ಸಿಗಲಿಲ್ಲ ಎಂದು, ಬದುಕಿ ಉಳಿದ ಇಬ್ಬರು ಸ್ನೇಹಿತರು ಪೊಲೀಸರ ಬಳಿ ಹೇಳಿದ್ದಾರೆ.
LATEST NEWS
ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್
60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
ಪಿಲಿಕುಳ ಕಂಬಳ ವಿಚಾರಣೆ ಜನವರಿ 21 ಕ್ಕೆ ಮುಂದೂಡಿಕೆ
ಈ ವಾರ ಬಿಗ್ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿ ಇವರೇ..!
ಮಂಗಳೂರು: ಜ. 31 ರಿಂದ ಫೆ. 2 ರ ತನಕ ತಣ್ಣೀರುಬಾವಿ ಬೀಚ್ ಫೆಸ್ಟಿವಲ್
Trending
- FILM7 days ago
ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
- BIG BOSS2 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- FILM5 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- LATEST NEWS3 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!